Author: UllalaVani

Kannada News From Coastal Karnataka

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಹೆಸರು ಗಳಿಸಿದ ಉಳ್ಳಾಲ ದರ್ಗಾದಲ್ಲಿ ಪ್ರತೀ ಐದು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುವ ಖುತುಬುಝ್ಜಮಾನ್ ಹಝ್ರತ್ ಅಸೈಯ್ಯದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ತಂಙಳ್‍ರ 423ನೆ ವಾರ್ಷಿಕ ಮತ್ತು 20ನೆ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮಕ್ಕೆ ಗುರುವಾರ ರಾತ್ರಿ ಅಸೈಯ್ಯದ್ ಮುಹಮ್ಮದ್ ಉಮರುಲ್ ಫಾರೂ ತಂಙಳ್ ಪೊಸೋಟು ಸಂಭ್ರಮದ ಚಾಲನೆ ನೀಡಿದರು. ಉರೂಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ಖಾಝಿ ಅಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ದುಆ ಮಾಡಿದರು. ಮುಖ್ಯ ಭಾಷಣ ಮಾಡಿದ ಅಖಿಲ ಭಾರತ ಸುನ್ನೀ ಜಂ ಇಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್‍ರವರು,ಉಳ್ಳಾಲ ಖಾಝಿಯಾಗಿದ್ದ ತಾಜುಲ್ ಉಲಮಾ ಅವರ ನೇತೃತ್ವದಲ್ಲಿ ನೂರಾರು ಮಸೀದಿಗಳು ನಿರ್ಮಾಣ ಆಗಿವೆ. ಅವರು ಬರುವ ಮೊದಲು ಮಸೀದಿಗಳ ಕೊರತೆ ಇತ್ತು. ಅವರು ಉಳ್ಳಾಲಕ್ಕೆ ಬಂದ ಬಳಿಕ ನೂರಾರು ಮದ್ರಸ , ಮಸೀದಿಗಳು ನಿರ್ಮಾಣ ಅವರ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಉಳ್ಳಾಲ ಜುಮಾ ಮಸೀದಿ ಮತ್ತು ಸಯ್ಯಿದ್ ಮದನಿ ದರ್ಗಾ 402, ಉಳ್ಳಾಲ ಬಹುಮಾನ್ಯರಾದ ಖುತ್ಬುಝ್ಝುಮಾನ್ ಹಝ್ರತ್ ಅಸ್ಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ(ಖ.ಸಿ) ತಂಙಳ್‍ರವರ 423ನೆಯ ವಾರ್ಷಿಕ ಹಾಗೂ 20ನೇ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ಹಾಗೂ ನವೀಕೃತ ಮಸೀದಿಯ ಉದ್ಘಾಟನೆ ಸಮಾರಂಭ ಉಳ್ಳಾಲ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಮದನಿ ಅಲ್‍ಬುಖಾರಿ ಅವರ ನೇತೃತ್ವದಲ್ಲಿ ಗುರುವಾರ ನಡೆಯಿತು. ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಯು.ಎಸ್.