ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರು ಬ್ಯಾಂಕ್ ನಿಯಮಿತ ಇದರ ವತಿಯಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ-2025 ರ ರಾಜ್ಯ ಮಟ್ಟದ ಕಾರ್ಯಕ್ರಮ ನಡೆಯಿತು. ಸುವರ್ಣ ಮಹೋತ್ಸವವನ್ನು ಪೂರೈಸಿದ ಸಹಕಾರಿ ಸಂಘ ವಿಶೇಷ ಪ್ರಶಸ್ತಿ ಪುರಸ್ಕಾರವನ್ನು ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರ ಸಂಘ ನಿಯಮಿತ ಇದರ ಅಧ್ಯಕ್ಷರಾದ ಐವನ್ ಡಿ’ಸೋಜ (ಶಾಸಕರು, ಕರ್ನಾಟಕ ವಿಧಾನ ಪರಿಷತ್) ಇವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಅವರಿಂದ ವಿಶೇಷ ಪ್ರಶಸ್ತಿಯನ್ನು ಸ್ವೀಕರಿಸಿದರು.
Author: UllalaVani
ಮಂಗಳೂರು: ಕರಾವಳಿ ಪ್ರದೇಶದ ವಿದ್ಯಾರ್ಥಿಗಳಲ್ಲಿ ಯುಪಿಎಸ್ಸಿ ಹಾಗೂ ಕೆಪಿಎಸ್ಸಿಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವವರು ಬಹಳ ಕಡಿಮೆ ಸಂಖ್ಯೆಯಲ್ಲಿದ್ದಾರೆ. ಪದವಿ ಪೂರ್ಣಗೊಳಿಸಿದ ನಂತರವೇ ಪರೀಕ್ಷಾ ಸಿದ್ಧತೆ ಆರಂಭಿಸುವ ಪ್ರವೃತ್ತಿ ಜಾಗೃತಿಯ ಕೊರತೆಯ ಪ್ರಮುಖ ಕಾರಣವಾಗಿದೆ. ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳು ಪ್ರಚಲಿತ ವಿದ್ಯಮಾನಗಳು ಹಾಗೂ ಸಮಕಾಲೀನ ವಿಚಾರಗಳತ್ತ ನಿರಂತರ ಗಮನಹರಿಸಿದಾಗ ಯಶಸ್ಸು ಸಾಧ್ಯ ಎಂದು ಬಲ್ಮಠ ದಯಾನಂದ ಪೈ ಸತೀಶ್ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಮಹಿಳಾ ಪ್ರಾಧ್ಯಾಪಕಿ ಡಾ. ಸುಮನ ಸುಧಾಕರ್ ಬೋಳಾರ್ ಹೇಳಿದರು. ಅವರು ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ನಿಯಮಿತ , ಸೌತ್ವಾರ್ಫ್, ಬಂದರು, ಮಂಗಳೂರು ಇವರ ಆಶ್ರಯದಲ್ಲಿ ನವೀಕೃತ ಮಂಜುಗಡ್ಡೆ ಸ್ಥಾವರ ಉದ್ಘಾಟನಾ ಸಮಾರಂಭ ಹಾಗೂ ರೂ.17 ಲಕ್ಷ ವೆಚ್ಛದಲ್ಲಿ 210 ವಿದ್ಯಾರ್ಥಿಗಳಿಗಾಗಿ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸುದ್ದಿಪತ್ರ ಓದುವುದನ್ನು ವಿದ್ಯಾರ್ಥಿಗಳು ಎರಡು ರೀತಿಯಲ್ಲಿ ಅಭ್ಯಾಸ ಮಾಡಬೇಕಿದೆ. ಕನಿಷ್ಠ ಅರ್ಧಗಂಟೆಯಾದರೂ ಪ್ರತಿನಿತ್ಯ ವಿಷಯಾಧ್ಯಯನಕ್ಕೆ ಮೀಸಲಿಡುವುದರಿಂದ ಜ್ಞಾನವೃದ್ಧಿಗೆ ನೆರವಾಗುತ್ತದೆ. ಡಿಜಿಟಲ್ ಮೀಡಿಯಾ…
ಉಳ್ಳಾಲ:ನ-17; ಮಹಿಳೆಯರು ಮಾತ್ರವಲ್ಲದೆ ಪುರುಷರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಕುಣಿತ ಭಜನೆಯಲ್ಲಿ ಭಾಗವಹಿಸಬೇಕಿದೆ. ಕುಣಿತ ಭಜನೆಯನ್ನು ಕೇವಲ ಸ್ಪರ್ಧೆಗೆ ಮಾತ್ರ ಸೀಮಿತ ಮಾಡದೆ ನಮ್ಮ ಸುತ್ತಮುತ್ತಲಲ್ಲಿ ನಡೆಯುವ ಶುಭ ಕಾರ್ಯಗಳಿಗೂ ಅದನ್ನ ಪಸರಿಸಬೇಕಿದೆ. ಜೀವನದಲ್ಲಿ ಭಜನೆಯನ್ನ ನಿರಂತರ ಅಳವಡಿಸುವ ಮೂಲಕ ಧರ್ಮ ಜಾಗೃತಿಗೊಳಿಸಬೇಕಿದೆಯೆಂದು ರಾಜ್ಯ ಮಟ್ಟದ ಭಜನಾ ತರಬೇತುದಾರರಾದ ಸಂದೇಶ್ ಮದ್ದಡ್ಕ ಹೇಳಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮೊಗವೀರಪಟ್ಣದ ಮಾರುತಿ ಜನಸೇವಾ ಸಂಘ,ಮಾರುತಿ ಯುವಕ ಮಂಡಲದ ನಲ್ವತ್ತನೇ ವರ್ಷಾಚರಣೆ ಪ್ರಯುಕ್ತ “ಮಾರುತಿ ಮಾಣಿಕ್ಯ ಮಹೋತ್ಸವ-2025” ರ ನಲ್ವತ್ತು ವಿಶೇಷ ಸಮಾಜಮುಖಿ ಕಾರ್ಯಕ್ರಮಗಳ ಪ್ರಯುಕ್ತ ಉಳ್ಳಾಲ ಮೊಗವೀರ ಪಟ್ಣದ ವ್ಯಾಘ್ರ ಚಾಮುಂಡೇಶ್ವರಿ ಕ್ಷೇತ್ರದ ಆವರಣದ ಮಾಧವ ಮಂಗಳ ಸಭಾ ಭವನದಲ್ಲಿ ಭಾನುವಾರದಂದು ನಡೆದ ಆಯ್ದ ಪರಿಣಿತ ತಂಡಗಳ “ಭಜೊರೇ ಮಾರುತಿ 2025” ಕುಣಿತ ಭಜನಾ ಸ್ಫರ್ಧೆಯ ಸಮಾರೋಪ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು. ಮಾರುತಿ ಜನಸೇವಾ ಸಂಘದ ಅಧ್ಯಕ್ಷರಾದ ಸಂದೀಪ್ ಪುತ್ರನ್ ಅಧ್ಯಕ್ಷತೆ ವಹಿಸಿದ್ದರು.ರಂಗಭೂಮಿ ಕಲಾವಿದರು ,ನೀನಾಸಂ ಪದವೀಧರರಾದ ಶೀನ ನಾಡೋಳಿ,ಉಳ್ಳಾಲ…
ಮೂಡುಬಿದಿರೆ: ಅಕ್ರಮವಾಗಿ ದನಗಳನ್ನು ಸಾಗಾಟ ಮಡುತ್ತಿದ್ದ ಆರೋಪದಲ್ಲಿ ಮೂವರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮನ್ಸೂರ್ ಅದ್ಯಪಾಡಿ ಯಾನೆ ಮುಹಮ್ಮದ್ ಮನ್ಸೂರ್, ಮುಹಮ್ಮದ್ ಅಶ್ವಾದ್, ಅಬ್ದುಲ್ ಮುಹಮ್ಮದ್ ನಿಶಾಮ್ ಬಂಧಿತ ಆರೋಪಿಗಳಾಗಿದ್ದಾರೆ. ಅ.15ರಂದು ಆರೋಪಿಗಳು ತಾಲೂಕಿನ ಹೊಸ್ಮಾರು ನೆಲ್ಲಿಕಾರು ಕಡೆಯಿಂದ ಗೂಡ್ಸ್ ವಾಹನದಲ್ಲಿ ದನಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ಮಾಡಿದ್ದಾರೆ. ದನಗಳು, ವಾಹನ ಸಹಿತ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಮನ್ಸೂರ್ ಮೇಲೆ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 29 ಪ್ರಕರಣಗಳಿದ್ದು, ಇದು 30ನೇ ಪ್ರಕರಣವಾಗಿದೆ ಮತ್ತೋರ್ವ ಆರೋಪಿ ಮುಹನ್ನದ್ ಅಶ್ವಾದ್ನ ಮೇಲೆ ಉಳ್ಳಾಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಪ್ರಕರನ ದಾಖಲಾಗಿದ್ದು, ಇದು 2ನೇ ಪ್ರಕರಣವಾಗಿದೆ. ಹಾಗೂ 3ನೇ ಆರೋಪಿ ಅಬ್ದುಲ್ ಮುಹಮ್ಮದ್ ನಿಶಾಮ್ನ ವಿರುದ್ಧ ಇದು ಮೊದಲನೇ ಪ್ರಕರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.
