ಹರೇಕಳ : ಕುಡಿಯುವ ನೀರಿಗೆ ಸರಕಾರ ಪಂಚಾಯಿತಿಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಆಗದಿರುವುದರಿಂದ ವಿಷಮ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಿಂದಾಗಿ ಜಿಲ್ಲಾ ಪಂಚಾಯಿತಿ ಸಾರ್ವಜನಿಕರ ಯಾವುದೇ ಬೇಡಿಕೆಗಳಿಗೆ ಸ್ಪಂದಿಸುವ ಸ್ಥಿತಿಯಲ್ಲಿ ಇಲ್ಲ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಸತೀಶ್ ಕುಂಪಲ ಅಭಿಪ್ರಾಯಪಟ್ಟರು. ಹರೇಕಳ ಗ್ರಾಮದ ಹೊರಪಾದೆಯಿಂದ ಉಳಿದೊಟ್ಟು ಕೊಡಮಣಿತ್ತಾಯ ದೈವಸ್ಥಾನ ಸಂಪರ್ಕಿಸುವ ರಸ್ತೆ ಕಾಂಕ್ರಿಟೀಕರಣಕ್ಕೆ ಮಂಗಳವಾರದಂದು ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಕಳೆದ ವರುಷದ ನೀಡಿದ ಅನುದಾನದ ಶೇ. 50ರಷ್ಟನ್ನೂ ಈ ಬಾರಿ ಸರಕಾರ ಜಿಲ್ಲಾ ಪಂಚಾಯಿತಿಗೆ ನೀಡಿಲ್ಲ. ಸರಕಾರ ತಕ್ಷಣವೇ ಜಿಲ್ಲಾ ವ್ಯಾಪ್ತಿಯಲ್ಲಿ ತ್ವರಿತ ರೀತಿಯಲ್ಲಿ ಪರಿಹಾರ ಬಿಡುಗಡೆ ಮಾಡಬೇಕು. ಗ್ರಾಮೀಣ ಪ್ರದೇಶದ ರಸ್ತೆಯ ಅಭಿವೃದ್ಧಿ ಹಾಗೂ ಗ್ರಾಮದ ಎಲ್ಲ ಭಾಗದಲ್ಲೂ ಅಭಿವೃದ್ಧಿಗಾಗಿ ಹಣ ಬಿಡುಗಡೆ ಮಾಡಬೇಕು. ಗ್ರಾಮ ಪಂಚಾಯಿತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಪಂಚಾಯಿತಿ ಪರವಾನಗಿ ಕೊಡುತ್ತಿಲ್ಲ. ಹಾಗಾಗಿ ಮನೆ ಮಾಲೀಕರು ಹಾಗೂ ಗುತ್ತಿಗೆದಾರರು ಅನುಮತಿಗಾಗಿ ಅಧಿಕಾರಿಗಳ ಹಿಂದೆ ಓಡಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು. ಪರವಾನಗಿ ನೀಡುವುದರ ಸರಕಾರ ಮೇಲ್ಮನವಿ…
Author: UllalaVani
ಉಳ್ಳಾಲ: ಕ್ರೀಡೆಯಲ್ಲಿ ಪ್ರಾಮಾಣಿಕ ಹೋರಾಟಕ್ಕೆ ಸಿಕ್ಕ ಜಯ ಕ್ರೀಡಾಳುವಿಗೆ ಆತ್ಮತೃಪ್ತಿ ಎಂದು ಫಾ. ಮುಲ್ಲರ್ ಚಾರಿಟೇಬಲ್ ಟ್ರಸ್ಟ್ನ ನಿರ್ದೇಶಕ ರೆ. ಫಾ. ಪ್ಯಾಟ್ರಿಕ್ ರಾಡ್ರಿಗಸ್ ಹೇಳಿದರು. ಅವರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಆಶ್ರಯದಲ್ಲಿ ನಡೆಯುತ್ತಿರುವ ದಕ್ಷಿಣ ಭಾರತ ಅಂತರ್ ವೈದ್ಯಕೀಯ ಹಾಗೂ ಆರೋಗ್ಯ ವಿಜ್ಞಾನ ಕಾಲೇಜು ಪಂದ್ಯಾವಳಿ `ಐದನೆಯ ನಿಟ್ಟೆ ಅಕೋಲೇಡ್ಸ್’-2015ನ್ನು ಕೆ.ಎಸ್. ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು. ಸೋಲು ನಿರಾಶೆ ಹುಟ್ಟಿಸಬಾರದು. ಸ್ಪರ್ಧಾಳು ಸೋಲನ್ನು ಸವಾಲಾಗಿ ಸ್ವೀಕರಿಸುವ ಮೂಲಕ ಮುಂದಿನ ಸ್ಪರ್ಧೆಯಲ್ಲಿ ಇನ್ನಷ್ಟು ಸಾಧಿಸಲು ಸಾಧ್ಯ.ವೈಯಕ್ತಿಕವಾಗಲೀ ತಂಡಕ್ಕಾಗಲೀ ಸಿಕ್ಕ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಕ್ರೀಡೆಯು ನಮ್ಮಲ್ಲಿ ಗುಣನಡತೆ ಉತ್ತಮಪಡಿಸಿಕೊಳ್ಳಲು ಹಾಗೂ ವೈಯಕ್ತಿಕ ಅಭಿವೃದ್ಧಿಗೂ ಪೂರಕವಾಗುತ್ತದೆ ಎಂದರು. ಬಿಲಿಯನ್ ಜನಸಂಖ್ಯೆ ಇರುವ ಭಾರತ ಕ್ರೀಡೆಯಲ್ಲಿ ಜಗತ್ತಿನ ಇತರ ರಾಷ್ಟ್ರಗಳಿಗಿಂತ ಎತ್ತರದ ಸ್ಥಾನದಲ್ಲಿ ಗುರುತಿಸಿಕೊಳ್ಳಬೇಕು ಎಂದು ನಿಟ್ಟೆ ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೋ ಡಾ.ಎಸ್.ರಮಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಕ್ಷೇಮ ಡೀನ್ ಡಾ. ಸತೀಶ್ ಕುಮಾರ್ ಭಂಡಾರಿ, ರಿಜಿಸ್ಟಾ ರ್ ಡಾ. ಜಯಪ್ರಕಾಶ್…
ತಲಪಾಡಿ : ನಮ್ಮಿಂದ ಸಮಾಜಕ್ಕೆ ಒಳಿತಾದರೆ ಮಾತ್ರ ಬದುಕು ಸಾರ್ಥಕ. ನಮ್ಮಲ್ಲಿರುವ ಇಚ್ಛಾಶಕ್ತಿ, ಕ್ರಿಯಾಶಕ್ತಿಗಳಿಂದ ಸಮಾಜಕ್ಕೆ ಒಳಿತನ್ನೇ ಮಾಡಬೇಕು. ಕ್ಷೇತ್ರವೊಂದರ ಬ್ರಹ್ಮಕಲಶಾಭಿಷೇಕದಿಂದ ಹೇಗೆ ದೇವಸ್ಥಾನ ಪಾವಿತ್ರ್ಯವಾಗುವುದು ಅದೇ ರೀತಿ ನಮ್ಮ ಅಂತರಂಗ ಶುದ್ಧಿಯಾದರೆ ಮಾತ್ರ ನಮ್ಮ ಬದುಕು, ಪರಿಸರ, ಸಮಾಜವನ್ನು ಸದೃಢವಾಗಿಡಲು ಸಾಧ್ಯ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಸಾದ್ವಿ ಮಾತಾನಂದಮಯಿ ನುಡಿದರು. ಅವರು ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರು ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆದ ಏಳನೆಯ ದಿನದ ದಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಪ್ರತಿಯೊಬ್ಬರ ಚಿಂತನೆ ಒಳ್ಳೆಯದ್ದೇ ಆಗಿರಬೇಕು. ಪ್ರತಿಯೊಬ್ಬರು ಒಳ್ಳೆಯದ್ದನ್ನೇ ಬಯಸಬೇಕು. ದೇವಾರಾಧಾನೆ, ಸಮಾಜಸೇವೆ, ಅಶಕ್ತರಿಗೆ ಸಹಾಯ ಮಾಡುವುದು ನಮ್ಮ ಬದುಕಿನಲ್ಲಿ ಸಂತಸ ಕೊಡುತ್ತದೆ. ಅದು ಇತರರಿಗೆ ಮಾದರಿ ಆಗುತ್ತದೆ. ಒಟ್ಟಿನಲ್ಲಿ ನಮ್ಮಿಂದ ಸಮಾಜಕ್ಕೆ ಒಳ್ಳೆಯದ್ದೇ ಆಗಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸಗೈದ ಆಸರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಆಶಾ…
ಉಳ್ಳಾಲ: ಗಾಂಧೀಜಿ ಕಂಡ ಸ್ವಚ್ಛ ಭಾರತದ ಕನಸಿಗೆ ಈಗಿನ ಪ್ರಧಾನಿ ನರೇಂದ್ರ ಮೋದಿ ಮರು ಚಾಲನೆ ನೀಡಿದ್ದರಿಂದ ಇಂದು ಭಾರತದಾದ್ಯಂತ ಜಾತಿ, ಮತ, ಭೇದವಿಲ್ಲದೆ ಸ್ವಚ್ಛತೆ ಬಗ್ಗೆ ಕಾರ್ಯಕ್ರಮ ನಡೆಯುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್ ರೈ ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಮಂಗಳವಾರ ಮುಡಿಪುವಿನಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ಬುಲ್ ಬುಲ್ ಮಕ್ಕಳಿಂದ ನಡೆದ ಸ್ಚಚ್ಛತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮುಡಿಪುವಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಲವು ಬಾರಿ ನಡೆದಿದೆ. ಈಗ ಶಾಲಾ ಮಕ್ಕಳಿಂದ ಕಾರ್ಯಕ್ರಮ ನಡೆಯುತ್ತಿದ್ದು ಎಳೆ ವಯಸ್ಸಿನಲ್ಲಿಯೇ ಮಕ್ಕಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಶ್ಲಾಘನೀಯ ಎಂದರು. ಕಸ ಹೆಕ್ಕಿ ಪರಿಸರ ಸ್ವಚ್ಛತೆ ಮಾಡುವ ಬದಲು ಕಸ ಎಸೆಯದೆ ಸ್ವಚ್ಛತೆ ಕಾಪಾಡುವುದು ಉತ್ತಮ. ಮುಡಿಪುವಿನಲ್ಲಿ ದ್ರವ ತ್ಯಾಜ್ಯ ಘಟಕ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಇಲಾಖೆ ಬೇಜವಾಬ್ದಾರಿಯಿಂದಾಗಿ ಎರಡು ವರ್ಷಗಳಿಂದ ಶಂಕು ಸ್ಥಾಪನೆಯೂ ಮಾಡಲು ಆಗಿಲ್ಲ ಎಂದು…