ಹಂಝ ಅವರು ಮಾತನಾಡಿ ಈಗಾಗಲೇ ನವೀಕೃತ ಜುಮಾ ಮಸೀದಿ ಉದ್ಘಾಟನೆಗೊಂಡಿದೆ. ಉಳ್ಳಾಲ ಉರೂಸ್ ಯಶಸ್ವಿಗೆ ಸುಮಾರು 2500 ಸ್ವಯಂ ಸೇವಕರನ್ನೊಳಗೊಂಡ ಹಲವು ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡಕ್ಕೂ ಜವಬ್ದಾರಿ ವಹಿಸಲಾಗಿದೆ. ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ಮಾಧ್ಯಮ ಸೇರಿದಂತೆ ಎಲ್ಲರ ಸಹಕಾರ ಅಗತ್ಯ ಎಂದರು. ಉಳ್ಳಾಲ ಉರೂಸ್‍ಗೆ ಸರ್ವಧರ್ಮೀಯರು ಸೇರಲಿದ್ದು ಸುಮಾರು 25 ರಿಂದ 30 ಲಕ್ಷ ಜನರು ಆಗಮಿಸುತ್ತಾರೆ. ಎಲ್ಲರಿಗೂ ಅಲ್ಲಾಹುವಿನ ಅನುಗ್ರಹ…

Read More

ಬಾಲಿವುಡ್‍ನ ನಂಬರ್ ಒನ್ ಐಟಂ ಗರ್ಲ್ ಸನ್ನಿಲಿಯೋನ್ ಪ್ರತಿ ದಿನ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಆದೆಷ್ಟೋ ಯುವಕರ ನಿದ್ದೆ ಕದ್ದ ಈ ಮಾದಕ ಬೆಡಗಿಯ ಮೇಲೆ ಕೇಸು ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಏಕ್ ಪೆಹೇಲಿ ಲೀಲಾ ಚಿತ್ರದಲ್ಲಿ ನಾಯಕಿ ನಟಿಯಾಗಿ ಅಭಿನಯಿಸುತ್ತಿರುವ ಸನ್ನಿ ವಿರುದ್ಧ ಎಪ್‍ಐಆರ್ ದಾಖಲಾಗಲು ಕಾರಣ ಈ ಚಿತ್ರದ ಪ್ರಮೋಶನ್‍ಗಾಗಿ ಆಕೆ ಪೈವ್ ಸ್ಟಾರ್ ಹೋಟೆಲ್‍ಗೆ ಬಂದಿರುವುದು. ಸನ್ನಿ ಅಭಿನಯದ ಈ ಚಿತ್ರ ಬಿಡುಗಡೆಯ ಹಂತದಲ್ಲಿರುವುದರಿಂದ ಚಿತ್ರದ ಪ್ರಮೋಶನ್‍ನನ್ನು ಪೈವ್ ಸ್ಟಾರ್ ಹೋಟೆಲ್‍ನಲ್ಲಿ ಆಯೋಜಿಸಲಾಗಿತ್ತು. ಆದರೆ ಕೊನೆಯ ಹಂತದಲ್ಲಿ ಬೇರೆಡೆ ಸ್ಥಳಾಂತರಿಸಲಾಯಿತು. ಆದರೆ ಸನ್ನಿ ಬೇರೆ ಉದ್ದೇಶಕ್ಕಾಗಿ ಬಂದಿದ್ದಾಳೆಂದು ಎಂದು ತಿಳಿದು ಅಲ್ಲಿನ ಸಾರ್ವಜನಿಕರು ಆಕೆಯ ವಿರುದ್ಧ ಕೇಸು ದಾಖಲಿಸಿದ್ದಾರೆ. ಸನ್ನಿಲಿಯೋನ್ ತಂಡದವರು ಸಿನಿಮಾ ಪ್ರಮೋಷನ್‍ಗೆ ಬಂದಿದ್ದಾಗಿ ಖಚಿತಪಡಿಸಿದ ಮೇಲೆ ಸಾರ್ಮಜನಿಕರು ಕೇಸು ವಾಪಸ್ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ದೇರಳಕಟ್ಟೆಯ ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ಪಿ.ಸಿ.ಝಹೀರ್ ಸ್ಮರಣಾರ್ಥ 13ನೆಯ ವರುಷದ ಅಂತರ್ ಕಾಲೇಜು ಫುಟ್ಬಾಲ್ ಪಂದ್ಯಾಟ ಯೆನೆಪೋಯ ವಿವಿಯ ಸಾಕರ್ ಕ್ರೀಡಾಂಗಣದಲ್ಲಿ ಬುಧವಾರ ಉದ್ಘಾಟನೆಗೊಂಡಿತು. ಯೆನೆಪೋಯ ವಿವಿಯ ಶೈಕ್ಷಣಿಕ ಹಾಗೂ ಆಡಳಿತ ನಿರ್ದೇಶಕ ಪ್ರೊ.ಪಿ.ಸಿಂ.ಕುಂಞ ಪಂದ್ಯಾವಳಿ ಉದ್ಘಾಟಿಸಿದರು. ಅಂತರಾಷ್ಟಿ ಯ ಫುಟ್ಬಾಲ್ ಆಟಗಾರ, ಭಾರತ ಫುಟ್ಬಾಲ್ ತಂಡದ ಮಾಜಿ ಕಪ್ತಾನ ಐ.ಎಂ.ವಿಜಯನ್ ಕಾಲ್ಚೆಂಡು ಒದೆಯುವ ಮೂಲಕ ಪಂದ್ಯಕ್ಕೆ ಚಾಲನೆ ನೀಡಿದರು. ಯೆನೆಪೋಯ ವಿವಿ ಉಪ ಕುಲಪತಿ ಡಾ. ಪಿ.ಚಂದ್ರಮೋಹನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿವಿ ಕುಲಸಚಿವ ಡಾ. ಸಿ.ವಿ.ರಘುವೀರ್, ಪರೀಕ್ಷಾಂಗ ಕುಲಸಚಿವ ಪ್ರೊ. ಕೆ.ಪಿ.ಜಯರಾಜನ್, ಹಣಹಾಸು ಅಧಿಕಾರಿ ಅಹ್ಮದ್ ಬಾವ, ಅಲೈಡ್ ಹೆಲ್ತ್ ಆಂಡ್ ಬೇಸಿಕ್ ಸೈನ್ಸ್‌ನ ಡೀನ್ ಪ್ರೊ. ಪದ್ಮಕುಮಾರ್, ವೈಆರ್‌ಸಿ ಡೆಪ್ಯುಟಿ ಡೈರೆಕ್ಟರ್ ಡಾ. ಅರುಣ್ ಭಾಗವತ್ ಉಪಸ್ಥಿತರಿದ್ದರು. ಯೆನೆಪೋಯ ವಿವಿ ಜಂಟಿ ಕ್ರೀಡಾ ನಿರ್ದೇಶಕ ಅನುಪ್ ಜೈನ್ ಎಂ.ಜೆ ಸ್ವಾಗತಿಸಿದರು. ಸಹ ಕ್ರೀಡಾ ನಿರ್ದೇಶಕಿ ಶಿಲ್ಪಶ್ರೀ ವಂದಿಸಿದರು. ಮೊದಲ ಪಂದ್ಯ ಯೆನೆಪೋಯ ವಿವಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ದೇರಳಕಟ್ಟೆ: ಯೆನೆಪೋಯ ದಂತ ಮಹಾವಿದ್ಯಾಲಯದ ಮ್ಯಾಕ್ಸಿಲೋ ಫ಼ೇಶಿಯಲ್ ಹಾಗೂ ಸೆಂಟರ್ ಫ಼ಾರ್ ಕ್ರೇನಿಯೋಫ಼ೇಶಿಯಲ್ ಅನಾಮಲೀಸ್ ವಿಭಾಗ ಯೆನೆಪೋಯ ವಿಶ್ವವಿದ್ಯಾಲಯದ ಜಂಟಿ ಆಶ್ರಯದಲ್ಲಿ ಪ್ಲಾನಿಂಗ್ ಫಾರ್ ಓರ್ಥೊಗ್ನಾಥಿಕ್ ಸರ್ಜರಿ -ಕಲೆಯೋ ವಿಜ್ಞಾನವೋ ಎಂಬ ವಿಚಾರದಡಿಯಲ್ಲಿ ಒಂದು ದಿನದ ಕಾರ್ಯಗಾರ ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಯೆನೆಪೋಯ ವಿವಿ ಉಪ ಕುಲಪತಿ ಪ್ರೊ. ಡಾ. ಪಿ. ಚಂದ್ರಮೋಹನ್ ಉದ್ಘಾಟಿಸಿದರು. ಯೆನೆಪೋಯ ಡೆಂಟಲ್ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎಚ್. ಶ್ರಿಪತಿ ರಾವ್ ವಿಷಯ ಕುರಿತು ಮಾತನಾಡಿದ ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಡಾ. ಪ್ರಮೋದ್ ಸುಭಾಶ್ ಹಾಗೂ ಡಾ. ಅಕ್ಷಯ್ ಶೆಟ್ಟಿ ಪ್ಲಾನಿಂಗ್ ಬಗ್ಗೆ ಉಪನ್ಯಾಸ ನೀಡಿದರು. ದಕ್ಷಿಣ ಕನ್ನಡ ಹಾಗೂ ಪರಿಸರದ ದಂತ ವಿದ್ಯಾಲಯದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸುಮಾರು ೨೩೦ ಮಂದಿ ಭಾಗವಹಿಸಿದ್ದರು. ಓರಲ್ ಮ್ಯಾಕ್ಸಿಲೋ ಫ಼ೇಶಿಯಲ್ ವಿಭಾಗದ ಪ್ರೊಫೆಸರ್ ಡಾ. ಜೋಯ್ಸ್ ಸಿಕ್ವೇರ ಸ್ವಾಗತಿಸಿದರು. ಡಾ. ಜಗದೀಶ್ ಚಂದ್ರ ವಂದಿಸಿದರು.

