ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಯುವಕನೋರ್ವನ ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಹಾಡಹಗಲೇ ನಡೆದಿದ್ದು, ಮೂವರ ತಂಡದಿಂದ ಕೃತ್ಯ ನಡೆದು ಆರೋಪಿಯೋರ್ವನ ತಂದೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಳೇಕಲ ನಿವಾಸಿ ನಾಸೀರ್ ಎಂಬವರ ಪುತ್ರ ಮಹಮ್ಮದ್ ಖಮಾಲುದ್ದೀನ್ (25) ಕೊಲೆ ಯತ್ನಕ್ಕೆ ಒಳಗಾದವರು. ಮಾಸ್ತಿಕಟ್ಟೆಯ ಬೀಫ್ ಸ್ಟಾಲಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಉಳ್ಳಾಲ ನಿವಾಸಿಗಳಾದ ಅರ್ಫಾನ್, ಮಿತ್ತ ನಿಸಾರ್ ಹಾಗೂ ಜಾಫರ್ ಎಂಬವರ ತಂಡ ಏಕಾಏಕಿ ಅಂಗಡಿಗೆ ನುಗ್ಗಿ ದಾಂಧಲೆ ನಡೆಸಿತ್ತು. ಬಳಿಕ ಖಮಾಲುದ್ದೀನ್ ಅವರಿಗೆ ಚೂರಿ, ಸೋಡಾ ಬಾಟಲಿ ಹಾಗೂ ರಾಡಿನಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿದೆ. ಘಟನೆಯಿಂದ ಗಂಭೀರ ಗಾಯಗೊಂಡಿರುವ ಖಮಾಲುದ್ದೀನ್ ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಿಂಗಳ ಹಿಂದೆ ದರೋಡೆ ನಡೆಸಿದ್ದ ತಂಡ : ರಂಝಾನ್ ಉಪವಾಸದ ಸಂದರ್ಭ ಅರ್ಫಾನ್, ನಿಸಾರ್, ಜಾಫರ್ ಸೇರಿದಂತೆ ಮುಖ್ತಾರ್ ಎಂಬವರ ತಂಡ ಇದೇ ಮಾಸ್ತಿಕಟ್ಟೆಯ ಬೀಫ್ ಸ್ಟಾಲಿಗೆ ನುಗ್ಗಿ ಖಮಾಲುದ್ದೀನ್ ಅವರಿಗೆ…
Author: UllalaVani
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ, ಬಂಟ್ವಾಳದ ಹರೀಶ್ ಪೂಜಾರಿ ಕೊಲೆ , ಆರ್ ಟಿ ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಗಳಲ್ಲಿ ಬಿಜೆಪಿ ಹಾಗೂ ಸಂಘಪರಿವಾರದವರು ನೇರ ಭಾಗಿಯಾಗಿದ್ದು, ಇದರ ವಿರುದ್ಧ ಪ್ರತಿಭಟಿಸದ ಬಿಜೆಪಿ ಪಕ್ಷದವರಿಗೆ ಡಿವೈಎಸ್ ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಕುರಿತು ಪ್ರತಿಭಟಿಸಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಉಳ್ಳಾಲ್ ಹೇಳಿದ್ದಾರೆ. ತೊಕ್ಕೊಟ್ಟು ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ನಡೆಸಿದ ಸುದ್ಧಿಗೋಷ್ಟಿಯಲ್ಲಿ ಅವರು ಹೇಳಿದ್ದಾರೆ. ಎಂ.