ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಚೆಂಬುಗುಡ್ಡೆ: ಇಲ್ಲಿನ ಕಾಪಿಕಾಡ್ನ ಶ್ರೀ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ(ಸುಕ) ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಬಡ್ಡಿ ಆಮೆಚೂರು ಮತ್ತು ಗ್ರಾಮಾಂತರ ಕಬಡ್ಡಿ ಎಸೋಶಿಯೇಶನ್ ಉಳ್ಳಾಲ ಸಹಭಾಗಿತ್ವದಲ್ಲಿ ತೊಕ್ಕೊಟ್ಟು ಚೆಂಬುಗುಡ್ಡೆಯ ಮಂಗಳೂರು ಒನ್ ಸ್ಕೂಲ್ ಕ್ರೀಡಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಕ್ರೀಡೋತ್ಸವ ಶನಿವಾರ ಸಂಜೆ ಸಮಾರೋಪಗೊಂಡಿತು. ಫಲಿತಾಂಶ : ಪ್ರಾಥಮಿಕ ಶಾಲೆ ಬಾಲಕರ ವಿಭಾಗ 1. ಸರಕಾರಿ ಹಿ. ಪ್ರಾ. ಶಾಲೆ ಬೈಕಂಪಾಡಿ 2. ಸ.ಹಿ.ಪ್ರಾ. ಶಾಲೆ ಮಾಲಾಡಿ ಬೆಳ್ತಂಗಡಿ 3. ಟಿ.ಇ.ಎಂ.ಎಸ್. ಬಂಟ್ವಾಳ 4. ಕಾರ್ಮೆಲ್ ಶಾಲೆ ಕೋಟೆಕಾರು ಬಾಲಕಿಯರ ವಿಭಾಗ: 1. ಸ.ಹಿ.ಪ್ರಾ. ಶಾಲೆ ಮಾಲಾಡಿ ಬೆಳ್ತಂಗಡಿ 2. ಭಾರತಿ ಆಂಗ್ಲ ಮಾಧ್ಯಮ ಶಾಲೆ ಉಳ್ಳಾಲ 3. ಟಿ.ಇ.ಎಂ.ಎಸ್. ಬಂಟ್ವಾಳ 4. ಸ.ಹಿ.ಪ್ರಾ. ಶಾಲೆ ಬೈಕಂಪಾಡಿ ಪ್ರೌಢ ಶಾಲಾ ಬಾಲಕರ ವಿಭಾಗ 1. ಸರಕಾರಿ ಪ್ರೌಢ ಶಾಲೆ ಒಕ್ಕೆತ್ತೂರು…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆಗೆ ಸುಪ್ತ ಪ್ರತಿಭೆ ಜಾಗೃತವಾಗಬೇಕಿದೆ. ಅದಕ್ಕಾಗಿ ಕ್ರೀಡೆ ಸಹಕಾರಿ ಎಂದು ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ ಮೊಕ್ತೇಸರ ವೇದಮೂರ್ತಿ ಅನಂತ ಪದ್ಮನಾಭ ಆಸ್ರಣ್ಣ ಹೇಳಿದ್ದಾರೆ. ಅವರು ತೊಕ್ಕೊಟ್ಟು ಚೆಂಬುಗುಡ್ಡೆಯ ಶ್ರೀ ಉಮಾಮಹೇಶ್ವರೀ ಕಬಡ್ಡಿ ಅಕಾಡೆಮಿ(ಸುಕ) ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮತ್ತು ಗ್ರಾಮಾಂತರ ಕಬಡ್ಡಿ ಎಸೋಶಿಯೇಶನ್ ಸಹಭಾಗಿತ್ವದಲ್ಲಿ ಶನಿವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜು ವಿಭಾಗದ ಬಾಲಕ ಬಾಲಕಿಯರ ಕಬಡ್ಡಿ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಸಾಧನೆಗೆ ಕಬ್ಬಡ್ಡಿ ಸ್ಫೂರ್ತಿ. ಆರೋಗ್ಯದ ವಿಚಾರದಲ್ಲಿಯೂ ಪುಷ್ಠಿದಾಯಕವಾಗಿದ್ದು, ವಿದ್ಯೆ ಜತೆಗೆ ಕ್ರೀಡೆ ಅಗತ್ಯ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ಶಾಸಕ ಕೆ. ಜಯರಾಮ ಶೆಟ್ಟಿ ಮಾತನಾಡಿ ಜಗತ್ತಿನಲ್ಲಿ ವಿಶ್ವಾಸ ಮೂಡುವಲ್ಲಿ ಧರ್ಮ ಜಾತಿ ಮತಬೇಧ ಮರೆತು ಆಡುವ ಹಾಗೂ ನೋಡುವಂತ ಕ್ರೀಡೆ ಬದುಕಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಅದಕ್ಕಾಗಿ ಕ್ರೀಡೆಗೆ ಎಲ್ಲೆಡೆಯಿಂದ ಪ್ರೋತ್ಸಾಹ ಅಗತ್ಯ ಎಂದು ನುಡಿದರು.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಮನೆಮಂದಿಗೆ ಬೆದರಿಸಿ ಹಟ್ಟಿಯಲ್ಲಿದ್ದ ಮೂರು ದನಗಳ ಪೈಕಿ ಎರಡು ದನಗಳನ್ನು ಗೋಕಳ್ಳರು ಕಳವು ಗೈದಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ನಡುಪದವು ಬಳಿ ನಿನ್ನೆ ತಡರಾತ್ರಿ ಸಂಭವಿಸಿದ್ದು, ಘಟನೆಯನ್ನು ಖಂಡಿಸಿ ಸ್ಥಳೀಯರು ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿರುವ ಘಟನೆ ಇಂದು ನಡೆದಿದೆ. ನಡುಪದವು ನಿವಾಸಿ ಪುರುಷೋತ್ತಮ ಎಂಬವರಿಗೆ ಸೇರಿದ ಮನೆಯಿಂದ ಗೋಕಳವು ನಡೆದಿದ್ದು, ಮೂರು ಗೋಕಳ್ಳರ ತಂಡ ತಡರಾತ್ರಿ ಹಟ್ಟಿಗೆ ನುಗ್ಗಿ ದನಗಳನ್ನು ಕಳವುಗೈಯ್ಯಲು ಯತ್ನಿಸುತ್ತಿದ್ದ ಸಂದರ್ಭ ಮನೆಯ ನಾಯಿ ಬೊಗಳುವುದನ್ನು ಮನಗಂಡ ಮನೆಮಂದಿ ನಿದ್ರೆಯಿಂದ ಎಚ್ಚೆತ್ತು ಹೊರಬಂದು ಗೋಕಳ್ಳರನ್ನು ತಡೆಯಲು ಯತ್ನಿಸಿದಾಗ ದುಷ್ಕರ್ಮಿಗಳು ಕಲ್ಲುಗಳನ್ನು ಎತ್ತಿ ಸಾಯಿಸುವುದಾಗಿ ಬೆದರಿಸಿ ಎರಡು ದನಗಳನ್ನು ಕದ್ದು ಪರಾರಿಯಾಗಿದ್ದಾರೆ. ವರ್ಷದ ಅವಧಿಯಲ್ಲಿ ೭ ದನಗಳ ಕಳವು: ವೃತ್ತಿಯಲ್ಲಿ ಹೈನುಗಾರಿಕೆ ನಡೆಸುತ್ತಾ ಬಂದಿರುವ ಪುರುಷೋತ್ತಮ ಅವರ ಹಟ್ಟಿಯಿಂದ ವರ್ಷದ ಅವಧಿಯಲ್ಲಿ ೭ ದನಗಳನ್ನು ದುಷರ್ಮಿಗಳು ಕಳವು ಗೈದಿದ್ದಾರೆ ಆದರೆ ಕೊಣಾಜೆ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದಾರೆ. ಸ್ಥಳೀಯರಿಂದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುನ್ನೂರು: ಕೊಣಾಜೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮೊದಲ ಘನತ್ಯಾಜ್ಯ ವಿಲೇವಾರಿ ಮುನ್ನೂರು ಗ್ರಾಮ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿದ್ದು ಘಟಕದಿಂದಾಗುವ ಪ್ರಯೋಜನದ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸುವ ಕೆಲಸ ಗ್ರಾಮ ಪಂಚಾಯಿತಿಯಿಂದ ನಡೆಯಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್.