Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ : ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿನಿ ಸುನೈನಾ ಎಂ. (೬೦೯) ಹಾಗೂ  ಲಕ್ಷ್ಮೀ ಲಾಂಚನ (೫೯೫) ಅಂಕ ಪಡೆದು ವಿಶಿಷ್ಟ ದರ್ಜೆಯಲ್ಲಿ ಪಾಸಾಗಿದ್ದಾರೆ. ಬಬ್ಬುಕಟ್ಟೆ ಹಿರಾ ಬಾಲಕಿಯರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ   ಆಶಿಯಾ ನಜ್‌ಫತ್ (೫೯೪) ಅಂಕ ಪಡೆದು ವಿಶಿಷ್ಟ  ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.ಜಾಯ್‌ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆ ಕೊಲ್ಯ ಶಾಶ್ರಿತಾ(೬೦೪) ಪ್ರೇರಣಾ (೫೯೯) ರಾಕೇಶ್ ಕುಮಾರ್(೫೯೧)ಅಂಕ ಪಡೆದು ವಿಶಿಷ್ಟ  ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ತೊಕ್ಕೊಟ್ಟು: ರಸ್ತೆ ದಾಟುತ್ತಿದ್ದ ಮಹಿಳೆಗೆ ಬಸ್ ಡಿಕ್ಕಿ ಹೊಡೆದು ಆಕೆ ಬಸ್ ನಡಿ ಸಿಲುಕಿದರೂ ಪವಾಡಸದೃಶವಾಗಿ ಪಾರಾಗಿರುವ ಘಟನೆ ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ನಿನ್ನೆ ಮಧ್ಯಾಹ್ನ ವೇಳೆ ನಡೆದಿದೆ. ಉಳ್ಳಾಲ ದರ್ಗಾ ಝಿಯಾರತ್ ಮುಗಿಸಿ ಮುಡಿಪು ಮನೆಗೆ ಮರಳುತ್ತಿದ್ದ ಬೀಫಾತಿಮ್ಮ ಎಂಬವರು ತೊಕ್ಕೊಟ್ಟು ಬಸ್ ನಿಲ್ದಾಣದಲ್ಲಿ ರಸ್ತೆ ದಾಟುತ್ತಿದ್ದರು. ಈ ಸಂದರ್ಭ ಮಂಗಳೂರಿನಿಂದ ತಲಪಾಡಿ ಕಡೆಗೆ ಬರುತ್ತಿದ್ದ ಬಸ್ ಅವರಿಗೆ ಡಿಕ್ಕಿ ಹೊಡೆದಿದೆ. ರಸ್ತೆಗೆ ಉರುಳಿದ ಅವರು ಬಸ್ಸಿನಡಿ ಸಿಲುಕಿದ್ದರು. ಆದರೆ ಚಾಲಕನ ಸಮಯ ಪರಿಪಾಲನೆಯಿಂದ ಕೂಡಲೇ ಬ್ರೇಕ್ ಹಾಕಿದ್ದರಿಂದಾಗಿ ಬೀಫಾತಿಮ್ಮ ಅವರ ಮೇಲೆ ಚಕ್ರ ಹರಿಯುವುದು ತಪ್ಪಿ, ಪವಾಡಸದೃಶವಾಗಿ ಪಾರಾಗಿದ್ದಾರೆ. ಘಟನೆಯಿಂದ ಉದ್ರಿಕ್ತ ಗುಂಪೊಂದು ಚಾಲಕನ ಸೀಟನ್ನೇರಿ ಬಸ್ ನ ಕೀ ಅನ್ನು ತೆಗೆದು ಮುಂದೆ ಚಲಿಸದಂತೆ ತಡೆಹಿಡಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಉಳ್ಳಾಲ ಪೊಲೀಸರು ಉದ್ರಿಕ್ತರನ್ನು ಚದುರಿಸಿ, ಚಾಲಕನನ್ನು ವಶಕ್ಕೆ ಪಡೆದುಕೊಂಡು ಮುಚ್ಚಳಿಕೆ ಬರೆಸಿ ಬಿಡುಗಡೆಗೊಳಿಸಿದ್ದಾರೆ.

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಬಬ್ಬುಕಟ್ಟೆ ಹೀರಾ ಬಾಲಕಿಯರ ಪ್ರೌಢಶಾಲೆ ಇದರ ೨೦೧೪-೧೫ನೇ ಸಾಲಿನ ವಿದ್ಯಾರ್ಥಿಗಳು ಶೇ.೧೦೦ ಫಲಿತಾಂಶವನ್ನು ಪಡೆದುಕೊಂಡಿದ್ದಾರೆ. ಇವರಲ್ಲಿ ಸಮೀಹಾ ಶಾದ್ (೬೧೭), ಶರೀಫಾ ನಿಮ್ರಾ ಆಸೀಫ್ (೬೧೫), ಜಿ.ನಫೀಸಾ ಮಷೀತಾ (೬೦೮) ಅಂಕ ಗಳಿಸುವುದರೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ಕುಂಪಲ: ಕುಂಪಲ ಚೇತನ ನಗರ ನಿವಾಸಿ ಪ್ರಿನ್ಸ್ ಜೋನ್ ಜೇಕಬ್ (೧೪) ಎಂಬ ಬಾಲಕ ಕಾಣೆಯಾದ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತ ಕುಂಪಲ ತನ್ನ ಮನೆಯಿಂದ ಪುತ್ತೂರಿಗೆ ಹೋಗಿ ಬರುತ್ತೇನೆಂದು ಮನೆಯಲ್ಲಿ ಚೀಟಿ ಬರೆದು ಹೋದವನು ರಾತ್ರಿಯಾದರೂ ವಾಪಾಸು ಮನೆಗೆ ಬಾರದೇ ಇದ್ದು ನಾಪತ್ತೆಯಾಗಿದ್ದಾನೆ. ಈತನು ಮನೆಯಿಂದ ತೆರಳುವಾಗ ಲ್ಯಾಪ್‌ಟಾಪ್ ನ್ನು ತನ್ನ ಜೊತೆ ತೆಗೆದುಕೊಂಡು ಹೋಗಿದ್ದಾನೆ ಎಂದು ಸಂಬಂಧಿ ರೆನ್ನಿ ಫಿಲಿಪ್ ಜೋನ್ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ: ಪಾದಚಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಪಿಲಾರು ಲಕ್ಷ್ಮೀಗುಡ್ಡೆ ನಿವಾಸಿ ಸೋಮನಾಥ(೩೬)ಎಂಬವರು ಗಂಭೀರ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ವಿನಮ್ರಾ ಬಾರಿನ ಎದುರುಗಡೆ ನಿನ್ನೆ ಬೆಳಿಗ್ಗೆ ಸಂಭವಿಸಿದೆ. ತೊಕ್ಕೊಟ್ಟು ಸಮೀಪ ಕೆಲಸಕ್ಕೆ ಹೋಗುವ ಸಂದರ್ಭ ರಸ್ತೆ ದಾಟುತ್ತಿದ್ದ ವೇಳೆ ನೆತ್ತಿಲಪದವಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಅವರಿಗೆ ಡಿಕ್ಕಿ ಹೊಡೆದಿತ್ತು. ಬಸ್ಸಿನಡಿಗೆ ಸಿಲುಕಿದ ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಳ್ಳಾಲ್ ನ್ಯೂಸ್ ಡೆಸ್ಕ್ ಉಳ್ಳಾಲ: ಸಮುದ್ರಕ್ಕೆ ಸ್ನಾನ ಮಾಡಲು ಇಳಿದ ಇಬ್ಬರನ್ನು ತಡೆದ ವಿಚಾರಕ್ಕೆ ಸಂಬಂಧಿಸಿ ಇತ್ತಂಡಗಳ ನಡುವೆ ನಡೆದ ಹೊಡೆದಾಟ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಉಳ್ಳಾಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಘಟನೆ ಬೆನ್ನಲ್ಲೇ ಇನ್ನೋರ್ವನಿಗೆ ಅಪರಿಚಿತ ತಂಡವೊಂದು ಹಲ್ಲೆ ನಡೆಸಿರುವ ಘಟನೆ ಮೊನ್ನೆ ತಡರಾತ್ರಿ ವೇಳೆ ಜರಗಿದೆ. ಮೊಗವೀರಪಟ್ನದ ವಾಸುದೇವ (೩೫) ವಿಜಯ್(೪೦) ಜಿತೇಂದ್ರ(೪೦) ಬಂಧಿತರು. ದೇರಳಕಟ್ಟೆ ನಿವಾಸಿಗಳಾದ ಅಲ್ಫಾಝ್, ನೌಷಾದ್ , ಸಿನಾನ್ ಸಹಿತ ಐವರ ತಂಡ ಉಳ್ಳಾಲ ಮೊಗವೀರಪಟ್ನ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಬಂದಿದ್ದರು. ಅವರು ಸಮುದ್ರಕ್ಕೆ ಬಿದ್ದ ಚೆಂಡನ್ನು ತೆಗೆಯಲು ಹೋದ ವಿಚಾರದಲ್ಲಿ ಇತ್ತಂಡಗಳ ಮಧ್ಯೆ ವಾಗ್ವಾದ ನಡೆದು, ಹೊಡೆದಾಟ ಸಂಭವಿಸಿ, ಇಬ್ಬರು ಗಾಯಗೊಂಡಿದ್ದರು. ಪ್ರತೀಕಾರ: ಭಾನುವಾರ ಸಂಜೆ ಘಟನೆ ನಡೆದ ಬೆನ್ನಲ್ಲೇ ಉಳ್ಳಾಲ ಸಮೀಪ ನಡೆದುಕೊಂಡು ಹೋಗುತ್ತಿದ್ದ ಅಶೋಕ್ (೩೫) ಎಂಬವರಿಗೆ ತಂಡವೊಂದು ಕಲ್ಲೆಸೆದಿತ್ತು. ಇದನ್ನು ಆಕ್ಷೇಪಿಸಿ ಕಲ್ಲೆಸೆದ ತಂಡವನ್ನು ವಿಚಾರಿಸಿದಾಗ , ಅವರು ಗುಂಪಾಗಿ ಅಶೋಕ್ ಅವರಿಗೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.…

Read More

ಉಳ್ಳಾಲ ನ್ಯೂಸ್ ಡೆಸ್ಕ್ ಉಳ್ಳಾಲ: ಸಮುದ್ರಕ್ಕೆ ಇಳಿದ ಇಬ್ಬರನ್ನು ತಡೆದ ಹಿನ್ನೆಲೆಯಲ್ಲಿ ಇತ್ತಂಡಗಳ ನಡುವೆ ವಾಗ್ವಾದ ಸಂಭವಿಸಿ ಹೊಡೆದಾಟ ನಡೆದು, ಉಳ್ಳಾಲ ಪೊಲೀಸರು ಲಘು ಲಾಠಿ ಚಾಜ್ ನಡೆಸಿ ಪರಿಸ್ಥಿತಿಯನ್ನು ಹತೋಟಿಗೆ ತಂದ ಘಟನೆ ಉಳ್ಳಾಲದ ಮೊಗವೀರಪಟ್ನ ಸಮುದ್ರ ತೀರದಲ್ಲಿ ನಡೆದಿದೆ. ದೇರಳಕಟ್ಟೆ ನಿವಾಸಿಗಳಾದ ಅಲ್ಫಾಝ್, ನೌಷಾದ್ , ಸಿನಾನ್ ಸಹಿತ ಐವರ ತಂಡ ಉಳ್ಳಾಲ ಮೊಗವೀರಪಟ್ನ ಸಮುದ್ರ ತೀರಕ್ಕೆ ವಿಹಾರಕ್ಕೆಂದು ಬಂದಿದ್ದರು. ಅಲ್ಲಿ ಭಾನುವಾರ ಸಂಜೆಯ ಸಮಯವಾಗಿದ್ದರಿಂದಾಗಿ ಹೆಚ್ಚಿನ ಜನರು ಸೇರಿದ್ದರು. ಇದೇ ವೇಳೆ ಸ್ಥಳದಲ್ಲಿ ಆಟವಾಡುತ್ತಿದ್ದ ಗುಂಪೊಂದರ ಚೆಂಡು ಸಮುದ್ರಕ್ಕೆ ಬಿದ್ದಿತ್ತು. ಅದನ್ನು ನೋಡಿದ ಅಲ್ಫಾಝ್ ಜತೆಗಿದ್ದ ಇಬ್ಬರು