nwsdsk ull ಸೊಮೇಶ್ವರ: ಮನುಷ್ಯ ಸ್ವಾರ್ಥಿ ಎಂದು ಜನರು ಆಡಿಕೊಳ್ಳುವುದು ಸುಳ್ಳು. ರಕ್ತದಾನ ಶಿಬಿರಗಳಲ್ಲಿ ಅದೆಷ್ಟೋ ಗುರುತು ಪರಿಚಯವಿಲ್ಲದವರ ಜೀವ ಉಳಿಸುವ ಕಾರ್ಯ ನಡೆಯುತ್ತದೆ. ದಾನಿಗಳಿಗೆ ಆ ತೃಪ್ತಿ ಸಿಗುತ್ತದೆ. ನಮ್ಮ ವೈಯಕ್ತಿಕ ಬದುಕನ್ನು ಬೆಳಗಿಸುವ ಚಿಂತನೆ ನಮ್ಮಲ್ಲಿದ್ದು ಅದರಷ್ಟೆ ಯೋಚನೆ ಇತರರ ಜೀವ ಉಳಿಸುವಲ್ಲೂ ಇರಬೇಕು. ನಾವು ಸನ್ಮಾರ್ಗ, ಸತ್ಚಿಂತನೆ, ಉತ್ತಮ ಆದರ್ಶ, ಧ್ಯೇಯಗಳೊಂದಿಗೆ ಸಮಾಜ ಸೇವೆ ಮಾಡುತ್ತಾ ಬದುಕಿದಾಗ ಅದನ್ನು ಇತರರು ಮಾದರಿಯಾಗಿ ಸ್ವೀಕರಿಸುತ್ತಾರೆ. ಅವರು ಭಾನುವಾರ ಕೋಟೆಕಾರು ಬೀರಿಯ ಸಾರ್ವಜನಿಕ ಶ್ರೀ ಗಣೇಶ ಸೇವಾ ಸಮಿತಿಯ ನೇತೃತ್ವದಲ್ಲಿ ಮಂಗಳೂರಿನ ಕಸ್ತೂರ್ಬಾ ಮೆಡಿಕಲ್ ಆಸ್ಪತ್ರೆಯ ಸಹಯೋಗದೊಂದಿಗೆ ಜೆ.ಎಸ್.ಆಸ್ಪತ್ರೆ ಕೋಟೆಕಾರು, ಓಂ ಶಕ್ತಿ ಫ್ರೆಂಡ್ಸ್ ಸಂಕೊಳಿಗೆ, ನವಚೇತನ ಫ್ರೆಂಡ್ಸ್ ಸಂಕೊಳಿಗೆ ಹಾಗೂ ಸ್ನೇಹ ಸಂಗಮ ಉಚ್ಚಿಲ ತಂಡಗಳ ಸಂಯುಕ್ತ ಆಶ್ರಯದಲ್ಲಿ ಕೋಟೆಕಾರಿನ ಸ್ಟೆಲ್ಲಾ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ನಡೆದ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜೆ.ಎಸ್.ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ವಿಜಯ್ ಕುಮಾರ್ ಶಿಬಿರ ಉದ್ಘಾಟಿಸಿದರು.…
ಉಳ್ಳಾಲ : ಇತಿಹಾಸ ಪ್ರಸಿದ್ಧ ಉಳ್ಳಾಲ ಉರೂಸ್ ಪೂರ್ವಭಾವಿಯಾಗಿ ಉಳ್ಳಾಲ ನಗರ ಸಭಾ ವ್ಯಾಪ್ತಿಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 2 ಕೋಟಿ ರೂ ಪ್ರಸ್ತಾವನೆ ಸಲ್ಲಿಸಿದ್ದು, ಮುಂದಿನ ಒಂದು ತಿಂಗಳೊಳಗೆ ಎಲ್ಲಾ ಕಾಮಗಾರಿಗಳು ಮುಗಿಯಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ತಿಳಿಸಿದರು. ಅವರು ಉಳ್ಳಾಲ ಉರೂಸ್ ಪೂರ್ವ ಭಾವಿಯಾಗಿ ಉಳ್ಳಾಲ ನಗರಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯನ್ನು ನಡೆಸಿ ಉರೂಸ್ ಕಾರ್ಯಕ್ರಮದ ಸಂದರ್ಭದಲ್ಲಿ ದೇಶ ವಿದೇಶದಿಂದ ಬರುವ ಯಾತ್ರಾರ್ಥಿಗಳಿಗೆ ಯಾವುದೇ ಅಡೆ ತಡೆಯಾಗದ ರೀತಿಯಲ್ಲಿ ಮೂಲಭೂತ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಿಂದ ಉಳ್ಳಾಲ ಸಂಪರ್ಕಿಸುವ ರಸ್ತೆವರೆಗೆ ಮತ್ತು ತಲಪಾಡಿಯಿಂದ ತೊಕ್ಕೊಟ್ಟುವರೆಗೆ ರಸ್ತೆ ಅಭಿವೃದ್ಧಿ ಮತ್ತು ಸರ್ವಿಸ್ ರಸ್ತೆ ನಿರ್ಮಾಣವನ್ನು ಪೂರ್ತಿಗೊಳಿಸುವಂತೆ ರಾಷ್ಟ್ರೀಯ ಹೆದ್ದಾರಿ , ಪಿಡಬ್ಲುಡಿ ಅಧಿಕಾರಿಗಳಿಗೆ ಸೂಚಿಸಿದರು. ಉಳ್ಳಾಲದಲ್ಲಿ ಕುಡಿಯುವ ನೀರು, ಒಳರಸ್ತೆಗಳ ಅಭಿವೃದ್ಧಿಗೆ ಅನುದಾನ ಸೇರಿದಂತೆ, ತುರ್ತುಸೇವೆಗೆ ಸಂಬಂಧಿಸಿದಂತೆ ಅಗ್ನಿಶಾಮಕದಳ, ಶಾಂತಿ ಸುವ್ಯವಸ್ಥೆಯ ನಿಟ್ಟಿನಲ್ಲಿ ಪೊಲೀಸ್ ಇಲಾಖೆ…
ಉಳ್ಳಾಲ : ಯುಗಧರ್ಮದಂತೆ ಬದಲಾವಣೆ ಸಹಜವಾಗಿದ್ದು ಧಾರ್ಮಿಕ ವ್ಯವಸ್ಥೆಯಲ್ಲಿಯೂ ಬದಲಾವಣೆ ಅನಿವಾರ್ಯ. ಹಿಂದಿನ ಕಾಲದ ವ್ಯವಸ್ಥೆಗಳನ್ನು ಪ್ರಸ್ತುತ ಕಾಲಕ್ಕೆ ತಕ್ಕಂತೆ ಬದಲಾವಣೆ ಮಾಡಿದಾಗ ಅದನ್ನು ವಿರೋಧಿಸುವುದಕ್ಕಿಂತ ಒಪ್ಪಿಕೊಳ್ಳಬೇಕಾಗುತ್ತದೆ. ಯಾಕೆಂದರೆ ವಿಶಾಲವಾಗಿರುವ ಹಿಂದೂ ಧರ್ಮವನ್ನು ಅರಿತುಕೊಳ್ಳುವುದೇ ಬಹಳಷ್ಟಿರುವಾಗ ಅಲ್ಪಸ್ವಲ್ಪ ತಿಳಿದುಕೊಂಡು ಅದರಲ್ಲಿನ ಆಚರಣೆ, ಪದ್ಧತಿಗಳು, ನಂಬಿಕೆಗಳನ್ನು ಅರ್ಥೈಸಿಕೊಳ್ಳದೆ ನಿಂದಿಸುವುದು ತಪ್ಪು ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯ ಮಂಗಳೂರು ಆವೃತ್ತಿಯ ಮುಖ್ಯ ಪ್ರಸರಣಾಧಿಕಾರಿ ನವನೀತ ಶೆಟ್ಟಿ ಕದ್ರಿ ಅಭಿಪ್ರಾಯಪಟ್ಟರು. ತಲಪಾಡಿ ದೇವಿಪುರದ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರು ಹಾಗೂ ಪರಿವಾರ ದೇವರುಗಳ ಪುನರ್ ಪ್ರತಿಷ್ಠೆ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಪ್ರಯುಕ್ತ ನಡೆಯುತ್ತಿರುವ ಆರನೆಯ ದಿನದ ಧಾರ್ಮಿಕ ಸಭೆಯಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು. ವಿಶ್ವಾಮಿತ್ರ ನಾಯಿ ಮಾಂಸ ತಿಂದನೆಂದು ಅವರನ್ನು ದೂಷಿಸುವುದಕ್ಕಿಂತ ವಿಶ್ವಾಮಿತ್ರರು ನಾಯಿ ಮಾಂಸವನ್ನು ಮಂತ್ರಶಕ್ತಿಯಿಂದ ಸ್ವಚ್ಛಗೊಳಿಸಿ ತಿಂದು, ಆ ಮೂಲಕ ಭೂಲೋಕದ ಬರಗಾಲವನ್ನು ದೇವತೆಗಳಿಗೆ ತಿಳಿಸುವ ಪ್ರಯತ್ನವನ್ನು ಮಾಡಿದ್ದರು ಎಂಬ ಮರ್ಮ ಅರಿಯದವರು ಹಿಂದೂಗಳನ್ನು ದೂರದೆ…
