ಬೆಂಗಳೂರು: ಕಳಸ ಬಂಡೂರಿ ಹಾಗೂ ಮಹದಾಯಿ ಯೋಜನೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗೆ ಶನಿವಾರ ಕರೆ ನೀಡಿದ ಬಂದ್ ಗೆ ರಾಜಧಾನಿ ಬೆಂಗಳೂರು, ಬಾಗಲಕೋಟೆ, ಹುಬ್ಬಳ್ಳಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳು ಭಾರೀ ಬೆಂಬಲ ವ್ಯಕ್ತಪಡಿಸಿದೆ. ಆದರೆ ದಕ್ಷಿಣ ಕನ್ನಡ ಹಾಗೂ ಉಡುಪಿ, ಭಟ್ಕಳ, ರಾಯಚೂರು, ಬೀದರ್, ಕಾರವಾರ ಸೇರಿದಂತೆ ಹಲವೆಡೆ ಬಂದ್ನ ಬಿಸಿ ತಟ್ಟಿಲ್ಲ, ಶನಿವಾರದಂದು ರಾಜ್ಯದಲ್ಲಿ ಅನೇಕ ಸಂಘಟನೆಗಳು ಕರೆ ನೀಡಿದ್ದ ಬಂದ್ ಗೆ ಬೆಂಗಳೂರಿನ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಮುಂಜಾನೆಯಿಂದ ಬಹುತೇಕ ಅಂಗಡಿ, ಮುಂಗಟ್ಟುಗಳು ಮುಚ್ಚಿ ಬಂದ್ ಗೆ ಬೆಂಬಲ ನೀಡಿದೆ. ಮೆಟ್ರೋ, ಆಟೋ, ಟ್ಯಾಕ್ಸಿ, ವಿರಳವಾಗಿ ರಸ್ತೆಗಿಳಿದಿದೆ. ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಸುಗಳ ಸಂಚಾರ ಸ್ಥಗಿತಗೊಂಡಿರುವ ಕಾರಣ ಅನೇಕ ಜನರು ಬಸ್ಸಿಲ್ಲದೇ ಪರಡಾಡುವಂತಹ ಸ್ಥಿತಿ ಎದುರಾಗಿದೆ. ಇನ್ನು ಕಳಸ ಬಂಡೂರಿ ಯೋಜನೆ ಅನುಷ್ಠಾನಕ್ಕೆ ತರುವಂತೆ ಆಗ್ರಹಿಸಿ ವಿವಿಧ ರೈತಪರ ಸಂಘಟನೆಗಳು ನಗರದ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಕನ್ನಡ ಪರ ಸಂಘಟನೆಗಳು…
Author: UllalaVani
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಅಪ್ರಿಯವೆನಿಸುವ ಸುದ್ದಿ ಸಾರಿಗೆ ಇಲಾಖೆಯಿಂದ ಬಂದಿದೆ. ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿದ್ದು, ಅಧಿಕೃತ ಘೋಷಣೆಯಷ್ಟೆ ಬಾಕಿಯಿದೆ. ಅಧಿಕೃತವಾಗಿ ಕಡ್ಡಾಯ ಆದೇಶ ಜಾರಿಗೊಳಿಸುವ ಮುನ್ನ ಸಾರ್ವಜನಿಕರಿಂದ ಸಲಹೆ, ಸೂಚನೆಗಳನ್ನು ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ನವೆಂಬರ್ ವೇಳೆಗೆ ಮೊದಲ ನಗರವಾಗಿ ಬೆಂಗಳೂರಿನಲ್ಲಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯವಾಗಲಿದೆ. ನಂತರ ಉಳಿದ ಎಲ್ಲ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಈ ಆದೇಶ ಜಾರಿಗೆ ಬರಲಿದೆ. ಈ ಬಗ್ಗೆ ಸಾರಿಗೆ ಇಲಾಖೆ ಆಯುಕ್ತ ರಾಮೇಗೌಡ, ಅಪಘಾತ ಪ್ರಕರಣಗಳಲ್ಲಿ ಹಿಂಬದಿ ಸವಾರರೇ ಹೆಚ್ಚಾಗಿ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಹಿಂಬದಿ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ರಾಜ್ಯದಲ್ಲಿ 1.5 ಕೋಟಿಗೂ ಅಧಿಕ ದ್ವಿಚಕ್ರ ವಾಹನಗಳಿವೆ. ಬೆಂಗಳೂರು ಒಂದರಲ್ಲೇ 35 ಲಕ್ಷ ದ್ವಿಚಕ್ರ ವಾಹನಗಳಿವೆ. ಈ ಹಿನ್ನೆಲೆಯಲ್ಲಿ ಮೊದಲಿಗೆ ಬೆಂಗಳೂರಿನಲ್ಲಿ ಜಾರಿಗೆ ತಂದು ನಂತರ ಉಳಿದ ಎಲ್ಲ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಕಡ್ಡಾಯಗೊಳಿಸುವ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಮುಡಿಪು: ಪ್ರತಿಯೊಬ್ಬರು ಅಕ್ಷರ ಜ್ಞಾನಿಗಳಾದಾಗ ಮಾತ್ರ ಶೋಷಣೆಮುಕ್ತ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ. ಉದಾತ್ತ ಮಾನವತಾವಾದಿ ಅಂಬೇಡ್ಕರ್ ಅವರು ದೇಶಕ್ಕೆ ಭದ್ರವಾದ ಸಂವಿಧಾನವನ್ನು ಕಟ್ಟಿಕೊಡುವುದರೊಂದಿಗೆ ಸಮಾಜದಲ್ಲಿ ಏಕತೆಯೊಂದಿಗೆ ಶೋಷಣೆಮುಕ್ತ ಸಮಾಜವನ್ನು ಕಟ್ಟಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಅಂಬೇಡ್ಕರ್ ಅವರ 125ನೇ ವರ್ಷಾಚರಣೆ ಕಾರ್ಯಕ್ರಮವು ಜನರಲ್ಲಿ ಜಾಗೃತಿಯ ಭಾವದೊಂದಿಗೆ ಸಮಾನತೆಯ ಬಲಿಷ್ಠ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಅಭಿಪ್ರಾಯ ಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾನಿಲಯ ಅಂಬೇಡ್ಕರ್ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಗುರುವಾರ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಅವರ 125 ನೇ ಅಂಬೇಡ್ಕರ್ ಜಯಂತಿ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ ಸಿಕ್ಕಿತ್ತು ಆದರೆ ಸಾಮಾಜಿಕ ಸ್ವಾತಂತ್ರ ಎಲ್ಲರಿಗೂ ಸಿಕ್ಕಿರಲಿಲ್ಲ. ಸಾಮಾಜಿಕ ಬದಲಾವಣೆ ತರುವಂತಹದ್ದು ಕೂಡಾ ಅಷ್ಟು ಸುಲಭದ ಕೆಲಸವಲ್ಲ. ಅಂದಿನ ಕಾಲದಲ್ಲಿ ದೇವರಾಜ ಅರಸು ಅವರು ಹಿಂದುಳಿದ ಪರ ಜನರ ಕಾಳಜಿಯಿಂದ…
ಸೌದಿ ಅರೇಬಿಯಾ: ಹಜ್ ಕಾಲ್ತುಳಿತದಲ್ಲಿ ಮೃತ ಯಾತ್ರಾರ್ಥಿಗಳ ಹೆಣಗಳ ರಾಶಿಯ ನಡುವೆ ಹಲವರು ಜೀವಂತವಿದ್ದರೆ, ರಕ್ಷಣಾ ಸಿಬ್ಬಂದಿ ಶ್ರಮ ಮೀರಿ ಕಾರ್ಯಾಚರಣೆ ಮುಂದುವರಿಸಿ ಅವರನ್ನು ರಕ್ಷಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಒಟ್ಟು 4000 ಸಿಬ್ಬಂದಿ 220 ಆಂಬ್ಯುಲೆನ್ಸ್ ಗಳ ಮೂಲಕ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಸಿಎನ್ ಎನ್ ವರದಿ ಮಾಡಿದೆ. ಪವಿತ್ರ ಹಜ್ ಯಾತ್ರೆಯ ಕಡೆಯ ದಿನವಾದ ಗುರುವಾರದಂದು ಕಾಲ್ತುಳಿತಕ್ಕೆ ಸಿಲುಕಿ 717ಕ್ಕೂ ಮಂದಿ ಮೃತಪಟ್ಟು 860ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ 14 ಮಂದಿ ಭಾರತೀಯರು ಮೃತ ಪಟ್ಟಿದ್ದು ಅವರಲ್ಲಿ ಒಬ್ಬರು ತೆಲಂಗಾಣದ ಮಹಿಳೆ ಎಂದು ಗುರುತಿಸಲಾಗಿದೆ. ಗುಜರಾತ್ ನ ಒಂಭತ್ತು, ಜಾರ್ಖಂಡ್ ನ ಇಬ್ಬರು, ತಮಿಳುನಾಡಿನ ಓರ್ವ ಸೇರಿ ಒಟ್ಟು ಹದಿನಾಲ್ಕು ಮಂದಿ ಭಾರತೀಯರು ಸಾವನ್ನಪ್ಪಿದ್ದು ಇನ್ನು 13 ಮಂದಿಗೆ ಗಂಭೀರವಾಗಿ ಗಾಯಗಳಾಗಿವೆ. ಮೆಕ್ಕಾದ ಪ್ರಮುಖ ಮಸೀದಿಯಿಂದ ಸುಮಾರು 7ಕಿ.ಮೀ. ದೂರವಿರುವ ಮೀನಾದಲ್ಲಿ ಗುರುವಾರದಂದು ಬೆಳಿಗ್ಗೆ ಈ ಘಟನೆ ಸಂಭವಿಸಿದೆ. ಲಕ್ಷಾಂತರ ಮಂದಿ ಒಂದೇ ಸ್ಥಳದಲ್ಲಿ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ಜನರ ಆರೋಗ್ಯಕ್ಕೆ ಒಳಿತಾಗುವ ದೃಷ್ಟಿಯಿಂದ ಕೆ.ಎಸ್.ಹೆಗ್ಡೆ ಸಹಭಾಗಿತ್ವದೊಂದಿಗೆ ಸ್ಫೂರ್ತಿ ಪಾಲಿಕ್ಲಿನಿಕ್ ಗುಣಮಟ್ಟದ ಸೇವೆಯನ್ನು ಒದಗಿಸುತ್ತಾ ಬಂದಿದ್ದು, ಇದೀಗ ಆರಂಭಗೊಂಡ ಸುಸಜ್ಜಿತ ಪ್ರಯೋಗಾಲಯ ಮತ್ತು ಫಿಸಿಯೋಥೆರಪಿ ಘಟಕವೂ ಉತ್ತಮವಾಗಿ ಕಾರ್ಯ ನಿರ್ವಹಿಸಲಿದೆ ಎಂದು ನಿಟ್ಟೆ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿ ಡಾ.ಶಾಂತಾರಾಮ ಶೆಟ್ಟಿ ಹೇಳಿದರು. ಅವರು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ ಸಹಭಾಗಿತ್ವದಲ್ಲಿ ತೊಕ್ಕೊಟ್ಟು ಭಟ್ನಗರದ ಸ್ಪೂರ್ತಿ ಪಾಲಿಕ್ಲಿನಿಕ್ನಲ್ಲಿ ನೂತನವಾಗಿ ಆರಂಭಗೊಂಡ ಫಿಸಿಯೋಥೆರಪಿ ವಿಭಾಗವನ್ನು ಉದ್ಘಾಟಿಸಿದರು. ಪ್ರಯೋಗಾಲಯವನ್ನು ನಿಟ್ಟೆ ವಿ.