Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಗಾಮದ ಪಟ್ಟೋರಿಯ ಶ್ರೀ ಪಟ್ಟೋರಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ನೂತನ ಗರ್ಭಗುಡಿ ಗೋಪುರ ಪುನರ್ ಪ್ರತಿಷ್ಠಾ ಬ್ರಹ್ಮಕಲಾಶಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಂಗಳವಾರ ಕೋಡಿ ಪಟ್ಟಿಸ್ಥಾನ ಪಟ್ಟೋರಿಯಲ್ಲಿ ನಡೆಯಿತು. ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ರಘುರಾಮ ಕಾಜವ ಪಟ್ಟೋರಿ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. ಪಟ್ಟೋರಿಯ ಶ್ರೀ ಪಟ್ಟೋರಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ಜೀರ್ಣೋದ್ದಾರದ ಕೆಲಸ ಭರದಿಂದ ನಡೆಯುತ್ತಿದ್ದು ಇದರ ನೂತನ ಗರ್ಭಗುಡಿ, ಗೋಪುರ ಪುನರ್ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕವು ಹಾಗೂ ವರ್ಷಾವಧಿ ಸಾನದಾಯನ ಜಾತ್ರಾ ಮಹೋತ್ಸವು ಎ.20ರಿಂದ ಎ.23ರವರೆಗೆ ಕ್ಷೇತ್ರದಲ್ಲಿ ನಡೆಯಲಿದೆ. ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಜೀರ್ಣೋದ್ದಾರ ಸಮಿತಿಯ ಶ್ರೀನಿವಾಸ ಕಾಜವ ಪಟ್ಟೋರಿ, ಕೋಶಾಧಿಕಾರಿ ದಿವಾಕರ ಭಂಡಾರಿ, ಸಂಚಾಲಕರಾದ ಸಂತೋಷ್ ಕುಮಾರ್ ಶೆಟ್ಟಿ, ಪ್ರದಾನ ಕಾರ್ಯದರ್ಶಿ ರಾಮಕೃಷ್ಣ ಪಟ್ಟೋರಿ, ಕರುಣಾಕರ ಕಾನ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಂಗಳೂರು ವಿಭಾಗದ ನಿರ್ದೇಶಕರಾದ ಸುದೀರ್ ಕುಮಾರ್, ಯೋಜನಾಧಿಕಾರಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸೇವಾ ಸಂಘ (ಎಸ್‍ವೈಎಸ್) ಮುಡಿಪು ಸೆಂಟರ್ ಇದರ ಆಶ್ರಯದಲ್ಲಿ 13 ಆದರ್ಶ ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭವು ಮುಡಿಪು ಬಾಳೆಪುಣಿ ಪಂಚಾಯಿತಿ ಮೈದಾನದ ತಾಜುಲ್ ಉಲಮಾ ವೇದಿಕೆಯಲ್ಲಿ ಭಾನುವಾರ ನಡೆಯಿತು. ವಿವಾಹ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅಖಿಲಾ ಭಾರತ ಸುನ್ನೀ ಜಂಇಯತ್ತುಲ್ ಉಲಮಾ ಇದರ ಪ್ರದಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್, ಮನುಷ್ಯ ಮನುಷ್ಯನಾಗಿ ಜೀವಿಸಬೇಕಾದರೆ ಸಮುದಾಯದಲ್ಲಿರುವ ಕಡ್ಡಾಯ ಕಾರ್ಯಗಳನ್ನು ನೆರವೇರಿಸಬೇಕು. ಉಚಿತ ಸಾಮೂಹಿಕ ವಿವಾಹದಂತಹ ಉತ್ತಮ ಸಮಾಜಮುಖೀ ಕಾರ್ಯಗಳಿಗೆ ಪ್ರೋತ್ಸಾಹ ನೀಡಬೇಕು. ಇಂತಹ ಕಾರ್ಯಕ್ರಮಗಳಿಂದ ಬಹಳಷ್ಟು ಬಡಕುಟುಂಬಗಳ ಸಮಸ್ಯೆಗಳು ನಿವಾರಣೆಯಾಗಲು ಸಾಧ್ಯ ಎಂದು ಹೇಳಿದರು. ಸಾಮೂಹಿಕ ವಿವಾಹ ಸಮಾರಂಭದಲ್ಲಿ ಉಮ್ಮರುಲ್ ಫಾರೂಕ್ ಬೋಳಿಯಾರ್-ಜಮೀಲಾ ಕೊಳಕೆ, ಉಸ್ಮಾನ್ ಬರುವ-ರಮ್ಲತ್ ಸಾಬಿರಾ, ಮಹಮ್ಮದ್ ಅಬ್ದುಲ್ಲಾ ರಾಮನಗರ-ಝೀನತ್ ಬಡಕಜೆಕಾರು, ಮಹಮ್ಮದ್ ರಪೀಕ್ ಕಿನ್ಯಾ- ಆಯಿಶಾ ಕೆದುಮೂಲೆ, ಸಮೀರ್ ಗೋಳಿತೊಟ್ಟು ಪುತ್ತೂರು-ಅಫ್ಸಾ ಮುದುಂಗಾರು ಕಟ್ಟೆ, ಮಹಮ್ಮದ್ ಸಿರಾಝ್…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಶಿಕ್ಷಿತ ಮಾನವ ಸಂಪನ್ಮೂಲದ ಮಹತ್ವವನ್ನು ಮನಗಾಣುತ್ತಾ, ಮಾನ್ಯ ವಿತ್ತ ಮಂತ್ರಿಗಳು 2016-17ನೇ ವಾರ್ಷಿಕ ಆಯವ್ಯಯ ಪತ್ರದಲ್ಲಿ ಕೆಲವಾರು ಮಹತ್ವದ ಘೋಷಣೆಗಳನ್ನು ಮಾಡಿರುತ್ತಾರೆ. ಖಾಸಗಿ ಮತ್ತು ಸಾರ್ವಜನಿಕ ಕ್ಷೇತ್ರಗಳೆರಡರಲ್ಲೂ ಹತ್ತು ಜಾಗತಿಕ ಮಟ್ಟದ ಶಿಕ್ಷಣ ಸಂಸ್ಥೆಗಳನ್ನು ಅಭಿವೃದ್ಧಿ ಪಡಿಸುವುದು, ದೇಶದಾದ್ಯಂತ 1500 ಬಹು ಕೌಶಲ್ಯ ಕೇಂದ್ರಗಳನ್ನು ಸುಮಾರು 1700 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸುವುದು, 1000 ಕೋಟಿ ರೂಪಾಯಿಯ ಹೂಡಿಕೆಯೊಂದಿಗೆ ಡಿಜಿಟಲ್ ರೆಪೆÇೀಸಿಟರಿಯನ್ನು ಸ್ಥಾಪಿಸುವುದು ಮುಂತಾದುವು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಬಲ್ಲ ಅಂಶಗಳು. ಇವುಗಳೊಂದಿಗೆ, ಸುಸ್ಥಿರ ಶೈಕ್ಷಣಿಕ ನೀತಿಗಳು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ನಾಯಕತ್ವದ ಬೆಳವಣಿಗೆಗೆ ಸಹಕಾರಿಯಾಗಬಲ್ಲ ಸಂಸ್ಥೆಗಳ ಪ್ರಾಯೋಜಕತ್ವ ಬಹುಶಃ ಶೈಕ್ಷಣಿಕ ಕ್ಷೇತ್ರಕ್ಕೆ ವಿತ್ತ ಮಂತ್ರಿಗಳು ಕೊಡಮಾಡಬಲ್ಲ ಉತ್ಕೃಷ್ಟ ಕೊಡುಗೆಗಳಾಗಬಹುದಿತ್ತೇನೋ. ಡಾ|| ಎಂ.ಎಸ್. ಮೂಡಿತ್ತಾಯ ಕುಲಸಚಿವರು, ನಿಟ್ಟೆ ವಿಶ್ವವಿದ್ಯಾನಿಲಯ ಮಂಗಳೂರು