ಚೆಂಡು ತರಲು ಸಮುದ್ರದ ನೀರಿಗೆ ಇಳಿದಿದ್ದರು. ಇದನ್ನು ಆಕ್ಷೇಪಿಸಿದ ಸ್ಥಳದಲ್ಲಿದ್ದ ತಂಡ ಸಮುದ್ರ ಅಪಾಯಕಾರಿಯಾಗಿದೆ ಎಂದು ಎಚ್ಚರಿಸಿದ್ದರು. ಇದೇ ವಿಚಾರದಲ್ಲಿ ಇತ್ತಂಡಗಳ ಮಧ್ಯೆ ವಾಗ್ವಾದ ನಡೆಯಿತು. ಇದರಿಂದ ಇನ್ನಷ್ಟು ಜನರು ಸ್ಥಳದಲ್ಲಿ ಜಮಾಯಿಸಿದ್ದು, ಇತ್ತಂಡಗಳ ನಡುವೆ ಹೊಡೆದಾಟ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರಿಗೆ ಹೊಡೆದಾಟವನ್ನು ತಡೆಯಲು ಅಸಾಧ್ಯವಾಯಿತು. ಮತ್ತೆ ಉಳ್ಳಾಲ…

Read More

ಉಳ್ಳಾಲ ನ್ಯೂಸ್ ಡೆಸ್ಕ್ ಮುಡಿಪು: ಇಲ್ಲಿನ ಸೂರಜ್ ಎಜ್ಯುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್‍ಯಾಚರಿಸುವ ಜ್ಞಾನದೀಪ ಹೈಸ್ಕೂಲ್ ಮತ್ತು ಪಿ.ಯು ಕಾಲೇಜಿನ ಆಡಳಿತ ಮಂಡಳಿ ಹೆಚ್ಚುವರಿ ಶುಲ್ಕ ಪಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿ ಹೆತ್ತವರು ಶಾಲೆಗೆ ಮುತ್ತಿಗೆ ಹಾಕಿರುವ ಘಟನೆ ಮುಡಿಪುವಿನಲ್ಲಿ ನಡೆದಿದೆ. ಹಿಂದಿನ ವರ್ಷಕ್ಕಿಂತ ರೂ. ೫೦೦೦ ಹೆಚ್ಚುವರಿ ಶುಲ್ಕ ಪಾವತಿಸುವಂತೆ ಶಾಲಾ ಆಡಳಿತ ಮ ಂಡಳಿ ಹೆತ್ತವರಿಗೆ ಸೂಚಿಸಿತ್ತು. ಆದರೆ ಏಕಾಏಕಿ ಶುಲ್ಕ ಏರಿಕೆಯನ್ನು ಖಂಡಿಸಿದ ವಿದ್ಯಾರ್ಥಿಗಳ ಹೆತ್ತವರು ಸುಮಾರು ೧೦೦ ರಷ್ಟು ಜನ ಮುಡಿಪುವಿನ ಶಾಲೆ ಮುಂದೆ ಜಮಾಯಿಸಿ ಶುಲ್ಕ ಏರಿಕೆಯನ್ನು ವಿರೋಧಿಸಿದರು. ಅಲ್ಲದೆ ಶಾಲಾ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಶಾಲಾ ಚೇರ್‌ಮೆನ್ ಮಂಜುನಾಥ್ ರೇವಣಕರ್ ಹೆತ್ತವರನ್ನು ಸಮಾಧಾನಿಸಿ ಶುಲ್ಕ ಏರಿಕೆಯನ್ನು ಸಮರ್ಥಿಸಿಕೊಂಡರು. ಆದರೆ ಹೆತ್ತವರು ಮಕ್ಕಳಿಗೆ ಟಿ.ಸಿ ಕೊಟ್ಟಲ್ಲಿ ಅವರನ್ನು ಶಾಲೆ ಬಿಡಿಸಿ ಬೇರೆ ಶಾಲೆಗೆ ಸೇರಿಸುವುದಾಗಿಯೂ ಹೇಳಿದರು. ಅಲ್ಲದೆ ಇತ್ತೀಚೆಗೆ ಪಿ.