“ಪೋಷಕರು, ಮಗುವಿನ ಸಮಗ್ರ ಬೆಳವಣಿಗೆಗೆ ಪ್ರೋತ್ಸಾಹ ನೀಡಿದಾಗ ವ್ಯಕ್ತಿತ್ವದ ವಿಕಾಸವಾಗುತ್ತದೆ, ಮಕ್ಕಳನ್ನು ಮಾಧ್ಯಮದಿಂದ ದೂರವಿರಿಸಿ ಎಂದು ಶಾಲಾ ಸಂಚಾಲಕರು ಮತ್ತು ಉರ್ವ ಇಮ್ಯಾನಿಕ್ ಚರ್ಚ್ ಧರ್ಮ ಗುರುಗಳಾದ ವಂ ಗುರು ಬೆಂಜಮೀನ್ ಪಿಂಟೊರವರು ಉರ್ವ ಚರ್ಚ್ ಸಭಾಂಗಣದಲ್ಲಿ ನಡೆದ ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆ ಶಿಕ್ಷಕ ರಕ್ಷಕ ಸಂಘದ ಸಭೆಯನ್ನು ಉದ್ದೇಶಿಸಿ ದೀಪ ಬೆಳಗಿಸಿ ಉದ್ಘಾಟಿಸುತ್ತಾ ಸಂದೇಶ ನೀಡಿದರು. ಶಿಕ್ಷಕರಾದ ರಾಜ್ ಕಿರಣ್ ಡಿಕುನ್ಹಾ 2025 – 26ನೇ ಶೈಕ್ಷಣಿಕ ಸಾಲಿನ ಶಾಲಾ ವರದಿಯನ್ನು ವಾಚಿಸಿದರು. ಶಿಕ್ಷಕ ರಕ್ಷಕ ಸಂಘದ ಖರ್ಚು ವೆಚ್ಚಗಳನ್ನು ಖಜಾಂಜಿ ಡಾರ್ವಿನ್ ಕರ್ಕಡ ಮಂಡಿಸಿದರು. ಈ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಂ ಗುರು ಅರುಣ್ ವಿಲ್ಸನ್ ಲೋಬೊ ಅವರು ಚಿತ್ರ ಬಿಡಿಸುವಲ್ಲಿ ಕಲಾಕಾರ ಹೃದಯ ಮತ್ತು ಮನಸ್ಸು ಇದ್ದಾಗ ಒಳ್ಳೆಯ ಬೆಳವಣಿಗೆ ಆಗುತ್ತದೆ ಎಂದು ಹೇಳಿದರು. ಶಿಕ್ಷಕಿಯರಾದ ಪ್ರಮೀಳ ತಾವ್ರೊ ಮತ್ತು ತ್ರಿವೇಣಿ ಶಾಲಾ ನಿಯಮಾವಳಿಗಳನ್ನು ತಿಳಿಸಿದರು.ಶಾಲಾ ಮುಖ್ಯ ಶಿಕ್ಷಕರಾದ ಅಲೋಶಿಯಸ್ ಡಿಸೋಜ ರವರು ಶಾಲೆಯ…
Author: UllalaVani
ಮಂಗಳೂರು ವಿಧಾನ ಸಭಾ ಕ್ಷೇತ್ರದ ಹರೇಕಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅರ್ಹ ನಿವೇಶನ ರಹಿತರಿಗೆ ನಿವೇಶನ ನೀಡಬೇಕೆಂದು ಸಿಪಿಐಮ್ ಹರೇಕಳ ಗ್ರಾಮ ಪಂಚಾಯತ್ ಮುಂಭಾಗ ಧರಣಿ ನಡೆಸಿ ಪಂಚಾಯತ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಶೀಘ್ರವೇ ನಿವೇಶನ ರಹಿತರಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿತು.. ಪ್ರತಿಭಟನೆಯಿಂದ ಎಚ್ಚೆತ್ತ ಅಧಿಕಾರಿಗಳು ನಿವೇಶನರಹಿತರಿಗೆ ನಿವೇಶನ ನೀಡುವ ಭರವಸೆ ನೀಡಿದರು. ನಂತರ ಮಲಾರ್ ಕೋಡಿ ಎಂಬಲ್ಲಿ ಗುಡ್ಡ ಇಳಿಜಾರು ಪ್ರದೇಶದಲ್ಲಿ ಜಾಗವನ್ನು ಗುರುತಿಸಲಾಯಿತು.. ತರಾತುರಿಯಲ್ಲಿ ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೀಸಲಿಟ್ಟ ಜಾಗವನ್ನು