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಉಭಯ ಸಾಧಕರನ್ನು ಜೀವಮಾನ ಸಾಧನೆಗಾಗಿ ನಿಟ್ಟೆ ವಿವಿ ಹಾಗೂ ಕ್ಷೇಮ ಅಕಾಡೆಮಿಯಿಂದ ರಾಷ್ಟ್ರೀಯ ವಿಜ್ಞಾನ ಸಪ್ತಾಹ-2016ರಲ್ಲಿ ಸನ್ಮಾನಿಸುವ ಮೂಲಕ ನಿಟ್ಟೆ ವಿವಿ ಶ್ಲಾಘನೀಯ ಕಾರ್ಯ ನಿರ್ವಹಿಸಿದೆ. ಉಭಯ ಸಾಧಕರ ಹಿಂದಿನ ಶ್ರಮ, ಛಲ, ಸಂಶೋಧನಾ ಯಶಸ್ಸು ಎಲ್ಲವೂ ಕ್ಷೇಮ ಸಂಶೋಧನಾ ವಿದ್ಯಾರ್ಥಿಗಳ ವಿಜ್ಞಾನವನ್ನು ಹೆಚ್ಚಿಸುವಲ್ಲಿ ಬಹಳಷ್ಟು ಪ್ರಯೋಜನವಾಗಲಿದೆ ಎಂದು ನಿಟ್ಟೆ ವಿಶ್ವವಿದ್ಯಾಲಯದ ಸಹ ಕುಲಾಪತಿ ಪ್ರೊ. ಡಾ| ಎಂ. ಶಾಂತಾರಾಮ್ ಶೆಟ್ಟಿ ಅಭಿಪ್ರಾಯಪಟ್ಟರು. ರಾಷ್ಟಿ ್ರೀಯ ವಿಜ್ಞಾನ ಸಪ್ತಾಹ-2016 ಅಂಗವಾಗಿ ದೇರಳಕಟ್ಟೆಯ ಕ್ಷೇಮ ಮೆಡಿಕಲ್ ಆಕಾಡೆಮಿಯ ಸೆಮಿನಾರ್ ಹಾಲ್‍ನಲ್ಲಿ ನಿಟ್ಟೆ ವಿಶ್ವವಿದ್ಯಾಲಯ ಹಾಗೂ ಕ್ಷೇಮ ಮೆಡಿಕಲ್ ಅಕಾಡೆಮಿ ಜಂಟಿ ಆಶ್ರಯದಲ್ಲಿ ಸೋಮವಾರ ನಡೆದ ವೈದ್ಯಕೀಯ ಕ್ಷೇತ್ರದಲ್ಲಿನ ಜೀವಮಾನ ಸಾಧನೆಗಾಗಿ ಉಭಯ ಸಾಧಕರಾದ ವೆಲ್ಲೂರು ಸಿಎಂಸಿಯ ಮೆಡಿಸಿನ್ ವಿಭಾಗದ ನಿವೃತ್ತ ಪ್ರೊ ಡಾ| ವಿ. ಐ. ಮಥನ್ ಹಾಗೂ ಪ್ರೊ. ಡಾ| ಮಿನ್ನಿ ಮಥನ್ ಅವರನ್ನು ಸನ್ಮಾನಿಸಿ ಮಾತನಾಡಿದರು. ಯಾವುದೇ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಧೈರ್ಯತುಂಬುವ ದೃಷ್ಟಿಯಿಂದ ರಾಜ್ಯದ ಹತ್ತು ಕೇಂದ್ರಗಳಲ್ಲಿ ನಡೆಯುತ್ತಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಕಾನ್ಫಿಡೆನ್ಸ್ ಟೆಸ್ಟ್ ಹಝ್ರತ್ ಇಂಗ್ಲೀಷ್ ಮೀಡಿಯಮ್ ಸ್ಕೂಲ್ ಉಳ್ಳಾಲದಲ್ಲಿ ನಡೆಯಿತು. ಕೊಠಡಿ ಮೇಲ್ವಿಚಾರಕರಾಗಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು, ಮುಸ್ತಫಾ ಮಾಸ್ಟರ್ ಉಳ್ಳಾಲ, ಜಿ. ಎ. ಇಬ್ರಾಹಿಂ ಅಜ್ಜಿನಡ್ಕ, ಅನ್ಸಾರ್ ಮಾಸ್ಟರ್ ಫಜೀರು, ಶಿಯಾಬುದ್ಧೀನ್ ತಲಪಾಡಿ ಹಾಗೂ ಹಮೀದ್ ತಲಪಾಡಿ ಉಪಸ್ಥಿತರಿದ್ದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ : ಎಸ್ಸೆಸ್ಸೆಫ್ ಉಳ್ಳಾಲ ಡಿವಿಷನ್ ವತಿಯಿಂದ ರಾಜ್ಯವ್ಯಾಪ್ತಿ ನಡೆಯುತ್ತಿರುವ ಭಯೋತ್ಪಾದನೆ ವಿರುದ್ಧ ಜಿಹಾದ್ ಜನಾಂದೋಲನದ ಪ್ರಯುಕ್ತ ಬೈಕ್ ರ್ಯಾಲಿಯು ಕೇಂದ್ರ ಮುಶಾವರ ಸದಸ್ಯರಾದ ಶೈಖುನಾ ಅಬ್ಬಾಸ್ ಉಸ್ತಾದ್ ಮಂಜನಾಡಿರವರ ನೇತೃತ್ವದಲ್ಲಿ ಅಲ್-ಮದೀನಾ ಮಂಜನಾಡಿಯಿಂದ ದೇರಳಕಟ್ಟೆ ಜಂಕ್ಷನ್ ತನಕ ನಡೆಯಿತು. ಕಾರ್ಯಕ್ರಮದಲ್ಲಿ ಇಸ್ಮಾಯಿಲ್ ಹಾದಿ ತಂಙಳ್ ಉಜಿರೆ ದುಅ: ನೆರವೇರಿಸಿದರು. ಕೇಂದ್ರ ಮುಶಾವರ ಸದಸ್ಯರಾದ ಡಾ| ಹುಸೈನ್ ಸಖಾಫಿ ಚುಲ್ಲಿಕೋಡ್ ಭಯೋತ್ಪಾದನೆ ವಿರುದ್ಧ ಜಿಹಾದ್ ಎಂಬ ವಿಷಯದಲ್ಲಿ ಸಂದೇಶ ಭಾಷಣಗೈದರು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಎನ್. ಎಸ್. ಕರೀಂ ಧ್ವಜ ಹಸ್ತಾಂತರಿಸಿ ಉದ್ಘಾಟನೆಗೈದರು. ಕಾರ್ಯಕ್ರಮದಲ್ಲಿ ಅಶ್ರಫ್ ಸಖಾಫಿ ಕಿನ್ಯ, ಜಿಲ್ಲಾ ಕೋಶಾಧಿಕಾರಿ ಅಲ್ತಾಫ್ ಕುಂಪಲ, ಡಿವಿಷನ್ ಕೋಶಾಧಿಕಾರಿ ಫಾರೂಕ್ ಸಖಾಫಿ ಮದನಿನಗರ, ಮುನೀರ್ ಸಖಾಫಿ ಉಳ್ಳಾಲ, ಇಬ್ರಾಹಿಂ ಅಹ್ಸನಿ ಮಂಜನಾಡಿ, ಸೈಯದ್ ಖುಬೈಬ್ ತಂಙಳ್ ಉಳ್ಳಾಲ ಉಪಸ್ಥಿತರಿದ್ದರು. ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಸ್ವಾಗತಿಸಿ, ವಂದಿಸಿದರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಎಂಐಎಯು ವಿಕಿರಣ ತಂತ್ರಜ್ಞಾನದ ಕುರಿತೂ ಡಿಪೆÇ್ಲಮಾ ಶಿಕ್ಷಣವನ್ನು ಆರಂಭಿಸಲು ಮತ್ತು ರೇಡಿಯೊಐಸೊಟೋಪ್ ಅಪ್ಲಿಕೇಶನ್ ಮತ್ತು ವಿಕಿರಣ ತಂತ್ರಜ್ಞಾನ ಕೇಂದ್ರದಲ್ಲಿ ಲಭ್ಯವಿರುವ ಸೌಕರ್ಯಗಳನ್ನು ಬಳಸಿಕೊಂಡು ಮಂಗಳೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಸಂಶೋಧನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆಸಕ್ತಿಹೊಂದಿದೆ. ಮುಂದಿನ ದಿನಗಳಲ್ಲಿ ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸೇರಿಕೊಂಡು ಅವುಗಳ ಸಹಯೋಗದೊಂದಿಗೆ ಶೈಕ್ಷಣಿಕ ಮತ್ತು ಸಂಶೋಧನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮಂಗಳೂರು ವಿಶ್ವವಿದ್ಯಾಲಯ ಯೋಜನೆ ರೂಪಿಸುತ್ತಿದೆ. ನೂತನ ಕೋರ್ಸನ್ನು ಆರಂಭಿಸಲು ಸಿದ್ಧತೆಗಳು ನಡೆಯುತ್ತಿದ್ದು ಮುಂಬೈಯ ಬಾಬಾ ಪರಮಾಣು ಸಂಶೋಧನಾ ಕೇಂದ್ರದ ಅನುಮತಿ ದೊರೆತ ತಕ್ಷಣ ಆರಂಭಿಸಲಾಗುವುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಪ್ರೊ. ಕೆ. ಬೈರಪ್ಪ ಹೇಳಿದ್ದಾರೆ. ಅವರು ವೈದ್ಯಕೀಯ ಭೌತಶಾಸ್ತ್ರ ವಿಭಾಗದ ಎಂಎಸ್ಸಿ ವಿದ್ಯಾರ್ಥಿಗಳಿಗೆ ತರಬೇತಿ ಪಡೆಯಲು ಮತ್ತು ಇಂಟರ್ನ್‍ಶಿಪ್‍ಗೆ ಸೇರಿಸಿಕೊಳ್ಳುವ ಸಲುವಾಗಿ ಮಂಗಳೂರು ವಿಶ್ವವಿದ್ಯಾಲಯವು ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಓಂಕೋಲೊಜಿಯೊಂದಿಗೆ ಪರಸ್ಪರ ಹೊಂದಾಣಿಕೆಯ ಒಪ್ಪಂದದ ವೇಳೆ ಭಾಗವಹಿಸಿ ಮಾತನಾಡಿದರು. ಮಂಗಳೂರು ವಿಶ್ವವಿದ್ಯಾಲಯದ ನೋಂದಣಾಧಿಕಾರಿ ಪೆÇ್ರ. ಟಿ.