ಕಾರ್ಕಳ, ಜ. 16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಳಗಾಗಿದೆ.ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Author: UllalaVani
ಉಳ್ಳಾಲ : ಹಿಂದೂ ಸಂಗಮ ಆಯೋಜನಾ ಸಮಿತಿ ಉಳ್ಳಾಲ ತಾಲೂಕು ಇದರ ಯೋಜನೆಯಂತೆ 2026ರ ಜ.18 ರಿಂದ ಫೆ.1 ರವರೆಗೆ ತಾಲೂಕಿನ 10 ಕಡೆಗಳಲ್ಲಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜ.18, ಮದ್ಯಾಹ್ನ 3ಕ್ಕೆ ಗೋವನಿತಾಶ್ರಯ ಪಾವೂರು, ಜ.25 ರಂದು ಮಧ್ಯಾಹ್ನ 3 ಕ್ಕೆ ಕೈರಂಗಳ ಹೂಹಾಕುವಕಲ್ಲು ಮೈದಾನ, ಮಧ್ಯಾಹ್ನ 3 ಕ್ಕೆ ಕುತ್ತಾರು ದೇವಸ್ಥಾನ, ಫೆ. 1 ಮಧ್ಯಾಹ್ನ 3 ಕ್ಕೆ ಸೋಮೇಶ್ವರ ವ್ಯಾಪ್ತಿಯ ಶಾರದಾ ಮೈದಾನ ಕೊಲ್ಯ, ಕೋಟೆಕಾರು-ಮಾಡೂರು ನೀರಿನ ಟ್ಯಾಂಕ್ ಬಳಿ, ತಲಪಾಡಿ- ದೇವಿಪುರ ದೇವಸ್ಥಾನ, ಕೊಣಾಜೆ ಅಸೈಗೋಳಿ ಮೈದಾನ, ಕುರ್ನಾಡು ಕಾಯರ್ ಗೋಳಿ ಮೈದಾನ , ಅಂಬ್ಲಮೊಗರು ಆಡು ಬಾಕಿಮಾರ್ ಗದ್ದೆ, ಉಳ್ಳಾಲ ಐಸ್ ಫ್ಯಾಕ್ಟರಿ ಛೋಟಾ ಮಂಗಳೂರು ಪ್ರದೇಶಗಳಲ್ಲಿ ನಡೆಯಲಿದೆ. ಸಮಿತಿ ಗೌರವಾಧ್ಯಕ್ಷರಾಗಿ ಸುದೇಶ್ ಮರೋಳಿ, ಅಧ್ಯಕ್ಷರಾಗಿ ಚಂದ್ರಹಾಸ್ ಪೂಂಜಾ, ಉಪಾಧ್ಯಕ್ಷರಾಗಿ ರಾಜೇಶ್ ಬಂಗೇರ, ಸಂಯೋಜಕರಾಗಿ ಪ್ರೇಮ್ ರಾಜ್ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಪದ್ಮನಾಭ ಪಾಣಾರ ಸೋಮೇಶ್ವರ, ರಾಜೇಶ್ ಬಂಗೇರ ಉಳ್ಳಾಲ, ಶ್ರೀಧರ್ ಪೆರಡೆ…
ಕೊಣಾಜೆ: ಹಿಂದು ಸಂಗಮ ಆಯೋಜನಾ ಸಮಿತಿ, ಉಳ್ಳಾಲ ತಾಲೂಕು ಇದರ ವತಿಯಿಂದ ತಾಲೂಕಿನ ಹತ್ತು ಮಂಡಲಗಳಲ್ಲಿ “ಹಿಂದು ಸಂಗಮ” ಕಾರ್ಯಕ್ರಮವು ಜ.18 ರಿಂದ ಫೆ.1 ವರೆಗೆ ನಡೆಯಲಿದೆ. ಜ.18 ರಂದು ಮದ್ಯಾಹ್ನ 3 ಗಂಟೆಗೆ ಪಾವೂರು ಮಂಡಲದ ಗೋವನಿತಾಶ್ರಮ ಬೀಜಗುರಿ, ಜ.25 ರಂದು ಮಧ್ಯಾಹ್ನ 3 ಗಂಟೆಗೆ ಕೈರಂಗಳ ಹೂ ಹಾಕುವ ಕಲ್ಲು ಮೈದಾನದಲ್ಲಿ ಪೆರ್ಮನ್ನೂರು ಮಂಡಲ ಕುತ್ತಾರು ರಾಜರಾಜೇಶ್ವರಿ ದೇವಸ್ಥಾನ ದಲ್ಲಿ ನಡೆಯಲಿದೆ.ಫೆ.1ರಂದು ಮದ್ಯಾಹ್ನ 3 ಕ್ಕೆ.