ಕರೀಂ ಹೇಳಿದರು. ಮುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಂಡಾರ್ ಬೈಲ್ನಲ್ಲಿ ಜಿಲ್ಲಾ ಪಂಚಾಯಿತಿಯ 20 ಲಕ್ಷ ಹಾಗೂ ಸುವರ್ಣ ಗ್ರಾಮ ಯೋಜನೆಯ 10 ಲಕ್ಷ ಅನುದಾನದಿಂದ ನಿರ್ಮಿಸಲಾದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟಿಸಿ ಮಾತನಾಡಿದರು. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಪ್ರತೀ ಗ್ರಾಮದಲ್ಲೂ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿಯಿಂದ 20 ಲಕ್ಷ ಅನುದಾನ ನೀಡುತ್ತಿದೆ. ಈ ಬಗ್ಗೆ ತನ್ನ ವ್ಯಾಪ್ತಿಯಲ್ಲಿರುವ ಏಳು ಗ್ರಾಮ ಪಂಚಾಯಿತಿಗಳಲ್ಲೂ ಮಾಹಿತಿ ನೀಡಿ ಘಟಕ ನಿರ್ಮಾಣಕ್ಕೆ ಒತ್ತಾಯಿಸಿದ್ದರೂ ಜಮೀನು ಸಮಸ್ಯೆಯಿಂದ ಸಾಧ್ಯವಾಗಿರಲಿಲ್ಲ. ಘಟಕ ಆರಂಭದ ಸಂದರ್ಭ ನಿರ್ವಹಣೆ ಕಷ್ಟ ಎನಿಸಿದರೂ ಬಳಿಕ ಸರಳವಾಗುತ್ತದೆ ಎಂದರು. ಜಿಲ್ಲಾ ಪಂಚಾಯಿತಿ ಸ್ವಚ್ಛ ಭಾರತ್ ಮಿಷನ್ ಸಂಯೋಜಕಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು: ದಿನನಿತ್ಯ ವಾಹನ ಸವಾರರಿಗೆ ಅಲ್ಲಿಂದ ಹಾದುಹೋಗುವುದು ತೀರಾ ಕಷ್ಟ, ಪಾದಚಾರಿಗಳಿಗಂತೂ ಹೋಗುವುದೇ ಅಸಾಧ್ಯ. ಆದರೂ ಮೂಗುಮುಚ್ಚಿಕೊಂಡೇ ಮುಂದೆ ಸಾಗುವ ಅನಿವಾರ್ಯತೆ ಎಲ್ಲರಿಗೂ ಇದೆ. ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಕುತ್ತಾರು ಪ್ರದೇಶದಲ್ಲಿ ವಸತಿ ಸಂಕೀರ್ಣಗಳು, ವಾಣಿಜ್ಯ ಕಟ್ಟಡಗಳು , ಅಂಗಡಿ, ಮನೆ ಎಲ್ಲವೂ ಅಧಿಕ ಸಂಖ್ಯೆಯಲ್ಲಿ ತಲೆ ಎತ್ತಿನಿಂತಿದೆ. ಆದರೆ ವಿಪರ್ಯಾಸವೆಂದರೆ ಅಷ್ಟೂ ಕಟ್ಟಡಗಳಲ್ಲಿನ ಜನ ಉಪಯೋಗಿಸಿ ಬಿಸಾಡಿದ ಸೊತ್ತುಗಳಿಗೆ ಮುಕ್ತಿ ದೊರಕಿಸಲು ಯಾವುದೇ ವ್ಯವಸ್ಥೆಯಿಲ್ಲ. ಸಂಬಂಧಪಟ್ಟ ಪಂಚಾಯಿತಿ ಕೂಡಾ ಸರಕಾರದ ಅನುದಾನವಿಲ್ಲವೆಂದು ಕೈಚೆಲ್ಲಿ ನಿಂತಿದೆ. ಇದನ್ನು ಸವಾಲಾಗಿ ಸ್ವೀಕರಿಸಿದ ಮುನ್ನೂರು ಪಂಚಾಯಿತಿ ಅಧ್ಯಕ್ಷೆ ರೂಪಾ.