Author: UllalaVani

Kannada News From Coastal Karnataka

ಉಳ್ಳಾಲ: ದೇಶದಲ್ಲಿರುವ ಶೋಷಕ ವ್ಯವಸ್ಥೆ ಸಂಪೂರ್ಣ ನಾಶಗೊಳಿಸಿ, ಸಮಾನತೆಯ ಸಮಾಜ ನಿರ್ಮಿಸುವುದೇ ನೈಜ ಸ್ವಾತಂತ್ರ್ಯ ಎಂದು ಡಿವೈಎಫ್‍ಐ ರಾಜ್ಯಾಧ್ಯಾಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ. ಅವರು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್ (ಡಿವೈಎಫ್‍ಐ) ಉಳ್ಳಾಲ ವಲಯ ಸಮಿತಿ ಆಶ್ರಯದಲ್ಲಿ ಅಮರ ಕ್ರಾಂತಿಕಾರಿ ಭಗತ್‍ಸಿಂಗ್ ಮತ್ತು ಸಂಗಾತಿಗಳ 85ನೇ ಹುತಾತ್ಮ ದಿನಾಚರಣೆ ಪ್ರಯುಕ್ತ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಯಜಮಾನರ ಬದಲಾವಣೆ ಸ್ವಾತಂತ್ರ್ಯದ ಉದ್ದೇಶ ಅಲ್ಲ. ಅಸಮಾನತೆಯನ್ನು ಸಂಪೂರ್ಣ ನಾಶ ಮಾಡಿ, ಮನುಷ್ಯರ ನಡುವೆ ಶೋಷಣೆ ಇಲ್ಲದ ಸಮಾನತೆ ವಾತಾವರಣ ನಿರ್ಮಾಣ ಮಾಡುವುದು ಸ್ವಾತಂತ್ರ್ಯವಾಗಿದೆ. ಧರ್ಮ, ಜಾತಿ ಆಧಾರದಡಿ ಭಗತ್ ಸಿಂಗ್ ಹೋರಾಟ ನಡೆಸಿಲ್ಲ. ಕಾರ್ಮಿಕ ವರ್ಗದವರ ಮತ್ತು ಶೋಷಿತ ಮಂದಿಯ ಚಳುವಳಿಯನ್ನು ಮುಂದಿಟ್ಟು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವ್ಯಕ್ತಿ. ಆದರೆ ಸದ್ಯ ತೀವ್ರಗಾಮಿ ಶಕ್ತಿಗಳು ಭಗತ್ ಸಿಂಗ್ ಭಾವಚಿತ್ರವನ್ನು ಹಿಡಿದುಕೊಂಡು ಜಾತಿ ಆಧಾರದಲ್ಲಿ ಗುರುತಿಸದ ಭಗತ್ ಸಿಂಗ್ ಅವರ ನಿಲುವಿಗೆ ಅಪಮಾನ ಮಾಡುತ್ತಿದ್ದಾರೆ. ಅವರಿಗೆ ಚಿತ್ರ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ರಾಜ್ಯ ಸರಕಾರ ಜಿಲ್ಲೆ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ಪ್ರಕರಣಗಳ ನಿಗೂಢತೆಯನ್ನು ಬಯಲಿಗೆ ತರಲು ವಿಫಲವಾಗುತ್ತಿದೆ. ಇದರಿಂದ ನ್ಯಾಯ ಸಿಗಬೇಕಾದ ಜನರಿಗೆ ಅನ್ಯಾಯ ಆಗುತ್ತಿದೆ ಎಂದು ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಹೈದರ್ ಪರ್ತಿಪ್ಪಾಡಿ ಹೇಳಿದ್ದಾರೆ. ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಸರಕಾರದ ನಿಷ್ಕ್ರಿಯತೆ ಮತ್ತು ಐಎಎಸ್ ಅಧಿಕಾಡಿ ಡಿ.