ತಲಪಾಡಿ ಮಂಡಲದ ದೇವಿಪುರ ದೇವಸ್ಥಾನ., ಉಳ್ಳಾಲ ಮಂಡಲದ ಐಸ್ ಫ್ಯಾಕ್ಟರಿ. ಛೋಟಾ ಮಂಗಳೂರು. ಬಳಿ , ಕೋಟೆಕಾರು ಮಂಡಲದ ಮಾಡೂರು. ನೀರಿನ ಟ್ಯಾಂಕ್ ಬಳಿ, ಕುರ್ನಾಡ್ ಮಂಡಲದ ಮುಡಿಪು ಕಾಯರ್ ಗೋಳಿ ಮೈದಾನ, ಕೊಣಾಜೆ ಮಂಡಲದ ಅಸೈಗೋಳಿ ಮೈದಾನದಲ್ಲಿ, ಅಂಬ್ಲಮೊಗರು ಮಂಡಲದ ಅಡು ಬಾಕಿಮಾರ್ ಗದ್ದೆಯಲ್ಲಿ, ಸೋಮೇಶ್ವರ ಮಂಡಲದ ಕೊಲ್ಯದಲ್ಲಿ ನಡೆಯಲಿದೆ.ಸಾಮಾಜಿಕ ಸೇವಾ, ಸಹಕಾರ, ಸ್ವಾವಲಂಬನೆ ವೃದ್ಧಿಸುವ ಸಲುವಾಗಿ ಸಮಾಜದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಸೇವಾ, ಕ್ರೀಡಾ, ಕಲಾ, ಸಹಕಾರಿ ಇತ್ಯಾದಿ ಎಲ್ಲಾ…
ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಅಲ್ಲದೆ, 16 ಹೊಸ ಯೋಜನೆಗಳು ಪ್ರಸ್ತುತ ನಿರ್ಮಾಣದ ಹಂತದಲ್ಲಿವೆ. ವಸತಿ ಹಾಗೂ ವಾಣಿಜ್ಯ ಕ್ಷೇತ್ರಗಳನ್ನು ಒಳಗೊಂಡ ಈ ಯೋಜನೆಗಳು ಮಂಗಳೂರಿನ ನಗರಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿವೆ. ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ರವರು,“ಮಂಗಳೂರಿನ ಬೆಳವಣಿಗೆಯಲ್ಲಿ ಸಾಧ್ಯವಾದಷ್ಟು ಕೊಡುಗೆ ನೀಡಲು ನಮಗೆ ಅವಕಾಶ ದೊರೆತಿರುವುದು ಅಪಾರ ಹೆಮ್ಮೆಯ ವಿಷಯ. ಈ 32 ವರ್ಷದ ಪಯಣ ಅತ್ಯಂತ ತೃಪ್ತಿದಾಯಕವಾಗಿದೆ. ವರ್ಷಗಳ ಕಾಲ ನಮ್ಮೊಂದಿಗೆ ನಿಂತು ಬೆಂಬಲಿಸಿದ ಗ್ರಾಹಕರು, ಪಾಲುದಾರರು ಮತ್ತು ಸಿಬ್ಬಂದಿಗೆ…
ಮಂಗಳೂರು, ಜ. 15: ಆರು ಪೆಡ್ಲರ್ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜಿಗಣಿ ಬಳಿ ಉಗಾಂಡದ ಮಹಿಳೆ ಜಲಿಯಾ ಝಲ್ವಾಂಗೋ ಅರೆಸ್ಟ್ ಮಾಡಲಾಗಿದ್ದು, ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMAಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕುಂದಾಪುರದ ಮೊಹಮ್ಮದ್ ಶಿಯಾಬ್ ಅಲಿಯಾಸ್ ಶಿಯಾಬ್, ಉಳ್ಳಾಲ ಕಳ್ಳರ ಕೋಡಿ ನಿವಾಸಿ ಮೊಹಮ್ಮದ್ ನೌಷದ್ , ಬೆಂಗ್ರೆ ನಿವಾಸಿ ಇಮ್ರಾನ್ ಅಲಿಯಾಸ್ ಇಂಬ, ಬಂಟ್ವಾಳದ ನಿಸಾರ್ ಅಹಮ್ಮದ್, ಕಾಪು ನಿವಾಸಿ ಮೊಹಮ್ಮದ್ ಇಕ್ಬಾಲ್ ಮತ್ತು ಪಡುಬಿದ್ರೆ ನಿವಾಸಿ ಶೆಹರಾಜ್ ಶಾರೂಕ್ ಎಂಬ ಡ್ರಗ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳು ಜಲಿಯಾಳಿಂದ ಡ್ರಗ್ಸ್ ಪಡೆದು ಮಂಗಳೂರಲ್ಲಿ ಮಾರುತ್ತಿದ್ದ ವಿಚಾರ ತನಿಖೆ ವೇಳೆ ಗೊತ್ತಾಗಿತ್ತು. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಲ್ಲಿ ಸಿಸಿಬಿ ರೇಡ್ ನಡೆಸಿದೆ ಎನ್ನಲಾಗಿದೆ. ಉಗಾಂಡದ ಜಲಿಯಾ ಯಾರಿಗೂ ಅನುಮಾನ ಬಾರದಂತೆ ಎಂಡಿಎಂ…
ಕಾಸರಗೋಡು, ಜ. 15 : ರಾಷ್ಟ್ರೀಯ ಹೆದ್ದಾರಿ 66 ರ ಕುಂಬಳೆ ಆರಿಕ್ಕಾಡಿಯಲ್ಲಿ ಟೋಲ್ ಶುಲ್ಕ ವಸೂಲು ಹೋರಾಟ ಹಿಂಸಾತ್ಮಕ ರೂಪ ಪಡೆದಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾ ಹಾಗೂ ಗಾಜುಗಳನ್ನು ಪುಡಿ ಗೈದ ಘಟನೆ ಬುಧವಾರ ರಾತ್ರಿ ನಡೆದಿದೆ. ಹೋರಾಟಕ್ಕೆ ಬೆಂಬಲವಾಗಿ ಕುಂಬಳೆ ಪೇಟೆಯಿಂದ ಬಂದ ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾಗಳನ್ನು ಧ್ವಂಸ ಗೊಳಿಸಿದ್ದು, ಕಚೇರಿ ಗಾಜುಗಳನ್ನು ಹಾನಿ ಗೊಳಿಸಿದ್ದಾರೆ. ವಾಹನಗಳನ್ನು ತಡೆಯುವ ಟೋಲ್ ಬೂತ್ ನ ಹ್ಯಾಂಡಲ್ ಗಳನ್ನು ಪ್ರತಿಭಟನಾಕಾರರು ಕಿತ್ತೆಸೆದಿದ್ದಾರೆ. ಸ್ಕ್ಯಾನರ್ ಗಳಿಗೆ ಕಪ್ಪು ಸ್ಟಿಕ್ಕರ್ ಲಗತ್ತಿಸಿದ್ದಾರೆ.ಪರಿಸ್ಥಿತಿ ವಿಕೋಪಕ್ಕೆ ತೆರಳದಂತೆ ತಡೆಯಲು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ವಿವಿಧ ಯುವಜನ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ಕಚೇರಿಯೊಳಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ತಡೆದರು. ಪ್ರತಿಭಟನೆ ಹಿನ್ನಲೆಯಲ್ಲಿ ಸ್ಥಳದಲ್ಲಿ ಸೋಮವಾರದಿಂದ ಟೋಲ್ ಗೇಟ್ ಗೆ ಪೊಲೀಸರು ಭದ್ರತೆ ಕಲ್ಪಿಸಿದ್ದು, ಈ ನಡುವೆ ಬುಧವಾರ ರಾತ್ರಿ ನಡೆದ ಪ್ರತಿಭಟನಾ ಜಾಥಾದಲ್ಲಿ ಸಾವಿರಕ್ಕೂ ಅಧಿಕ…