ಅವೈಜ್ಞಾನಿಕವಾಗಿ ಸಮತಟ್ಟುಗೊಳಿಸಿದರು. ಸದ್ಯ ಒಂದೇ ಮಳೆಗೆ ಸಮತಟ್ಟು ಗೊಳಿಸಿದ ಜಾಗವು ಕೊಚ್ಚಿ ಹೋಗಿದ್ದು ಲಕ್ಷಾಂತರ ರೂಪಾಯಿ ನೀರಿನಲ್ಲಿ ಬಿಟ್ಟಂತಾಗಿದೆ. ನೆಲೆಸಲು ಯೋಗ್ಯವೇ ಇಲ್ಲದ, ಸಂಬಂಧಪಟ್ಟ ಇಲಾಖೆಗಳಿಂದ NOC ಯನ್ನೂ ಪಡೆಯದೇ ಅವೈಜ್ಞಾನಿಕವಾಗಿ ಸಮತಟ್ಟುಗೊಳಿಸಿ ಲಕ್ಷಾಂತರ ರೂಪಾಯಿಯನ್ನು ಪೋಲು ಮಾಡಲಾಗಿದೆ… ಸದ್ಯ ಮೀಸಲಿಟ್ಟ ಜಾಗವು ಇನ್ನೂ ಸರಿಯಾಗಿ ಪ್ರಾರಂಭವಾಗದ ಮಳೆಗೆ ಕೊಚ್ಚಿ ಹೋಗಿ ಹೊಂಡ ನಿರ್ಮಾಣವಾಗಿದ್ದು ಬಿರುಸಾಗಿ ಮಳೆ ಬಂದರೆ ವಯನಾಡ್…
ಹಳೆಕೋಟೆ, ಜೂನ್ 13: ಭಾರತದ ಸಂವಿಧಾನದ ಆಶಯದಂತೆ ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ಇವಿಎಂ (ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್) ಮೂಲಕ ಹಳೆಕೋಟೆಯ ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸಯ್ಯದ್ ಮದನಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ ಯಶಸ್ವಿಯಾಗಿ ನಡೆಯಿತು. ಚುನಾವಣೆಯಲ್ಲಿ ರಂಸೀನಾ ಮುಖ್ಯಮಂತ್ರಿಯಾಗಿ ಹಾಗೂ ಆಯಿಷಾ ಶೈಮಾ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದರು. ಚುನಾವಣೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಹಾಗೂ ಶಾಲೆಯ ಗುರುತಿನ ಚೀಟಿಯನ್ನು ತೋರಿಸಿ ಮತದಾನದ ಅರ್ಹತೆ ಪಡೆದು, ತಮ್ಮ ಇಷ್ಟದ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು. ಈ ಚುನಾವಣೆಯಲ್ಲಿ ಒಟ್ಟು ಎಂಟು ಮಂದಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಚುನಾವಣೆಗೆ ಎರಡು ದಿನಗಳ ಮುಂಚೆಯೇ ಅಭ್ಯರ್ಥಿಗಳು ತಮ್ಮ ಪರವಾಗಿ ಸಹಪಾಠಿಗಳಲ್ಲಿ ಮತಯಾಚನೆ ನಡೆಸಿ ಚುನಾವಣಾ ವಾತಾವರಣವನ್ನು ಸೃಷ್ಟಿಸಿದ್ದರು. ವಿದ್ಯಾರ್ಥಿಗಳಿಗೆ ಸಾರ್ವತ್ರಿಕ ಚುನಾವಣೆಯ ಪರಿಕಲ್ಪನೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಈ ಚುನಾವಣೆ ಆಯೋಜಿಸಲಾಗಿತ್ತು. ಶಾಲಾ ಮುಖ್ಯೋಪಾಧ್ಯಾಯರಾದ ಕೆ.ಎಂ.ಕೆ. ಮಂಜನಾಡಿ ಅವರು ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಶ್ರೀಮತಿ ಸಪ್ನ ಅವರು…