ಆರ್.ಶೆಟ್ಟಿ ಅವರು ಹಲವು ಸಮಯದಿಂದ ಕುತ್ತಾರು ಜಂಕ್ಷನ್ನಿನಲ್ಲಿ ಎಚ್ಚರಿಕೆ ಫಲಕವಿದ್ದರೂ ತುಂಬಿದ್ದ ಕಸದ ರಾಶಿಯನ್ನು ಖುದ್ದು ತಾವೇ ಶುಚಿಗೊಳಿಸಲು ಮುಂದಾಗಿರುವ ಪ್ರಸಂಗ ಇತ್ತೀಚೆಗೆ ನಡೆಯಿತು. ನಾಲ್ಕು ವಸತಿ ಸಂಕೀರ್ಣಗಳು, ದೇವಸ್ಥಾನ , ಟೈಲ್ಸ್ ಕಾರ್ಖಾನೆ, ಶಾಲೆ ಇರುವ ಕುತ್ತಾರು ಜಂಕ್ಷನ್ನಿನ ರಸ್ತೆ ಬದಿಯಲ್ಲೇ ಕಸದ ರಾಶಿ ಬೆಟ್ಟದಂತೆ ತಲೆ ಎತ್ತಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕಿನ್ಯಾ: ಕಿನ್ಯಾ ಗ್ರಾಮ ಪಂಚಾಯತ್ ಸಾಲ ಮನ್ನಾ ತಿಳುವಳಿಕೆ ಪತ್ರ ವಿತರಣಾ ಕಾರ್ಯ ಕ್ರಮ ದಲ್ಲಿ ಕಿನ್ಯಾ ಗ್ರಾಮದಲ್ಲಿ 103 ಫಲಾನುಭವಿಗಳಿಗೆ ತಿಳುವಳಿಕೆ ಪತ್ರವನ್ನು ಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಮಾಲಿನಿ ಮತ್ತು ಉಪಾದ್ಯಕ್ಷರಾದ ಸಿರಾಜ್ ಕಿನ್ಯಾರವರು ವಿತರಿಸಿದರು. ಬಳಿಕ ಮಾತನಾಡಿದ ಉಪಾದ್ಯಕ್ಷರಾದ ಸಿರಾಜ್ ಕಿನ್ಯಾ, ಕರ್ನಾಟಕ ರಾಜ್ಯ ಸರಕಾರವು ಆಶ್ರಯ ಯೋಜನೆಯಲ್ಲಿ ಯಾರೆಲ್ಲಾ ಸಾಲ ಪಡೆದಿದ್ದಾರೋ ಅದನ್ನೆಲ್ಲಾ ಮನ್ನಾ ಮಾಡುವ ಮೂಲಕ ತಿಳುವಳಿಕೆ ಪತ್ರವನ್ನು ಸರಕಾರದ ಆದೇಶದ ಮೂಲಕ ಸಾರ್ವಜನಿಕರಿಗೆ ತಳುಪಿಸಿದ್ದೇವೆಂದು ತಿಳಿಸಿದರು. ಪಂಚಾಯತ್ ಸದಸ್ಯರಾದ ಮೊಹಮ್ಮದ್,ಮಹಾಬಲ ಪೂಂಜ, ಶ್ರೀಮತಿ ಮೈಮೂನಾ,ಪಂಚಾಯತ್ ಅಬಿವೃದ್ದಿ ಅಧಿಕಾರಿ ಕುಮಾರಿ ಪೂರ್ಣಿಮಾ,ಕಾರ್ಯದರ್ಶಿ ಶ್ರೀಮತಿ ಸುರೇಖಾ ,ಗುಮಾಸ್ತರಾದ ಅಶ್ರಫ್,ಸಿಬ್ಬಂದಿ ಚೇತನ್,ಕವಿತಾ,ದಿವ್ಯಾ ಉಪಸ್ಥಿತರಿದ್ದರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಕುರ್ನಾಡು ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ಬಂಟ್ವಾಳ ತಾಲೂಕಿನ ಮೆಸ್ಕಾಂ ಉಪಕೇಂದ್ರ ಕಚೇರಿಯನ್ನು ಕುರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೈಲಜಾ ಮಿತ್ತಕೋಡಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ಬೊಳಿಯಾರ್ ಅವರು ಮಾತನಾಡಿ, ಮುಡಿಪು ಪ್ರದೇಶದಲ್ಲಿ ಮೆಸ್ಕಾಂ ಉಪಕೇಂದ್ರ ಕಚೇರಿ ನಿರ್ಮಾಣ ಆಗಬೇಕುನ್ನುವುದು ಈ ಭಾಗದ ಹಲವು ವರ್ಷಗಳ ಬೇಡಿಕೆಯಾಗಿತ್ತು. ಕುರ್ನಾಡು