Read More

ಮಾಜಿ ವಿಶ್ವ ಸುಂದರ, ಬಿಗ್ ಬಿ ಬಹು ಕನ್ನಡ ಚಿತ್ರವೊಂದರಲ್ಲಿ ನಟಿಸುವುದಕ್ಕೆ ಒಪ್ಪಿಕೊಂಡಿದ್ದಾರೆ. ಒಂದು ವರ್ಷದಿಂದ ಐಶ್ವರ್ಯ ರೈ ಡೇಟ್ಸ್‍ಗಾಗಿ ಕಾದುಕುಳಿತಿದ್ದ ನಿರ್ದೇಶಕರಿಗೆ ಐಶ್ವರ್ಯ ರೈ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನು ಕರಾವಳಿ ಚೆಲುವೆ ಐಶು ಹಾಗೂ ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ `ಮನಮೋಹಕ’ ಎಂಬ ಚಿತ್ರಕ್ಕೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಚಿತ್ರದ ನಿರ್ದೇಶಕ ಸಿಂಪಲ್ ಸುನಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರದಲ್ಲಿ ಐಶು ಮನಮೋಹಕವಾಗಿ ಅಭಿನಯಿಸಲಿದ್ದಾರೆ. ಶಿವ ರಾಜ್ ಕುಮಾರ್ ಅಭಿನಯದ `ಕಬೀರ್’ಚಿತ್ರದಲ್ಲಿ ಬಾಲಿವುಡ್‍ನ ಬಿಗ್ ಬಿ ಅಮಿತಾಬ್ ಬಚ್ಚನ್ನು ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ ಅನ್ನೋದು ಸದ್ಯಕ್ಕೆ ಗಾಂಧಿನಗರದಲ್ಲಿ ಹರಿಡಾಡುತ್ತಿರುವ ಸುದ್ದಿ. ಐಶು ಕನ್ನಡ ಚಿತ್ರವೊಂದರಲ್ಲಿ ಶಿವರಾಜ್ ಕುಮಾರ್ ಜೊತೆಯಲ್ಲಿ ಐಶು ನಟಿಸುತ್ತಿದ್ದಾರೆ ಅನ್ನೋ ಸುದ್ದಿ ಅವರ ಅಭಿಮಾನಿಗಳಲ್ಲಿ ಸಂತೋಷದ ಜೊತೆಗೆ ಚಿತ್ರ ಯಾವಾಗ ಬಿಡುಗಡೆಗೊಳ್ಳುತ್ತದೆ ಅನ್ನೋ ಕಾತರವೇ ಹೆಚ್ಚಾಗುತ್ತಿದೆ ಅನ್ನೋ ಮಾತು ಕೇಳಿಬರುತ್ತಿದೆ. ಐಶು ಹಾಗೂ ಶಿವಣ್ಣ ಜೋಡಿಯ ಮನಮೋಹಕ ಚಿತ್ರ ಶತದಿನ ಆಚರಿಸಲಿ ಅನ್ನೋದು ಇವರ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಕುಂಪಲ: ಭೌತಿಕವಾಗಿ, ಲೌಖಿಕವಾಗಿ ನಾವು ಬೆಳೆದು ಸಂಸ್ಕಾರವಂತರಾಗಬೇಕಾದರೆ ಭಜನೆ ಮುಖ್ಯ ಸಾಧನ. ಭಜನೆ ಮಾಡುವುದರಿಂದ ನಾವು ಭಕ್ತಿಯಿಂದ ಭಗವಂತನಲ್ಲಿ ಶರಣಾಗಿ ದೇವರ ದಾಸರಾಗಲು ಒಂದು ಅವಕಾಶ. ಸುಖೀ ಸಮಾಜದ ನಿರ್ಮಾಣದಲ್ಲಿ ಭಜನಾ ಮಂಡಲಿಗಳ ವಿಶೇಷ ಪಾತ್ರವಿದ್ದು ಇದು ನಮ್ಮ ಸಂಸ್ಕ್ರತಿಯನ್ನು ಎತ್ತಿ ತೋರಿಸುತ್ತದೆ ಎಂದು ದ.ಕ ಜಿಲ್ಲಾ ಪಂಚಾಯತ್‍ನ ಅಧ್ಯಕ್ಷೆ ಶ್ರೀಮತಿ ಆಶಾ ತಿಮ್ಮಪ್ಪ ಅಭಿಪ್ರಾಯಪಟ್ಟರು. ಅವರು ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಪ್ರತಿಷ್ಟಾ ಮಹೋತ್ಸವ, ಏಕಾಹ ಭಜನೋತ್ಸವದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉದ್ಘಾಟನೆಯನ್ನು ಉದ್ಯಮಿ ಪ್ರವೀಣ್ ಸುವರ್ಣ ಬಗಂಬಿಲ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಯೇನಪೋಯ ವಿಶ್ವವಿದ್ಯಾಲಯದ ಪ್ರಾಂಶುಪಾಲ ಡಾ. ಸಿ.ಎಚ್. ಮಂಜುನಾಥ್, ಬಜಾಜ್ ಅಲೈನ್ಸ್‍ನ ಪದ್ಮನಾಭ ಸುವರ್ಣ, ಕಿಟೆಲ್ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲ ವಿಠಲ್.ಎ, ತುಳು ಚಲಚನಚಿತ್ರ ನಟ ಸುರೇಂದ್ರ ಬಂಟ್ವಾಳ, ಮಂದಿರದ ಮಹಾಪೋಷಕ ಕೇಶವದಾಸ್ ಬಗಂಬಿಲ, ಮಹಿಳಾ ಅಧ್ಯಕ್ಷೆ ವಸಂತಿ ಜನಾರ್ಧನ್, ಉಪಸ್ಥಿತರಿದ್ದರು. ಈ ಸಂದರ್ಬದಲ್ಲಿ ತಿರುಮಲೇಶ್ವರ ಭಟ್ (ವೈಧಿಕ), ಶಿಲ್ಪಶ್ರೀ…

Read More

ಉಳ್ಳಾಲ್‌ನ್ಯೂಸ್ ನೆಟ್‌ವರ್ಕ್ ಸೋಮೇಶ್ವರ: ಸರಣಿ ಕಳವಿಗೆ ಯತ್ನಿಸಿದ ಕಳ್ಳರು ಮನೆಗೆ ನುಗ್ಗಿ ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಸಹಿತ ನಗದು ಕಳವುಗೈದಿರುವ ಘಟನೆ ಕೊಲ್ಯ ಸಮೀಪ ಮಂಗಳವಾರ ತಡರಾತ್ರಿ ವೇಳೆ ನಡೆದಿದೆ. ಕೊಲ್ಯ ಶ್ರೀ ಮೂಕಾಂಬಿಕಾ ದೇವಸ್ಥಾನದ ಹಿಂಭಾಗದಲ್ಲಿರುವ ಸರಸ್ವತಿ ಎಂಬವರಿಗೆ ಸೇರಿದ ಮನೆಗೆ ನುಗ್ಗಿದ ಕಳ್ಳರು ಎರಡು ಲಕ್ಷ ನಗದು ಮತ್ತು 45 ಪವನ್ ಚಿನ್ನಾಭರಣ ದೋಚಿದ್ದಾರೆ. ಮನೆಮಂದಿ ಮಲಗಿದ್ದ ಸಂದರ್ಭ ಹಿಂಬಾಗಿಲಿನ ಮೂಲಕ ನುಗ್ಗಿರುವ ಕಳ್ಳರು ಕಪಾಟಿನಲ್ಲಿರಿಸಿದ್ದ ಸೊತ್ತುಗಳನ್ನು ಕಳವು ನಡೆಸಿದ್ದಾರೆ. ಪತ್ರಕರ್ತ ಜಯಂತ್ ಉಳ್ಳಾಲ್ ಅವರ ಪತ್ನಿ ಸುನೀತಾ ಸಹಿತ ಅವರ ತಾಯಿ ಸರಸ್ವತಿ ಮತ್ತು ಮಕ್ಕಳು ಮನೆಯಲ್ಲಿದ್ದರು. ನೂತನ ಮನೆಯನ್ನು ನಿರ್ಮಿಸುತ್ತಿರುವ ಜಯಂತ್ ಉಳ್ಳಾಲ್ ಅವರು ಮನೆ ನಿರ್ಮಾಣಕ್ಕೆಂದು ಕರ್ಣಾಟಕ ಬ್ಯಾಂಕಿನಿಂದ ಪಡೆದ ಸಾಲದ ಹಣದಿಂದ ತಾವು ಅಡವಿರಿಸಿದ್ದ ಚಿನ್ನವನ್ನು ಬಿಡಿಸಿ ಪತ್ನಿ ಮನೆಗೆ ತಂದಿದ್ದರು. ಅಲ್ಲಿ ಅವರ ಮಗುವಿನ ನಾಮಕರಣ ಸಮಾರಂಭಕ್ಕಾಗಿ ಅಡವಿರಿಸಿದ ಚಿನ್ನವನ್ನು ಬಿಡಿಸಿ, ಉಳಿದ ರೂ.2 ಲಕ್ಷ ಹಣವನ್ನು ಕಪಾಟಿನಲ್ಲಿರಿಸಿದ್ದರು. ಸ್ಥಳಕ್ಕೆ ಎಸಿಪಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ತೊಕ್ಕೊಟ್ಟು: ವಿವಿಧ ಇಲಾಖೆಗಳ ಅಧಿಕಾರಿಗಳು ಕರ್ತವ್ಯಗಳನ್ನು ದುರುಪಯೋಗಪಡಿಸದೇ ಇದ್ದಲ್ಲಿ ಜನರಿಗೆ ಯಾವುದೇ ಅನ್ಯಾಯವಾಗದು ಎಂದು ಕೃಷಿಕ ಸಮಾಜದ ಜಿಲ್ಲಾ ಅಧ್ಯಕ್ಷ ಮತ್ತು ಸುನ್ನೀ ಜಮಾಅತಿನ ಅಧ್ಯಕ್ಷ ಹೈದರ್ ಪರ್ತಿಪ್ಪಾಡಿ ಹೇಳಿದ್ದಾರೆ. ಎಸ್ ವೈಎಸ್ ಫಲಾಹ್ ಮದನಿನಗರ ಇದರ ವತಿಯಿಂದ ಪ್ರವಾದಿ ನಿಂದನೆ, ತೊಕ್ಕೊಟ್ಟು ಮಂಗಳೂರು ಒನ್ ಶಾಲೆ ವಿದ್ಯಾರ್ಥಿನಿ ಅತ್ಯಾಚಾರ ಯತ್ನ, ಮಸೀದಿ ಮತ್ತು ಚರ್ಚ್‍ಗಳ ಮೇಲೆ ದಾಳಿ, ಮಸೀದಿ ವಿರುದ್ಧ ಸುಬ್ರಹ್ಮಣ್ಯ ಸ್ವಾಮಿಯಿಂದ ಅಜ್ಞಾನಿ ಹೇಳಿಕೆ ವಿರುದ್ಧ ಕುತ್ತಾರು ಜಂಕ್ಷನ್ನಿನಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಧಿಕಾರಿಗಳು ಶಾಯಿಯನ್ನು ದುರುಪಯೋಗಪಡಿಸಿ ಜನರಿಗೆ ಅನ್ಯಾಯವೆಸಗಿದಲ್ಲಿ, ಮುಂದೆ ಅದು ಅವರಿಗೆ ಮುಳುವಾಗುವುದರಲ್ಲಿ ಸಂಶಯವಿಲ್ಲ. ದೇಶದ ಕೋಟ್ಯಂತರ ಜನರು