ಕೆ ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಮುಡಿಪು ಕಾಲೇಜು ವಿದ್ಯಾರ್ಥಿಗಳ ಪ್ರವಾಸಕ್ಕೆ ತಡೆ, ಸಹೋದರತೆಯೊಂದಿಗೆ ಬೀಚಿಗೆ ತೆರಳುವ ಮಕ್ಕಳಿಗೆ ಹಲ್ಲೆ, ಮಸೀದಿ, ಪ್ರಾರ್ಥನಾಲಯಗಳಿಗೆ ಕಲ್ಲು ಮತ್ತು ಮೂರೂವರೆ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಹೀಗೆ ನಿರಂತರ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಸರಕಾರ ಮಾತ್ರ ನೈತಿಕ ಪೊಲೀಸರಿಗೆ, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಲು ವಿಫಲವಾಗುತ್ತಿವೆ. ಇದರಿಂದ ಸರಕಾರದ ಮೇಲಿನ ನಂಬಿಕೆಯನ್ನು ಜನರು ಕಳೆದುಕೊಂಡಿದ್ದಾರೆ. ಜಿಲ್ಲೆಯ ಮಂತ್ರಿಗಳು ತಮ್ಮ ಜವಾಬ್ದಾರಿಯನ್ನು ನಿಭಾಯಿಸದೇ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಅವರು ಉಳಿಸಿದ ಜೀವಗಳು ನೂರಕ್ಕೂ ಅಧಿಕ. ಸದಾ ಸಾಹಸದಲ್ಲೇ ಜೀವನ ಸಾಗಿಸುತ್ತಿರುವ ವ್ಯಕ್ತಿ ಇದೀಗ ಸಮುದ್ರ ತೀರದ ಗುಜರಾತಿನಿಂದ ಕನ್ಯಾಕುಮಾರಿಗೆ ಪಾದಯಾತ್ರೆ ಹೊರಟು 57 ದಿನಗಳಲ್ಲಿ ನಡೆಯುತ್ತಾ ಭಾನುವಾರ ತಮ್ಮ ಹುಟ್ಟೂರು ತೊಕ್ಕೊಟ್ಟುವಿಗೆ ಬಂದು ತಲುಪಿದ್ದಾರೆ. ಉಳ್ಳಾಲ ಮೊಗವೀರಪಟ್ನ ನಿವಾಸಿ ನವೀನ್.ಯಸ್.ಕರ್ಕೇರ (48) ವೃತ್ತಿಯಲ್ಲಿ ಮೀನುಗಾರರು. ಉಳ್ಳಾಲ ಮೊಗವೀರಪಟ್ನದಲ್ಲಿರುವ ಜೀವರಕ್ಷಕದಳದ ಸಕ್ರಿಯ ಕಾರ್ಯಕರ್ತ. ಸಮುದ್ರದಲ್ಲಿ ಈಜಲೆಂದು ಬಂದು ಅಲೆಗಳಲ್ಲಿ ಸಿಲುಕಿ ಅಪಾಯದ ಸ್ಥಿತಿಯಲ್ಲಿದ್ದ ಹಲವು ಮಂದಿಯ ಜೀವರಕ್ಷಿಸಿದವರು. 30 ವರ್ಷಗಳಿಂದ ಇಂತಹ ಸಾಹಸದಲ್ಲಿ ತೊಡಗಿಕೊಂಡಿರುವ ನವೀನ್ ಅವರು ಸಮುದ್ರದ ದಡದುದ್ದಕ್ಕೂ ನಡೆದುಕೊಂಡೇ ದೇವಸ್ಥಾನಗಳನ್ನು ಸಂದರ್ಶಿಸಬೇಕು ಎನ್ನುವ ಉದ್ದೇಶವನ್ನು ಹಲವು ವರ್ಷಗಳ ಹಿಂದೆ ಸಂಕಲ್ಪಿಸಿದ್ದರು. ಆ ಸಂಕಲ್ಪ ಪ್ರಸಕ್ತ 2015ರಲ್ಲಿ ಈಡೇರಿತು. ಜನವರಿ ತಿಂಗಳಿನಲ್ಲಿ ಸಚಿವ ಯು.ಟಿ.ಖಾದರ್ ಅವರ ಆಪ್ತಸಹಾಯಕ ಪ್ರವೀಣ್ ಅವರಲ್ಲಿ ಪಾದಯಾತ್ರೆ ಕೈಗೊಳ್ಳುವ ಬಗ್ಗೆ ಹೇಳಿ, ನೆರವನ್ನು ಕೇಳಿದ್ದರು.     ನೆರವಾದ ಮುಸ್ಲಿಂ ಸಹೋದರರು: ಪ್ರವೀಣ್ ಅವರು ತಮ್ಮ ಆಪ್ತ…