ಡಿ ಕೆಂಪರಾಜು ಮತ್ತು ಎಂಐಎಯ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಸರಣಿ ಅಪಘಾತ ನಡೆದು ಬಸ್ಸಿಗೆ ನಿಂತ ಮಹಿಳೆಗ ರಿಕ್ಷಾ ಗುದ್ದಿ ಅವರು ಪವಾಡಸದೃಶವಾಗಿ ಪಾರಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ನಡೆದಿದೆ. ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಕಿರಿದಾದ ರಸ್ತೆಯಲ್ಲಿ ವಾಹನಗಳು ತೆರಳಬೇಕಿದೆ. ಇಲ್ಲಿ ರಿಕ್ಷಾ, ಟಾಟ ಮ್ಯಾಜಿಕ್ ಮತ್ತು ಸರಕು ಸಾಗಾಟದಲಾರಿ ಜತೆಗೆ ಚಲಿಸಿದ ಪರಿಣಾಮ ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದು,ರಿಕ್ಷಾ ರಸ್ತೆಬದಿಯಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಗೆ ತಾಗಿ ಮಹಿಳೆ ರಸ್ತೆಗೆಸೆಯಲ್ಪಟ್ಟು ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆಯಿಂದ ರಸ್ತೆಯಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ಉಳ್ಳಾಲ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಅಪ್ರಾಪ್ತೆಯನ್ನು ಯುವಕನೋರ್ವ ಅಪಹರಣಗೈದಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುಂಪಲದಲ್ಲಿ ನಡೆದಿದೆ. ಅಪಹರಣಕ್ಕೆ ಒಳಗಾಗಿರುವ ಬಾಲಕಿ (16) ವಯಸ್ಸಿನವಳಾಗಿದ್ದು, ಕೊಲ್ಯದ ಖಾಸಗಿ ಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿಯಾಗಿದ್ದಾಳೆ. ಫೆ 20 ರಂದು ಶಾಲೆಗೆಂದು ತೆರಳಿದ ವಿದ್ಯಾರ್ಥಿನಿ ಬಳಿಕ ವಾಪಸ್ಸಾಗಿರಲಿಲ್ಲ. ಈ ಬಗ್ಗೆ ಮನೆಮಂದಿ ಸಂಶಯಗೊಂಡು ಸ್ಥಳೀಯವಾಗಿ ವಿಚಾರಿಸಿದಾಗ ನೆರೆಮನೆಯ ಯುವಕನೋರ್ವನು ನಾಪತ್ತೆಯಾಗಿರುವ ವಿಚಾರ ಗೊತ್ತಾಗಿದೆ. ಬಳಿಕ ಈತನೇ ವಿದ್ಯಾರ್ಥಿನಿಯನ್ನು ಅಪಹರಿಸಿರುವ ವಿಚಾರ ಬೆಳಕಿಗೆ ಬಂದಿದ್ದು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿದೆ. ಅಪಹರಣಕಾರ ಬಜರಂಗದಳ ಕಾರ್ಯಕರ್ತ. ವಿದ್ಯಾರ್ಥಿನಿಯನ್ನು ಅಪಹರಿಸಿದ ಯುವಕ ಕುಂಪಲ ಮೂರುಕಟ್ಟೆ ನಿವಾಸಿ ಶಶಿ (21)ಎಂಬವನಾಗಿದ್ದಾನೆ. ಈತ ಕುಂಪಲ ಭಾಗದಲ್ಲಿ ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದಾನೆ. ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭದಲ್ಲಿ ಆಕೆಯ ಪರಿಚಯ ಬೆಳೆಸಿಕೊಂಡಿದ್ದ ಈತ ಅದನ್ನೇ ದುರುಪಯೋಗಪಡಿಸಿಕೊಂಡು ಅಪಹರಣಗೈದಿರುವ ಶಂಕೆ ಹೆತ್ತವರು ವ್ಯಕ್ತಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಶಶಿ ಸ್ನೇಹಿತರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ

Read More

ಅಂಬ್ಲಮೊಗರು : ಬಿಜೆಪಿ ಮತ್ತು ಕಾಂಗ್ರೆಸ್ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಚುನಾವಣೆಯಲ್ಲಿ ತಾವೆಷ್ಟು ಸ್ಥಾನ ಗಳಿಸಿದ್ದೇವೆ ಎನ್ನುವ ಚಿಂತನೆಯಲ್ಲಿ ಮಗ್ನವಾಗಿದೆ. ಆದರೆ ಸಿಪಿಐಎಂ ಮತ್ತು ಅದರ ಸಹ ಸಂಘಟನೆಗಳು ಗ್ರಾಮೀಣ ಪ್ರದೇಶದ ಕಾರ್ಮಿಕರ ಪರ ಹೋರಾಟ ನಡೆಸುವ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದು, ಇದೇ ಇತರ ರಾಜಕೀಯ ಪಕ್ಷಗಳಿಗೆ ಮತ್ತು ಸಿಪಿಐಎಂ ಮತ್ತು ಅದರ ಸಹ ಸಂಘಟನೆಗಳಿಗಿರುವ ವ್ಯತ್ಯಾಸ ಎಂದು ಕೋಟೆಕಾರಿನ ಸರ್ಕಲ್ ಬೀಡಿ ಲೇಬರ್ ಯೂನಿಯನ್‍ನ ಕಾರ್ಯದರ್ಶಿ ಜಯಂತ್ ಉಳ್ಳಾಲ್ ಅಭಿಪ್ರಾಯಪಟ್ಟರು. ಅಂಬ್ಲಮೊಗರು ಪಂಚಾಯತ್ ವ್ಯಾಪ್ತಿಯಲ್ಲಿ ಬೀಡಿ ಕೈಗಾರಿಕೆ ಮುಚ್ಚಲ್ಪಟ್ಟರೆ ಅದಕ್ಕೆ ಬದಲಿ ಉದ್ಯೋಗ ನೀಡುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ನಡೆದ ಸ್ಥಳೀಯ ಸಂಸ್ಥೆಯಲ್ಲಿ ಬೀಡಿ ಕಾರ್ಮಿಕರ ಹೆಸರು ನೋಂದಾವಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಮಿಕರ ವಿವರದ ಅರ್ಜಿಗಳನ್ನು ಅಂಬ್ಲಮೊಗರು ಪಂಚಾಯತ್ ಅಧ್ಯಕ್ಷರಿಗೆ ಹಸ್ತಾಂತರಿಸಿ ಮಾತನಾಡಿದರು. ರಾಜ್ಯ ಮತ್ತು ಕೇಂದ್ರ ಸರಕಾರ ಆರೋಗ್ಯಕ್ಕೆ ಹಾನಿಕರ ಎನ್ನುವ ನಿಟ್ಟಿನಲ್ಲಿ ಬೀಡಿ ಕೈಗಾರಿಕೆಗಳನ್ನು ಬಂದ್ ಮಾಡುವ ಚಿಂತನೆ ನಡೆಸುತ್ತಿದೆ. ಇಂದು ರೈತರು ಆತ್ಮಹತ್ಯೆ ನಡೆಸುತ್ತಿದ್ದು, ಇದೇ…

Read More