ಮಂಗಳೂರು: ಚಿತ್ರಕಲಾ ಶಿಕ್ಷಣ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ. ಸಮರ್ಥ ಕಲಾ ಶಿಕ್ಷಕನೊಬ್ಬ ಏನೂ ಅಲ್ಲದ ವಿದ್ಯಾರ್ಥಿಯನ್ನೂ ಮುಗಿಲೆತ್ತರಕ್ಕೆ ಬೆಳೆಸಬಲ್ಲವನಾಗಿದ್ದು ಮಕ್ಕಳ ಮಾನಸಿಕ ನೆಮ್ಮದಿಗೆ ಕಾರಣನಾಗಿರುತ್ತಾನೆ ಎಂದು ಡಯಟ್ನ ಪ್ರಾಂಶುಪಾಲರಾದ ಶ್ರೀ ಸಿಪ್ರಿಯನ್ ಮೊಂತೆರೋ ತಿಳಿಸಿದರು. ಅವರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಚಿತ್ರಕಲಾ ಶಿಕ್ಷಕರ ಸಂಘದ ತಿಂಗಳ ಕಾರ್ಯಾಗಾರವನ್ನು ನಗರದಲ್ಲಿ ಉದ್ಘಾಟಿಸಿ ಮಾತಾನಾಡಿದರು. ಮುಖ್ಯ ಅತಿಥಿಗಳಾಗಿ ಕಲಾವಿದ ಬಿ.ಗಣೇಶ ಸೋಮಯಾಜಿ ಚಿತ್ರಕಲಾ ಶಿಕ್ಷಕರು ಕಾಲಕ್ಕೆ ತಕ್ಕ ಬದಲಾಗುತ್ತಾ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ವಿದ್ಯಾರ್ಥಿಗಳು ಇನ್ನೂ ಎತ್ತರಕ್ಕೆ ಬೆಳೆಯುವುದಕ್ಕೆ ಕಾರಣರಾಗಬೇಕು ಎಂದರು. ತಿಂಗಳ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ಚಿತ್ರಕಲಾ ಶಿಕ್ಷಕ ಶ್ರೀ ಭೋಜ ಹಾಂಡ ನಿರಂತರ ಮತ್ತು ವ್ಯಾಪಕಮೌಲ್ಯ ಮಾಪನದ ಬಗ್ಗೆ ಮಾರ್ಗದರ್ಶನ ನೀಡಿದರು. ಜಿಲ್ಲೆಯ ಸುಮಾರು 100 ಮಂದಿ ಚಿತ್ರಕಲಾ ಶಿಕ್ಷಕರು ಇದರ ಸದುಪಯೋಗ ಪಡೆದುಕೊಂಡರು. ಅಧ್ಯಕ್ಷರಾಗಿ ಮಾತನಾಡಿದ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ಮಹಾಬಲ ಕುಳ…
ದೇರಳಕಟ್ಟೆ, ಜ.೨೩: ಬದ್ರಿಯಾ ಕೇಂದ್ರ ಜುಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ದೇರಳಕಟ್ಟೆ ಇದರ ಆಶ್ರಯದಲ್ಲಿ ಮೀಲಾದುನ್ನಬಿ ಹಾಗೂ ಮೀಲಾದ್ ಫೆಸ್ಟ್ ೨೦೧೫ ಕಾರ್ಯಕ್ರಮವು ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ಥಳೀಯ ಖತೀಬರಾದ ಬಹು| ಏ.ಒ ಶರೀಫ್ ದಾರಿಮಿಯವರು ಮಾತನಾಡಿ ಪೈಗಂಬರ ಸಂದೇಶವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು, ನೆರೆಮನೆಯವನು ಹಸಿದಿರುವಾಗ ಹೊಟ್ಟೆ ತುಂಬಾ ಉಣ್ಣುವವನು ನನ್ನವನಲ್ಲ ಎಂಬ ಪ್ರವಾದಿ ನುಡಿಯನ್ನು ಅರ್ಥೈಸಿಕೊಂಡು ಸಮಾಜದಲ್ಲಿ ಆಡಂಬರ ಮದುವೆಗೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದ್ದು ಆಡಂಬರ ಮದುವೆಯ ಆಮಂತ್ರಣವನ್ನು ಆಯಾ ಜಮಾಅತಿನ ಖತೀಬರಿಗೆ ನೀಡದಿರುವುದೇ ಲೇಸು ಎಂದು ಹೇಳಿದರು. ಆರಂಭದಲ್ಲಿ ಮಸೀದಿ ಗೌರವಾಧ್ಯಕ್ಷರಾದ ಅಬ್ದುಲ್ಲಾ ಹಾಜಿಯವರು ಧ್ವಜಾರೋಹಣಗೈದರು. ನಂತರ ಹಯಾತುಲ್ ಇಸ್ಲಾಂ ಮದರಸ ದೇರಳಕಟ್ಟೆ, ಅರಫಾ ಮದರಸ ಜಲಾಲ್ಬಾಗ್ ಹಾಗೂ ಮನಾರುಲ್ ಹುದಾ ಮದರಸ ದೇರಳಕಟ್ಟೆ, ಅರಫಾ ಮದರಸ ಜಲಾಲ್ಬಾಗ್ ಹಾಗೂ ಮನಾರುಲ್ ಹುದಾ ಮದರಸ ಗ್ರೀನ್ ಗ್ರೌಂಡ್ ಇಲ್ಲಿನ ಮದರಸ ವಿದ್ಯಾರ್ಥಿಗಳ ಸ್ಕೌಟ್ ಮತ್ತು ದಫ್ ನೊಂದಿಗೆ…
ಉಳ್ಳಾಲ: ಬಡವರ ಅಂಗಡಿಗಳನ್ನೇ ಗುರಿಯಾಗಿಸಿ ನಡೆಸುತ್ತಿರುವ ಕಿಡಿಗೇಡಿಗಳು ಕೃತ್ಯ ಖಂಡನೀಯ. ಉಳ್ಳಾಲ ನಗರಸಭೆ ಮತ್ತು ಟೈಲರ್ಸ್ ಅಸೋಸಿಯೇಷನ್ ಆಶ್ರಯದಲ್ಲಿ ಮತ್ತೆ ಅಂಗಡಿಯಲ್ಲಿ ವ್ಯಾಪಾರ ನಡೆಸುವಂತೆ ಎಲ್ಲಾ ರೀತಿಯಲ್ಲಿ ಸಹಕರಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಅವರು ತೊಕ್ಕೊಟ್ಟು ಕಿಡಿಗೇಡಿಗಳು ಬೆಂಕಿ ಹಾಕಿರುವ ಟಿ.ಸಿ.ರೋಡ್ ನಲ್ಲಿರುವ ವಾಸುದೇವ ಪೂಜಾರಿ ಎಂಬವರಿಗೆ ಸೇರಿದ ನಿತ್ಯಾನಂದ ಟೈರ್ಸ್ ಅಂಗಡಿಗೆ ಭೇಟಿ ನೀಡಿ ಹೇಳಿದರು. ತೊಕ್ಕೊಟ್ಟು ಒಳಪೇಟೆಯಲ್ಲಿರುವ ಎರಡು ಸಿಸಿಟಿವಿ ಕೆಮರಾ ಮೂಲಕ ಆರೋಪಿಗಳನ್ನು ಪತ್ತೆಹಚ್ಚುವ ಕಾರ್ಯ ಪೊಲೀಸರು ಶೀಘ್ರವೇ ನಡೆಸುತ್ತಾರೆ. ಶೇ.೫ ರಷ್ಟಿರುವ ಕಿಡಿಗೇಡಿಗಳು ಇಂತಹ ಕೃತ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಇದನ್ನು ಧರ್ಮ ಆಧಾರಿತವಾಗಿ ತೆಗೆದುಕೊಳ್ಳದೆ, ಸಮಾಜದ್ರೋಹಿಗಳ ಮತ್ತು ಬಡವರ ನಡುವಿನ ಹೋರಾಟ ಎಂದು ಪರಿಗಣಿಸಿ ಆರೋಪಿಗಳ ಪತ್ತೆಗೆ ಎಲ್ಲರೂ ಸಹಕರಿಸಬೇಕು ಎಂದರು. ಈ ಸಂದರ್ಭ ಉಳ್ಳಾಲ ನಗರಸಭೆ ಅಧ್ಯಕ್ಷೆ ಗಿರಿಜಾ ಬಾ, ಉಪಾಧ್ಯಕ್ಷೆ ರಝಿಯಾ ಇಬ್ರಾಹಿಂ, ಟೈಲರ್ಸ್ ಅಸೋಸಿಯೇಷನ್ ಮಾಜಿ ಜಿಲ್ಲಾಧ್ಯಕ್ಷ ರಮೇಶ್ ಮಾಡೂರು, ಉಳ್ಳಾಲ ಎಸ್.ಐ.ಗಳಾದ ಭಾರತಿ, ರಾಜೇಂದ್ರ, ಟೈಲರ್ಸ್ ಅಸೋಸಿಯೇಷನ್ನಿನ ಗಿರೀಶ್,…