ಬಂಟ್ವಾಳ,ನ.17: ಅರಣ್ಯ, ಆರೋಗ್ಯ, ಆಯುಷ್ ಔಷಧಿಗಳು ಮತ್ತು ಕೆಂಪು ಗ್ರಾನೈಟ್ ಗಣಿಗಾರಿಕೆ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ, ನಿಗದಿತ ಪ್ರದೇಶಗಳಲ್ಲಿ ಬೀದಿ ನಾಯಿಗಳ ಸರಿಯಾದ ಪುನರ್ವಸತಿಗೆ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸಮಗ್ರ ಪರಿಶೀಲನಾ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು,ನಿರ್ದೇಶನ ನೀಡಿದ್ದಾರೆ. ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗುಂಡೂರಾವ್, ಸುಪ್ರೀಂ ಕೋರ್ಟ್ ನಿರ್ದೇಶನಗಳಿಗೆ ಅನುಗುಣವಾಗಿ ಬೀದಿ ನಾಯಿಗಳನ್ನು ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಒತ್ತಿ ಹೇಳಿದರು. “ನಾವು ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಬೇಕು ಮತ್ತು ಅವುಗಳ ಶಾಶ್ವತ ವಸತಿಗಾಗಿ ವ್ಯವಸ್ಥೆ ಮಾಡಬೇಕು” ಎಂದು ಅವರು ಹೇಳಿದರು. ಕುಂಪಲದಲ್ಲಿ ಇತ್ತೀಚೆಗೆ ಬೀದಿ ನಾಯಿಯೊಂದು ಸ್ಥಳೀಯ ನಿವಾಸಿಯ ಮೇಲೆ ದಾಳಿ ಮಾಡಿ ಹಲ್ಲೆ ನಡೆಸಿ ಸಾವಿಗೆ ಕಾರಣವಾದ ಘಟನೆಯನ್ನು ವಿಧಾನ ಪರಿಷತ್ ಸದಸ್ಯ ಐವಾನ್ ಡಿ’ಸೋಜಾ ಪ್ರಸ್ತಾಪಿಸಿ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಪರಿಹಾರ…
ಮಂಗಳೂರು: ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಪುರಸ್ಕಾರ ಸ್ವೀಕರಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಕಿಶೋರ್ ಕುಮಾರ್ ಬೊಟ್ಯಾಡಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ನಬಾರ್ಡ್ ಮುಖ್ಯ…
ಗುಲ್ಬರ್ಗಾ: ಉತ್ತರ ಕರ್ನಾಟಕದ ಗುಲ್ಬರ್ಗಾದಲ್ಲಿ ನಡೆದ SSF ರಾಷ್ಟ ಮಟ್ಟದ ಸಾಹಿತ್ಯೋತ್ಸವವು ದೇಶದ ಮೂಲೆಮೂಲೆಗಳಿಂದ ಬಂದ 2,000 ಕ್ಕೂ ಹೆಚ್ಚು ಯುವ ಪ್ರತಿಭೆಗಳ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ಸಂಪನ್ನವಾಯಿತು. ವಿವಿಧ ಕಲೆ ಹಾಗೂ ಸಾಹಿತ್ಯ ಸ್ಪರ್ಧೆಗಳಲ್ಲಿ ಅತೀ ಹೆಚ್ಚು ಅಂಕಗಳೊಂದಿಗೆ ಕರ್ನಾಟಕವು ಚಾಂಪಿಯನ್ ಪಟ್ಟ ಗಳಿಸಿತು. ಕೇರಳ ಮತ್ತು ಜಮ್ಮು-ಕಾಶ್ಮೀರ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದವು. ವೈಯಕ್ತಿಕ ವಿಭಾಗಗಳಲ್ಲಿ ದೆಹಲಿಯ ಮುಹಮ್ಮದ್ ಅಶ್ಹಾದ್ ಅವರು ಕ್ಯಾಂಪಸ್ ಬಾಯ್ಸ್ ವಿಭಾಗದ “ಪೆನ್ ಆಫ್ ದ ಫೆಸ್ಟ್” ಆಗಿ ಆಯ್ಕೆಯಾದರೆ ಅಬ್ದುರ್ ರಶೀದ್ ಅವರನ್ನು ಸಾಮಾನ್ಯ ವಿಭಾಗದ “ಸ್ಟಾರ್ ಆಫ್ ದ ಫೆಸ್ಟ್” ಆಗಿ ಘೋಷಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಕಲಾ ಶಾಲೆ ವೇದಿಕೆಯಲ್ಲಿ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಕ್ಷೇತ್ರಗಳ ಗಣ್ಯ ವ್ಯಕ್ತಿಗಳಿಂದ ಹಲವು ಕಲಿಕಾ ಕಾರ್ಯಾಗಾರಗಳು ನಡೆದವು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಮದನಗೂಡು ಚಿನ್ನಸ್ವಾಮಿ, ಸಮಾಜಸೇವಕ ಮತ್ತು ಸಾಹಿತ್ಯಕಾರ ಮುಹಮ್ಮದ್ ಅಮ್ಜದ್ ಹುಸೈನ್ ಉರ್ದು ಲೇಖಕ ಸಯ್ಯದ್…
