ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ :ಉಳ್ಳಾಲ ನಗರಸಭಾ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನ ಹಿರಿಯ ನಾಯಕ ಹುಸೈನ್ ಕುಂಞಮೋನು ಅಧ್ಯಕ್ಷರಾಗಿ ಜಯಗಳಿಸಿದ್ದು, ಉಪಾಧ್ಯಕ್ಷರಾಗಿ ಕಾಂಗ್ರೆಸ್ನ ಚಿತ್ರಕಲಾ ಚಂದ್ರಕಾಂತ್ ಜಯಗಳಿಸಿದ್ದಾರೆ. ಉಳ್ಳಾಲ ನಗರಸಭೆಯ ಎರಡನೇ ಅವಧಿಯ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕುಂಞಮೋನು 17 ಮತಗಳನ್ನು ಪಡೆದು ವಿಜಯಿಯಾದರೆ, ಪ್ರತಿಸ್ಪರ್ಧಿ ಬಿಜೆಪಿಯ ಪೆÇಡಿಮೋನು 7 ಮತಗಳನ್ನು ಪಡೆದು ಪರಾಜಯಗೊಂಡರು. ಪಕ್ಷೇತರ ಸದಸ್ಯರೊಬ್ಬರು ಮತದಾನ ನಡೆಸದೆ ತಟಸ್ಥರಾಗಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್„ಸಿದ್ದ ಕಾಂಗ್ರೆಸ್ನ ಚಿತ್ರಕಲಾ ಚಂದ್ರಕಾಂತ್ 17 ಮತಗಳನ್ನು ಪಡೆದು ವಿಜಯಿಯಾದರೆ, ಬಿಜೆಪಿಯ ಮಹಾಲಕ್ಷ್ಮಿ 7 ಮತಗಳನ್ನು ಪಡೆದು ಪರಾಜಯಗೊಂಡರು. ಕಾಂಗ್ರೆಸ್ನ ಆಂತರಿಕ ಚುನಾವಣೆಯಲ್ಲಿ ಹುಸೈನ್ ಕುಂಞಮೋನು ಜಯ : ಉಳ್ಳಾಲ ನಗರಸಭಾ ಚುನಾವಣೆಯ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನಿಂದ ಹುಸೈನ್ ಕುಂಞಮೋನು, ಮಹಮ್ಮದ್ ಮುಸ್ತಾಫ, ಫಾರೂಕ್ ಉಳ್ಳಾಲ್, ಅಶ್ರಫ್ ಬಾವ ಕೋಡಿ ಆಕಾಂಕ್ಷಿಗಳಾಗಿದ್ದರು. ಹಿರಿಯರ ಹಿನ್ನಲೆಯಲ್ಲಿ ಹುಸೈನ್ ಕುಂಞಮೋನು ಆಯ್ಕೆಗೆ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ:ಅಂಗಾಂಗ ಕಸಿ ಕ್ರಿಯೆ ಪ್ರಕ್ರಿಯೆಯಲ್ಲಿ ಸರಕಾರದ ಜತೆಗೆ ಝೋನಲ್ ಕೋ ಆರ್ಡಿನೇಷನ್ ಕಮಿಟಿ ಆಫ್ ಕರ್ನಾಟಕ ಕೈಜೋಡಿಸುವ ಮೂಲಕ ಅನೇಕ ಆಸ್ಪತ್ರೆಗಳನ್ನು ನೋಂದಾಯಿಸಿಕೊಂಡಿದ್ದು, ಈ ಮೂಲಕ ಅಂಗಾಂಗ ಇಲ್ಲದವರ ಬಾಳಿನಲ್ಲಿ ಬೆಳಕಾಗಿದೆ ಎಂದು ಬೆಂಗಳೂರು ಝೆಡ್ ಸಿಸಿಕೆ ಇದರ ಕಾರ್ಯಕಾರಿಣಿ ಸದಸ್ಯ ಹಾಗೂ ಕಿಮ್ಸ್ ಆಸ್ಪತ್ರೆಯ ಮೂತ್ರಶಾಸ್ತ್ರ ವಿಭಾಗದ ಡಾ.ಜಿ.ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆಯ ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆಡಿಟೋರಿಯಂನಲ್ಲಿ ಗುರುವಾರ ಜರಗಿದ ವಿಶ್ವ ಮೂತ್ರಕೋಶ ದಿನಾಚರಣೆ ಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯೆನೆಪೋಯ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಎಂ ವಿಜಯ ಕುಮಾರ್ ಮಾತನಾಡಿ ರೋಗದ ಕುರಿತ ತಪಾಸಣೆ ಅಗತ್ಯ , ಕಾಲದಲ್ಲಿ ಪರಿಶೀಲನೆ ನಡೆಸುವ ಮೂಲಕ ರೋಗದ ಪತ್ತೆಹಚ್ಚುವಿಕೆಯಿಂದ ಪೂರ್ವ ಚಿಕಿತ್ಸೆಯನ್ನು ನಡೆಸುವುದರೊಂದಿಗೆ ಕಾಯಿಲೆಗಳನ್ನು ದೂರವಾಗಿಸಬಹುದು. ಆಸ್ಪತ್ರೆಗಳು ಉಚಿತ ಪರಿಶೀಲನೆಗೆ ಸಿದ್ಧವಾಗಿದ್ದರೂ, ಜನರು ಅದರ ಸದುಪಯೋಗ ಪಡೆಯುತ್ತಿಲ್ಲ. ಚಿಂತನೆಗಳನ್ನು ಬದಲಾಯಿಸಿ ರೋಗದ ಪರಿಶೀಲನೆ ಕುರಿತು ಜನ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಅದು ಅಜ್ಜಿ, ತಾಯಿ ಮತ್ತು ಇಬ್ಬರು ಹೆಣ್ಣು ಮಕ್ಕಳ ಪುಟ್ಟ ಸಂಸಾರ. ಇಬ್ಬರು ಹೆಣ್ಮಕ್ಕಳು ಮಂಗಳೂರಿನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳು. ಅದೊಂದು ಶಾಲಾ ಪ್ರವಾಸದ ಸಂದರ್ಭ ಕುಟುಂಬದ ಕಿರಿಯ ಜೀವ ಪಿಲಿಕುಳ ದೋಣಿ ದುರಂತದಲ್ಲಿ ಬಲಿಯಾದರೆ, ಇದ್ದ ಆಕೆಯ ಸಹೋದರಿ ತಂಗಿಯ ಸಾವಿನಿಂದ ನೊಂದು 15 ವರ್ಷಗಳಿಂದ ಮಾನಸಿಕ ಅಸ್ವಸ್ಥಳಾಗಿ ಮನೆಯ ಕೋಣೆ ಸೇರಿದ್ದಳು. ಇಂದು ಸೋಮೇಶ್ವರ ಜಿಲ್ಲಾ ಪಂಚಾಯಿತಿ ಸದಸ್ಯೆ ಧನಲಕ್ಷ್ಮೀ ಮತ್ತು ಬಿಜೆಪಿ ಕಾರ್ಯಕರ್ತರ ತಂಡ 29 ರ ಹರೆಯದ ಯುವತಿಯನ್ನು ಕೋಣೆಯಿಂದ ಬಿಡುಗಡೆಗೊಳಿಸಿ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದ್ದಾರೆ. ಕೂಳೂರಿನ ಗೋಪಾಲ್ ಮತ್ತು ಸ್ವರ್ಣಲತಾ ದಂಪತಿಗೆ ಬೀನಾ ಮತ್ತು ಅನುಷಾ ಇಬ್ಬರು ಹೆಣ್ಮಕ್ಕಳಿದ್ದರು. ಕ್ರಮೇಣ ಸ್ವರ್ಣಲತಾ ಅವರು ಸೋಮೇಶ್ವರ ರೈಲ್ವೇ ಗೇಟ್ ಬಳಿಯ ತಾಯಿ ಜಲಜಾಕ್ಷಿ ಅವರ ಮನೆಯನ್ನೇ ಮಕ್ಕಳ ಸಮೇತ ಸೇರಿದ್ದರು. ಅಲ್ಲಿಂದಲೇ ಬೀನಾ ಮತ್ತು ಅನುಷಾ ಮಂಗಳೂರಿನ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭ್ಯಾಸ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ವೈದ್ಯಕೀಯ ಕ್ಷೇತ್ರ ವ್ಯಾಪಾರಿಕರಣವಾಗುವುದರಿಂದ ಹಣವಿದ್ದವರು ವೈದ್ಯರಾಗುತ್ತಿದ್ದು, ಇದರಿಂದ ಅಮಾಯಕ ರೋಗಿಗಳು ಬಲಿಯಾಗುವ ಸ್ಥಿತಿ ಎದುರಾಗಿದೆ ಎಂದು ಭಾರತ್ ಮಾತಾ ಪೌಂಡೇಶನ್ ಹಾಗೂ ಬೆಥನಿ ಚ್ಯಾರಿಟೇಬಲ್ ಟ್ರಸ್ಟಿನ ಉಪಾಧ್ಯಕ್ಷೆ ಹಾಗೂ ವಕೀಲೆ ಫ್ಲೋರೆನ್ಸ್ ಮೆಂಡಿಸ್ ಅಭಿಪ್ರಾಯಪಟ್ಟರು. ಅವರು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಕಾಲೇಜಿನ ಫಿಸಿಯೋತೆರಫಿ ವಿಭಾಗದ ಕ್ಷೇಮ ಆಡೊಟೋರಿಯಂನಲ್ಲಿ ಬುಧವಾರ ಜರುಗಿದ ವಾರ್ಷಿಕ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು. ಪ್ರಸುತ್ತ ಕಾಲದಲ್ಲಿ ಯಾವುದು ಉದಾತ್ತವಲ್ಲ. ವೈದ್ಯ ವೃತ್ತಿಯು ವ್ಯವಹಾರಿಕವಾಗಿ ಮಾರ್ಪಡಾಗಿದೆ. ಇದು ವೈದ್ಯಕೀಯ ಕ್ಷೇತ್ರಕ್ಕೆ ತೀರ ಕಳವಳಕಾರಿ ಸಂಗತಿ. ಹಣವಿದ್ದವರು ಫ್ಯಾಷನ್ಗಾಗಿ ವೈದ್ಯರಾಗುತ್ತಿದ್ದು, ಇದರಿಂದ ಜ್ಞಾನವಿಲ್ಲದವರು ಬೇಜವಾಬ್ದಾರಿತನದಿಂದ ವರ್ತಿಸಿ ಜೀವವನ್ನು ಉಳಿಸುವ ಬದಲು ಜೀವವನ್ನು ತೆಗೆಯುವವರಾಗಿದ್ದಾರೆ. ಸಮರ್ಪಣಾಭಾವ ಕೌಶಲ್ಯ ಆಸಕ್ತಿ ಮಾನವೀಯತೆ ಉಳ್ಳವರು ಮಾತ್ರ ಉತ್ತಮ ವೈದ್ಯರಾಗಲು ಸಾಧ್ಯ. ರೋಗಿಗಳ ಭಾವನೆಯನ್ನು ಅರ್ಥೈಸಿ ಸೇವೆಯನ್ನು ಮುಂದುವರಿಸಿ ಎಂದ ಅವರು ಪ್ರಸುತ್ತ ಕಾಲಘಟ್ಟದಲ್ಲಿ ಪ್ರೀತಿ ಮಾಯವಾಗುತ್ತಿದ್ದು, ನಾನು ನನ್ನದು ಎಂಬ ಸ್ವಾರ್ಥ ಭಾವನೆಯಿಂದಾಗಿ ಸುಂದರ ಸಮುದಾಯವನ್ನು ನಿರ್ಮಿಸಲು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಣಚೂರು: ರಾಜ್ಯದಲ್ಲಿ ಶಿಶು ಮರಣ ಪ್ರಮಾಣ ಒಂದು ವರ್ಷದಲ್ಲಿ 140 ರಿಂದ 131ಕ್ಕೆ ಇಳಿಕೆಯಾಗಿದ್ದು, ಸರಕಾರ ಹೆರಿಗೆ ಮತ್ತು ಶಿಶು ಅಭಿವೃದ್ಧಿಗಾಗಿ ಖಾಸಗಿ ಆಸ್ಪತ್ರೆಗಳ ಜತೆಗೆ ಸೇರಿಕೊಂಡು ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ನಾಟೆಕಲ್ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಬುಧವಾರ ನಡೆದ ಕಣಚೂರು ಶಿಶು ಭವಿಷ್ಯ ನಿಧಿಗೆ ಚಾಲನೆ ನೀಡಿ ಮಾತನಾಡಿದರು. ಹೆರಿಗೆ ಸಮಯದಲ್ಲಿ ತಾಯಿ ಮಗು ಆರೋಗ್ಯಯುತವಾದಲ್ಲಿ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯ. ಹೆರಿಗೆ ಸಂಬಂಧಿಸಿ ಉಚಿತ ಸವಲತ್ತುಗಳನ್ನು ನೀಡಿ, ಅದೇ ಮಕ್ಕಳು ದೊಡ್ಡವರಾದ ಬಳಿಕವೂ ಸಹಕರಿಸುವ ಕಣಚೂರು ಸಂಸ್ಥೆಯ ಯೋಜನೆ ಗ್ರಾಮೀಣ ಭಾಗದ ಜನರಿಗೆ ತುಂಬಾ ಸಹಕಾರಿಯಾಗಲಿದೆ. ಗ್ರಾಮೀಣ ಭಾಗಗಳಲ್ಲಿ ಆಸ್ಪತ್ರೆ ಸ್ಥಾಪಿಸಿ ಅಲ್ಲಿನ ಜನರಿಗೆ ಆರೋಗ್ಯ ಒದಗಿಸುವ ಕಾರ್ಯ ನಡೆಸುವ ಸಂಸ್ಥೆಯ ಕಾರ್ಯ ಶ್ಲಾಘನೀಯ. ರಾಜ್ಯದಲ್ಲಿ 2014ರಲ್ಲಿ ಶಿಶು ಮರಣದ ಸಂಖ್ಯೆ 140 ರಷ್ಟು ಇದ್ದು,…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಈ ನೆಲದ ಅನ್ನ ತಿಂದು, ನೀರು ಕುಡಿದು ಕೆಲ ವಿಕೃತ ಮನಸ್ಸುಗಳು ದೇಶವನ್ನು ತುಂಡರಿಸುವ ಮಾತುಗಳನ್ನು ಆಡಿದರೆ ಯಾವ ದೇಶಪ್ರೇಮಿ ತಾನೆ ಸುಮ್ಮನಿರಲು ಸಾಧ್ಯ ಎಂದು ಕನ್ನಡ ವಿಭಾಗದ ವಿದ್ಯಾರ್ಥಿ ಶ್ಯಾಮ್ ಪ್ರಸಾದ್ ಹೇಳಿದರು. ದೆಹಲಿಯ ಜೆಎನ್ಯು ವಿವಿಯಲ್ಲಿ ನಡೆದ ರಾಷ್ಟ್ರವಿರೋಧಿ ಹೇಳಿಕೆಯನ್ನು ವಿರೋಧಿಸಿ ಕೊಣಾಜೆಯ ಮಂಗಳೂರು ವಿವಿಯ ಪ್ರವೇಶದ್ವಾರದಿಂದ ಮಂಗಳಾ ಸಭಾಂಗಣದ ವರೆಗೆ ರಾಷ್ಟ್ರ ಧ್ವಜ ಹಿಡಿದುಕೊಂಡು ಬುಧವಾರ ನಡೆದ ತಿರಂಗಾ ರ್ಯಾಲಿಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಸುಕ್ಷಿತಾ ರಾವ್ ಅವರು ಈ ದೇಶವನ್ನು ತುಂಡರಿಸುವ ಮಾತುಗಳನ್ನಾಡುವ ಕೆಲ ಒಡಕಿನ ಧ್ವನಿಗಳಿಗೆ ಉತ್ತರವಾಗಿ ಸಾವಿರ ಸಾವಿರ ಯಾಕೂಬ್ ಅಥವಾ ಅಫ್ಜಲ್ನಿಂದ ಸಾಧ್ಯವಿಲ್ಲ ಎಂದರು. ನಮ್ಮ ಹೆಮ್ಮೆಯ ಭಾರತಾಂಬೆ ಬಂಜೆಯಲ್ಲ ಆಕೆ ನಮ್ಮಂತಹ ಸಾವಿರಾರು ದೇಶಪ್ರೇಮಿಗಳನ್ನು ಹುಟ್ಟುಹಾಕಿದ್ದಾರೆ. ನಮ್ಮ ದೇಶದಲ್ಲಿದ್ದುಕೊಂಡೇ ಪ್ರತ್ಯೇಕ ಕಾಶ್ಮೀರ ಬಗ್ಗೆ ಬೇಡಿಕೆ, ಜೊತೆಗೆ ಅಫ್ಜಲ್ಗುರುವಂತಹ ವಿರೋಧಿಗಳಿಗೆ ಬೆಂಬಲ ಸೂಚಿಸುವ ಕೆಲವು ವಿಕೃತ ಮನಸ್ಸುಗಳನ್ನು ದೂರವಿಡಬೇಕು ಎಂದು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಾನೀರು: ವಿಶ್ವವಿದ್ಯಾನಿಲಯಗಳಲ್ಲಿ ಕಲೆ ಆಧಾರಿತ ಚಲನಚಿತ್ರಗಳ ಅಧ್ಯಯನದ ಬಗ್ಗೆ ಹೆಚ್ಚಿನ ಒಲವು ನೀಡಬೇಕಿದ್ದು, ವಿದೇಶದ ವಿ.ವಿಗಳಲ್ಲಿ ಹಾಲಿವುಡ್ ಚಿತ್ರಗಳಿಗೆ ಇರುವಂತೆ ಚಲನಚಿತ್ರ ಸಕ್ರ್ಯೂಟ್ಗಳ ಸ್ಥಾಪನೆ ದೇಶದಲ್ಲಿಯೂ ಆಗುವ ಮೂಲಕ ಚಲನಚಿತ್ರಗಳು ಮನರಂಜನೆಗೆ ಮಾತ್ರವಲ್ಲ ಯುವಸಮುದಾಯದ ವಿಕಸನಕ್ಕೂ ದಾರಿಯಾಗಬೇಕು ಎಂದು ಮೂರು ರಾಷ್ಟ್ರಪ್ರಶಸ್ತಿ ಪುರಸ್ಕøತ ಚಲನಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕ ತಿಪಟೂರಿನ ಬಿ.ಯಸ್.ಲಿಂಗದೇವರು ಅಭಿಪ್ರಾಯಪಟ್ಟರು. ಅವರು ನಿಟ್ಟೆ ವಿಶ್ವವಿದ್ಯಾನಿಲಯದ ಸಮೂಹ ಮಾಧ್ಯಮದ ವತಿಯಿಂದ ದೇರಳಕಟ್ಟೆ ಪಾನೀರು ಕ್ಯಾಂಪಸ್ಸಿನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಮೀಡಿಯ ಫೆಸ್ಟ್ -2016 ಕ್ಕೆ ಚಾಲನೆ ನೀಡಿ ಮಾತನಾಡಿದರು. ಶಿಕ್ಷಣ ವ್ಯವಸ್ಥೆ ಕಾರ್ಖಾನೆಗಳ ರೀತಿಯಲ್ಲಿ ಕಾರ್ಯಚರಿಸುತ್ತಿದೆ. ಶಿಕ್ಷಣ ಪಡೆದುಕೊಂಡವರು ಸಾಮಾನ್ಯ ಜ್ಞಾನವನ್ನು ಪಡೆಯದೆ ಸೀಮಿತ ಕ್ಷೇತ್ರಗಳಲ್ಲಿ ಮಾತ್ರ ಉಳಿದುಕೊಳ್ಳುತ್ತಿದ್ದಾರೆ. ಇಂದು ವಿದ್ಯುನ್ಮಾನ ಮಾಧ್ಯಮಗಳು ಮತ್ತು ಚಲನಚಿತ್ರಗಳು ವೈಯಕ್ತಿಕ ವರ್ತನೆಗಳನ್ನು ಬದಲಾಯಿಸುವತ್ತ ಪ್ರಭಾವ ಬೀರುತ್ತಿದೆ. ಸಿನಿಮಾ ಅಧ್ಯಯನದ ಕಾಲೇಜುಗಳು ಹಲವು ಇದೆ. ಆದರೆ ಚಲನಚಿತ್ರಗಳ ಶಾಸ್ತ್ರೀಯ ಅಭ್ಯಾಸ ಮಾಡುವ ಯಾವುದೇ ಕಾಲೇಜುಗಳಿಲ್ಲ. ಕಲೆ ಆಧಾರಿತವಾಗಿರಬೇಕಾದ ಚಿತ್ರಗಳು ಫ್ಯಾಷನ್…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ವಿದ್ಯಾರ್ಥಿ ಜೀವನದಲ್ಲಿ ಕಾಲೇಜಿನ ಕ್ಲಾಸ್ ರೂಂ ಮತ್ತು ಪುಸ್ತಕದಲ್ಲಿ ಸಿಗುವ ಜ್ಞಾನದೊಂದಿಗೆ ಕ್ರೀಡಾಂಗಣದಲ್ಲಿ ಸಿಗುವ ಜ್ಞಾನವು ಸೇರಿದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಪೂರಕ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾ„ಪತಿ ಪ್ರೊ. ಡಾ| ಶಾಂತಾರಾಮ ಶೆಟ್ಟಿ ಅಬಿಪ್ರಾಯಪಟ್ಟರು. ಅವರು ಕೆ.ಎಸ್.ಹೆಗ್ಡೆ ಮೆಡಿಕಲ್ ಅಕಾಡೆಮಿಯ ಆಡಿಟೋರಿಯಂನಲ್ಲಿ ದಕ್ಷಿಣ ಭಾರತ ಮಟ್ಟದ ದಂತ ಮತ್ತು ವೈದ್ಯಕೀಯ ವಿಜ್ಞಾನ ಕಾಲೇಜುಗಳ ಅಂತರ್ ಕಾಲೇಜು ಕ್ರೀಡಾಕೂಟ ` 6ನೇ ನಿಟ್ಟೆ ಎಕೋಲೇಟ್ಸ್ 2016′ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು. ಪುಸ್ತಕಗಳು ನಮ್ಮ ಜೀವನದಲ್ಲಿ ಅತೀ ಮುಖ್ಯ ಅಲ್ಲ. ಹೊಸ ಹೊಸ ತಂತ್ರಜ್ಞಾನಗಳ ಜ್ಞಾನ ಅಗತ್ಯ ಅದರೊಂದಿಗೆ ಕ್ರೀಡಾಕೂಟದಲ್ಲಿ ಬೇರೆ ಬೇರೆ ಕಾಲೇಜುಗಳ ವಿದ್ಯಾರ್ಥಿಗಳು, ಒದೆಡೆ ಸೇರಿದಾಗ ತಮ್ಮ ಭಾವನೆಗಳನ್ನು ಹಂಚಿಕೊಳ್ಳಲು, ಸೋಲು, ಗೆಲುವಿನ ಬಗ್ಗೆ ಚಿಂತನೆ ನಡೆಸಲು ಸಹಕಾರಿ. ಕ್ರೀಡೆಯಲ್ಲಿ ಸೂಲು ಗೆಲವು ಸಹಜ ಆದರೆ ಅದರೊಂದಿಗೆ ಮುಂದಿನ ದಿನಗಳಲ್ಲಿ ಸೋಲನ್ನು ಸವಾಲಾಗಿ ಸ್ವೀಕರಿಸಿ ಗೆಲುವು ಸಾ„ಸುವ ಪ್ರಯತ್ನ ಅತೀ ಮುಖ್ಯ ಎಂದರು.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಟೂರಿಸ್ಟ್ ವಾಹನಗಳಿಗೆ ಸಿಗುವ ಬಾಡಿಗೆಗೆ ಕಲ್ಲು ಹಾಕುವ ಕೆಲಸವನ್ನು ಪರ್ಮಿಟ್ ಇರುವ ವಾಹನಗಳು ಮಾಡುತ್ತಿದ್ದರೂ, ಅದರ ವಿರುದ್ಧ ಕ್ರಮಕೈಗೊಳ್ಳಬೇಕಾದ ಅಧಿಕಾರಿಗಳು ಅವರ ಜತೆಗೆ ಶಾಮೀಲಾಗಿ ಸರಕಾರಕ್ಕೆ ಮೋಸ ಮಾಡುತ್ತಿದ್ದಾರೆ. ಈ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡುವುದರ ಜತೆಗೆ ಜಿಲ್ಲೆಯಾದ್ಯಂತ ಉಪವಾಸ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಹಾಗೂ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ನಿನ ಜಿಲ್ಲೆ ಅಧ್ಯಕ್ಷ ಮೋನಪ್ಪ ಭಂಡಾರಿ ಹೇಳಿದ್ದಾರೆ. ಅವರು ತೊಕ್ಕೊಟ್ಟು ಟೂರಿಸ್ಟ್ ಕಾರು ಮತ್ತು ವ್ಯಾನ್ ಚಾಲಕ ಮಾಲಕರ ಸಂಘದ ವತಿಯಿಂದ ಪರವಾನಿಗೆ ಇಲ್ಲದ ಬಸ್ಸುಗಳು ಮತ್ತು ಖಾಸಗಿ ಕಾರುಗಳು ಪ್ರವಾಸಿ ಬಾಡಿಗೆ ಮಾಡುವುದರ ವಿರುದ್ಧವಾಗಿ ಮಂಗಳವಾರ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ ಹಮ್ಮಿಕೊಂಡ ಪ್ರತಿಭಟನೆ ಹಾಗೂ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿದರು. ಟ್ರಿಪ್ ನಿಲ್ಲಿಸಿ ಬಾಡಿಗೆ ನಡೆಸುವ ಬಸ್ಸುಗಳ ಪರ್ಮಿಟ್ ರದ್ದುಗೊಳಿಸಬೇಕಾದ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಸರಕಾರಿ ಅಧಿಕಾರಿಗಳು ಬಸ್ಸು ಮಾಲೀಕರ ಜತೆಗೆ ಶಾಮೀಲಾಗಿ ಲಂಚ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ದೇರಳಕಟ್ಟೆ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೇರಳ ಕಣ್ಣೂರಿನ ಪಯ್ಯಂಬಲ್ ರಾಯಲ್ ಹೆಲೆನ್ ಫ್ಲಾಟಿನ ನಿವಾಸಿ ವಿನೋದ್ ವರ್ಗೀಸ್ ಎಂಬವರ ಪುತ್ರ ಮ್ಯಾಥ್ಯಿವ್ ವರ್ಗೀಸ್ (20) ಮೃತ ವಿದ್ಯಾರ್ಥಿ. ಇವರು ದೇರಳಕಟ್ಟೆ ಖಾಸಗಿ ಕಾಲೇಜಿನಲ್ಲಿ ತೃತೀಯ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದರು. ಮಾ.4 ಶುಕ್ರವಾರ ದೇರಳಕಟ್ಟೆಯಿಂದ ಕುತ್ತಾರು ಕಡೆಗೆ ತೆರಳುತ್ತಿದ್ದಾಗ ಮ್ಯಾಥಿವ್ ಚಲಾಯಿಸುತ್ತಿದ್ದ ಕಾರು ನಿತ್ಯಾನಂದನಗರ ಸಮೀಪ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಮ್ಯಾಥಿವ್ ಮತ್ತು ಸಂಶಾದ್ ಎಂಬವರು ಗಂಭೀರವಾಗಿ ಗಾಯಗೊಂಡರೆ, ಜಾರ್ಜ್ ರೋಹನ್, ಕೌಶಿಕ್ ಥೋಮಸ್, ರಾಜು ಎಂಬವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸುತ್ತಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿ ಹೆತ್ತವರು ವಿನೋದ್ ವರ್ಗೀಸ್ ದಂಪತಿ ಇಬ್ಬರು ಕೇರಳದಲ್ಲಿ ಖ್ಯಾತ ವೈದ್ಯರಾಗಿದ್ದು, ಕಿರಿಯ ಸಹೋದರಿ ದೇರಳಕಟ್ಟೆಯಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯನ್ನು ಅಗಲಿದ್ದಾರೆ.