ವ್ಯಾಪ್ತಿಯ ಮುಡಿಪು ಪ್ರದೇಶವು ಇತ್ತೀಚೆಗೆ ದಿನದಿಂದ ದಿನಕ್ಕೆ ಅಭಿವೃದ್ದಿ ಕಾಣುತ್ತಿದ್ದು, ಆದರೆ ಇಲ್ಲಿ ಮೆಸ್ಕಾಂ ಉಪ ಕಚೇರಿ ಇಲ್ಲದೆ ಜನರು ಬಹಳಷ್ಟು ತೊಂದರೆಯನ್ನು ಎದುರಿಸುತ್ತಿದ್ದರು. ಇದೀಗ ಕುರ್ನಾಡು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮೆಸ್ಕಾಂ ಉಪಕೇಂದ್ರ ಕಚೇರಿಯು ಕಾರ್ಯಾರಂಭಗೊಂಡಿದ್ದರಿಂದ ಕುರ್ನಾಡು, ನರಿಂಗಾನ, ಬಾಳೆಪುಣಿ,ಕೈರಂಗಳ ಹಾಗೂ ಇನ್ನಿತರ ಪ್ರದೇಶದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯರಾದ ಟಿ.ಜಿ.ರಾಜಾರಾಂ ಭಟ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮೆಸ್ಕಾಂ ಇಂಜಿನಿಯರ್ ಜಿ.ನಾರಾಯಣ ಭಟ್ ಕೊಡಕ್ಕಲ್, ಉಪಾಧ್ಯಕ್ಷರಾದ ನಿತಿನ್ ಕುಮಾರ್ ಗಟ್ಟಿ,…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಿರುನಲ್ವೇಲಿ :ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 10 ಮಂದಿ ದಾರುಣವಾಗಿ ಸಾವನ್ನಪ್ಪಿ ,ಇತರ 18 ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅಪಘಾತ ಶುಕ್ರವಾರ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲೆಯಲ್ಲಿ ಸಂಭವಿಸಿದೆ. ತಿರುವನಂತಪುರಂನಿಂದ ವೆಲಂಕಣಿ ಕಡೆಗೆ ಪ್ರವಾಸಿಕ್ಕೆಂದು ತೆರಳುತ್ತಿದ್ದು ತಮಿಳುನಾಡಿನ ಪಾಂಡಿಚೆರಿಯಿಂದ ಕೇರಳಗೆ ಹೋಗುತ್ತಿತ್ತು. ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ತಿರುವು ತೆಗೆದುಕೊಳ್ಳಲು ಹೋದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಸ್ಥಳದಲ್ಲಿದ್ದ ಬಂಡೆಯೊಂದಕ್ಕೆ ಬಸ್ ಢಿಕ್ಕಿಯಾಗಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಅವಘಡ ಸಂಭವಿಸಿದೆ. ಮೃತರಲ್ಲಿ ಇಬ್ಬರು ಮಕ್ಕಳು ಮತ್ತು ಮೂವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳನ್ನು ಆಸ್ಪತ್ರಗೆ ದಾಖಲಿಸಲಾಗಿದೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ : ದೇರಳಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಜಾತ್ರ ಮಹೋತ್ಸವ ಪ್ರಯುಕ್ತ ಜರಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಜನಾ ಕಾರ್ಯಕ್ರಮಗಳಲ್ಲಿ ಅವಿರತ ಸೇವೆ ಸಲ್ಲಿಸುತ್ತಾ ಬಂದಿರುವ ಗುರುಸ್ವಾಮಿ ವಿಶ್ವನಾಥ ಕಾಯರ್ ಪಳಿಕೆ , ಗೋಪಾಲ ಶೆಟ್ಟಿ, ಶಿವಾನಂದ ರೆಡ್ಡಿ, ಪುಷ್ಪಲತಾ ರೈ ಇವರನ್ನು ಅಭಿನಂಧಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಟಿ ಸುವರ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ಮ ಪಂಚಾಯತ್ ಅಧ್ಯಕ್ಷೆ ವಿಜಯ ಕೃಷ್ಣಪ್ಪ, ಗಿರೀಶ್ ಆಳ್ವ, ಹೇಮಂತ್ ಶೆಟ್ಟಿ, ಮೋಹನಾಂಗಯ್ಯ ಸ್ವಾಮಿ, ದೇವಸ್ಥಾನದ ಆಡಳಿತ ಮೊಕ್ತೇಸರ ಚಂದ್ರಹಾಸ್ ಅಡ್ಯಂತಾಯ ಉಪಸ್ಥಿತರಿದ್ದರು. ಕಾರ್ಯದರ್ಶಿ ರಾಜೀಶ್ ಶೆಟ್ಟಿ ಸ್ವಾಗತಿಸಿದರು. ಪ್ರಕಾಶ್ ರೈ ಸನ್ಮಾನಿತರ ವಿವರ ಓದಿದರು. ಜಾತ್ರೆ ಪ್ರಯುಕ್ತ ಸಾಂಸ್ಕøತಿಕ ಕಾರ್ಯಕ್ರಮ, ಸುಗಮ ಸಂಗೀತ ಕಾರ್ಯಕ್ರಮ ಮತ್ತು ಶ್ರೀ ಕಟೀಲು ಮೇಳದವರಿಂದ ಯಕ್ಷಗಾನ ನಡೆಯಿತು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ, ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜುಗಳ ಮೂಲಕ ಸಮುದಾಯ ಅಭಿವೃದ್ಧಿ ಯೋಜನೆಯ ಅನ್ವಯ, ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಬೋಂದೆಲ್. ಕೇಸರಿ ಮಿತ್ರ ವೃಂದ ಮತ್ತು ಕೇಸರಿ ಮಾತೃ ಮಂಡಳಿಯ ಸಹಭಾಗಿತ್ವದಲ್ಲಿ ಉಚಿತ ಟೈಲರಿಂಗ್ ಶಿಬಿರವನ್ನು ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಬಿ.ಎನ್.ಕುಂಬಾರ ಕೇಸರಿ ಸಭಾಭವನದಲ್ಲಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೇಸರಿ ಸೇವಾ ಟ್ರಸ್ಟ್ ನ ಟ್ರಸ್ಟಿ ನಾರಾಯಣ ಕುಂಪಲ ವಹಿಸಿದ್ದರು. ಈ ಸಂದರ್ಭ ಮಾತೃ ಮಂಡಳಿಯ ಅಧ್ಯಕ್ಷೆ ಪ್ರಮೀಳಾ ವಿಜಯ್, ಗೌರವ ಸಲಹೆಗಾರರಾದ ಜಯಲಕ್ಷ್ಮಿ ಕುಂಪಲ, ರಾಕೇಶ್ ಶೆಟ್ಟಿ, ಚಂದ್ರಕಲ ಎಸ್. ಕುಮಾರ್ ಉಪಸ್ಥಿತರಿದ್ದರು. ಲಲಿತಾ ಕೇಶವ್ ಸ್ವಾಗತಿಸಿದರು. ಮಮತ ಜೀತೇಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಶಾಲಿನಿ ದೇವದಾಸ್ ವಂದಿಸಿದರು.