ಜ.14ರಂದು ಬಿಕರ್ನಕಟ್ಟೆಯ ಬಾಲ ಯೇಸು ದೇವಾಲಯದಲ್ಲಿ ವಾರ್ಷಿಕ ಹಬ್ಬವನ್ನು ಭಕ್ತಿಭಾವ ಮತ್ತು ಧಾರ್ಮಿಕ ಉತ್ಸಾಹದೊಂದಿಗೆ ಆಚರಿಸಲಾಯಿತು. ಬೆಳಿಗ್ಗೆಯ ಪ್ರಾರಂಭಿಕ ಘಳಿಗೆಯಿಂದಲೇ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಹಬ್ಬದ ಆಚರಣೆಯಲ್ಲಿ ಭಾಗವಹಿಸಿದರು. ಹಬ್ಬದ ದಿನದಂದು ಹೆಚ್ಚಿನ ಸಂಖ್ಯೆಯ ಭಕ್ತರು ಪಾಲ್ಗೊಳ್ಳಲು ಅನುಕೂಲವಾಗುವಂತೆ ಒಟ್ಟು ಐದು ಯುಕರಿಸ್ತಿಕ್ ಬಲಿದಾನಗಳನ್ನು ನೆರವೇರಿಸಲಾಯಿತು .ಬೆಳಗಿನ ಭವ್ಯ ಹಬ್ಬದ ಬಲಿದಾನವನ್ನು ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷರಾದ ಪರಮಪೂಜ್ಯ ಎಲೋಷಿಯಸ್ ಪಾವ್ಲ್ ಡಿ’ಸೋಜಾ ಅವರು ನೆರವೇರಿಸಿದರು. ಸಂಜೆಯ ಭವ್ಯ ಹಬ್ಬದ ಬಲಿದಾನವನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಪರಮಪೂಜ್ಯ ಜೆರಾಲ್ಡ್ ಐಸಾಕ್ ಲೋಬೋ ಅವರು ಅಧ್ಯಕ್ಷತೆ ವಹಿಸಿ ನೆರವೇರಿಸಿದರು. ತಮ್ಮ ಉಪನ್ಯಾಸದಲ್ಲಿ ಅವರು ಸ್ಪೇನ್ನ ಮಹಾನ್ ಕಾರ್ಮೆಲೈಟ್ ಧ್ಯಾನಗುರು ಸಂತ ಜಾನ್ ಆಫ್ ದ ಕ್ರಾಸ್ ತೋರಿಸಿದ ಆತ್ಮೀಯ ಮಾರ್ಗದಲ್ಲಿ ನಡೆಯುವಂತೆ ಭಕ್ತರನ್ನು ಆಹ್ವಾನಿಸಿದರು. ಈ ವರ್ಷ ಸಂತ ಜಾನ್ ಆಫ್ ದ ಕ್ರಾಸ್ ಅವರ ಸಂತಘೋಷಣೆಯ 300ನೇ ವಾರ್ಷಿಕೋತ್ಸವ ಹಾಗೂ ಅವರನ್ನು ಚರ್ಚ್ನ ಧರ್ಮಗುರು (ಡಾಕ್ಟರ್ ಆಫ್ ದ ಚರ್ಚ್)…
ಬೆಳ್ತಂಗಡಿ : ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15) ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ವೇಳೆ ಬಾಲಕನ ತಲೆಗೆ ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬಂದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಕುರಿತ ಮಾಹಿತಿಗಳು ಲಭ್ಯವಾಗುತ್ತಿದ್ದು, ತಲೆಯ ಮೇಲಿನ ಗಾಯಗಳು ಮಂದ ಬಲದ ಗಾಯ. ಯಾವುದೇ ಚೂಪಾದ ಆಯುಧಗಳಿಂದ ಆಗಿರುವ ಗಾಯ ಅಲ್ಲ ಎಂದು ತಿಳಿದುಬಂದಿರುತ್ತದೆ.ಆದರೆ ತಲೆಯ ಮೇಲಿನ ಗಾಯಗಳ ಬಗ್ಗೆ ಸಮರ್ಪಕವಾದ ವಿವರಣೆ ದೊರಕಿಲ್ಲ. ಆದ್ದರಿಂದ ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಈ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ.ಈ ಪ್ರಕರಣದ ಸಮಗ್ರ ತನಿಖೆಗಾಗಿ ಬೆಳ್ತಂಗಡಿ ಡಿಎಸ್ಪಿ ರವರ ನೇತೃತ್ವದಲ್ಲಿ ನಾಲ್ಕು ತಂಡಗಳನ್ನು ರಚಿಸಲಾಗಿದೆ.