ಕೆ.ಗಣಪತಿ ಉಳ್ಳಾಲದಲ್ಲಿ ಎಸ್.ಐ ಆಗಿ ಜಿಲ್ಲೆಯಾದ್ಯಂತ ನಿಷ್ಠಾವಂತರಾಗಿ ಕಾರ್ಯ ನಿರ್ವಹಿಸಿದವರು. ಮುಖ್ಯಮಂತ್ರಿಗಳು ಪ್ರಕರಣವನ್ನು ಶೀಘ್ರವೇ ಸಿಓಡಿಗೆ ವಹಿಸಬೇಕು. ಆದರೆ ಅವರ ಅಂತಿಮ ಸಂಸ್ಕಾರದ ವೇಳೆ ಮೃತದೇಹವನ್ನು ಪತ್ನಿ ಹಾಗೂ ಕುಟುಂಬಸ್ಥರ ಮುಂದೆಯೇ ಎರಡು ಗಂಟೆಗಳ ಕಾಲ ರಸ್ತೆ ಬದಿಯಲ್ಲಿಟ್ಟು ಜವಾಬ್ದಾರಿಯುತ ಶಾಸಕರ ಸಮ್ಮುಖದಲ್ಲಿ ಇರಿಸಿ ಪ್ರತಿಭಟಿಸಿರುವುದು ಸಮಂಜಸವಲ್ಲ. ಸಿಬಿಐ ಗೆ ಕೊಟ್ಟಂತಹ ಪ್ರಕರಣಗಳು ಎಲ್ಲವೂ ಹಳ್ಳ ಹಿಡಿದಿರುವುದರಿಂದ ಗಣಪತಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಮಂಗಳೂರು ಕ್ಷೇತ್ರದ 25 ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶೀಘ್ರವೇ ಸ್ಥಾಪಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಇನೋಳಿ ದೇವಂದಬೆಟ್ಟುವಿನ ಶ್ರೀ ಸೋಮನಾಥ ದೇವಸ್ಥಾನಕ್ಕೆ ಹೋಗುವ ಕಾಂಕ್ರೀಟಿಕರಣ ರಸ್ತೆ ಹಾಗೂ ಇನೋಳಿ ಸಂಪರ್ಕಿಸುವ ರಸ್ತೆಯ ಡಾಮರೀಕರಣವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ಜನರ ಆರೋಗ್ಯ ಉತ್ತಮವಾಗಿ ಇಡುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಸರಕಾರ ಕಲ್ಪಿಸಿದ್ದು, ಈ ನಿಟ್ಟಿನಲ್ಲಿ ಕ್ಷೇತ್ರದ 25 ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪಿಸಲಾಗುವುದು. ಅತೀ ಶೀಘ್ರದಲ್ಲೇ ಪಾವೂರು ಪಂಚಾಯಿತಿ ವ್ಯಾಪ್ತಿಯಲ್ಲೂ ಘಟಕವನ್ನು ಸ್ಥಾಪಿಸಿ 20 ಲೀ. ನೀರಿಗೆ 10 ರೂ. ನಂತೆ ಪಡೆದುಕೊಳ್ಳಲಾಗುವುದು. ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬಹುದು ಎಂದ ಅವರು ಮಂಗಳೂರು ಕ್ಷೇತ್ರಾದ್ಯಂತ ಬಹುತೇಕ ರಸ್ತೆಗಳನ್ನು ವಿವಿಧ ಯೋಜನೆಗಳಡಿ ಬರುವ ಅನುದಾನಗಳ ಮೂಲಕ ಕಾಂಕ್ರೀಟಿಕರಣ ಹಾಗೂ ಡಾಮರೀಕರಣವನ್ನು ಮಾಡಲಾಗಿದೆ. ಬಹಳ ವರ್ಷಗಳಿಂದ ನಾದುರಸ್ತಿಯಲ್ಲಿದ್ದ ಇನೋಳಿ ದೇವಸ್ಥಾನದ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಪಾವೂರು: ಪರಿಸರ ಸ್ವಚ್ಛತೆ, ಶಿಕ್ಷಣ ಜತೆಗೆ ಸಮಾಜಮುಖಿ ಕೆಲಸಗಳಲ್ಲಿ ಹಾಗೂ ವ್ಯಕ್ತಿತ್ವಗಳನ್ನು ರೂಪಿಸುವ ಮೂಲಕ ಪಾವೂರು ಗ್ರಾಮ ಇತರೆ ಗ್ರಾಮಗಳಿಗೆ ಮಾದರಿಯಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಪಾವೂರು ಗ್ರಾಮ ಪಂಚಾಯತ್ ನೂತನ ಆಡಳಿತ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಅಂಗವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಿಂದ ವರ್ಷ ತುಂಬಿದ ಹರ್ಷ, ಕೋಟಿ ವೃಕ್ಷ (ಮಗುವಿಗೊಂದು ಗಿಡ) ಹಾಗೂ ಸಾಧಕರಿಗೆ ಅಭಿನಂದನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಪಾವೂರು ಗ್ರಾಮದಲ್ಲಿ ಸಮಾಜಮುಖಿ ವ್ಯಕ್ತಿತ್ವಗಳನ್ನು ಒಟ್ಟುಗೂಡಿಸುವ ಬೆಳವಣಿಗೆ ಶ್ಲಾಘನೀಯ. ಅಭಿವೃದ್ಧಿಗೆ ಪೂರಕವಾದ ವಾತಾವರಣ ಇಲ್ಲಿ ನಿರ್ಮಾಣವಾಗಿದೆ. ರೇಷನ್ನಿನಲ್ಲಿ ರಾಜ್ಯದಲ್ಲಿ 17 ಲಕ್ಷ ಬಾಕಿ ಉಳಿದಿದ್ದರೆ, ಜಿಲ್ಲೆಯಲ್ಲಿ 11,000 ಬಾಕಿ ಇದೆ. ಇದನ್ನು ಸರಿಪಡಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ಪಂಚಾಯತ್ ಗಳಿಗೆ ರೇಷನ್ ಮಾಡುವ ಅಧಿಕಾರ ಕೊಡುವ ವ್ಯವಸ್ಥೆ ಮಾಡಲಾಗುವುದು ಎಂದರು. ಈ ಸಂದರ್ಭ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಪ್ರತಿಯೊಂದು ಧರ್ಮವೂ ಸಮಾಜದಲ್ಲಿ ಶಾಂತಿ ಸಾಮರಸ್ಯ ಬಯಸುತ್ತದೆ. ಸ್ವಧರ್ಮವನ್ನು ಪ್ರೀತಿಸುತ್ತಾ ಇತರ ಧರ್ಮಗಳನ್ನು ಗೌರವಿಸುವ ಮೂಲಕ ಸಮಾಜದಲ್ಲಿ ಸನ್ನಡತೆಯ ಬಾಳು ಬಾಳುತ್ತಾ ಇತರರಿಗೆ ಮಾದರಿಯಾಗಬೇಕು ಎಂದು ಆಹಾರ ಮತ್ತು ನಾಗರಿಕೆ ಪೂರೈಕೆ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅವರು ಈದುಲ್ ಫಿತರ್ ಪ್ರಯುಕ್ತ ಬುಧವಾರ ಉಳ್ಳಾಲ ದರ್ಗಾದಲ್ಲಿ ವಿಶೇಷ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿ ಒಬ್ಬರಿಗೊಬ್ಬರು ಅರ್ಥಮಾಡಿಕೊಂಡಾಗ ಮಾತ್ರ ಇತರರ ಸಂಸ್ಕ ೃತಿ ಅರಿಯಲು ಸಾಧ್ಯವಾಗುತ್ತದೆ. ಆಚರಣೆಗಳು ನಂಬಿಕೆಗಳು ಇತರರಿಗೆ ಅರ್ಥೈಸಿಕೊಳ್ಳಲು ಸಾಧ್ಯ. ಇದರಿಂದ ಪರಸ್ಪರ ವೈಮನಸ್ಸು ಭಿನ್ನ ಅಭಿಪ್ರಾಯಗಳು ಮೂಡದು ಎಂದರು. ದರ್ಗಾ ಅಧ್ಯಕ್ಷ ಅಬ್ದುಲ್ ರಶೀದ್ ಮಾತನಾಡಿ ಇಸ್ಲಾಂ ಒಂದು ಶ್ರೇಷ್ಠ ಧರ್ಮವಾಗಿದ್ದು ಅದರದ್ದೇ ಆದ ಧಾರ್ಮಿಕ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಇತರ ಧರ್ಮೀಯರನ್ನು ಮತಾಂತರ ಮಾಡುವ ಅಗತ್ಯ ಇಸ್ಲಾಂಗೆ ಇಲ್ಲ. ಹಾಗೆಯೇ ಧರ್ಮವಿರೋಧಿ ಕೃತ್ಯವಾದ ಭಯೋತ್ಪಾದನೆಗೆ ಇಸ್ಲಾಂ ಎಂದೂ ಪೆÇ್ರೀತ್ಸಾಹಿಸದು . ಯಾವುದೇ ಸಂಘಟನೆಗಳು ಅಲ್ಲಾಹುವಿನ ಭವನದಲ್ಲಿ ಬೇಡ. ಧಾರ್ಮಿಕ ಕಾರ್ಯಗಳು ಬಹಳ…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಕೊಣಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಲ್ಲರಕೋಡಿ ಎಂಬಲ್ಲಿ ಸೋಮವಾರ ನಸುಕಿನ ಜಾವ ಭೂಕುಸಿತ ಉಂಟಾಗಿ, 15 ಅಡಿ ಆಳದ ಸುರಂಗ ಪತ್ತೆಯಾಗಿ ಮನೆಯೊಂದು ಅಪಾಯದಂಚಿನಲ್ಲಿ ಸಿಲುಕಿದೆ. ಕೊಣಾಜೆ ಕಲ್ಲರಕೋಡಿ ನಿವಾಸಿ ಸದಾಶಿವ ದೇವಾಡಿಗ ಎಂಬವರ ಮನೆಯ ಹಿಂಭಾಗದಲ್ಲಿ ಭೂಕುಸಿತ ಉಂಟಾಗಿ 15 ಅಡಿ ಆಳದ ಸುರಂಗ ಪತ್ತೆಯಾಗಿದೆ. ಸೋಮವಾರ ನಸುಕಿನ ಜಾವ ಮನೆ ಸಮೀಪದ ಆಗ್ನೇಸ್ ಲೋಬೊ ಎಂಬವರಿಗೆ ದೊಡ್ಡ ಸದ್ದು ಕೇಳಿಬಂದಿತ್ತು. ಮನೆಯ ಸುತ್ತ ಹುಡುಕಿ ಪತ್ತೆಯಾಗದೇ , ಮನೆ ತಾರಸಿಗೆ ಹೋಗಿ ನೋಡಿದಾಗ ಸಮೀಪದ ಸದಾಶಿವ ಅವರ ಮನೆ ಹಿಂಭಾಗದ ಅಡಿಭಾಗದಲ್ಲಿ 15 ಅಡಿ ಆಳದ ಸುರಂಗ ಪತ್ತೆಯಾಗಿತ್ತು. ಕೂಡಲೇ ಅವರು ಸದಾಶಿವ ಅವರ ಪತ್ನಿ ಪದ್ಮಾವತಿ ಅವರಿಗೆ ಮಾಹಿತಿ ನೀಡಿದ್ದರು. ಜೀವಾಪಾಯದಿಂದ ಪಾರು: ಮನೆಯ ಹಿಂಭಾಗದಲ್ಲಿ ಬಟ್ಟೆ ಒಗೆಯುವ ಕಲ್ಲು ಹಾಗೂ ಪಾತ್ರೆ ತೊಳೆಯುವ ಜಾಗವಿತ್ತು. ಇದರಲ್ಲಿ ಎಂದಿನಂತೆ ಬೆಳಗ್ಗಿನ ಜಾವ ಪದ್ಮಾವತಿ ಅವರು ಕೆಲಸ ಮಾಡುತ್ತಿರುತ್ತಾರೆ, ಆದರೆ ಸೋಮವಾರ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಚ್ಚಿಲ: ಉಚ್ಚಿಲ ಪ್ರದೇಶಕ್ಕೆ ಶಾಶ್ವತ ಬ್ರೇಕ್ವಾಟರ್ ಕಾಮಗಾರಿ ವಿಸ್ತರಣೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮುಂದಿನ ವರ್ಷದಲ್ಲಿ ಅಲ್ಲಿಯೂ ಕಾಮಗಾರಿಯನ್ನು ಆರಂಭಿಸಲಾಗುವುದು. ಹಾನಿಗೊಳಗಾದವರಿಗೆ ತಕ್ಷಣ ಪರಿಹಾರ ಒದಗಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ನಾಗರಿಕ ಮತ್ತು ಆಹಾರ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ಉಚ್ಚಿಲದ ನ್ಯೂಉಚ್ಚಿಲ ಹಾಗೂ ಉಳ್ಳಾಲದ ಕೋಟೆಪುರ, ಕೋಡಿ, ಮೊಗವೀರಪಟ್ನ. ಕೈಕೋ, ಹಿಲೇರಿಯಾನಗರ ಕಡಲ್ಕೊರೆತ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿದರು. 1983 ರಿಂದ ಉಳ್ಳಾಲದ ಕೋಟೆಪುರ, ಕೈಕೋ, ಮೊಗವೀರಪಟ್ನದಲ್ಲಿ ಕಡಲ್ಕೊರೆತ ಸಂಭವಿಸುತ್ತಲೇ ಬಂದಿದೆ. ಅದಕ್ಕಾಗಿ ಗಾರ್ಬನ್ ಬಾಕ್ಸ್, ಬ್ಲಾಕ್ ಹಾಕುವುದು, ಮಣ್ಣು ಹಾಕುವುದು, ಗನೀ ಬ್ಯಾಗ್ನಂತಹ ತಾತ್ಕಾಲಿಕ ಪರಿಹಾರವನ್ನು ಸರಕಾರ ನಡೆಸುತ್ತಲೇ ಬಂದಿತ್ತು. ಆದರೆ ಇಲ್ಲಿನ ಸಮುದ್ರದ ಹೊಡೆತಕ್ಕೆ ಯಾವುದೇ ಪರಿಹಾರ ಫಲಕಾರಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೇ ಮಾದರಿಯಾದ ಎಡಿಬಿ ಯೋಜನೆಯಡಿ ಶಾಶ್ವತ ತಡೆಗೋಡೆ ಕಾಮಗಾರಿಯನ್ನು ಆರಂಭಿಸಲಾಗಿದೆ. ಉಳ್ಳಾಲದಲ್ಲಿ ಮಾತ್ರ ಇದ್ದ ಕೊರೆತ ಸದ್ಯ ಸೋಮೇಶ್ವರದ ಉಚ್ಚಿಲದಲ್ಲಿಯೂ ಆರಂಭವಾಗಿದೆ. ಇಲ್ಲಿ ಬಿದ್ದಿರುವ, ಬೀಳುವ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಕುಡಿತ ಜೀವಕ್ಕೇ ಹಾಳು, ಕುಡಿತ ಹೆಚ್ಚಾದಲ್ಲಿ ಮಣ್ಣು ಪಾಲಾಗುವುದು ಅಂತೂ ಗ್ಯಾರಂಟಿ . ತೊಕ್ಕೊಟ್ಟು ಮಾಯಾ ಬಾರಿನ ಎದುರುಗಡೆ ಶುಕ್ರವಾರ ತಡರಾತ್ರಿ ನಡೆದ ಘಟನೆ ಇಂತಹದ್ದೊಂದು ಮಾತನ್ನು ನಿಜವಾಗಿಸಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿ ಮಣ್ಣಿನಲ್ಲಿ ಮುಳುಗಿದ್ದು ಮದ್ಯವ್ಯಸನಿಗಳಲ್ಲ, ಬದಲಾಗಿ ಅದನ್ನು ಸೇವಿಸಲು ಬಂದಿದ್ದ ಮೂರು ಗ್ರಾಹಕರ ದ್ವಿಚಕ್ರ ವಾಹನಗಳು. \ ಬಾಂಬ್ ಸ್ಫೋಟದ ಸದ್ದಿನಂತೆ ಇಡೀ ಬಾರಿನೊಳಗಿದ್ದ ಗ್ರಾಹಕರು, ಮಾಲೀಕರು, ಸಿಬ್ಬಂದಿ ಹಾಗೂ ಸ್ಥಳೀಯರನ್ನು ಕ್ಷಣಾರ್ಧದಲ್ಲಿ ದಂಗಾಗಿಸಿತ್ತು. ಇನ್ನೇನು ಹೊರಬಂದು ನೋಡುವಷ್ಟರಲ್ಲಿ ನೋಡನೋಡುತ್ತಿದ್ದಂತೆ ಬಾರಿನ ಹೊರ ಆವರಣದಲ್ಲಿ ನೂತನವಾಗಿ ಅಳವಡಿಸಿದ್ದ ಇಂಟರ್ಲಾಕ್ಗಳು ಭೂಮಿಯೊಳಗೆ ಮರೆಯಾಗುತ್ತಾ ಹೋದಂತೆ ಅಲ್ಲಿದ್ದ ದ್ವಿಚಕ್ರ ವಾಹನಗಳು ಮಣ್ಣಿನೊಳಗೆ ಹೂತು ಹೋಗುತ್ತಲೇ ಇತ್ತು. ಏನೋ ಕುಡಿತ ಜಾಸ್ತಿಯಾದರೆ ಹೀಗೆಲ್ಲಾ ಆಗ್ತದೆ. ಅನ್ನುತ್ತಾ ಬಾರಿನಲ್ಲಿದ್ದ ಗ್ರಾಹಕರು ಕಣ್ಣಿನ ರೆಪ್ಪೆಗಳನ್ನು ಮತ್ತೆ ಮತ್ತೆ ಸವರಿ ನೋಡಿದರೆ ಘಟನೆ ನಡೆಯುತ್ತಿರುವುದು ಅಕ್ಷರಶ: ನಿಜವಾಯಿತು. ಅಷ್ಟರಲ್ಲಿ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿದ್ದ ಹೊಸತಾಗಿ ಖರೀದಿಸಿದ ಎಂಟೈಸರ್ ಬೈಕ್,…
ಉಳ್ಳಾಲ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ವಿಕೇಂದ್ರೀಕರಣ ನೀತಿಯಿಂದ ಉದ್ದಿಮೆಗಳು ಕ್ಷೀನಗೊಳ್ಳುತ್ತಿದ್ದು, ರಾಜ್ಯದಲ್ಲಿ ಇದ್ದಂತಹ 32 ಜವಳಿ ಕಾರ್ಖಾನೆಗಳಲ್ಲಿ ಕೇವಲ ದಾವಣಗೆರೆಯ ಗೋಕಾಕ ಜವಳಿ ಕಾರ್ಖಾನೆ ಮಾತ್ರ ಉಳಿದಿದೆ. ಇದರಿಂದ ಸಾವಿರಾರು ಮಂದಿ ಕಾರ್ಮಿಕರು ಬೀದಿಪಾಲಾದರೂ, ಅವರಿಗೆ ಆಶ್ರಯವಾಗಬೇಕಿದ್ದ ಕೇಂದ್ರ ಮತ್ತು ರಾಜ್ಯ ಸರಕಾರಗಳು ರಾಜಕೀಯದ ಆಟದಲ್ಲಿ ನಿರತವಾಗಿದೆ ಎಂದು ಸಿಐಟಿಯುನ ರಾಜ್ಯ ಅಧ್ಯಕ್ಷ ವಿ.ಜೆ.ಕೆ.