ಮಂಗಳೂರು: ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ ನಿಯಮಿತ (ನಂ. 6740), ಸೌತ್ವಾರ್ಫ್, ಬಂದರು, ಮಂಗಳೂರು ಇವರ ಆಶ್ರಯದಲ್ಲಿ ನವೀಕೃತ ಮಂಜುಗಡ್ಡೆ ಸ್ಥಾವರದ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನವೆಂಬರ್ 16, 2025, ಆದಿತ್ಯವಾರ, ಸಂಜೆ 4 ಗಂಟೆಗೆ ಲೋಕನಾಥ ಬೋಳಾರ್ ವೇದಿಕೆಯಲ್ಲಿ ಜರಗಲಿದೆ.ಕಾರ್ಯಕ್ರಮವನ್ನು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್ ಮಂಗಳೂರಿನ ವನ್ಸಾಲ್ ಟೆೆರಿಟರಿ ಮ್ಯಾನೇಜರ್ ವಿಪಿಎನ್ ದಾಸ್ ಉದ್ಘಾಟಿಸಲಿದ್ದಾರೆ.ಸಂಘದ ಅಧ್ಯಕ್ಷ ವರದ್ರಾಜ್ ಬಂಗೇರ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮಕ್ಕೆ ಪ್ರಮುಖ ಅತಿಥಿಗಳಾಗಿ–ತ್ರಿವೇಣಿ ರಾವ್ ಕೆ., ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಮಂಗಳೂರು ಉಪವಿಭಾಗಸಿದ್ಧಯ್ಯ ಡಿ., ಜಂಟಿ ನಿರ್ದೇಶಕರು, ಮೀನುಗಾರಿಕಾ ಇಲಾಖೆ, ಮಂಗಳೂರುಸುಮನ ಸುಧಾಕರ್ ಬೋಳಾರ್, ಸಹಾಯಕ ಮಹಿಳಾ ಪ್ರಾಧ್ಯಾಪಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬಲ್ಮಠರೇವತಿ ಜೆ.ಎ., ಮೀನುಗಾರಿಕೆ ಉಪ ನಿರ್ದೇಶಕರು, ಮೀನುಗಾರಿಕೆ ಬಂದರು, ಮಂಗಳೂರುಭಾಗವಹಿಸಲಿದ್ದಾರೆ .ನವೀಕೃತ ಮಂಜುಗಡ್ಡೆ ಸ್ಥಾವರದ ಉದ್ಘಾಟನೆಯೊಂದಿಗೆ, 210 ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಗ್ರೀ ಇಂಜಿನಿಯರಿಂಗ್ ಸೇರಿದಂತೆ ಉನ್ನತ ವ್ಯಾಸಾಂಗ…
ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಮಂಗಳೂರು, ನ. 15; ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಣಂಬೂರು ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಣಂಬೂರು ಸಿಗ್ನಲ್ ನಲ್ಲಿ ವಾಹನಗಳು ನಿಂತಿತ್ತು ಎಂದು ಹೇಳಲಾಗಿದೆ. ಎದುರಿನಲ್ಲಿ ಒಂದು ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ ಆಟೊ ರಿಕ್ಷಾ ನಿಂತಿತ್ತು. ಅದರ ಹಿಂದಿನಿಂದ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ. ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

