Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಲ್ಯ: ದ.ಕ.ಜಿಲ್ಲೆಗೆ ಮಾರಕವಾಗಿರುವ ಎತ್ತಿನಹೊಳೆ ಯೋಜನೆಯನ್ನು ಕೈ ಬಿಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಕೊಲ್ಯ ಸೋಮೇಶ್ವರ ಬಿಲ್ಲವ ಸಂಘ ಸಭೆಯಲ್ಲಿ ನಿರ್ಣಯಿಸಿದ್ದು, ಜಿಲ್ಲೆಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ವಿರುದ್ಧದ ಹೋರಾಟದಲ್ಲಿ ಸರ್ವ ಸದಸ್ಯರು ಭಾಗವಹಿಸುವಂತೆ ನಿರ್ಣಯ ಕೈಗೊಳ್ಳಲಾಯಿತು. ತುಳುನಾಡಿನ ಪ್ರಕೃತಿದತ್ತವಾದ ನೇತ್ರಾವತಿ ನದಿಯನ್ನು ನುಂಗಿ, ಜಲಮೂಲವನ್ನು ನಾಶಮಾಡಿ ಮುಂದಿನ ದಿನಗಳಲ್ಲಿ ತೀವ್ರ ಜಲಕ್ಷಾಮ ತಂದೊಡ್ಡುವ ಗೊತ್ತು ಗುರಿಯಿಲ್ಲದ ಎತ್ತಿನ ಹೊಳೆ ಯೋಜನೆಯನ್ನು ಕೈ ಬಿಡಬೇಕು . ಜಿಲ್ಲೆಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಸರ್ವಸದಸ್ಯರು ಹೋರಾಟದಲ್ಲಿ ಭಾಗವಹಿಸಬೇಕು , ಈ ಅವೈಜ್ಞಾನಿಕ ಯೋಜನೆಯನ್ನು ತಕ್ಷಣ ನಿಲ್ಲಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಹಾಗೂ ಮಂಗಳೂರು ದಸರಾ ಕಾರ್ಯಕ್ರಮದಲ್ಲಿ ಎಲ್ಲಾ ಸದಸ್ಯರು ಸ್ವಯಂ ಸೇವಕರಾಗಿ ಭಾಗವಹಿಸಲು ನಿರ್ಧರಿಸಲಾಯಿತು. ಟೈಲರ್ಸ್ ಅಸೋಸಿಯೇಷನ್ ಬೆಂಬಲ: ನೇತ್ರಾವತಿ ಉಳಿಸಿ ಹೋರಾಟಕ್ಕೆ ಉಳ್ಳಾಲ ವಲಯದ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಂಬಲ ವ್ಯಕ್ತಪಡಿಸಿದೆ ಎಂದು ಅಧ್ಯಕ್ಷ ಬಿ.ನಾರಾಯಣ ಕುಂಪಲ ಹೇಳಿದ್ದಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ :  ದೇರಳಕಟ್ಟೆ ಜಂಕ್ಷನ್ ಹಾಗೂ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮುಂಭಾಗದಲ್ಲಿ ಜನದಟ್ಟಣೆ ಇದ್ದು ಈ ರಸ್ತೆಯ ಮೂಲಕ ನಿತ್ಯವೂ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು ಆ ಹಿನ್ನೆಲೆಯಲ್ಲಿ ಸರಕಾರ ಬಸ್ ನಿಲುಗಡೆಗೆ ದೇರಳಕಟ್ಟೆ ಜಂಕ್ಷನ್ ಹಾಗೂ ಕೆ.ಎಸ್.