ಮಂಗಳೂರು: ಪ್ರತಿಷ್ಟಿತ ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್-2026 ಕಿರೀಟವನ್ನು ಮಂಗಳೂರಿನ ಶಿಖಾ ಸುಶೀಲ್ ಮುಡಿಗೇರಿಸಿಕೊಂಡಿದ್ದಾರೆ. ಮಂಗಳೂರಿನ ಮಿಲಾಗ್ರಿಸ್ ಸಭಾಭವನದಲ್ಲಿ ನಡೆದ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಶಿಖಾ ಸುಶೀಲ್ ಇವರನ್ನ ವಿಜೇತರೆಂದು ಘೋಷಿಸಲಾಯಿತು. ಸೆರೆನಾ ಎವ್ಜಿನ್ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡರೆ ಫೇ ಮಾರ್ಟಿಸ್ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾದರು. ದೇಶ ವಿದೇಶಗಳಿಂದ ಸಾವಿರಕ್ಕಿಂತಲೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿದ್ದ ಈ ಸೌಂದರ್ಯ ಸ್ಪರ್ಧೆಯಲ್ಲಿ ದ್ವಿತೀಯ ಹಂತಕ್ಕೆ ಇಪ್ಪತ್ತೈದು ಸ್ಪರ್ಧಿಗಳು ಆಯ್ಕೆಯಾಗಿದ್ದರು. ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಆತ್ಮಸ್ಥೈರ್ಯ, ಸ್ವ ಪರಿಚಯಿಸುವಿಕೆ, ರೇಂಪ್ ವಾಕ್, ಪ್ರಶ್ನೋತ್ತರಿ, ಹಾಗೂ ಎಕ್ಸ್ ಫಾಕ್ಟರ್ ವಿಭಾಗಳಲ್ಲಿ ಮಿಂಚಿದ ಶಿಖಾ ಸುಶೀಲ್, ಹಿಸ್ನಾ ಮಿಸ್ಸ್ ದಾಯ್ಜಿವರ್ಲ್ಡ್ ಕಿರೀಟಕ್ಕೆ ಭಾಜನರಾದರು. ಹಿಸ್ನಾ ಇಂಟರ್ ನ್ಯಾಶನಲ್ ನಿರ್ದೇಶಕರಾದ ರೊನಾಲ್ಡ್ ಪಿಂಟೊ , ಪತ್ನಿ ದೊರೊತಿ ಪಿಂಟೊ, ವಿಜೇತರನ್ನು ಕಿರೀಟದ ಜೊತೆಗೆ ತಲಾ ಮೂರು, ಎರಡು ಹಾಗೂ ಒಂದು ಲಕ್ಷದ ನಗದು ಬಹುಮಾನಗಳನ್ನು ನೀಡಿ ಗೌರವಿಸಿದರು. ಅಂತಿಮ ಸುತ್ತಿಗೆ ಪ್ರವೇಶಿಸಿದ ಇತರ ಒಂಭತ್ತು ಸ್ಪರ್ಧಿಗಳು…
Author: UllalaVani
ಬೆಂಗಳೂರು: ಇಲ್ಲಿನ ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಇನ್ಫರ್ಮೇಷನ್ ವತಿಯಿಂದ ಇತ್ತೀಚೆಗೆ ಎಐಸಿಟಿಇ ಪ್ರತಿಷ್ಠಿತ ವೃತ್ತಿಪರ ಯೋಜನೆಯಡಿ ಉದ್ಘಾಟನಾ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳು ಹಾಗೂ ಐಇಇಇ ಫೆಲೋ ಆದ ಖ್ಯಾತ ಶಿಕ್ಷಣತಜ್ಞ ಡಾ. ವೇಣುಗೋಪಾಲ್ ಕೆ. ಆರ್. ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಜನರೇಟಿವ್ ಎಐ ಮತ್ತು ಫ್ಯೂಚರ್ ಕಂಪ್ಯೂಟಿAಗ್” ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಉದಯೋನ್ಮುಖ ತಾಂತ್ರಿಕ ಪ್ರವೃತ್ತಿಗಳ ಬಗ್ಗೆ ಬೆಳಕು ಚೆಲ್ಲಿದ ಅವರು, ನಾವೀನ್ಯತೆಯ ಭವಿಷ್ಯದ ಬಗ್ಗೆ ವಿದ್ಯಾರ್ಥಿಗಳು ವಿಮರ್ಶಾತ್ಮಕವಾಗಿ ಯೋಚಿಸಲು ಪ್ರೇರೇಪಿಸಿದರು. ನಂತರ ಅಧ್ಯಾಪಕರೊಂದಿಗೆ ನಡೆದ ಸಂಶೋಧನಾ ಪ್ರಕ್ರಿಯೆಯ ಸಂವಾದವು ಶೈಕ್ಷಣಿಕ ತೊಡಗಿಸಿಕೊಳ್ಳುವಿಕೆಯನ್ನು ಬಲಪಡಿಸಿತು. ಈ ಕಾರ್ಯಕ್ರಮದ ಸಂಚಾಲಕರಾದ ಡಾ. ಶಿವಕುಮಾರ್ ಟಿ. ಅವರ ಸಕ್ರಿಯ ಮುತುವರ್ಜಿಯಿಂದಾಗಿ ಈ ಪ್ರತಿಷ್ಠಿತ ಅನುದಾನವು ಸಂಸ್ಥೆಗೆ ಲಭಿಸಿದೆ. ಡೀನ್ ಡಾ. ಬೋಜಮ್ಮ, ವಿಭಾಗದ ಮುಖ್ಯಸ್ಥರಾದ ಡಾ. ಬಿ. ಜಿ. ಪ್ರಶಾಂತಿ ಮತ್ತು ಡಾ. ಜಯತಿ ಭದ್ರಾ ಹಾಗೂ…
ಮಂಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ವಾಣಿಜ್ಯ ಹಾಗೂ ನಿರ್ವಹಣಾ ವಿಭಾಗವು ಫೋರಮ್ ಆಫ್ ಬಿಸಿನೆಸ್ ಮ್ಯಾನೇಜ್ಮೆಂಟ್ ಟೀಚರ್ಸ್ ಸಹಯೋಗದೊಂದಿಗೆ ಬಿ.ಬಿ.ಎ ನಾಲ್ಕನೇ ಸೆಮಿಸ್ಟರ್ನ ಪಠ್ಯಕ್ರಮದ ಕುರಿತು ಒಂದು ದಿನದ ಕಾರ್ಯಾಗಾರ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರಭಾರ ಕುಲಸಚಿವ ಡಾ. ಗಣೇಶ್ ಸಂಜೀವ್ ಅವರು, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪಠ್ಯಕ್ರಮವು ಉದ್ಯಮದ ಅಗತ್ಯತೆಗಳಿಗೆ ಪೂರಕವಾಗಿರಬೇಕು. ಶೈಕ್ಷಣಿಕ ಸಹಯೋಗ ಮತ್ತು ನಿರಂತರ ಕಲಿಕೆಯಿಂದ ಮಾತ್ರ ಗುಣಮಟ್ಟದ ಶಿಕ್ಷಣ ಸಾಧ್ಯ,” ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫರಾಜ್ ಜೆ. ಹಾಸಿಂ ಮಾತನಾಡಿ, ಶಿಕ್ಷಕರ ಜ್ಞಾನಾರ್ಜನೆಗೆ ಇಂತಹ ಕಾರ್ಯಾಗಾರಗಳು ದಾರಿದೀಪ ಎಂದರು. FOBMAT ಅಧ್ಯಕ್ಷ ಡಾ. ಚಂದ್ರಶೇಖರ ಕೆ. ಅವರು ಪಠ್ಯಕ್ರಮದ ಹೊಸ ಬದಲಾವಣೆಗಳ ಕುರಿತು ಪೀಠಿಕೆ ನೀಡಿದರು. ವೇದಿಕೆಯಲ್ಲಿ FOBMAT ಕಾರ್ಯದರ್ಶಿ ಪ್ರೊ. ನಂದಕಿಶೋರ್ ಕೆ., ಪಿ.ಎ…
ಮಂಗಳೂರು: ಇಲ್ಲಿನ ಸೇಂಟ್ ಅಲೋಶಿಯಸ್ ಇದರ ಸ್ಕೂಲ್ ಆಫ್ ಬಿಸಿನೆಸ್ ಆಂಡ್ ಮ್ಯಾನೇಜ್ಮೆಂಟ್ನ ಎಂಬಿಎ ವಿಭಾಗವು ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವು ಕೊಟೇಕಾರಿನ ಎಐಎಂಐಟಿ ಕ್ಯಾಂಪಸ್ನ ಆರ್ಥರ್ ಶೆನಾಯ್ ಸ್ಮಾರಕ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಕೆಸಿಸಿಐ ಅಧ್ಯಕ್ಷರಾದ ಪಿ.ಬಿ. ಅಹ್ಮದ್ ಮುದಸ್ಸರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ವಿಶೇಷ ಉಪನ್ಯಾಸ ನೀಡಿದರು. ಎಐಎಂಐಟಿ ನಿರ್ದೇಶಕರಾದ ವಂ| ಡಾ| ಕಿರಣ್ ಕೊಥಾ ಎಸ್.ಜೆ. ಅವರು ಅಧ್ಯಕ್ಷೀಯ ಭಾಷಣ ಮಾಡಿದರು. ಡೀನ್ ಡಾ. ರಜನಿ ಸುರೇಶ್ ಅವರು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮಾಹಿತಿ ನೀಡಿದರೆ, ಸಾಂತಾ ಕ್ಲಾರಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದ ಸಂಯೋಜನೆಯಲ್ಲಿ ಡಾ. ಸ್ವಪ್ನಾ ರೋಸ್ ಪ್ರಮುಖ ಪಾತ್ರ ವಹಿಸಿದ್ದರು. ವಿದ್ಯಾರ್ಥಿ ಸಂಯೋಜಕರಾದ ರಿಯೋನಾ ತೆರೇಸಾ ತ್ರಿಂದಾದೆ ಸ್ವಾಗತಿಸಿ, ಜಿಲ್ಸನ್ ಹ್ಯಾನ್ಸನ್ ಮಚಾದೊ ವಂದಿಸಿದರು. ರೆನಿಶಾ ಲೋಬೊ ಕಾರ್ಯಕ್ರಮ ನಿರ್ವಹಿಸಿದರು. ತಾಂತ್ರಿಕಗೋಷ್ಠಿಗಳಲ್ಲಿ ‘ಜ್ಯೂಸ್ ಬಾಟಲ್’ ಸ್ಥಾಪಕಿ ಪ್ರೀತಿ ನಾಯಕ್, ‘ಕೆವಿಪಿ ಬಿಸಿನೆಸ್ ಸೊಲ್ಯೂಷನ್ಸ್’ನ ಅಜಯ್ ಪ್ರಭು ಹಾಗೂ ‘ರೋಹನ್…
ಕಾಸರಗೋಡು ಕನ್ನಡ ಗ್ರಾಮದಲ್ಲಿ ನಡೆದ ನಗರಸಭೆಯ ಪ್ರಥಮ ವಾರ್ಡ್ ಸಭೆಗೆ ಆಗಮಿಸಿದ, ನೂತನವಾಗಿ ಚುನಾಯಿತರಾದ ಕಾಸರಗೋಡು ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ, ಆರೋಗ್ಯ ಕ್ಷೇಮ ಸ್ಥಾಯಿ ಸಮಿತಿ ಅಧ್ಯಕ್ಷೆ ಮೆಹರುನ್ನೀಸಾ ಹಮೀದ್, 9 ನೇ ವಾರ್ಡ್ ಕೌನ್ಸಿಲರ್,ಶಾರದಾ ಬಿ ಅವರಿಗೆ ಕಾಸರಗೋಡು ಕನ್ನಡ ಗ್ರಾಮದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ ), ಕಾಸರಗೋಡು ಇದರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಕೇರಳ ರಾಜ್ಯ ದಾಸ ಸಾಹಿತ್ಯ ಪರಿಷತ್ತು,ಕಾಸರಗೋಡು ಜಿಲ್ಲಾ (ದಕ್ಷಿಣ ಕನ್ನಡ ಜಿಲ್ಲಾ) ಫ್ರೀಲಾನ್ಸ್ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ ಇದರ ವತಿಯಿಂದ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು ಗೌರವ ಫಲಕ, ಸ್ಮರಣೆಕೆ, ಶಾಲು, ಹಾರವನ್ನಿತ್ತು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಶಿವರಾಮ ಕಾಸರಗೋಡು ಅಧ್ಯಕ್ಷತೆ ಹಾಗೂ ಮಾರ್ಗದರ್ಶನದಲ್ಲಿ ಕಾಸರಗೋಡು ಕನ್ನಡ ಗ್ರಾಮದ…