ವಿ ಉಪಕುಲಪತಿ ಡಾ. ರಮಾನಂದ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜಿನ ಡೀನ್ ಡಾ.ಸತೀಶ್ ಕುಮಾರ್ ಭಂಡಾರಿ, ಮೆಡಿಕಲ್ ಸುರಿಟೆಂಡೆಂಟ್ ಡಾ.ಕರುಣಾ ರಮೇಶ್, ವೈಸ್ ಡೀನ್ ಡಾ.ಪ್ರಕಾಶ್, ಕ್ಷೇಮದ ಕುಲಸಚಿವ ಡಾ.ಜೆ.ಪಿ ಶೆಟ್ಟಿ, ಸ್ಫೂರ್ತಿ ಪಾಲಿಕ್ಲಿನಿಕ್ನ ಆಡಳಿತ ನಿರ್ದೇಶಕ ಡಾ. ವಿಕ್ರಂ ಶೆಟ್ಟಿ, ಮಕ್ಕಳ ತಜ್ಞ ಡಾ.ಕಿಶನ್ ಆಳ್ವ, ಕಣ್ಣಿನ ತಜ್ಞ ಡಾ.ವಸಂತಿ, ಫಿಸಿಷಿಯನ್ ಡಾ.ಸುರೇಶ್.ಜಿ, ಡಾ.ಅಭಿಜಿತ್ ಶೆಟ್ಟಿ, ಡಾ.ಶ್ರೀನಾಥ್ ಕಾಮತ್, ಡಾ.ಶ್ರೀನಿವಾಸ್ ಭಟ್, ಡಾ.ಗಿರೀಶ್, ಡಾ.ದೀಪಾ…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ತ್ಯಾಗ ಬಲಿದಾನದ ಸಂಕೇತವಾಗಿ ಪ್ರತಿಯೊಬ್ಬ ಮುಸಲ್ಮಾನನು ಪ್ರಾಣಿಬಲಿಯೊಂದಿಗೆ ಆಚರಿಸುವ ಬಕ್ರೀದ್ ಹಬ್ಬದ ಪ್ರಯುಕ್ತ ಉಳ್ಳಾಲ ಸೈಯ್ಯಿದ್ ಮದನಿ ದರ್ಗಾದಲ್ಲಿ ನಡೆದ ವಿಶೇಷ ಪ್ರಾರ್ಥನೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹಾಗೂ ದರ್ಗಾ ಅಧ್ಯಕ್ಷ ಯು.ಯಸ್.ಹಂಝ್ ಇವರ ಉಪಸ್ಥಿತಿಯಲ್ಲಿ ನಡೆಯಿತು. ಈ ವೇಳೆ ಹಬ್ಬದ ಶುಭಹಾರೈಸಿದ ಸಚಿವರು ಪವಿತ್ರವಾದ ಹಬ್ಬವನ್ನು ಸಂತೋಷದಿಂದ ಎಲ್ಲರೂ ಆಚರಿಸಿದ್ದಾರೆ. ತ್ಯಾಗ, ಬಲಿದಾನ, ಸಹೋದರತೆ, ಏಕತೆಂiÀi ಸಂದೇಶವನ್ನು ಪಾಲಿಸುವ ಮೂಲಕ ಅಲ್ಲಹುವಿನ ಪ್ರೀತಿಗೆ ಎಲ್ಲರೂ ಪಾತ್ರರಾಗಬೇಕು. ತಮ್ಮ ವ್ಯಕ್ತಿತ್ವದಲ್ಲೂ ಅದನ್ನು ಮೈಗೂಡಿಸಿಕೊಳ್ಳಬೇಕು. ಶಾಂತಿಯುತ ಸಮಾಜ ಬಲಿಷ್ಠ ಭಾರತ ಕಟ್ಟುವ ನಿಟ್ಟಿನಲ್ಲಿ ಎಲ್ಲರೂ ಹಬ್ಬವನ್ನು ಶಾಂತಿಯಿಂದ ಆಚರಿಸಬೇಕಿದೆ. ಹಿರಿಯರ ಮತ್ತು ಉಲೇಮಾಗಳ ತ್ಯಾಗಮಯ ಜೀವನದ ಆದರ್ಶಗಳನ್ನು ಪಾಲಿಸಿ ಜೀವನ ನಿರ್ವಹಿಸಬೇಕಿದೆ ಎಂದ ಅವರು ಸದ್ಯ ಸಮಾಜದಲ್ಲಿ ಭ್ರಷ್ಟಾಚಾರ ದೊಡ್ಡ ಸಮಸ್ಯೆಯಲ್ಲ, ಯಾರಲ್ಲೂ ವಿಶ್ವಾಸ ಇಲ್ಲದೇ ಇರುವುದು ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ವಿಶ್ವಾಸವನ್ನು ಬೆಳೆಸುವ ಕಾರ್ಯ ಹಬ್ಬದ ಆಚರಣೆಗಳಿಂದ ಆಗಬೇಕಿದೆ ಎಂದರು.