ಪ್ರತಿ ಬಾರಿ ಸೇತುವೆ ಕುಸಿದಾಗ, ಕಳಪೆ ಕಾಮಗಾರಿಯಿಂದ ರಸ್ತೆ ಅಪಘಾತ ಸಂಭವಿಸಿದಾಗ, ಆಸ್ಪತ್ರೆಯ ನಿರ್ಲಕ್ಷ್ಯದಿಂದ ರೋಗಿಯೊಬ್ಬರು ಮೃತಪಟ್ಟಾಗ ಒಂದೇ ಪ್ರಶ್ನೆ ಮೂಡುತ್ತದೆ — ಸಾಮಾನ್ಯ ನಾಗರಿಕನ ಜೀವಕ್ಕೆ ಈ ದೇಶದಲ್ಲಿ ನಿಜವಾಗಿಯೂ ಬೆಲೆ ಇದೆಯೇ? ಒಬ್ಬ ಬಡ ವ್ಯಕ್ತಿ ಸಣ್ಣ ತಪ್ಪು ಮಾಡಿದರೂ ಕಾನೂನಿನ ಮುಂದೆ ನಿಲ್ಲಬೇಕಾಗುತ್ತದೆ. ಆದರೆ ಭ್ರಷ್ಟಾಚಾರ, ಕರ್ತವ್ಯಲೋಪ ಅಥವಾ ನಿರ್ಲಕ್ಷ್ಯದಿಂದ ಜನರ ಜೀವಹಾನಿ ಸಂಭವಿಸಿದಾಗ, ಹೊಣೆಗಾರ ಅಧಿಕಾರಿಗಳು ಮತ್ತು ವೃತ್ತಿಪರರ ವಿರುದ್ಧ ಕಠಿಣ ಕ್ರಮಗಳು ಅಪರೂಪವಾಗಿ ಕಾಣಿಸುತ್ತವೆ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ದೇಶ ಎಂದರೆ ಕೇವಲ ಕಟ್ಟಡಗಳು, ರಸ್ತೆಗಳು, ಪ್ರತಿಮೆಗಳು, ಯೋಜನೆಗಳು ಅಥವಾ ರಾಜಕೀಯ ಘೋಷಣೆಗಳಲ್ಲ. ದೇಶ ಅಂದರೆ ಜನರು. ಜನರ ಜೀವ, ಆರೋಗ್ಯ, ಸುರಕ್ಷತೆ ಮತ್ತು ಗೌರವವನ್ನು ಕಾಪಾಡುವ ವ್ಯವಸ್ಥೆಯೇ ನಿಜವಾದ ರಾಷ್ಟ್ರ ನಿರ್ಮಾಣ. ಜನರ ಜೀವಕ್ಕೆ ಬೆಲೆ ಇಲ್ಲದಿದ್ದರೆ ಅಭಿವೃದ್ಧಿಯ ಎಲ್ಲ ಘೋಷಣೆಗಳೂ ಅರ್ಥ ಕಳೆದುಕೊಳ್ಳುತ್ತವೆ. ಕಳಪೆ ಕಾಮಗಾರಿಗೆ ಅನುಮೋದನೆ ನೀಡಿದ ಇಂಜಿನಿಯರ್, ಸುರಕ್ಷತಾ ನಿಯಮಗಳನ್ನು ಕಡೆಗಣಿಸಿದ ಅಧಿಕಾರಿಗಳು, ಗಂಭೀರ ನಿರ್ಲಕ್ಷ್ಯ ತೋರಿದ…
ಬೆಳ್ತಂಗಡಿ :- ವಿಧಾನಸಭಾ ಕ್ಷೇತ್ರ ಸೇರಿದಂತೆ ರಾಜ್ಯದ ವಿವಿಧ ಅರಣ್ಯ ಹಾಗೂ ಅರಣ್ಯದಂಚಿನ ಪ್ರದೇಶಗಳಲ್ಲಿ ವಾಸಿಸುವ ಬುಡಕಟ್ಟು ಸಮುದಾಯಗಳ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ವಿಚಾರ ಇಂದು ಅತ್ಯಂತ ಮಹತ್ವದ ವಿಷಯವಾಗಿದೆ. ರಸ್ತೆ, ಕುಡಿಯುವ ನೀರು, ವಿದ್ಯುತ್, ಶಾಲೆ, ಆರೋಗ್ಯ ಕೇಂದ್ರ ಸೇರಿದಂತೆ ಅಗತ್ಯ ಸೌಲಭ್ಯಗಳ ಕೊರತೆಯಿಂದ ಸಾವಿರಾರು ಕುಟುಂಬಗಳು ಇನ್ನೂ ಸಂಕಷ್ಟದ ಜೀವನ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ, ಅರಣ್ಯ ಹಕ್ಕು ಕಾಯ್ದೆ (Forest Rights Act)ಯ ಸೆಕ್ಷನ್ 3(2) ಅಡಿಯಲ್ಲಿ ಭೂ ಪರಿವರ್ತನೆ ಮಾಡಿ, ಫಾರೆಸ್ಟ್ ಕ್ಲಿಯರೆನ್ಸ್ ಹಾಗೂ ವನ್ಯಜೀವಿ ಮಂಡಳಿಯ ಪ್ರತ್ಯೇಕ ಅನುಮತಿ ಇಲ್ಲದೇ ಜಿಲ್ಲಾ ಅರಣ್ಯಾಧಿಕಾರಿ (DFO) ಹಂತದಲ್ಲೇ ಅನುಮತಿ ನೀಡುವ ಕುರಿತು ಕೇಂದ್ರ ಸರ್ಕಾರದ ಆದೇಶದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ಅವರನ್ನು ಭೇಟಿ ಮಾಡಿ ಸೂಚನೆ ಪತ್ರ ಸಲ್ಲಿಸಲಾಗಿದೆ. ಈ ಸೂಚನೆ ಪತ್ರ ಕೇವಲ ಬೆಳ್ತಂಗಡಿ ಕ್ಷೇತ್ರಕ್ಕೆ ಸೀಮಿತವಾಗಿರುವುದಿಲ್ಲ. ಸರ್ಕಾರದ ಹಂತದಿಂದ ಈ ಕುರಿತು ಸ್ಪಷ್ಟ ಆದೇಶಗಳು…
ಶಿಕ್ಷಣವು ಕೇವಲ ಒಂದು ಸೌಲಭ್ಯವಲ್ಲ, ಅದು ಪ್ರತಿಯೊಬ್ಬ ಮಗುವಿನ ಮೂಲಭೂತ ಹಕ್ಕು. ಸಮಾಜದ ದುರ್ಬಲ ವರ್ಗಗಳಾದ ಎಸ್ಸಿ ಮತ್ತು ಎಸ್ಟಿ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಇತ್ತೀಚೆಗೆ ಶಿಕ್ಷಣ ಹಕ್ಕು ಕಾಯ್ದೆ (RTE) ಅಡಿಯಲ್ಲಿ 8ನೇ ತರಗತಿ ಪೂರ್ಣಗೊಳಿಸಿರುವ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಅದೇ ಖಾಸಗಿ ಶಾಲೆಯಲ್ಲಿ 9 ಮತ್ತು 10ನೇ ತರಗತಿಯನ್ನು ಮುಂದುವರಿಸಲು ಅವಕಾಶ ನೀಡುವ ಸರ್ಕಾರದ ಸುತ್ತೋಲೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ನ್ಯಾಯಾಲಯದ ತಡೆಯಾಜ್ಞೆ ಸಂವಿಧಾನದ ಆಶಯಗಳಿಗೆ ವಿರುದ್ಧವಲ್ಲ; ಅದು ಪ್ರಸ್ತುತ ಇರುವ ಕಾನೂನಿನ ವ್ಯಾಖ್ಯಾನದ ಆಧಾರದ ಮೇಲೆ ನೀಡಿರುವ ಆದೇಶವಾಗಿದೆ. RTE ಕಾಯ್ದೆಯ ಪ್ರಕಾರ 6 ರಿಂದ 14 ವರ್ಷದ ಮಕ್ಕಳಿಗೆ, ಅಂದರೆ 8ನೇ ತರಗತಿಯವರೆಗೆ ಮಾತ್ರ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು ಕಲ್ಪಿಸಲಾಗಿದೆ. ಆದ್ದರಿಂದ 9 ಮತ್ತು 10ನೇ ತರಗತಿಗೆ ಈ ಸೌಲಭ್ಯವನ್ನು ವಿಸ್ತರಿಸಲು ಕಾನೂನಾತ್ಮಕ ಅಡಿಪಾಯ ಅಗತ್ಯವಿದೆ ಎಂಬುದು ನ್ಯಾಯಾಲಯದ ಅಭಿಪ್ರಾಯವಾಗಿದೆ. ಆದರೆ ಇಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಪ್ರಮುಖ ಆಶ್ರಯವಾಗಿರುವ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಇಂದು ಕೇವಲ ದಕ್ಷಿಣ ಕನ್ನಡ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಂದ ಪ್ರತಿದಿನ ಸಾವಿರಾರು ರೋಗಿಗಳು ಚಿಕಿತ್ಸೆಗಾಗಿ ಇಲ್ಲಿಗೆ ಆಗಮಿಸುತ್ತಿದ್ದಾರೆ. ಸಾಮಾನ್ಯವಾಗಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಮಾತನಾಡುವಾಗ ವೈದ್ಯರ ಕೊರತೆ, ಹಾಸಿಗೆಗಳ ಕೊರತೆ ಅಥವಾ ಮೂಲಸೌಕರ್ಯದ ಸಮಸ್ಯೆಗಳ ಕುರಿತು ಚರ್ಚೆ ನಡೆಯುತ್ತದೆ. ಆದರೆ ವೆನ್ಲಾಕ್ ಆಸ್ಪತ್ರೆಯ ಇಂದಿನ ಪರಿಸ್ಥಿತಿ ಆರೋಗ್ಯ ಸೇವೆಯ ಮತ್ತೊಂದು ಗಂಭೀರ ಸಮಸ್ಯೆಯನ್ನು ಬೆಳಕಿಗೆ ತರುತ್ತಿದೆ — ರೋಗಿಗಳ ಸಂಖ್ಯೆಗೆ ಅನುಗುಣವಾಗಿ ವೈದ್ಯಕೀಯ ಸಿಬ್ಬಂದಿ ಮತ್ತು ತಾಂತ್ರಿಕ ಸೌಲಭ್ಯಗಳ ಕೊರತೆ. ದ.ಕ ಜಿಲ್ಲೆಯ ಬಡ ರೋಗಿಗಳಿಗೆ ಐಸಿಓ ಇಲ್ಲದೆ ಮೃತ ಪಡುವ ಘಟನೆಗಳು ಸಂಭವಿಸಬಹುದು ಸಾರ್ವಜನಿಕ ಅಭಿಪ್ರಾಯವಾಗಿದೆ ಆಸ್ಪತ್ರೆಗಳಲ್ಲಿ ಸೇವಾ ಗುಣಮಟ್ಟವನ್ನು ಖಚಿತಪಡಿಸಲು ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡಗಳು (IPHS) ನಿರ್ದಿಷ್ಟ ಮಾರ್ಗಸೂಚಿಗಳನ್ನು ಹೊಂದಿವೆ. ತೀವ್ರ ನಿಗಾ ಘಟಕ (ICU) ಮತ್ತು…
ತಲಪಾಡಿ, ಜೂ.13: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನಯ್ ನಾಯ್ಕ್ ಅವರ ಮಾತೃಶ್ರೀ ಸರ್ವಾಣಿ ಟಿ. ನಾಯ್ಕ್ (94) ಅವರು ತಮ್ಮ ಸ್ವಗೃಹದಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರರು, ಒಬ್ಬ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ತಲಪಾಡಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದ್ದು, ಮಧ್ಯಾಹ್ನ ಸುಮಾರು 12 ಗಂಟೆಗೆ ನಿವಾಸದ ಸಮೀಪ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಮೃತರ ನಿಧನಕ್ಕೆ ಬಂಧುಗಳು, ಸ್ನೇಹಿತರು ಹಾಗೂ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮುನ್ನೂರು, ಜೂನ್ 12: ಹಲವು ದಿನಗಳಿಂದ ಸಾರ್ವಜನಿಕರ ಹಾಗೂ ಶಾಲಾ ಆಡಳಿತ ಮಂಡಳಿಯ ಆತಂಕಕ್ಕೆ ಕಾರಣವಾಗಿದ್ದ ಕುತ್ತಾರು ಪದವು ಪ್ರದೇಶದ ಕೊಳಚೆ ನೀರಿನ ಸಮಸ್ಯೆಯ ಬಗ್ಗೆ ಕೊನೆಗೂ ಮುನ್ನೂರು ಗ್ರಾಮ ಪಂಚಾಯತ್ ಎಚ್ಚೆತ್ತುಕೊಂಡಿದೆ. ಸಾರ್ವಜನಿಕ ಮಳೆನೀರು ಚರಂಡಿಗೆ ಕೊಳಚೆ ನೀರು ಹರಿಯುತ್ತಿರುವ ಕುರಿತು ಬಂದ ದೂರುಗಳ ಆಧಾರದ ಮೇಲೆ ಪಂಚಾಯತ್ ಸಭೆ ಕರೆಯುವ ಮೂಲಕ ಸಮಸ್ಯೆ ಪರಿಹಾರಕ್ಕೆ ಮುಂದಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮುನ್ನೂರು ಮುಖ್ಯೋಪಾಧ್ಯಾಯಿನಿ ಹಾಗೂ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು ಸಲ್ಲಿಸಿದ ದೂರು ಅರ್ಜಿಗಳ ಹಿನ್ನೆಲೆಯಲ್ಲಿ ಪಂಚಾಯತ್ ಈ ಕ್ರಮ ಕೈಗೊಂಡಿದೆ. ಶಾಲೆಯ ಹಿಂಭಾಗದಲ್ಲಿರುವ ಸಾರ್ವಜನಿಕ ಚರಂಡಿಗೆ ಸುತ್ತಮುತ್ತಲಿನ ಕೆಲವು ಅಪಾರ್ಟ್ಮೆಂಟ್ ಹಾಗೂ ಕಟ್ಟಡಗಳಿಂದ ಕೊಳಚೆ ನೀರು ಹರಿಯುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಾಲಾ ಪರಿಸರದಲ್ಲಿ ದುರ್ವಾಸನೆ, ಅಸ್ವಚ್ಛತೆ ಹಾಗೂ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದರು. ವಿಶೇಷವಾಗಿ ಮಳೆಗಾಲದಲ್ಲಿ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುವ…
ಬೆಂಗಳೂರು, ಜೂ.12: ಪ್ರಕೃತಿ ಸಂರಕ್ಷಣೆ, ಯುವಜನತೆ ಹಾಗೂ ದೇಶದ ಆರ್ಥಿಕತೆಯಲ್ಲಿ ಕೃಷಿಯ ಮಹತ್ವವನ್ನು ಜನರಿಗೆ ಮನವರಿಕೆ ಮಾಡುವ ಉದ್ದೇಶದಿಂದ ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ ಕಾರ್ಯಕ್ರಮವು ಜೂನ್ 14ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯಲಿದೆ. ವಿದ್ಯಾರ್ಥಿಗಳು, ರೈತರು ಹಾಗೂ ಕೃಷಿ ಕ್ಷೇತ್ರದ ತಜ್ಞರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಈ ವಿಶೇಷ ಕಾರ್ಯಕ್ರಮವು ಕೃಷಿಯ ಮಹತ್ವ, ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ಕುರಿತು ಜಾಗೃತಿ ಮೂಡಿಸುವ ಗುರಿ ಹೊಂದಿದೆ. ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ವಿವಿಧ ಸಾಧಕರು, ತಜ್ಞರು ಹಾಗೂ ಯುವಜನರು ಭಾಗವಹಿಸಿ ತಮ್ಮ ಅನುಭವ ಮತ್ತು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಆಸಕ್ತಿ ಮೂಡಿಸುವ ಜೊತೆಗೆ ರೈತ ಸಮುದಾಯದ ಕೊಡುಗೆಯನ್ನು ಗೌರವಿಸುವ ನಿಟ್ಟಿನಲ್ಲಿ ಈ ವಾಕಥಾನ್ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ರೈತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

