ನವದೆಹಲಿಯ ಹರಿನಗರದಲ್ಲಿರುವ ಮಹಾಶಯ ಚುನಿ ಲಾಲ್ ಸರಸ್ವತಿ ಬಾಲ್ ಮಂದಿರಲ್ಲಿ ಬ್ಯಾಡ್ಮಿಂಟನ್ ಟೂರ್ನಮೆಂಟ್ ನಡೆಯುತ್ತಿದ್ದು, ಅಂಬಿಕಾ ಪದವಿ ಪೂರ್ವ ವಿದ್ಯಾಲಯದ 5 ವಿದ್ಯಾರ್ಥಿಗಳು ಸ್ಪರ್ಧಿಸಲು ಹೊರಟಿದ್ದಾರೆ. ಹೌದು, ಅಕ್ಷಜ್ ರೈ, ಆರ್ಯನ್ ಆರ್, ಎಸ್.ಅಖಿಲ್, ಸೂರ್ಯ ಪಿ ನಡಿಗೆ, ಬಿ.ಆರ್. ಸೂರ್ಯ ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಸ್ಪರ್ಧಿಸಲಿದ್ದಾರೆ. ಇನ್ನು ಮಹಿಳೆಯರ ವಿಭಾಗದಲ್ಲಿ ವಿವೇಕಾನಂದ ಪಿ.ಯು. ಕಾಲೇಜಿನ ಹಾಗೂ ಮಂಗಳೂರಿನ ಶಾರದಾ ವಿದ್ಯಾಲಯದ ವಿದ್ಯಾರ್ಥಿನಿಯರು ಭಾಗವಹಿಸಲಿದ್ದಾರೆ. 14-19 ವಿಭಾಗದ ಬ್ಯಾಡ್ಮಿಂಟನ್ ಸ್ಪರ್ದೆಯಲ್ಲಿ ಆರಾಧ್ಯ, ಸಿರಿ, ಶಾನ್ವಿ, ಅನ್ವಿಕಾ ರಾಜ್, ನೇಹಾಶ್ರೀ, ಸಮನ್ವಿತ, ಭೂಮಿಕಾ, ಪುಲಕಿತ ಭಾಗಿಯಾಗಲಿದ್ದಾರೆ. ಈಗಾಗಲೇ ಈ ಎಲ್ಲಾ ವಿದ್ಯಾರ್ಥಿಗಳು ನವದೆಹಲಿಯತ್ತ ಪಯಣ ಬೆಳೆಸಿದ್ದು, ಟೂರ್ನಮೆಂಟ್ನಲ್ಲಿ ಭಾಗಿಯಾಗಿ ಬಳಿಕ ನ. 14 ರಂದು ವಾಪಾಸ್ಸಾಗಲಿದ್ದಾರೆ. ಉತ್ತಮ ಕ್ರೀಡಾಪಟುಗಳಾದ ವಿದ್ಯಾರ್ಥಿಗಳು ವಿಜೇತರಾಗಿ ಪದಕಗಳನ್ನು ಗಳಿಸಿ, ತಾವು ವಿದ್ಯಾರ್ಜನೆ ಪಡೆಯುತ್ತಿರುವ ಸಂಸ್ಥೆಗೆ ಹೆಸರನ್ನು ತಂದು ಕೊಡಲಿ ಎಂಬುವುದು ಎಲ್ಲರ ಆಶಯ.