Read More

ಉಳ್ಳಾಲ ಡೆಸ್ಕ್ ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಆಶ್ರಯದಲ್ಲಿ ಮಂಗಳೂರು ವಿ.ವಿ.ಯ ಮಂಗಳಾ ಸಭಾಂಗಣದಲ್ಲಿ ಕರ್ನಾಟಕ ಇತಿಹಾಸ ಕಾಂಗ್ರೆಸ್‍ನ 24ನೇ ಅಧಿವೇಶನದ ಉದ್ಘಾಟನೆ ಗುರುವಾರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ದೆಹಲಿ ವಿಶ್ವವಿದ್ಯಾನಿಲಯದ ಇತಿಹಾಸ ವಿಭಾಗದ ಮುಖ್ಯಸ್ಥರಾದ ಹಾಗೂ ಮಾಜಿ ಪ್ರದಾನಿ ಮನಮೋಹನ್ ಸಿಂಗ್ ಅವರ ಪುತ್ರಿ ಪ್ರೊ.ಉಪಿಂದರ್ ಸಿಂಗ್ ಅವರು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಇಂದು ಮಧ್ಯಯುಗದ ಅಗಾಧವಾದ ಬೌದ್ಧಿಕ ಉತ್ಸಾಹ ಮತ್ತು ಸೃಜನಶೀಲ ಉತ್ಪಾದನೆಗಳನ್ನು ವಾಸ್ತವವಾಗಿ ಚರ್ಚೆಯಿಂದ ದೂರ ಉಳಿಸಲಾಗುತ್ತಿದೆ. ಆದ್ದರಿಂದ ಬೌಧಿಕ ಇತಿಹಾಸವನ್ನು ಉತ್ಪ್ರೇಕ್ಷೆ ಮಾಡದೆ ಈ ನಿಟ್ಟಿನಲ್ಲಿ ಹೆಚ್ಚೆಚ್ಚು ಚಿಂತನೆ, ಅಧ್ಯಯನಗಳು ನಡೆಯಬೇಕು ಎಂದು ಅವರು ಹೇಳಿದರು. ಭಾರತದ ಇತಿಹಾಸವು ಅಭೂತಪೂರ್ವವಾದುದು. ಭಾರತದ ವಿವಿಧ ಭಾಗಗಳಲ್ಲಿರುವ ಶಿಲಾಶಾಸನವನ್ನು ಶೋಧಿಸಿ ಅಧ್ಯಯನ ಮಾಡಲು ನೈಪುಣ್ಯತೆ ಇರುವ ಯುವ ಇತಿಹಾಸತಜ್ಞರ ಅನಿವಾರ್ಯತೆ ಇದೆ . ತತ್ವಶಾಸ್ತ್ರದ ಮಾಹಿತಿಗಳು, ಧಾರ್ಮಿಕ ವಿಚಾರಗಳು, ರಾಜಕೀಯ ಚಿಂತನೆ, ವಿಜ್ಞಾನ ಮತ್ತು ವೈದ್ಯಕೀಯ ಇತಿಹಾಸ ಅಥವಾ ಯಾವುದೇ…

Read More

ಉಳ್ಳಾಲ: ರಾ.ಹೆ.66ರಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಗುರುವಾರ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ 3 ಗಂಟೆಗಳ ಕಾಲ ವಾಹನಗಳು ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟುವಿನವರೆಗೆ ಸರತಿ ಸಾಲಿನಲ್ಲಿ ನಿಂತಿತ್ತು. ಉಳ್ಳಾಲ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More