ಮಂಗಳೂರು: ಅಖಿಲ ಭಾರತೀಯ ಬಿಲ್ಲವರ ಯೂನಿಯನ್ ಆಶ್ರಯದಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ ಕ್ರೀಡೋತ್ಸವವು ಜ.18ರಂದು ಬೆಳಿಗ್ಗೆ 9 ಗಂಟೆಯಿಂದ ನಗರದ ನೆಹರೂ ಕ್ರೀಡಾಂಗಣದಲ್ಲಿ ವಿಜೃಂಭಣೆಯಿಂದ ಜರುಗಲಿದೆ. ಕ್ರೀಡೋತ್ಸವದಲ್ಲಿ ಕರುನಾಡ ಚಕ್ರವರ್ತಿ ಡಾ. ಶಿವರಾಜ್ಕುಮಾರ್ ಸೇರಿದಂತೆ ಚಿತ್ರರಂಗದ ಗಣ್ಯ ತಾರೆಯರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತೀಯ ಬಿಲ್ಲವರ ಯೂನಿಯನ್ (ರಿ.) ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಅವರು ತಿಳಿಸಿದರು. ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 7.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ನೆಹರೂ ಮೈದಾನದವರೆಗೆ ಕ್ರೀಡಾ ಜ್ಯೋತಿ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಸಂಜೆ 6 ಗಂಟೆಗೆ ಸಮಾರೋಪ ಸಮಾರಂಭ ಆಯೋಜಿಸಲಾಗಿದೆ ಎಂದು ಹೇಳಿದರು. ತಾರಾ ಆಕರ್ಷಣೆಯಾಗಿ ಡಾ. ಶಿವರಾಜ್ಕುಮಾರ್, ವಿಜಯ ರಾಘವೇಂದ್ರ, ಧನ್ಯ ರಾಮ್ ಕುಮಾರ್, ಯುವ ರಾಜ್ ಕುಮಾರ್, ಪೃಥ್ವಿ ಅಂಬರ್ ಹಾಗೂ ಅನುಶ್ರೀ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ಸಂಜೆ 5.30ಕ್ಕೆ…
ಉಳ್ಳಾಲ: ಮಂತ್ರ ನಾಟ್ಯಕಲಾ ಗುರುಕುಲ (ರಿ.)ಉಳ್ಳಾಲ ಇದರ ಗುರುಕುಲ ಉತ್ಸವ 2026 ತ್ರಯೋದಶ ನಾಟ್ಯ ಸಂಭ್ರಮ ಕಾರ್ಯಕ್ರಮವು ಜ. 17ರ ಶನಿವಾರದಂದು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ಸಭಾ ವೇದಿಕೆ ಕುತ್ತಾರು ಇಲ್ಲಿ ಅಪರಾಹ್ನ 3.00 ಗಂಟೆಗೆ ನಡೆಯಲಿದೆ ಎಂದು ಮಂತ್ರ ನಾಟ್ಯಕಲಾ ಗುರುಕುಲ (ರಿ.)ಉಳ್ಳಾಲ ಇದರ ಅಧ್ಯಕ್ಷರಾದ ಶ್ರಾವಣ್ ಉಳ್ಳಾಲ್ ತಿಳಿಸಿದರು. ಅವರು ಉಳ್ಳಾಲ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ದೇವತಾ ದೀಪ ಪ್ರಜ್ವಲನೆಯನ್ನು ಮಂತ್ರ ನಾಟ್ಯಕಲಾ ಗುರುಕುಲ (ರಿ.) ಉಳ್ಳಾಲ ಇದರ ಗೌರವ ಅಧ್ಯಕ್ಷರಾದ ಶಕೀಲ ಜನಾರ್ಧನ ನೆರವೇರಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳೂರು ಇದರ ಸಹಾಯಕ ನಿರ್ದೇಶಕರಾದ ರಾಜೇಶ್ ಜಿ. ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಲಿದ್ದಾರೆ. ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಕುತ್ತಾರು ಇದರ ಅಧ್ಯಕ್ಷರಾದ ರಾಜೇಶ್ ಅತ್ತಾವರ ಅಧ್ಯಕ್ಷತೆ ವಹಿಸಲಿದ್ದಾರೆ. ಶೃತಿಲಯ ಕಲಾ ಕೇಂದ್ರ ಕುತ್ತಾರು ಹರೀಶ್ ಮಾಸ್ಟರ್, ಕರಾವಳಿ ಕರ್ನಾಟಕ ನೃತ್ಯ ನಿರ್ದೇಶಕರ ಸಂಘ ದ ಅಧ್ಯಕ್ಷರಾದ ಪ್ರಕಾಶ್ ಸಿಂಪೋನಿ, ಜೆ…