ಯು. ಕಾಲೇಜು ಆರಂಭವಾಗಿದ್ದು, ಅದರ ಹಣ ಭರಿಸಲು ಹೆಚ್ಚುವರಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ನೇಪಾಳ ಭೂಕಂಪಪೀಡಿತ ಪ್ರದೇಶಕ್ಕೆ ತೆರಳಿ ಗಾಯಾಳುಗಳ ಸೇವೆ ಮಾಡುವ ಮೂಲಕ ವೈದ್ಯ ವೃತ್ತಿ ಕೇವಲ ಹಣ ಗಳಿಸುವ ಯಂತ್ರವಲ್ಲ ಎನ್ನುವ ಮಾತನ್ನು ನಿಟ್ಟೆ ವಿಶ್ವವಿದ್ಯಾಲಯದ ವೈದ್ಯರು ಸುಳ್ಳಾಗಿಸಿದ್ದಾರೆ. ಅದರಲ್ಲೂ ಯುವ ವೈದ್ಯರು ಈ ಕಾರ್ಯದಲ್ಲಿ ಹೆಚ್ಚಿನ ಆಸಕ್ತಿ ತೋರಿದ್ದು ಶ್ಲಾಘನೀಯ. ಆ ಮೂಲಕ ನಿಟ್ಟೆ ವಿವಿಯ ಕೀರ್ತಿ ಪತಾಕೆಯನ್ನು ಹಿಮಾಲಯದ ತಪ್ಪಲಲ್ಲಿ ಹಾರಿಸಿರುವುದು ಅಭಿನಂದನೀಯ ಎಂದು ನಿಟ್ಟೆ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್.ವಿನಯ್ ಹೆಗ್ಡೆ ಹೇಳಿದರು. ಭೂಕಂಪ ಪೀಡಿತ ನೇಪಾಳದಲ್ಲಿ ನರಳುತ್ತಿರುವ ಜನರಿಗೆ ತುರ್ತು ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಅಲ್ಲಿಗೆ ತೆರಳಿದ್ದ ಚಿಕಿತ್ಸೆ ನೀಡಿದ ನಿಟ್ಟೆ ವಿಶ್ವವಿದ್ಯಾಲಯ ವೈದ್ಯರ ತಂಡಕ್ಕೆ ಶುಕ್ರವಾರ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಂಡದಲ್ಲಿ ಸೇವೆ ಸಲ್ಲಿಸಿದ ವೈದ್ಯರನ್ನು ಸನ್ಮಾನಿಸಲಾಯಿತು. ತಂಡದ ನೇತೃತ್ವ ವಹಿಸಿದ್ದ ಡಾ. ಸತೀಶ್ ರಾವ್ ಮಾತನಾಡಿ ಏ. ೨೭ರಂದು ಭೂಕಂಪ ಪೀಡಿತಪೀಡಿತ ನೇಪಾಳದಲ್ಲಿ ತುರ್ತು ಚಿಕಿತ್ಸೆ ನಿಟ್ಟಿನಲ್ಲಿ ತಂಡ ರಚಿಸುವಂತೆ ನಿಟ್ಟೆ ಕುಲಾಧಿಪತಿ ಹೇಳಿದರು.…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಕುಮಾರಿ ರೂಪ ಆಂಬ್ಲಮೊಗರು ಇವರ ಮದುವೆ ಕಾರ್ಯಕ್ರಮಕ್ಕೆ ದಾನಿಗಳ ನೆರವಿನಿಂದ ಸಂಗ್ರಹಿಸಿದ ಸಹಾಯಧನವನ್ನು ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ (ರಿ) ಕುಂಪಲ ಇದರ ವತಿಯಿಂದ ಚೆಕ್ ಮುಖೇನ ಹಸ್ತಾಂತರಿಸುವ ಕಾರ್ಯಕ್ರಮ ಕೇಸರಿ ಸಭಾ ಭವನದಲ್ಲಿ ನಡೆಯಿತು. ಕೇಸರಿ ಮಿತ್ರ ವೃಂದದ ಅಧ್ಯಕ್ಷರಾದ ಸತ್ಯನಾರಾಯಣ ಹೂಡೆ, ಮಾಜಿ ಅಧ್ಯಕ್ಷರಾದ ಬಿ.ನಾರಾಯಣ ಕುಂಪಲ ಚೆಕ್ ಹಸ್ತಾಂತರಿಸಿದರು. ಕಾರ್ಯದರ್ಶಿ ನವೀನ್ ಕುಂಪಲ ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ಚಂದ್ರ ಕುಂಪಲ ಈ ಸಂದರ್ಭದಲ್ಲಿ ಉಪಸ್ಥಿತರಿದದ್ದರು.

Read More