ತೊಕ್ಕೊಟ್ಟು: ತೊಕ್ಕೊಟ್ಟುವಿನಲ್ಲಿ 3.5 ವರ್ಷದ ಮಗವಿನ ಮೇಲೆ ಲೈಂಗಿಕ ಶೋಷಣೆ ನಡೆದಿರುವುದು ಅತ್ಯಂತ ಹೀನ ಕೃತ್ಯ. ಇದರಿಂದ ಬುದ್ಧಿವಂತರ ಜಿಲ್ಲೆಗೆ ಅಪಮಾನ ಮಾಡಿದಂತಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರು ಕೃತ್ಯದ ಬಗ್ಗೆ ಮಾತನಾಡದೇ ಇರುವುದು ಅವರ ಕಾಯವೈಖರಿಯನ್ನು ತೋರಿಸುತ್ತದೆ ಎಂದು ಎಸ್ ಎಸ್ ಎಫ್ ರಾಜ್ಯ ಸದಸ್ಯ ಕೆ.ಎಂ.ಸಿದ್ದೀಖ್ ಮೋಂಟುಗೋಳಿ ಹೇಳಿದ್ದಾರೆ. ಅವರು ತೊಕ್ಕೊಟ್ಟು ಜಂಕ್ಷನ್ನಿನಲ್ಲಿ ಎಸ್ ಎಸ್ ಎಫ್ ಉಳ್ಳಾಲ ಡಿವಿಷನ್ ವತಿಯಿಂದ ಅಲ್ಪಸಂಖ್ಯಾತರ ವಿರುದ್ಧ ನಡೆಯುತ್ತಿರುವ ದಬ್ಬಾಳಿಕೆಯ ವಿರುದ್ಧ, ಕೋಮು ದ್ವೇಷದ ವಿಷ ಬೀಜ ಬಿತ್ತುವುದನ್ನು ಖಂಡಿಸಿ, ಮುಗ್ಧ ಹೆಣ್ಣು ಮಕ್ಕಳ ಲೈಂಗಿಕ ದೌರ್ಜನ್ಯದ ವಿರುದ್ಧ, ಅಲ್ಪಸಂಖ್ಯಾತರ ಆರಾಧನಾಲಯಗಳ ಮೇಲೆ ನಡೆಯುವ ದಾಳಿಗಳ ವಿರುದ್ಧ ಬುಧವಾರ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭ ಎಸ್ ಎಸ್ ಎಫ್ ಜಿಲ್ಲಾ ಅಧ್ಯಕ್ಷ ಯಾಕೂಬ್ ಸಅದಿ ನಾವೂರು, ಎಸ್ ಎಸ್ ಎಫ್ ರಾಜ್ಯ ಸದಸ್ಯರಾದ ಇಸ್ಮಾಯಿಲ್ ಸಅದಿ ಕಿನ್ಯಾ, ಎಸ್ ಎಸ್ ಎಫ್ ಜಿಲ್ಲಾ ಮಾಜಿ ಅಧ್ಯಕ್ಷ ಇಸ್ಮಾಯಿಲ್ ಸಅದಿ ಉರುಮನೆ,…