…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಂಬೇಡ್ಕರ್ ಭವನ ನಿರ್ಮಿಸಲು ಎಲ್ಲಾ ರೀತಿಯ ಶಿಫಾರಸ್ಸು ಮಾಡುವುದಾಗಿ ರಾಜ್ಯ ಕಂದಾಯ ಸಚಿವ ವಿ.ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಅವರು ಕೊಣಾಜೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಬುಧವಾರ ಕುವೆಂಪು ವಿಶ್ವವಿದ್ಯಾನಿಲಯಕ್ಕೆ ನೂತನವಾಗಿ ಆಯ್ಕೆಯಾದ ಪ್ರೊ.ಜೋಗನ್ ಶಂಕರ್ ಇವರಿಗೆ ಅಭಿನಂದನೆ ನೆರವೇರಿಸಿ ಮಾತನಾಡಿದರು. ಸಾಮಾಜಿಕ ನ್ಯಾಯದ ಚಿಂತನೆ ನಡೆಸಿ ಮಾನವತಾವಾದಿಯನ್ನು ಬೋಧಿಸಿದ ಡಾ.ಅಂಬೇಡ್ಕರ್ ಅವರ ಹೆಸರಿನ ಅಂಬೇಡ್ಕರ್ ಭವನದ ನಿರ್ಮಾಣಕ್ಕೆ ಎಲ್ಲಾ ರೀತಿಯ ಅನುದಾನವನ್ನು ಒದಗಿಸಿಕೊಡಲು ಸರಕಾರದೊಂದಿಗೆ ಮಾತುಕತೆ ನಡೆಸಿ ಶೀಘ್ರವೇ ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವುದಾಗಿ ಹೇಳಿದ ಅವರು ದೇಶ ನೈಸರ್ಗಿಕ ಸಂಪನ್ಮೂಲ, ಮಾನವೀಯ ಸಂಪನ್ಮೂಲ ಮತ್ತು ಜನಸಂಖ್ಯೆಯಲ್ಲಿ ಶ್ರೀಮಂತವಾಗಿದ್ದರೂ, ಅಸಮಾನತೆ, ಅಸ್ಪøಶ್ಯತೆ ಹಾಗೂ ಅನಕ್ಷರತೆಯಿಂದ ಅಭಿವೃದ್ಧಿಯಾಗಿಲ್ಲ. ಬಡತನವನ್ನಾದರೂ ಸಹಿಬಹುದು ಆದರೆ ಜಾತೀಯತೆಯನ್ನು ಸಹಿಸಲು ಅಸಾಧ್ಯ. ಅಸಮಾನತೆ, ಕ್ರೌರ್ಯದ ದೇವದಾಸಿ ಪದ್ಧತಿಗಳ ಬಗ್ಗೆ ಅಧ್ಯಯನ ನಡೆಸಿ ಅದರಲ್ಲಿ ಶೋಷಣೆಗೊಳಗಾದವರನ್ನು ಪುನರ್ವಸತಿ ಕಲ್ಪಿಸಿ ಸಮಾಜದ ಮುಖ್ಯವಾಹಿನಿಗೆ ಕರೆತರುವಂತಹ ಪ್ರಯತ್ನವನ್ನು ಕೈಗೊಂಡಿರುವ ಪ್ರೊ.ಜೋಗನ್ ಶಂಕರ್…
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತಲಪಾಡಿ: ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಗೆ `ಉಚಿತ ಸೈಕಲ್ ವಿತರಣೆ’ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ವಿಶೇಷ ಮಾರ್ಗದರ್ಶನ ಕಾರ್ಯಾಗಾರ’ ನಡೆಯಿತು. ತಲಪಾಡಿ ಗ್ರಾಮ ಪಂಚಾಯತ್ನ ಉಪಾಧ್ಯಕ್ಷೆ ಜಯಲಕ್ಷ್ಮೀ ಸೀತಾರಾಮ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಸರಕಾರದ ಸವಲತ್ತನ್ನು ಸದ್ವಿನಿಯೋಗಿಸುವ ಮೂಲಕ ಮಕ್ಕಳ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಪ್ರಗತಿಯಾಗಲಿ ಎಂದು ಪೋಷಕರಿಗೆ ಕರೆ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಸ್ .ಅಬ್ದುಲ್ ಖಾದರ್ ಕಡಬ ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಕಾರ್ಯಾಗಾರ ನಡೆಸಿಕೊಟ್ಟರು.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಹಿರಾ: ಬೆಸೆಂಟ್ ಮಹಿಳಾ ಕಾಲೇಜಿನ ವತಿಯಿಂದ ನಡೆದ ‘ಬಿಕ್ವೆಸ್ಟ್ 2015’ ಅಂತರ್ ಕಾಲೇಜು ಸ್ಪರ್ಧೆಯಲ್ಲಿ ಹಿರಾ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಾದ ಸನಾ ಸಿರಾಜ್, ಆಫಿಯಾ, ಹಾಲ ತಮೀಝ, ಮಿಸ್ಬಾ, ಸುಮಯ್ಯ ಮತ್ತು ರಫಿಝ, ಆಯಿಷ ಲಮ್ಯ ಅಲ್ತಾಪ್, ಐಸ್ ಬ್ರೇಕರ್ಸ್ನಲ್ಲಿ ಪ್ರಥಮ, ಹಾಲ ತಮೀಝ , ಹಲೀಮ ಶೀರೀನ್, ಫರ್ಝುನ್ ಸಮಾ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆದಿದ್ದು, ಮಂಗಳೂರು ರೋಶನಿ ನಿಲಯ ಕಾಲೇಜಿನಿಂದ ನಡೆಸಲಾದ ‘ಎಕ್ಸ್ ಪ್ರೆಶನ್ಸ್ 2015’ ಅಂತರ್ ಕಾಲೇಜು ಸ್ಪರ್ಧೆಯ ‘ದಿಯಾ ಪೈಂಟಿಂಗ್’ನಲ್ಲಿ ಸಮೀಹ ಫಾತಿಮಾದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಅಝಾದ್ ನಗರದ ಅಲ್ ಮಸ್ಚಿದುಲ್ ಫಾರುಕ್ ಮತ್ತು ಅನ್ವರುಲ್ ಉಲೂಂ ಮದ್ರಸದ ವಾರ್ಷಿಕ ಮಹಾಸಭೆಯು ಅಧ್ಯಕ್ಷ ಬಾವ ಅಹಮ್ಮದ್ ರವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಮದರಸದ ಹಾಲ್ನಲ್ಲಿ ಅಬ್ದುಲ್ ಬಾಶಿತ್ ಮದನಿ(ಇಮಾಮ್)ರವರ ದುವಾದೊಂದಿಗೆ ಜರಗಿತು. 2015-16ನೇ ಸಾಲಿನ ಅಧ್ಯಕ್ಷರಾಗಿ ಬಾವಾ ಅಹಮದ್, ಉಪಾಧ್ಯಕ್ಷರಾಗಿ ಅಹಮದ್ ರಫೀಕ್ ಆರ್. ಆರ್., ಕಾರ್ಯದರ್ಶಿಯಾಗಿ ಮೊೈದಿನಬ್ಬ, ಕೋಶಾಧಿಕಾರಿಯಾಗಿ ಮಹಮ್ಮದ್, ಜೊತೆ ಕಾರ್ಯದರ್ಶಿಯಾಗಿ ಮಹಮ್ಮದ್ ಜಿ ಹಾಗೂ ಅಬ್ದುಲ್ ಅಜೀಜ್, ಫಾರುಕ್ ಬಾವ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದರು.