ನಾಯರ್ ಅಭಿಪ್ರಾಯಪಟ್ಟರು. ಅವರು ತೊಕ್ಕೊಟ್ಟು ಅಂಬೇಡ್ಕರ್ ಮೈದಾನದಲ್ಲಿ ಕಾಂ. ಪೂವಪ್ಪ ಸಾಲ್ಯಾನ್ ವೇದಿಕೆಯಲ್ಲಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಇದರ ಆಶ್ರಯದಲ್ಲಿ ಮಂಗಳವಾರ ಜರಗಿದ 15 ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ದೇಶಾದ್ಯಂತ ಪ್ರಖ್ಯಾತ ಕಂಪೆನಿಯವರು ಬೇವಂಡಿ ಪ್ರದೇಶದಲ್ಲಿ ಮನೆಗಳಲ್ಲಿಯೇ ಜವಳಿ ಕಾರ್ಖಾನೆಗಳನ್ನು ತೆರೆದು ವ್ಯವಹಾರ ಆರಂಭಿಸಿದ್ದಾರೆ. ಕೈಗಾರಿಕೆಗಳು ಅಭಿವೃದ್ಧಿಯಾಗುವ ಕುರಿತು ಸರಕಾರಗಳು ಕಾಳಜಿ ವಹಿಸದೇ ಇದ್ದಲ್ಲಿ ಕಾರ್ಮಿಕರು ಬದುಕಲು ಅವಕಾಶವಿಲ್ಲ. ಈ ನಿಟ್ಟಿನಲ್ಲಿ ಸೆ.2 ರಂದು ನಡೆಯಲಿರುವ ಹೋರಾಟ ರಾಜ್ಯಕ್ಕೇ ಮಾದರಿಯಾಗಬೇಕು. 10,500 ರೂ…
ಉಳ್ಳಾಲ: ರೈಲ್ವೇ ಹಳಿಯಲ್ಲಿ ಯುವಕನೋರ್ವ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಭಾನುವಾರ ಮಧ್ಯಾಹ್ನ ವೇಳೆ ಪತ್ತೆಯಾಗಿದ್ದು, ಸ್ಥಳೀಯರು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದರೂ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇದೊಂದು ಕೊಲೆ ಎಂದು ಮೃತನ ಸಹೋದರಿ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಕೊಲ್ಯ ಕನೀರುತೋಟ ನಿವಾಸಿ ನಿತೇಶ್ ಶೆಟ್ಟಿ (27) ನಿಗೂಢವಾಗಿ ಸಾವನ್ನಿಪ್ಪಿದವರು. ಭಾನುವಾರ ಮಧ್ಯಾಹ್ನ ವೇಳೆ ನಿತೇಶ್ ತೊಕ್ಕೊಟ್ಟು ಬಾರೊಂದರ ಹಿಂದುಗಡೆಯ ರೈಲ್ವೇ ಹಳಿಯಲ್ಲಿ ಅರೆ ಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಥಳೀಯರು ಕಂಡು 108 ಮೂಲಕ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದ ನಿತೇಶ್ ಸಂಜೆ ವೇಳೆ ಕೊನೆಯುಸಿರೆಳೆದಿದ್ದರು. ಅಲ್ಲಲ್ಲಿ ಗಾಯದ ಗುರುತುಗಳು: ಆಸ್ಪತ್ರೆಯಲ್ಲಿ ನಿತೇಶ್ ಮಾತನಾಡದೇ ಕೈಕಾಲು ಅಲ್ಲಾಡಿಸುತ್ತಿದ್ದರು. ಬಲಗೈ ಮುರಿತಕ್ಕೊಳಗಾದ ಸ್ಥಿತಿಯಲ್ಲಿದ್ದರೆ ಕೆಳ ತುಟಿ, ಬಲ ಪಕ್ಕೆಯ ಬದಿಯಲ್ಲಿ, ಕಾಲುಗಳಲ್ಲಿ ಗಂಭೀರ ಗಾಯಗಳು ಹಾಗೂ ದೇಹದ ಅಲ್ಲಲ್ಲಿ ತರಚಿದ ಗಾಯಗಳಿತ್ತು. ಮೂವರ ಹೆಸರು ಹೇಳಿದ್ದ: ಅರೆ ಪ್ರಜ್ಞೆ ಸ್ಥಿತಿಯಲ್ಲಿದ್ದ ನಿತೇಶನನ್ನು ಆಸ್ಪತ್ರೆಗೆ ದಾಖಲಿಸುವ ಸಂದರ್ಭ ಅಲ್ಲಿ…