Read More

ಉಳ್ಳಾಲ: ಶಿಕ್ಷಕ ವೃತ್ತಿಯು ಪವಿತ್ರವಾದುದು, ಶ್ರೇಷ್ಠವಾದುದು. ಶಿಕ್ಷಕ ವೃತ್ತಿಗೆ ಸಮಾನವಾದ ವೃತ್ತಿಯು ಬೇರೊಂದಿಲ್ಲ. ಶಿಕ್ಷಕರು ತನ್ನ ಬಳಿಬರುವ ಎಲ್ಲ ಮಕ್ಕಳನ್ನು ಸಮಾನವಾಗಿ ನೋಡಬೇಕು. ತನ್ನ ಸೇವೆಯೊಂದಿಗೆ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ಸಯ್ಯಿದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಯು. ಎಸ್. ಹಂಝರವರು ಹೇಳಿದರು. ಹಳೆಕೋಟೆ ಸಯ್ಯಿದ್ ಮದನಿ ವಿದ್ಯಾ ಸಂಸ್ಥೆಗಳ ಶಿಕ್ಷಕ ವೃಂದದ ಆಶ್ರಯದಲ್ಲಿ ಮಂಗಳೂರು ಟೀಚರ್ಸ್ ಕೋ-ಅಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಕೆ.ಎಂ.ಕೆ. ಮಂಜನಾಡಿ ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಎಂ. ಹೆಚ್. ಮಲಾರ್, ಪಿ.ಹೆಚ್. ಹಮೀದ್, ಹಿಲ್ಡಾ ಕ್ಲಮಂಸಿಯಾ ಪಿಂಟೋ ಅವರಿಗೆ ಏರ್ಪಡಿಸಿದ ಸನ್ಮಾನ ಸಮಾರಂಭದ ಅಧ್ಯಕ್ಷ ಸ್ಥಾನದಿಂದ ಮಾತನಾಡಿ ಪ್ರಾಮಾಣಿಕ ಶಿಕ್ಷಕರಿಗೆ ಗೌರವವು ತಾನಾಗಿಯೇ ಬರುತ್ತದೆ ಎಂದು ಹೇಳಿದರು. ಶಿಕ್ಷಕರು ಉರಿಯುತ್ತಿರುವ ದೀಪವಾಗಿದ್ದು ಸತತ ಅಭ್ಯಾಸವೆಂಬ ಎಣ್ಣೆಯಿಂದ ಅದು ಪ್ರಜ್ವಲಿಸಬೇಕು. ಸದಾ ಶೈಕ್ಷಣಿಕ ರಂಗದಲ್ಲಿ ಸಕ್ರಿಯರಾಗಿರುವ ಶಿಕ್ಷಕರಿಗೆ ಸಂದ ಗೌರವ ಅದಾಗಿರುತ್ತದೆ ಎಂದು ಮಂಗಳೂರು ತಾಲೂಕು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ. ಜ್ಞಾನೇಶ್ ಅವರು ಹೇಳಿದರು. ಕಾರ್ಯಕ್ರಮದಲ್ಲಿ…

Read More

ಉಳ್ಳಾಲ: ಯಾರು ತನ್ನನ್ನು ತಾನು ಅರಿತನೋ ಅವನು ಸೃಷ್ಟಿಕರ್ತನನ್ನು ಅರಿತನು. ವಿದ್ಯಾರ್ಥಿಗಳು ಇಂದು ತಮ್ಮನ್ನು ಅರಿಯಬೇಕಾದ ಅಗತ್ಯವಿದೆ. ಅಂತಹ ಶಿಕ್ಷಣವನ್ನು ಈ ಸಂಸ್ಥೆ ನೀಡುತ್ತಿದೆ’ ಎಂದು ಹಿರಾ ಶಿಕ್ಷಣ ಸಂಸ್ಥೆಗಳ ಸಂಚಾಲಕ ರಹಮತುಲ್ಲಾ ಅಭಿಪ್ರಾಯಪಟ್ಟರು. ಅವರು ಬಬ್ಬುಕಟ್ಟೆಯ ಹಿರಾ ಮಹಿಳಾ ಕಾಲೇಜಿನ ವಾರ್ಷಿಕ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆ.ಎಂ. ಶರೀಫ್ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಪಿ.ಟಿ.ಎ. ಅಧ್ಯಕ್ಷರಾದ ಯು.ಕೆ.ಖಾಲಿದ್‍ರವರು ಸಂದರ್ಬೋಚಿತವಾಗಿ ಮಾತನಾಡಿದರು. ಸಮಾರಂಭದಲ್ಲಿ ಅತಿಥಿಗಳಾಗಿ ಇತರ ಪಿ.ಟಿ.ಎ. ಸದಸ್ಯರು, ಹಿರಾ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲೆ ಫಾತಿಮಾ, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ಪ್ರಾಂಶುಪಾಲೆ ಭಾರತಿ ಎಮ್. ಆರ್ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿ ನಾಯಕಿ ಸಫ ಮೆಹರೂನ್ ಸ್ವಾಗತಿಸಿದರು. ವಿದ್ಯಾರ್ಥಿನಿ ಸಮೀರ ಕಾರ್ಯಕ್ರಮ ನಿರೂಪಿಸಿದರು, ಸೌಧ ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿನಿಯರಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.

Read More