ಕೊಣಾಜೆ: ಮಂಗಳೂರು ಮಂಡಲದ ವತಿಯಿಂದ “ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ (VBG RAM G)” ಅಡಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರ ತೊಡೆದು ಹಾಕಲು, ಕೇಂದ್ರ ಸರ್ಕಾರದ ಕಾಯ್ದೆಯ ಬಗ್ಗೆ ಜನಜಾಗ್ರತಿ ಮೂಡಿಸಲು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ “ಮುಡಿಪು ಕಾಯರ್ ಗೋಳಿ ಜಂಕ್ಷನ್ ನಿಂದ ಮುಡಿಪು ಜಂಕ್ಷನ್ ವರೆಗೆ” “ಕಾಲ್ನಡಿಗೆ ಜಾಥಾ” ಹಾಗೂ ಜಾಗೃತಿ ಸಭೆಯು ನಡೆಯಿತು. ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ಮಾತನಾಡಿ, ಕಾಂಗ್ರೆಸ್ ನವರು ಎಂಜಿ ನರೇಗ ಯೋಜನೆಯ ಮೂಲಕ ಹಣವನ್ನು ಲೂಟಿ ಮಾಡುತ್ತಿದ್ದರು. ಸತ್ತವರ ಹೆಸರಲ್ಲಿ, ವಿದೇಶದವರ ಹೆಸರಲ್ಲಿ ಹಣ ಪಡೆಯುವ ಮೂಲಕ ಭ್ರಷ್ಟಾಚಾರಗಳು ನಡೆಯುತ್ತಿತ್ತು. ಅದಕ್ಕಾಗಿ ಮೋದಿಜಿಯವರು ಇದನ್ನು ತಡೆಯುವುದಕ್ಕಾಗಿ ಹಾಗೂ ಗ್ರಾಮೀಣ ಜನರ ಅಭಿವೃದ್ಧಿಗಾಗಿ ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದರು.ಮಹಾತ್ಮ ಗಾಂಧೀಜಿಯವರು ಗ್ರಾಮಸ್ವರಾಜ್ಯದ, ರಾಮರಾಜ್ಯದ ಕನಸನ್ನು ಕಂಡಿದ್ದರು. ಅದನ್ನು ಪ್ರಧಾನಿ ನರೇಂದ್ರ ಮೋದಿಜಿಯವರು ನನಸು ಮಾಡಿದ್ದಾರೆ. ಆತ್ಮನಿರ್ಭರ ಭಾರತ, ಸ್ವದೇಶಿ…
ಮಂಗಳೂರು ನಗರದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 100ಕ್ಕೂ ಅಧಿಕ ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದೆ . . ಪ್ರಾಣಿಗಳಿಗೆ ನೀಡಲಾಗುತ್ತಿರುವ ಆಹಾರದಲ್ಲಿ ವಿಷಕಾರಿ ರಾಸಾಯನಿಕ ಮಿಶ್ರಿತಗೊಂಡಿರುವುದೇ ಇದಕ್ಕೆ ಕಾರಣವೆಂಬ ಆತಂಕಕಾರಿ ವಿಚಾರ ಬಯಲಾಗಿದೆ. ಹೌದು ಏಕಾಏಕಿ ಪ್ರಾಣಿಗಳ ಸಾವು, ವಿಷಕಾರಿ ಆಹಾರ ಪೂರೈಕೆ, ಪ್ರಾಣಿಗಳ ವಿನಿಮಯ ಹಗರಣ, ಲೆಕ್ಕಪತ್ರದಲ್ಲಿ ಅವ್ಯವಹಾರ, ದಾಖಲೆಗಳಲ್ಲಿ ವ್ಯತ್ಯಾಸ ಸೇರಿದಂತೆ ವಿವಿಧ ರೀತಿಯ ಹಗರಣಗಳಲ್ಲಿ ಪಿಲಿಕುಳ ಉದ್ಯಾನವನ ಸುದ್ದಿಯಾಗುತ್ತಿತ್ತು. ಸುಮಾರು ನಾಲ್ಕು ವರ್ಷಗಳಲ್ಲಿ ಹುಲಿ, ಜಿಂಕೆ, ಕಡವೆ, ಹಂದಿ ಸೇರಿದಂತೆ 100ಕ್ಕೂ ಅಧಿಕ ಪ್ರಾಣಿಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳಿಗೆ ನೀಡುವ ಆಹಾರವನ್ನು ಪರಿಶೀಲಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.ವಿಷಕಾರಿ ರಾಸಾಯನಿಕ ಅಂಶ- 2026ರ ಫೆ.5ರಂದು ಉದ್ಯಾನವನದಲ್ಲಿ ಜಿಂಕೆಯೊಂದು ಮೃತಪಟ್ಟಿತ್ತು. ಅದರ ಮರಣೋತ್ತರ ಪರೀಕ್ಷೆ ನಡೆಸಿ ಹೊಟ್ಟೆಯಲ್ಲಿದ್ದ ಆಹಾರ ಮತ್ತು ಮಾಂಸದ ಮಾದರಿಯನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಹಿರಿಯ ಅಧಿಕಾರಿಗಳ…
ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ವಾಹನ ಸವಾರರಿಗೆ ಅನುಕೂಲವಾದರೂ, 400 ಮನೆ, ಶಾಲೆ, ದೇವಸ್ಥಾನ, ಮಸೀದಿ ಸಂಪರ್ಕ ಕಡಿತವಾಗಿದೆ. ಸ್ಥಳೀಯರು ಪಾದಚಾರಿ ಗೇಟ್ ಮತ್ತು ಆಂಬುಲೆನ್ಸ್ ದಾರಿಗೆ ಆಗ್ರಹಿಸಿದ್ದಾರೆ. ಮಂಗಳೂರು ನಗರದ ಮಹಾಕಾಳಿಪಡ್ಪು ಪ್ರದೇಶದಲ್ಲಿ ರೈಲ್ವೆ ಅಂಡರ್ ಪಾಸ್ ಬೇಕೆಂಬ ಕೂಗಿಗೆ ಫಲ ದೊರಕಿದೆ. ಅಂಡರ್ ಪಾಸ್ ವಾಹನ ಸವಾರರಿಗೆ ದೊಡ್ಡಮಟ್ಟದ ಅನುಕೂಲ ಒದಗಿಸಿದರೂ, ಸ್ಥಳೀಯ ನಿವಾಸಿಗಳನ್ನು ಸಂಕಷ್ಟಕ್ಕೆ ತಳ್ಳಿದೆ. ರೈಲ್ವೆ ಅಂಡರ್ ಪಾಸ್ ಸಂಚಾರ ಮುಕ್ತಗೊಂಡ ದಿನವೇ ಇಲ್ಲಿನ ರೈಲ್ವೆ ಗೇಟನ್ನು ಕಾಂಕ್ರೀಟ್ ತಡೆಗೋಡೆ ನಿರ್ಮಿಸಿ ಸಂಪೂರ್ಣವಾಗಿ ಮುಚ್ಚಲಾಗಿದೆ. ಪ್ರತಿ ದಿನ ಈ ಹಳಿಯಲ್ಲಿ 40-50ರೈಲುಗಳು ಸಂಚಾರ ನಡೆಸುತ್ತಿರುತ್ತದೆ. ಆದ್ದರಿಂದ ಇಲ್ಲಿ 45 ವರ್ಷಗಳಿಂದ ರೈಲ್ವೆ ಗೇಟ್ ಕಾರ್ಯ ನಿರ್ವಹಿಸುತ್ತಿತ್ತು. ಇದರಿಂದ ಕೇರಳ, ತಲಪಾಡಿ, ತೊಕ್ಕೊಟ್ಟು, ಉಳ್ಳಾಲ ಕಡೆಗಳಿಂದ ಮಂಗಳೂರು ನಗರವನ್ನು ಸಂಪರ್ಕಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಅಂಡರ್ ಪಾಸ್ ನಿಂದ ಅನಾನುಕೂಲ ಇದೀಗ ಅಂಡರ್ ಪಾಸ್ ಸಂಚಾರ ಮುಕ್ತದ ಬಳಿಕ ಹಳೆಯ ರೈಲ್ವೆ ಗೇಟ್ ಬಂದ್ ಮಾಡಿ ಹಳಿ…
ಮಂಗಳೂರು, ಫೆ. 19: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿ ಜಿಲ್ಲಾ ಕಚೇರಿ ಬಳಿಯಿಂದ ಮ.ನ.ಪಾ ಕಚೇರಿ ವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಈ ವೇಳೆ ಮಾತಾಡಿದ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸ್ವತಃ ರಾಜೀವ್ ಗಾಂಧಿಯೇ ತಮ್ಮ ಸರಕಾರ ಒಂದು ರೂಪಾಯಿ ಕೊಟ್ರೆ ಅದರಲ್ಲಿ ಕೆಲವೇ ಪೈಸೆ ಮಾತ್ರ ಜನರಿಗೆ ತಲುಪುತ್ತದೆ ಎಂದು ಹೇಳಿ ವೈಫಲ್ಯ ವ್ಯಕ್ತಪಡಿಸಿದ್ದರು. ಆದರೆ ಈಗ ಒಂದೇ ಒಂದು ರೂಪಾಯಿ ಭ್ರಷ್ಟಾಚಾರಕ್ಕೂ ಆಸ್ಪದವಿಲ್ಲದೆದೇ ನರೇಂದ್ರ ಮೋದಿ ಸರ್ಕಾರ ಆಡಳಿತ ನಡೆಸುತ್ತಿದೆ. ಅದರ ಮುಂದುವರಿದ ಭಾಗವೇ ವಿಬಿ ಜಿ ರಾಮ್ ಜಿ. ವಿಧಿಯಿಲ್ಲದೇ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಅಷ್ಟೇ ಎಂದರು.ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ವಿಬಿ-ಜಿ ರಾಮ್ ಜಿ ಕಾಯ್ದೆ ಮೂಲಕ ಬಡವರಿಗೆ ದುಡಿಯಲು ಹೆಚ್ಚಿನ ಅವಕಾಶ ನೀಡಿದರೂ ಕಾಂಗ್ರೆಸ್ಸಿಗರು ವಿರೋಧಿಸುತ್ತಿದ್ದಾರೆ ಎಂದರೆ ಅವರ…
ಬಂಟ್ವಾಳ, ಫೆ. 19 : ನರೇಗಾ ಯೋಜನೆ ಹಲವು ಬಾರಿ ಹೆಸರು ಪರಿವರ್ತನೆ ಆಗಿದೆ. ನರೇಗಾದಲ್ಲಿರುವ ಕುಂದುಕೊರತೆ ನಿವಾರಿಸಿ ಯೋಜನೆ ಪರಿಷ್ಕರಿಸಲಾಗಿದೆ. 100 ದಿನ ಇದ್ದ ಉದ್ಯೋಗ 125 ದಿನ ಆಗಿರುವುದು ಲಾಭವಾ ನಷ್ಟವಾ ಎಂದು ಜನರು ತಿಳಿದುಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಂಟ್ವಾಳ ಮಂಡಲದ ವತಿಯಿಂದ ಹಮ್ಮಿಕೊಂಡ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು ತೊಡೆದು ಹಾಕಲು ಹಾಗೂ ಕೇಂದ್ರ ಸರಕಾರದ ಹೊಸ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಲು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಹಮ್ಮಿಕೊಂಡ ಬೃಹತ್ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.ಬಂಟ್ವಾಳ ವಿಧಾನ ಸಭಾ ಕ್ಷೇತ್ರಲ್ಲಿನ ಬಹುತೇಕ ಗ್ರಾ.ಪಂ.ಗಳಲ್ಲಿ ಜಿ.ರಾಮ್ ಜಿ.ಕಾಯ್ದೆಯೇ ಬೇಕು ಎಂದು ನಿರ್ಣಯ ಮಾಡಿ ಸರಕಾರಕ್ಕೆ ಕಳುಹಿಸಿದ್ದಾರೆ ಇದು ಅತ್ಯಂತ ಸಂತಸದ ವಿಚಾರ ಎಂದು ಹೇಳಿದರು. ಕೈಕಂಬ ಪೊಳಲಿ ದ್ವಾರದಿಂದ ಬಿ.ಸಿ.ರೋಡಿನ ವರೆಗೆ ಬೃಹತ್ ಪಾದಯಾತ್ರೆ ನಡೆಯಿತು.ಬಂಟ್ವಾಳ ಮಂಡಲದ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪಕ್ಷದ ಪ್ರಮುಖರಾದ…