Author: UllalaVani
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಂಜಿಮೊಗರು ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ, ಜಗದೀಶ್ ಸನಿಲ್, ಶ್ರೀಧರ್ ಪೂಜಾರಿ,ದಯಾನಂದ ಕುಮಾರ್, ಗಣೇಶ್ ಸನಿಲ್ ಹಾಗೂ ಮೋಲಿ ಫೇರ್ನಾಂಡಿಸ್ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸಂಘದ ಸದಸ್ಯರಾದ ಕನಕದಾಸ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಯಲ್ಲಿ ಶೀಘ್ರಗತಿಯಲ್ಲಿ ಇ-ಸ್ಟಾಂಪಿOಗ್ ಸೇವೆಯನ್ನು ನೀಡುತ್ತಿರುವುದು ಶ್ಲಾಘನೀಯ. ಹಾಗೂ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು”. ಸದಸ್ಯರಾದ ಫಾತಿಮತುಲ್ ಜೋಹರ ರವರು ಮಾತನಾಡಿ “ಸಂಘದ ಸಿಬ್ಬಂದಿಗಳ ನಗುಮೊಗದ ಗ್ರಾಹಕ ಸ್ನೇಹಿ ಸೇವೆಯಿಂದಾಗಿ ಸಂಘವು ಅಭಿವೃದ್ದಿ ಹೊಂದುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಪಂಜಿಮೊಗರು ಶಾಖೆಯು 9ನೇ ವರ್ಷದ ಸಂಭ್ರಮದೊAದಿಗೆ ಮುನ್ನಡೆಯುತ್ತಿದೆ. ಠೇವಣಿ ಸಂಗ್ರಹಣೆಯೊOದಿಗೆ ಸಾಲ…
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಲ್ಕಿ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶೀನ ಪೂಜಾರಿ, ಎಚ್. ವಾಸು ಪೂಜಾರಿ, ಸರೋಜಿನಿ, ಕುಶಾಲ ಎಸ್. ಕುಕ್ಯಾನ್ ಹಾಗೂ ಪ್ರಕಾಶ್ ಸುವರ್ಣ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸದಸ್ಯರಾದ ಶೀನ ಪೂಜಾರಿಯವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ನಿರಂತರವಾಗಿ ಲಾಭ ಗಳಿಸುತ್ತಾ ಬರುತ್ತಿದೆ. ಸತತವಾಗಿ ಸದಸ್ಯರಿಗೆ ಡಿವಿಡೆಂಟ್ ನೀಡುತ್ತಿದ್ದು, ಕಳೆದ ಆರ್ಥಿಕ ಸಾಲಿನಲ್ಲಿ ಗ್ರಾಹಕರಿಗೆ ಶೇ.15 ಡಿವಿಡೆಂಡ್ ನೀಡಿರುವುದು ಸಂಘದ ಆರ್ಥಿಕ ಪ್ರಗತಿಯ ಸಂಕೇತವಾಗಿದೆ. ಸಂಘವೂ ಇನ್ನೂ ಹೆಚ್ಚಿನ ಅಭಿವೃದ್ದಿಯನ್ನು ಹೊಂದಲಿ” ಎಂದು ಶುಭ ಹಾರೈಸಿದರು ಸದಸ್ಯರಾದ ಹರಿಶ್ಚಂದ್ರ ಪಿ ಸಾಲ್ಯಾನ್ ಮಾತನಾಡಿ, “ಸಂಘವು ಪ್ರಾರಂಭಗೊ0ಡ ಅತೀ ಕಡಿಮೆ ಅವಧಿಯಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್…
ಫರಿದಾಬಾದ್ ಸ್ಫೋಟಕ ಪ್ರಕರಣಕ್ಕೆ ಸಂಬAಧಿಸಿದoತೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಜಂಟಿ ಭದ್ರತಾ ಪಡೆಗಳು ಬಂಧಿಸಿವೆ. ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿ, ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಆರೋಪಿ ಮನೆಯಿಂದ ಐದು ಫೋನ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಪತ್ನಿಯನ್ನು ಶಂಕಿತ ಮೂಲಭೂತವಾದ ಸಂಪರ್ಕದ ಮೇಲೆ ಬಂಧಿಸಲಾಗಿದೆ. ಮೌಲ್ವಿಯ ವಿಚಾರಣೆ ನಡೆಸಿದಾಗ ಮುಜಮ್ಮಿಲ್ ನಂಟು ಪತ್ತೆಯಾಗಿದೆ. ಇರ್ಫಾನ್ ಅಹ್ಮದ್ ವಾಗೆ, ‘ವೈಟ್-ಕಾಲರ್’ ಭಯೋತ್ಪಾದಕ ಮಾಡ್ಯೂಲ್ನ ಹಿಂದಿನ ಮಾಸ್ಟರ್ ಮೈಂಡ್ ಎಂದು ಶಂಕಿಸಲಾಗಿದೆ. ಆರೋಪಿಯು ವೈದ್ಯಕೀಯ ವೃತ್ತಿಪರರು ಮತ್ತು ವಿದ್ಯಾರ್ಥಿಗಳನ್ನು ಮೂಲಭೂತವಾದಿಗಳನ್ನಾಗಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಅನ್ಸರ್ ಘಜ್ವತ್-ಉಲ್-ಹಿಂದ್ (ಎಜಿಯುಎಚ್) ಜೊತೆ ಸಂಪರ್ಕ ಹೊಂದಿದೆ ಎಂದು ಹೇಳಲಾಗಿದೆ.