ಹೆಗ್ಡೆ ಆಸ್ಪತ್ರೆ ಮುಂಭಾಗದಲ್ಲಿ ಸುಸಜ್ಜಿತವಾದ ವ್ಯವಸ್ಥೆ ಮಾಡಿದ್ದರೂ ಬಸ್ ಚಾಲಕರು ನಿರಂತರವಾಗಿ ಅವೈಜ್ಞಾನಿಕವಾಗಿ ಬಸ್ ನಿಲುಗಡೆಗೊಳಿಸುವುದರಿಂದ ಅಪಘಾತಗಳು ಹೆಚ್ಚುತ್ತಿದ್ದು ಅಂತಹ ಕ್ರಮವನ್ನು ತುಳುನಾಡ ರಕ್ಷಣಾ ವೇದಿಕೆ ಖಂಡಿಸಿದ್ದು, ಸರಕಾರ ವ್ಯಸವ್ಥೆಗೊಳಿಸಿದ ಬಸ್ ನಿಲುಗಡೆಯ ಸ್ಥಳದಲ್ಲಿಯೇ ನಿಲುಗಡೆಗೊಳಿಸಬೇಕು ಎಂದು ಒತ್ತಾಯಿಸಿದ್ದು, ಆ ಬಗ್ಗೆ ಪೆÇಲೀಸ್ ಇಲಾಖೆ ಶೀಘ್ರದಲ್ಲಿ ಸೂಕ್ತ ಕ್ರಮಕೈಗೊಳ್ಳದಿದ್ದರೆ ಉಗ್ರವಾದ ಪ್ರತಿಭಟನೆ ನಡೆಸಲಾಗುವುದು ಎಂದು ತುಳುನಾಡು ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಡಾ. ಹಾಜಿ ಕೆ. ಎ. ಮುನೀರ್ ಬಾವಾ ತಿಳಿಸಿದ್ದಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಸೋಮೇಶ್ವರ: ಕಾರಿನಲ್ಲಿ ರೊಮ್ಯಾನ್ಸ್ ನಡೆಸುತ್ತಿದ್ದ ಜೋಡಿಯನ್ನು ಉಳ್ಳಾಲ ಪೊಲೀಸರು ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಿದ ಪ್ರಸಂಗ ಸೋಮೇಶ್ವರ ಸಮುದ್ರ ತೀರದ ನಿರ್ಜನ ಪ್ರದೇಶದಲ್ಲಿ ಇಂದು ಮಧ್ಯಾಹ್ನ ವೇಳೆ ನಡೆದಿದೆ. ಸಾಂಧರ್ಬಿಕ ಚಿತ್ರ ಬೆಳಿಗ್ಗೆ 10ಗಂಟೆಗೆ ಸುಮಾರಿಗೆ ಬಂದಿದ್ದ ಕಾರು ಬಹಳ ಹೊತ್ತಾದರೂ ಕದಲದೇ ಇರುವುದನ್ನು ಗಮನಿಸಿದ ಸ್ಥಳಿಯರೋರ್ವರಿಗೆ ಕಾರಿನಲ್ಲಿ ಜೋಡಿಯೊಂದು ಪ್ರಣಯದಾಟದಲ್ಲಿ ಇರುವುದು ಕಂಡುಬಂದಿದೆ. ಮುಂಜಾಗ್ರತಾ ಕ್ರಮವಾಗಿ ಮುಂದೆ ಸ್ಥಳದಲ್ಲಿ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿ ಸ್ಥಳೀಯರೊಬ್ಬರು ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೋಡಿಯನ್ನು ವಿಚಾರಣೆಗೆ ತೆಗೆದುಕೊಂಡು ಇಬ್ಬರೂ ನೆರೆಹೊರೆಯವರಾಗಿದ್ದು, ಪ್ರೇಮಿಗಳೆಂದು ತಿಳಿಸಿದ್ದಾರೆ. ಬಳಿಕ ಇಬ್ಬರಿಗೂ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆನ್ನಲಾಗಿದೆ. ಸ್ಥಳೀಯರ ಪ್ರಕಾರ ಯುವಕ ಕ್ರಿಶ್ಚಿಯಾನ್ ಸಮುದಾಯಕ್ಕೆ ಸೇರಿದವನಾಗಿದ್ದು, ಯುವತಿ ಉತ್ತರಕರ್ನಾಟಕ ಮೂಲದವರೆಂದು ತಿಳಿದುಬಂದಿದೆ. ಸೋಮೇಶ್ವರ ಕಡಲ ತೀರದಲ್ಲಿ ಇಂತಹ ಅನೈತಿಕ ವ್ಯವಹಾರಗಳು ಸರ್ವೇಸಾಮಾನ್ಯವಾಗಿದ್ದು, ಧಾರ್ಮಿಕ ಕ್ಷೇತ್ರ ಹತ್ತಿರದಲ್ಲೇ ಇರುವ ಕಾರಣ ಇಲ್ಲಿಗೆ ದಿನದಲ್ಲಿ ನೂರಾರು ಭಕ್ತಾಧಿಗಳು ಬರುತ್ತಿರುತ್ತಾರೆ ಆದ್ದರಿಂದ ಈ ರೀತಿಯ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಬೆಳ್ತಂಗಡಿ :ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಬೆಳ್ತಂಗಡಿ ತಾಲೂಕಿನಲ್ಲಿ ಬಂದ್ ಗೆ ಕರೆ ನೀಡಲಾಗಿತ್ತು. ಹಲವಾರು ಸಂಘಟನೆಗಳ ನೇತೃತ್ವದಲ್ಲಿ ಸ್ವಯಂಪ್ರೇರಿತವಾಗಿ ಬಂದ್ ಆಚರಿಸುವಂತೆ ನೀಡಿದ್ದ ಕರೆಗೆ ವ್ಯಾಪಾಕ ಬೆಂಬಲ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಕೊಕ್ಕಡ, ಗೇರುಕಟ್ಟೆ ಮೊದಲಾದ ಕಡೆಗಳಲ್ಲಿ ರಸ್ತೆ ತಡೆ ಮಾಡಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಶಾಂತಿಯುತವಾಗಿ ಬಂದ್ ಆಚರಿಸಲಾಗುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಕೆಎಸ್‍ಆರ್‍ಟಿಸಿಯವರು ಬಸ್ ಸ್ಥಗಿತಗೊಳಿಸಿರುವ ಹಿನ್ನಲೆಯಲ್ಲಿ ಧರ್ಮಸ್ಥಳದಿಂದ ತೆರಳುವ ಯಾತ್ರಾರ್ಥಿಗಳಿಗೆ ತೀವ್ರ ಅಡಚಣೆ ಉಂಟಾಗಿದೆ. ಧರ್ಮಸ್ಥಳಕ್ಕೆ ಬರುವ ವಾಹನಗಳಿಗೆ ತಡೆ ಒಡ್ಡಲಾಗಿದ್ದು ಯಾತ್ರಾರ್ಥಿಗಳು ಪರದಾಡುವಂತಾಗಿದೆ. ಬಂದ್ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು ಪರೀಕ್ಷೆಯನ್ನು ಮುಂದೂಡಲಾಗಿದೆ. ವಕೀಲರ ಸಂಘ ಬಂದ್‍ಗೆ ಬೆಂಬಲ ನೀಡಿರೋ ಹಿನ್ನಲೆಯಲ್ಲಿ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಲಿದ್ದಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಉಳ್ಳಾಲ ಕಡೆಗೆ ವಿಹಾರಕ್ಕೆ ತೆರಳಿದ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಬೆನ್ನಟ್ಟಿದ ಮೊಗವೀರಪಟ್ನ ನಿವಾಸಿ ಐವರು ನೈತಿಕ ಪೊಲೀಸರ ತಂಡ ಕೊಣಾಜೆಯ ವಿ.ವಿ ಕ್ಯಾಂಪಸ್ಸಿನಲ್ಲಿ ವಿದ್ಯಾರ್ಥಿಯೋರ್ವನಿಗೆ ಥಳಿಸುವ ಸಂದರ್ಭ ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ನಿನ್ನೆ ಸಂಜೆ ವೇಳೆ ಸಂಭವಿಸಿದೆ. ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ವಿಭಾಗವೊಂದರ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಬಳ್ಳಾರಿ ಮೂಲದ ರಮೇಶ, ಪುತ್ತೂರು ನಿವಾಸಿ ಶಫೀವುಲ್ಲಾ ಸೇರಿದಂತೆ ಇಬ್ಬರು ಹಿಂದು ಹಾಗೂ ಒಬ್ಬಳು ಮುಸ್ಲಿಂ ವಿದ್ಯಾರ್ಥಿನಿಯರು ಜತೆಯಾಗಿ ಉಳ್ಳಾಲ ಕಡೆಗೆ ವಿಹಾರಕ್ಕೆಂದು ತೆರಳಿದ್ದರು. ಸೋಮೇಶ್ವರ ದೇವಸ್ಥಾನ, ಉಳ್ಳಾಲ ದರ್ಗಾ ಮತ್ತು ಮೊಗವೀರಪಟ್ನ ಬೀಚಿಗೆ ವಿದ್ಯಾರ್ಥಿಗಳು ವಿಹಾರಕ್ಕೆ ತೆರಳಿದ್ದರು. ಅಲ್ಲಿ ಎಲ್ಲರೂ ಜತೆಯಾಗಿ ನೀರಿನಾಟ ಆಡುತ್ತಾ ಸೆಲ್ಫೀ ಕ್ಲಿಕ್ಕಿಸುವಲ್ಲಿ ನಿರತರಾಗಿದ್ದರು. ಇದು ಸ್ಥಳೀಯ ಯುವಕರ ಗಮನಕ್ಕೆ ಬಂದಿದ್ದು, ಅಲ್ಲದೆ ತಂಡದಲ್ಲಿ ಮುಸ್ಲಿಂ ಯುವಕರು ಇರುವ ಬಗ್ಗೆ ಗೊತ್ತಾಗಿದೆ. ಮತ್ತೆ ವಿದ್ಯಾರ್ಥಿಗಳನ್ನು ಫಾಲೋ ಮಾಡಲು ತಂಡ ಶುರುಹಚ್ಚಿತ್ತು. ಇದರಿಂದ ಗಾಬರಿಗೊಂಡಿದ್ದ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುತ್ತಾರು : ಕಿನ್ಯಾ ಕೇಶವ ಶಿಶು ಮಂದಿರದ ವತಿಯಿಂದ ನವ ದಂಪತಿಗಳ ಸಮಾವೇಶವು ಅ. 11ರಂದು ಭಾನುವಾರ ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಕುತ್ತಾರು ಬಾಲಸಂರಕ್ಷಣ ಕೇಂದ್ರ ಜರಗಲಿರುವುದು. ಒಂದು ವರ್ಷದಿಂದೀಚೆ ವಿವಾಹಿತರಾದ ದಂಪತಿಗಳು ಈ ಸಮಾವೇಶದಲ್ಲಿ ಭಾಗವಹಿಸಲು ಅವಕಾಶವಿದೆ. ಸೌಭಾಗ್ಯಶಾಲಿ ಕುಟುಂಬದ ಪರಿಕಲ್ಪಣೆಯೆ ಈ ಕಾರ್ಯಕ್ರಮದ ಉದ್ದೇಶ. ಭಾರತೀಯ ಕುಟುಂಬ ಜೀವನ ಪದ್ದತಿಯನ್ನು ಪ್ರತೀ ಮನೆಯಲ್ಲಿಯೂ ಆಚರಿಸುವಂತಾಗಬೇಕು. ಕುಟುಂಬ ಸಮಾಜದ ಕೇಂದ್ರ ಬಿಂದು ಹಾಗೂ ದೇಶದ ಕೇಂದ್ರಬಿಂದುವೂ ಆಗಿದೆ. ದೇಶದ ಮೇಲೆ ಪರಕೀಯರಿಂದ ನಾನಾ ತೆರೆನಾದ ಆಕ್ರಮಣಗಳ ಹೊರತು ನಮ್ಮ ಧರ್ಮ ಸಂಸ್ಕøತಿಯನ್ನು ಉಳಿಸಿ ಬೆಳೆಸಿರುವುದು ಭಾರತೀಯ ಕುಟುಂಬ ಪದ್ಧತಿ. ಆದರೆ ಇತ್ತೀಚಿನ ದಶಕಗಳಲ್ಲಿ ಪಾಶ್ಚಿಮಾತ್ಯ ಅನುಕರಣೆ ಹೆಚ್ಚಾಗುತ್ತಿದ್ದು ನಮ್ಮ ಭಾಷೆ, ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಜವಬ್ದಾರಿ ಎಲ್ಲರದ್ದಾಗಿದೆ. ಕುಟುಂಬದ ಮೂಲಾಧಾರವಾಗಿರುವ ಗ್ರಹಸ್ಥಾಶ್ರಮ ಧರ್ಮವನ್ನು ನೂತನ ದಂಪತಿಗಳಿಗೆ ತಿಳಿಸಿಕೊಡುವ ಕಾರ್ಯಕ್ರಮವೇ ನವದಂಪತಿ ಸಮಾವೇಶ. ದಂಪತಿಗಳಿಗೆ ಆದರದ ಸ್ವಾಗತವನ್ನು ಶಿಶು ಮಂದಿರ ಪ್ರಕಟಣೆ ತಿಳಿಸಿರುತ್ತಾರೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಎತ್ತಿನ ಹೊಳೆ ಯೋಜನೆಯನ್ನು ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿ ದ.ಕ. ಜಿಲ್ಲಾ ಸಂಸದ ನಳಿನ್ ಕುಮಾರ್ ರವರ ನೇತೃತ್ವದಲ್ಲಿ ಅ. 10ರಿಂದ ಅ. 13ರವರೆಗೆ `ನೇತ್ರಾವತಿ ರಕ್ಷಿಸಿ ದ.ಕ. ಉಳಿಸಿ’ ಘೋಷಣೆಯೊಂದಿಗೆ `ನಮ್ಮ ನಡೆ ಎತ್ತಿನ ಹೊಳೆಗೆ’ ಎಂಬ ಬೃಹತ್ ಕಾಲ್ನಡಿಗೆ ಜಾಥಾದಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರದಿಂದ ಸುಮಾರು 2500 ಬಾಜಪಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಗಳೂರು ಕ್ಷೇತ್ರಾಧ್ಯಕ್ಷ ಚಂದ್ರಶೇಖರ್ ಉಚ್ಚಿಲ್ ತಿಳಿಸಿದರು. ತೊಕ್ಕೊಟ್ಟು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎತ್ತಿನ ಹೊಳೆ ಯೋಜನೆಯನ್ನು ಕಾರ್ಯಗತಗೊಳಿಸುವ ಮುಖಾಂತರ ದಕ್ಷಿಣ ಕನ್ನಡ ಜಿಲ್ಲೆಯ ಜನರ ಭಾವನೆಗಳನ್ನು ರಾಜ್ಯ ಸರ್ಕಾರ ಕಡೆಗಣಿಸಿದೆ. ಎತ್ತಿನ ಹೊಳೆ ಕಾಮಗಾರಿಗೆ ರಾಷ್ಟ್ರೀಯ ಹಸಿರು ಪೀಠದ ತಡೆಯಾಜ್ಞÉ ಇದ್ದರೂ 13500 ಕೋಟಿ ರೂ. ಈ ಯೋಜನೆಯನ್ನು ಮುಂದುವರಿಸುತ್ತಿರುವುದು ರಾಜ್ಯ ಸರ್ಕಾರ ಧೋರಣೆ ಸಂಶಯಕ್ಕೆ ಎಡೆಮಾಡಿದ್ದು, ಯೋಜನೆಯಿಂದ ದ.ಕ. ಜಿಲ್ಲೆಯ ಕೃಷಿ, ಮೀನುಗಾರಿಕೆ ಹಾಗೂ ಕುಡಿಯುವ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ : ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಅಕ್ರಮ ಮರಳು ಸಾಗಾಟಕ್ಕೆ ಕಳೆದ ನಾಲ್ಕು ದಿನಗಳಿಂದ ತಡೆ ಬಿದ್ದಿದ್ದು, ಪೊಲೀಸ್ ಇಲಾಖೆ ಮತ್ತು ಕರ್ನಾಟಕ ರಾಜ್ಯ ಇಂಡಸ್ಟ್ರಿಯಲ್ ಪೆÇಲೀಸ್ ಪಡೆ ಸಿಬಂದಿಗಳು ಅಕ್ರಮ ಮರಳುಗಾರಿಕೆಯ ಲಾರಿಗಳನ್ನು ವಶಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಕಳೆದೆರಡು ದಿನಗಳಿಂದ ಸುಮಾರು 40ಕ್ಕೂ ಹೆಚ್ಚು ಲಾರಿಗಳನ್ನುಪೊಲೀಸರು  ವಶಕ್ಕೆ ತೆಗೆದುಕೊಂಡಿದ್ದಾರೆ. ನೇತ್ರಾವತಿ ತಟದ ಪಾವೂರು ಇನೋಳಿಯಿಂದ ಹೊರ ರಾಜ್ಯಗಳಿಗೆ ಅಕ್ರಮ ಮರಳು ಸಾಗಾಟಕ್ಕೆ ಸಂಬಂ„ಸಿದಂತೆ ಡಿವೈಎಫ್‍ಐ ಸೇರಿದಂತೆ ಸ್ಥಳೀಯರು ಕಲೆದ ಹಲವು ತಿಂಗಳಿಂದ ಹೋರಾಟ ನಡೆಸಿದ್ದರು. ಆದರೆ ಅಕ್ರಮ ಮರಳು ಸಾಗಾಟ ಯಾವುದೇ ಅಡೆತಡೆ ಇಲ್ಲದೆ ಮುಂದುವರೆದಿತ್ತು. ಈ ನಿಟ್ಟಿನಲ್ಲಿ ಹೋರಾಟ ಚುರುಕುಗೊಳಿಸುವ ಮಾಹಿತಿಯನ್ನು ಡಿವೈಎಫ್‍ಐ ಸಂಘಟನೆ ಪತ್ರಿಕಾಗೋಷ್ಠಿಯನ್ನು ಕರೆದಿತ್ತು. ಮುಖ್ಯವಾಗಿ ಕೊಣಾಜೆ ಪೆÇಲೀಸ್ ಅ„ಕಾರಿಗಳು ಮರಳು ಮಾಫಿಯದೊಂದಿಗೆ ಸೇರಿಕೊಂಡಿದ್ದರು ಎನ್ನುವ ಆರೋಪ ಮಾಡಿತ್ತು.ಇದೀಗ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದರಿಂದ ಕಳೆದ ನಾಲ್ಕು ದಿನಗಳಿಂದ ಮರಳುಗಾರಿಕೆಗೆ ತಾತ್ಕಾಲಿಕ ತಡೆ ಬಿದ್ದಂತಾಗಿದೆ. ಇನ್‍ಸ್ಪೆಕ್ಟರ್ ಹಠಾವೊ ಚಳವಳಿ : ಡಿವೈಎಫ್‍ಐ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು : ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮ ಪಂಚಾಯತ್‍ನ ನವಸಾಕ್ಷರರು ಉತ್ಪಾದಿಸಿದ ದಿನಬಳಕೆ ವಸ್ತುಗಳು ಹಾಗೂ ಬೆಳೆಸಿದ ಸಾವಯವ ತರಕಾರಿಗಳನ್ನು ನ್ಯಾಯಬೆಲೆಯಲ್ಲಿ ಮಾರಾಟ ಮಾಡುವ ಕೇಂದ್ರ ಅಕ್ಷರ ಅಂಗಡಿಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ ಉದ್ಘಾಟಿಸಿದರು. ದ.ಕ.ಜಿಲ್ಲಾ ಪಂಚಾಯತ್, ಜಿಲ್ಲಾ ಸಾಕ್ಷರತಾ ಸಮಿತಿ ಹಾಗೂ ಜನಶಿಕ್ಷಣ ಟ್ರಸ್ಟ್‍ನ ಸಹಭಾಗಿತ್ವದಲ್ಲಿ ನಡೆದ ನವಸಾಕ್ಷರರ ವೃತ್ತಿ ತರಬೇತಿಯಲ್ಲಿ ಭಾಗವಹಿಸಿದ ನವಸಾಕ್ಷರರು ತಯಾರಿಸಿದ ದಿನಬಳಕೆ ವಸ್ತುಗಳಾದ ಹರ್ಬಲ್ ಫಿನಾಯಿಲ್, ಸಾಬೂನ್, ಸಾಬೂನು ಪೌಡರ್, ಸಾಬೂನು