ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಸೋಮೇಶ್ವರದ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು. ಸಾವಿರಾರು ಭಕ್ತರು ಬೆಳಗ್ಗಿನಿಂದ ದೇವರ ದರ್ಶನ ಪಡೆದು ರಾತ್ರಿ ಜಾಗರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ವಿವಿಧ ಸಂಘದ ಹಾಗೂ ಭಜನಾ ಮಂಡಳಿಗಳ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸಜಿಪ: ಮಂಗಳೂರು ವಿಧಾನಸಭಾ ಕ್ಷೇತ್ರದ ಸಜಿಪನಡು ಗ್ರಾಮದ ಅತೀ ಎತ್ತರವಾದ ಪ್ರದೇಶದಲ್ಲಿರುವ ಕಂಚಿನಡ್ಕ ಪದವು ಸೈಟ್ ನಿವಾಸಿಗಳಿಗೆ ಮೂಲಭೂತ ಸೌಕರ್ಯದ ಕೊರತೆಯನ್ನು ಹಂತ ಹಂತವಾಗಿ ಅಭಿವೃದ್ಧಿ ಮಾಡುತ್ತಿದ್ದು, ರಸ್ತೆ ನಿರ್ಮಾಣ ಸೇರಿದಂತೆ ಕೆಲವೊಂದು ಮೂಲಭೂತ ಸೌಕರ್ಯವನ್ನು ಈಗಾಗಲೇ ಯಶಸ್ವಿಯಾಗಿ ನಡೆಸಿದೆ. ಆದರೆ ನೀರಿನ ಸಮಸ್ಯೆ ಪರಿಹಾರವಾಗಿರಲಿಲ್ಲ. ಹೆಲ್ಪ್ ಇಂಡಿಯಾ ಸಂಸ್ಥೆಯ ರಾಝಿಕ್ ಉಳ್ಳಾಲ್ ಸಮಾಜಕ್ಕೆ ಕೊಡುಗೆಯಾಗಿ ದಾನಿಯೋರ್ವರು ನೀರಿನ ಶಾಶ್ವತ ಯೋಜನೆಯನ್ನು ಮಾಡುವ ಇರಾದೆಯನ್ನು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ರಾಝಿಕ್ ಅವರಿಗೆ ಈ ಸ್ಥಳದಲ್ಲಿ ನೀರಿನ ಶಾಶ್ವತ ಯೋಜನೆ ನಡೆಸಲು ಕೇಳಿಕೊಂಡತೆ ಬಾವಿ ನಿರ್ಮಾಣ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಸೈಟ್ ನಿವಾಸಿಗಳ ಉಪಯೋಗಕ್ಕೆ ಬಿಟ್ಟು ಕೊಟ್ಟಿದ್ದು, ಈ ಬಾವಿಯನ್ನು ಇಲ್ಲಿನ ನಿವಾಸಿಗಳು ಸಮಾಜದ ಆಸ್ತಿ ಸಂಪತ್ತಿನಂತೆ ರಕ್ಷಿಸುವ ಕಾರ್ಯ ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಆಭಿಪ್ರಾಯಪಟ್ಟರು. ಅವರು ಸಜಿಪ ಗ್ರಾಮದ ಕಂಚಿನಡ್ಕಪದವು ಸೈಟ್ ನಿವಾಸಿಗಳಿಗೆ ಹೆಲ್ಪ್ ಇಂಡಿಯಾ ಫೌಂಡೇಶನ್ ವತಿಯಿಂದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಜೀರು: ದೇಶದಲ್ಲಿ ಅನಾದಿಕಾಲದಿಂದಲೂ ಗೋವಿನ ಬಗ್ಗೆ ಪೂಜ್ಯನೀಯ ಭಾವವನ್ನು ಬೆಳೆಸಿಕೊಂಡು ಬಂದ ಸಂಸ್ಕøತಿ ನಮ್ಮದು. ತಾಯಿಯ ರೂಪದಲ್ಲಿ ನಾವು ಕಾಣುವ ಗೋವು ಅದು ದೇಶದ ಸಂಪತ್ತು ಆಗಿದೆ. ಆದರೆ ನಾವು ಗೋವಿನ ಬದಲು ಹುಲಿಯನ್ನು ರಾಷ್ಟ್ರೀಯ ಪ್ರಾಣಿ ಎಂದು ಕರೆದಿರುವುದು ವಿಪರ್ಯಾಸ. ಇನ್ನಾದರೂ ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವ ಕೆಲಸ ಆಗಬೇಕಾಗಿದೆ ಜೊತೆಗೆ ಗೋಹತ್ಯೆ ನಿಷೇದ ಕಾನೂನನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕಾದ ಅನಿವಾರ್ಯತೆ ಇದೆ ಎಂದು ವಿಶ್ವಹಿಂದೂ ಪರಿಷತ್ನ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಗೋಪಾಲ್ಜೀ ಅವರು ಹೇಳಿದರು. ಅವರು ಪಜೀರು ಬೀಜಗುರಿಯ ಗೋವನಿತಾಯ ಟ್ರಸ್ಟ್ನ 16 ನೇ ವರ್ಷಾಚರಣೆ ಅಂಗವಾಗಿ ನೂತನ ಗೊಶಾಲೆಯ ಶಿಲಾನ್ಯಾಸ ಕಾರ್ಯಕ್ರಮದ ಅಂಗವಾಗಿ ಭಾನುವಾರ ನಡೆದ ಸ¨ssÁ ಕಾರ್ಯಕ್ರಮದಲ್ಲಿ `ಗೋ ಸಂತತಿಯ ಅಭಿವೃದ್ದಿಯಲ್ಲಿ ಸಂಘ ಸಂಸ್ಥೆಗಳ ಪಾತ’್ರ ಎಂಬ ವಿಷಯದಲ್ಲಿ ಅವರು ಮಾತನಾಡಿದರು. ದೇಶೀ ಹಸುವಿನ ಹಾಲು ಅದು ಅಮೃತ ಇದ್ದ ಹಾಗೆ. ಆದ್ದರಿಂದ ದೇಶಿ ಹಸುಗಳ ಸಂರಕ್ಷಣೆಯ ಜೊತೆಗೆ ಗೋವಿನ ಮಹತ್ವದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಅಸೈಗೊಳಿ: ಇತ್ತೀಚಿಗೆ ಫೇಸ್ಬುಕ್, ವಾಟ್ಸ್ ಆ್ಯಪ್ ಮುಂತಾದ ಸಾಮಾಜಿಕ ಜಾಲತಾಣಗಳ ಮೂಲಕ ಯುವಕರು ತಪ್ಪು ದಾರಿ ಹಿಡಿಯುವುತ್ತಿರುವ ಉದಾಹರಣೆ ಬಹಳಷ್ಟು ಇದೆ. ಆದರೆ ಕೆಲವೊಮ್ಮೆ ಇಂತಹ ಸಾಮಾಜಿಕ ಜಾಲತಾಣಗಳು ಸಮಾಜದಲ್ಲಿ ಕಷ್ಟದಲ್ಲಿರುವವರ ಕಣ್ಣೀರೊರೆಸುವ ಕೆಲಸಗಳಿಗೆ ಉಪಯೋಗವಾಗುತ್ತಿರುವುದನ್ನು ನಾವು ಕಾಣಬಹುದು. ಕಳೆದ ಕೆಲವು ದಿನಗಳ ಹಿಂದೆ ಬೈಕ್ ಅಪಘಾತವಾಗಿ ಆಸ್ಪತ್ರೆಯಲ್ಲಿ ಗಂಭೀರವಾಗಿದ್ದ ಬಡ ಕುಟುಂಬದ ಯುವಕನಿಗೆ ಹತ್ತಾರು ಯುವಕರು ಸೇರಿಕೊಂಡು ರಚಿಸಿದ್ದ ವಾಟ್ಸ್ ಆ್ಯಪ್ ಬಳಗವೊಂದು ಮಾನವೀಯತೆಯ ನೆಲೆಯಲ್ಲಿ ಆತನ ನೆರವಿಗೆ ನಿಂತು ಆರ್ಥಿಕ ಸಹಾಯ ಮಾಡಿದೆ. ಅಸೈಗೊಳಿಯ ಫರ್ನಿಚರ್ ಅಂಗಡಿಯೊಂದರಲ್ಲಿ ಮರದ ಕೆಲಸ ಮಾಡಿಕೊಂಡಿದ್ದ ಪಾವೂರಿನ ದೀಕ್ಷಿತ್ ಎಂಬ ಯುವಕ ಇತ್ತೀಚೆಗೆ ಬೈಕ್ ಅವಘಡ ಸಂಭವಿಸಿ ಆಸ್ಪತ್ರೆಗೆ ದಾಖಲಾಗಿದ್ದ. ಅಪಘಾತದಲ್ಲಿ ತಲೆಯ ಭಾಗಕ್ಕೆ ಬಲವಾದ ಏಟು ಬಿದ್ದು ಗಂಭೀರ ಗಾಯವಾಗಿತ್ತು. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದೀಕ್ಷಿತ್ನನ್ನು ಬಳಿಕ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೊಲಸೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಹಣ ಕಟ್ಟಲು…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಹಾರ್ಡ್ವೇರ್ ಅಂಗಡಿ ಮಾಲೀಕನಿಗೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಮುಖ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಮುಡಿಪು ಕೈರಂಗಳದ ನವಾಝ್ (28) ಬಂಧಿತ. ಫೆ.23 ರಂದು ಮುಡಿಪು ಪೇಟೆಯಲ್ಲಿ ಅರಫಾ ಹಾರ್ಡ್ವೇರ್ ಅಂಗಡಿ ಮಾಲೀಕರಾದ ಮಹಮ್ಮದ್ ಹನೀಫ್ ಎಂಬವರಿಗೆ ತಲೆಗೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದ್ದರು. ಕೃತ್ಯ ಎಸಗಿದ ತಂಡದಲ್ಲಿ ನವಾಝ್ ಮತ್ತು ಆತನ ಸಹಚರರು ಭಾಗಿಯಾಗಿದ್ದರು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡಿದ್ದ ಕೊಣಾಜೆ ಪೊಲೀಸರು ಪ್ರಮುಖ ಆರೋಪಿ ನವಾಜ್ ನನ್ನು ಬಂಧಿಸಿ, ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ವೈದ್ಯ ವಿದ್ಯಾರ್ಥಿಗಳ ಅಪಹರಣಕಾರ: ಆರೋಪಿ ನವಾಝ್ ರಾಜ್ಯಾದ್ಯಂತ ಸುದ್ಧಿ ಗಳಿಸಿದ್ದ ದೇರಳಕಟ್ಟೆ ವೈದ್ಯ ವಿದ್ಯಾರ್ಥಿ-ವಿದ್ಯಾರ್ಥಿನಿ ಅಪಹರಣ ನಡೆಸಿ ಲೈಂಗಿಕ ಶೋಷಣೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಇತ್ತೀಚೆಗೆ ಜೈಲಿನಿಂದ ಬಿಡುಗಡೆಗೊಂಡ ಈತ ಮತ್ತೆ ಅಪರಾಧ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದಾನೆ. ಈ ಹಿಂದೆ ಮುಡಿಪುವಿನಲ್ಲಿ ನಡೆದ ಗಲಭೆ ಪ್ರಕರಣದಲ್ಲಿಯೂ ಆರೋಪಿಯಾಗಿದ್ದಾನೆ. ಪೊಲೀಸ್ ಆಯುಕ್ರ ಚಂದ್ರಶೇಖರ್, ಡಿಸಿಪಿಗಳಾದ ಶಾಂತರಾಜು…
ವಜ್ರ ಗುಜರನ್, ಮಾಡೂರು ಉಳ್ಳಾಲ: ಅಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನಗಳು ಹೋಗುವುದೇ ಕಷ್ಟದಾಯಕ. ಆದರೆ ವಿಳಂಬವಾದರೂ ಕುಂದಾಪುರ -ತಲಪಾಡಿ ಹೆದ್ದಾರಿ ಅಗಲೀಕರಣ ಕಾಮಗಾರಿಯ ಕೊನೆ ಹಂತದಲ್ಲಿ ಅತಿ ಉದ್ದನೆಯ ನೂತನ ನೇತ್ರಾವತಿ ಸೇತುವೆ ಕೆಲಸ ಪೂರ್ಣಗೊಂಡು ಇದೀಗ ಸುಗಮ ಸಂಚಾರಕ್ಕೆ ಯೋಗ್ಯವಾಗಿದೆ. ಆದರೆ ರಾತ್ರಿ ಸಮಯದಲ್ಲಿ ಹಳೇಯ ಮತ್ತು ನೂತನ ಸೇತುವೆಯುದ್ದಕ್ಕೂ ದಾರಿದೀಪಗಳು ಇಲ್ಲದೇ ಇರುವುದರಿಂದ ದುರ್ಘಟನೆಗಳು ಸಂಭವಿಸುವ ಭೀತಿಯ ವಾತಾವರಣ ವಾಹನ ಸವಾರರಲ್ಲಿ ಹಾಗೂ ಪಾದಚಾರಿಗಳಲ್ಲಿ ಮನೆ ಮಾಡಿದೆ. ಬ್ರಿಟೀಷ್ ಕಾಲದಿಂದ ಹಳೇಯ ಸೇತುವೆ ಆರಂಭಗೊಂಡಿದೆ. ಅದರ ದಾರಿಯುದ್ಧಕ್ಕೂ ಒಂದು ಸಮಯದಲ್ಲಿ ಸೋಡಿಯಂ ದಾರಿದೀಪಗಳನ್ನು ಅಳವಡಿಸಲಾಗಿತ್ತು. ಆದರೆ ನೂತನ ಸೇತುವೆ ಶುಭಾರಂಭಗೊಂಡ ನಂತರದ ದಿನಗಳಲ್ಲಿ ಒಂದು ಕಿ.ಮೀ ಅಂತರದ ಎರಡು ಸೇತುವೆಯೂ ರಾತ್ರಿ ಸಂದರ್ಭ ಕಗ್ಗತ್ತಲಲ್ಲಿ ಮುಳುಗುತ್ತಿದೆ. ಪಾದಚಾರಿಗಳಲ್ಲಿ ಭೀತಿ : ಹಳೇಯ ಸೇತುವೆಯಲ್ಲಿ ಪಾದಚಾರಿಗಳಿಗೆ ಹೋಗಲು ಫುಟ್ಪಾತ್ ಇದೆ. ಅದರಲ್ಲಿ ನಸುಕಿನ ಜಾವ ಮತ್ತು ಸಂಜೆ ವೇಳೆ ವಾಕಿಂಗ್ ಮತ್ತು ಪಾದಚಾರಿಗಳು ಹೋಗುವವರಿದ್ದಾರೆ. ಆದರೆ ದಾರಿದೀಪಗಳು ಇಲ್ಲದೇ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ರಿಕ್ಷಾದಲ್ಲಿ ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಮಂಜನಾಡಿಯ ಉರುಮನೆ ಎಂಬಲ್ಲಿಂದ ಮಂಗಳವಾರ ಬಂಧಿಸಿ ಸುಮಾರು 450 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಮಂಜನಾಡಿ ನೆತ್ತಿಲಪದವು ನಿವಾಸಿ ಆತಿಂ(28) ಬಂಧಿತ. ಮಂಜನಾಡಿ ಕಡೆಯಿಂದ ರಿಕ್ಷಾದಲ್ಲಿ ಗಾಂಜಾ ಸಾಗಾಟ ನಡೆಸುತ್ತಿರುವ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ಈತನಿಂದ ರಿಕ್ಷಾ , 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಕೊಣಾಜೆ ಠಾಣಾಧಿಕಾರಿ ಅಶೋಕ್ ಮತ್ತು ಪಿಎಸ್ಐ ಸುಧಾಕರ್ ಹಾಗೂ ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಜೀವಶಾಸ್ತ್ರ ಹಾಗೂ ರಸಾಯನ ಶಾಸ್ತ್ರ ವಿಭಿನ್ನ ಅಧ್ಯಯನವಾಗಿದ್ದು ಇವೆರಡರ ಕೂಡುವಿಕೆಯ ಅಧ್ಯಯನಗಳ ಕುರಿತು ಮತ್ತು ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಮಹತ್ವ ನೀಡಬೇಕಿದೆ ಎಂದು ಎಂದು ಪದ್ಮಭೂಷಣ ಪುರಸ್ಕøತ ಹಾಗೂ ಬೆಂಗಳೂರು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ನ ನಿವೃತ್ತ ನಿರ್ದೆಶಕ ಪಿ. ಬಲರಾಮ ತಿಳಿಸಿದ್ದಾರೆ. ಅವರು ಮಂಗಳೂರು ವಿಶ್ವ ವಿದ್ಯಾನಿಲಯದ ವಿಜ್ಷಾನ ವಿಭಾಗದ ನೂತನ ಜೀವರಸಾಯನ ಶಾಸ್ತ್ರ ಸಂಶೋಧನಾ ಪ್ರಯೋಗಲಯ, ಜೀವಶಾಸ್ತ್ರ ಪ್ರಯೋಗಲಯವನ್ನು ಉದ್ಘಾಟಸಿ ಬಳಿಕ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಆಡಿಟೋರಿಯಂನಲ್ಲಿ ವಿದ್ಯಾರ್ಥಿಗಳಿಗಾಗಿ ನಡೆದ ` ಜೀವಶಾಸ್ತ್ರದಲ್ಲಿ ರಾಸಾಯನಿಕ ಸಂವಹನ’ ಕುರಿತ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರಚನೆಗಳು ಮತ್ತು ಸೂತ್ರಗಳು ಇರುವ ರಸಾಯನಿಕ ಶಾಸ್ತ್ರದ ಪುಸ್ತಕಗಳನ್ನು ವಿದ್ಯಾರ್ಥಿಗಳು ದ್ವೇಷಿಸುವಂತಾಗಿದೆ. ಆದರೆ ಭಾಷೆಗಳ ಮೂಲಕ ಅರಿಯುವುದರೊಂದಿಗೆ ಅದನ್ನು ಸರಳವನ್ನಾಗಿಸಬಹುದು. ಉಗಿ (ಸ್ಟೀಂ) ರಾಸಾಯನಿಕ ಅಲ್ಲ ಎಂಬ ಐತಿಹಾಸಿಕ ತೀರ್ಪನ್ನು ಮುಂಬೈ ಹೈಕೋಟ್ ್ ಹಲವು ವರ್ಷಗಳ ಹಿಂದೆ ಪ್ರಕಟಿಸಿತ್ತು. ತೆರಿಗೆ ವಿನಾಯಿತಿಗೆ ವಿಚಾರದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು : ವಿಭಿನ್ನ ಮತಕ್ಕೆ ಸೇರಿದ ವಿದ್ಯಾರ್ಥಿ ಜೋಡಿ ಐಸ್ ಕ್ರೀಂ ಪಾರ್ಲರಿನಲ್ಲಿರುವ ಬಗ್ಗೆ ಇರುವ ಮಾಹಿತಿ ಪಡದ ಉಳ್ಳಾಲ ಪೊಲೀಸರು ಹಿಂದು ಸಂಘಟನೆಗಳು ದಾಳಿನಡೆಸುವ ಮುನ್ನ ವಶಕ್ಕೆ ಪಡೆದುಕೊಂಡಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಬುಧವಾರ ನಡೆದಿದೆ. ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಾದ ಮುಸ್ಲಿಂ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿನಿ ಜತೆಯಾಗಿ ಬೈಕಿನಲ್ಲಿ ತೊಕ್ಕೊಟ್ಟು ಜಂಕ್ಷನ್ ಸಮೀಪ ಇರುವ ಐಸ್ ಕ್ರೀಂ ಪಾರ್ಲರಿಗೆ ಆಗಮಿಸಿತ್ತು. ಈ ಬಗ್ಗೆ ಮಾಹಿತಿ ಪಡೆದ ಹಿಂದು ಸಂಘಟನೆ ಕಾರ್ಯಕರ್ತರು ಪಾರ್ಲರ್ ಹೊರಗಡೆ ಜಮಾಯಿಸಲು ಆರಂಭಿಸುತ್ತಿದ್ದಂತೆ ಉಳ್ಳಾಲ ಪೊಲೀಸರಿಗೆ ಮಾಹಿತಿ ರವಾನೆಯಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಇಬ್ಬರನ್ನು ವಿಚಾರಿಸಿ, ಎಚ್ಚರಿಕೆ ನೀಡಿ ಬಿಟ್ಟು ಬಿಟ್ಟಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಪಕ್ಷದಲ್ಲಿ ನಿಯತ್ತು , ಪ್ರಾಮಾಣಿಕತೆಯನ್ನು ಇರಿಸಿಕೊಂಡವರನ್ನು ಪಕ್ಷ ಒಂದು ರೀತಿಯಲ್ಲಿ ಗುರುತಿಸುತ್ತದೆ. ಈ ಮೂಲಕ ಪಕ್ಷದ ಗೌರವವನ್ನು ಉಳಿಸುವ ಕಾರ್ಯವನ್ನು ಚುನಾಯಿತ ಅಭ್ಯರ್ಥಿಗಳು ಮಾಡಬೇಕು ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮುಡಿಪು ಆಡಿಟೋರಿಯಂನಲ್ಲಿ ಮಂಗಳವಾರ ಆಯೋಜಿಸಲಾದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಆಯ್ಕೆಯಾದ ಅಭ್ಯರ್ಥಿಗಳಿಗೆ ಅಭಿನಂದನೆ ಹಾಗೂ ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ನಡೆದ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬಿಜೆಪಿಯವರು ಪ್ರಚಾರದ ಮೂಲಕ ಮತ ಕೇಳಲು ಹೋಗುವುದಿಲ್ಲ. ಅಪಪ್ರಚಾರವನ್ನೇ ನಡೆಸುವ ಮೂಲಕ ಮತ ಯಾಚಿಸುತ್ತಿದ್ದಾರೆ. ಅದು ಅವರಿಗೆ ಕಂಠಕವಾಗಿ ಪರಿಣಮಿಸಿದೆ. ವಾಟ್ಸ್ಯ್ಪ್ ಸಂದೇಶದಿಂದ ಮತ ಬೀಳುವುದಿಲ್ಲ, ಬದಲಾಗಿ ಮನುಷ್ಯರೊಳಗಿನ ಸಂಬಂಧವನ್ನು ಅರಿತು, ಅವರ ಒಳಿತಿಗೆ ಪ್ರಯತ್ನಿಸಿದಾಗ ಮಾತ್ರ ಮತ ಸಿಗುತ್ತದೆ ಅನ್ನುವುದನ್ನು ಬಿಜೆಪಿಯವರು ಅರಿತುಕೊಳ್ಳಬೇಕಿದೆ ಎಂದ ಅವರು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾಯಿತ ಅಭ್ಯರ್ಥಿಗಳು ಜನರ…