ಕಡಬ; ಕಡಬ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ಬಾಡಿಗೆ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25) ಎಂದು ಗುರುತಿಸಲಾಗಿದೆ. ಅವರು ವಿದೇಶಕ್ಕೆ ಹೋಗುವ ಸಿದ್ಧತೆ ನಡೆಸುತ್ತಿದ್ದರೆಂದು ತಿಳಿದುಬಂದಿದ್ದು, ಈ ನಡುವೆ ಆತ್ಮಹತ್ಯೆಗೆ ಶರಣಾಗಿದ್ದಾನೆ.ಆತ್ಮಹತ್ಯೆಯ ನಿಖರ ಕಾರಣ ತಿಳಿದುಬಂದಿಲ್ಲ, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಸೌಮ್ಯ ರೆಡ್ಡಿ ಅವರ ಆದೇಶದಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧಕ್ಷೆ ಉಷಾ ಅಂಚನ್ ರವರು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರಾದ ಶಾರದಾ ಅರಸು ಇವರನ್ನು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳಿಸಿದ್ದಾರೆ.
ಮಂಗಳೂರು, ನ. 12; ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ಎಕ್ಕೂರು ಮೈದಾನ ಬಳಿ ಮತ್ತು ಪಡೀಲ್ ರೈಲ್ವೆ ಬ್ರಿಡ್ಜ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಎಕ್ಕೂರಿನಲ್ಲಿ ಹರಿಪ್ರಸಾದ್ ನನ್ನು ಹಾಗೂ ಪಡೀಲ್ ನಲ್ಲಿ ಮುಹಮ್ಮದ್ ಶಾರೂಕ್ ನನ್ನು ಬಂಧಿಸಲಾಗಿದೆ.ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ, ನ. 12 ; ಬೆಂಜನಪದವಿನಲ್ಲಿರುವ ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದ ಮುಂಬೈ ಮೂಲದ ಅವಿವಾಹಿತ ಯುವತಿಯೊಬ್ಬಳು ನವೆಂಬರ್ 9 ರಿಂದ ಕಾಣೆಯಾಗಿದ್ದಾಳೆ ಎಂದು ವರದಿಯಾಗಿದೆ. ನಾಪತ್ತೆಯಾದ ಯುವತಿಯನ್ನು ಬೆಂಜನಪದವಿನ ಶಿವಾಜಿನಗರದ ನಿವಾಸಿ ಮರಿಯಾ ಆಲ್ಬರ್ಟ್ ಡಿಸೋಜಾ ಎಂದು ಗುರುತಿಸಲಾಗಿದೆ.