ದ್ರಾವಣ ಮತ್ತಿತರ ಗೃಹೋಪಯೊಗಿ ವಸ್ತುಗಳು ಹಾಗೂ ಪ್ರತಿ ಮನೆಗಳಲ್ಲಿ ಬೆಳೆಸಲಾಗುವ ಸಾವಯವ ತರಕಾರಿಗಳನ್ನು ಮಾರಾಟ ಮಾಡುವ ಕೇಂದ್ರ ಸುಸಜ್ಜಿತ ಎರಡು ಕೊಠಡಿಗಳ ಕಟ್ಟಡದಲ್ಲಿ ಮಾರಾಟ ನಡೆಯಲಿದ್ದು ಅದೇ ಸಂದರ್ಭ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತ ಮನೆ, ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ಮಾಡಲಾಯಿತು. ಹಸಿಕಸದ ನಿರ್ವಹಣೆಗೆ ಪೈಪ್ ಕಾಂಪೆÇೀಸ್ಟ್ ತಯಾರಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಗೋಡೆಯ ಮೇಲಿನ ಹಣತೆಯ ಬೆಳಕಿನಲ್ಲಿ ಪ್ರತಿಭೆಗಳು ಹುಟ್ಟುವಂತೆ ಕಾಡಿನೊಳಗಿನ ಕತ್ತಲಿನಲ್ಲಿಯೂ ವಿಚಾರಗಳು ಹುಟ್ಟುತ್ತವೆ. ಪ್ರಶ್ನೆ ಅನುಮಾನಗಳು ಹುಟ್ಟುತ್ತವೆ. ಮಾನವ ಬೆಳಕಿನಲ್ಲಿರುವುದಕ್ಕಿಂತ ಹೆಚ್ಚಿನ ಜ್ಞಾನವನ್ನು ಕತ್ತಲೆಯಲ್ಲಿ ಮತ್ತು ಒಂಟಿಯಾಗಿರುವಾಗ ಪಡೆದುಕೊಳ್ಳುತ್ತಾನೆ. ಆದರೆ ನಮ್ಮ ತಲೆಯಲ್ಲಿ ಎಲ್ಲವೂ ನನಗೆ ತಿಳಿದಿದೆ ಎಂಬ ಅಹಂ ಭಾವನೆ ನಿಂತು ಬಿಟ್ಟರೆ ನಮ್ಮಿಂದ ಯಾವುದೇ ರೀತಿಯ ಕಲಿಕಾ ಆಸಕ್ತಿ ಮೂಡಲು ಸಾಧ್ಯವಿಲ್ಲ ಎಂದು ಸಾಹಿತಿ,ಅಂಕಣಕಾರ ನರೇಂದ್ರ ರೈ ದೇರ್ಲ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯದ ಎಸ್.ವಿ.ಪಿ.ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನಡೆದ ತೇಜಸ್ವಿ ನೆನಪು ಮತ್ತು ಬಿತ್ತಿ ಪತ್ರಿಕೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬ್ರಿಟಿಷ್ ಕಂಪೆನಿಗಳ ಮೂಲಕ ಪ್ರಕಟವಾಗುತ್ತಿದ್ದ ಬಂಗಾಳ ಗೆಜೆಟ್‍ನಂತಹ ಪತ್ರಿಕೆಗಳು ಮೊದಲು ಗೋಡೆ ಬರಹದ ಮೂಲಕ ಬಿತ್ತರವಾಗುತ್ತಿತ್ತು. ನಂತರ ಅದು ಸಮಾಜವನ್ನು ಮುಟ್ಟಿದ್ದು. ಪತ್ರಿಕೆ ಎಲ್ಲಿ ಪ್ರಕಟವಾಗುತ್ತದೆ ಎಂಬುದು ಮುಖ್ಯವಲ್ಲ ಅದರಲ್ಲಿ ಯಾವ ರೀತಿಯಾದ ಮಾಹಿತಿ ಲಭ್ಯವಿದೆ ಎಂಬುದು ಮುಖ್ಯವಾಗುತ್ತದೆ ಎಂದು ಹೇಳಿ ಬಿತ್ತಿ ಪತ್ರಿಕೆಗೆ ಶುಭ ಹಾರೈಸಿದರು. ಪೂರ್ಣಚಂದ್ರ…

Read More