ನಂಬುವ ಪ್ರವಾದಿಗೆ ನಿಂದನೆ, ಶ್ರೀ ರಾಮನ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುವವರು ಅಜ್ಞಾನಿಗಳು. ಅಂತಹವರ ವಿರುದ್ಧ ಸರಕಾರ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಿದೆ. ಅನ್ಯಾಯ ಎದುರಾದಾಗ ಎಲ್ಲರೂ ಎಚ್ಚೆತ್ತು ಹೋರಾಟ ನಡೆಸಬೇಕು. ಎಲ್ಲಾ ಇಲಾಖೆಗಳ ಅಧಿಕಾರಿಗಳು ಎಚ್ಚೆತ್ತುಕೊಂಡಲ್ಲಿ…

Read More

ಉಳ್ಳಾಲ್ ನ್ಯೂಸ್ ನೆಟ್ ವರ್ಕ್ ಉಳ್ಳಾಲ: ಖುತುಬುಝ್ಜಮಾನ್ ಹಝ್ರತ್ ಅಸಯ್ಯಿದ್ ಮುಹಮ್ಮದ್ ಶರೀಫುಲ್ ಮದನಿ(ಖ.ಸಿ.)ತಂಙಳ್‍ರವರ 423ನೇ ವಾರ್ಷಿಕ ಮತ್ತು 20ನೇ ಪಂಚವಾರ್ಷಿಕ ಉರೂಸ್ ನೇರ್ಚೆ ಕಾರ್ಯಕ್ರಮ ಎ. 2ರಿಂದ 26ರವರೆಗೆ ವಿವಿಧ ಕಾರ್ಯಕ್ರಮಗಳೊಂದಿಗೆ ಉಳ್ಳಾಲ ದರ್ಗಾ ವಠಾರದಲ್ಲಿರುವ ತಾಜುಲ್ ಉಲಮಾ ವೇದಿಕೆಯಲ್ಲಿ ಜರಗಲಿದೆ ಎಂದು ಉಳ್ಳಾಲ ದರ್ಗಾ ಸಮಿತಿ ಅಧ್ಯಕ್ಷ ಯು.ಎಸ್.ಹಂಝ ಹೇಳಿದರು. ಮಂಗಳವಾರ ದರ್ಗಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎ. 2ರಂದು ಗುರುವಾರ ಬೆಳಿಗ್ಗೆ 11ಗಂಟೆಗೆ ನವೀಕೃತ ಮಸೀದಿ ಉದ್ಘಾಟನೆಯು ಉಳ್ಳಾಲ ಖಾಝಿ ಅಸ್ಸಯ್ಯದ್ ಪಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಅವರ ನೇತೃತ್ವದಲ್ಲಿ ನಡೆಯಲಿದೆ. ಸಂಜೆ ನಾಲ್ಕು ಗಂಟೆಗೆ ನಡೆಯಲಿರುವ ದರ್ಗಾ ಝಿಯಾರತ್, ತಾಜುಲ್ ಉಲಮಾ ಅನುಸ್ಮರಣೆ, ತಹ್ಲೀಲ್ ಮತ್ತು ಖತಮುಲ್ ಕುರ್‍ಆನ್ ಸಮರ್ಪಣೆ ದ್ಸಿಕ್ರ್ ಮಜ್ಲಿಸ್ ಕಾರ್ಯಕ್ರಮದಲ್ಲಿ ಸೆಯ್ಯಿದ್ ಆಟಕೋಯ ತಂಙಳ್ ದುವಾ ನೆರವೇರಿಸಲಿದ್ದಾರೆ. ಅದೇ ದಿನ ಸಂಜೆ ಏಳು ಗಂಟೆಗೆ ಉರೂಸ್ ಕಾರ್ಯಕ್ರಮದ ಉದ್ಘಾಟನೆ ಮತ್ತು ತಾಜುಲ್ ಉಲಮಾ ಪ್ರಶಸ್ತಿ ಪ್ರದಾನ ಸಮಾರಂಭ ಉಳ್ಳಾಲ…

Read More