ವರದಿಗಳ ಪ್ರಕಾರ, ಮರಿಯಾ ಒಂದು ವರ್ಷದ ಹಿಂದೆ ತನ್ನ ತಾಯಿಯನ್ನು ಕಳೆದುಕೊಂಡ ನಂತರ, ಬೆಂಜನಪದವಿನಲ್ಲಿರುವ ತನ್ನ ಅತ್ತೆ ಮೊಲ್ಲಿ ಟೆಲ್ಲಿಸ್ ಅವರೊಂದಿಗೆ ವಾಸವಾಗಿದ್ದಳು. ಆಕೆಯ ತಂದೆ ಆಲ್ಬರ್ಟ್ ಡಿಸೋಜಾ ಅವರು ಮುಂಬೈನಲ್ಲಿ ನೆಲೆಸಿದ್ದಾರೆ.ನವೆಂಬರ್ 9 ರಂದು, ಆಕೆಯ ಅತ್ತೆ ಚರ್ಚ್ಗೆ ಹೋಗಿದ್ದರು. ಈ ವೇಳೆ ಮರಿಯಾ ಮನೆಯಿಂದ ಹೊರಟುಹೋಗಿದ್ದು, ಹಿಂತಿರುಗಿಲ್ಲ ಎಂದು ತಿಳಿದುಬಂದಿದೆ.ಆಕೆ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾಣೆಯಾದ ಯುವತಿಗಾಗಿ ಶೋಧ ಕಾರ್ಯವನ್ನು ಆರಂಭಿಸಿದ್ದಾರೆ.
ಕೊಣಾಜೆ,ನ,12:ಕೊಣಾಜೆ ಗ್ರಾಮದ ಬೊಲ್ಮದಪ್ಪೆ ಕಲ್ಲುರ್ಟಿ ಕಲ್ಕುಡ ದೈವಸ್ಥಾನದಲ್ಲಿ ಸೋಮವಾರ ರಾತ್ರಿ ಹರಕೆಯ ಕೋಲೋತ್ಸವಗಳು ಶ್ರದ್ಧಾ ಭಕ್ತಿಯಿಂದ ನಡೆಯಿತು. ಈ ಸಂದರ್ಭ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಾಪ್ ಕಾಮ್ಸ್ ಅಧ್ಯಕ್ಷರಾದ ಪ್ರಶಾಂತ್ ಗಟ್ಟಿ ಕುರ್ನಾಡು, ನೆಟ್ಲ ನಿಟಿಲಾಪುರ ಶ್ರೀ ನಿಟಿಲಾಕ್ಷ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾದ ನವೀನ್ ಗಟ್ಟಿ ನೆಟ್ಲ, ಹಾಗೂ ಪ್ರಖ್ಯಾತ ಯಕ್ಷಗಾನ ಹಾಸ್ಯ ಕಲಾವಿದರಾದ ಸುಂದರ್ ಬಂಗಾಡಿ ಇವರನ್ನು ಶ್ರೀ ಕ್ಷೇತ್ರದ ಪರವಾಗಿ ಗೌರವಿಸಲಾಯಿತು.. ಕ್ಷೇತ್ರದ ಮಾರ್ಗದರ್ಶಕರಾದ ಸುದರ್ಶನ್ ಭಟ್ ಕೊಣಾಜೆ, ಉಳ್ಳಾಲ ವಲಯ ಬಂಟರ ಸಂಘದ ಅಧ್ಯಕ್ಷರಾದ ರವೀಂದ್ರ ರೈ ಕಳ್ಳಿಮಾರು, ಕಲ್ಲಾಪು ಬುರ್ದುಗೋಳಿ ಶ್ರೀ ಗುಳಿಗ ಕೊರಗಜ್ಜ ಉದ್ಭವ ಶಿಲಾ ಕ್ಷೇತ್ರದ ಮಧ್ಯಸ್ಥರಾದ ದೇವದಾಸ ಗಟ್ಟಿ ಕಾಯಂಗಳ, ಯಜಮಾನರಾದ ನೇಮು ಗಟ್ಟಿ ಕೊರಂತೋಡಿ,ಯಜಮಾನರ ಪ್ರತಿನಿಧಿ ಮಾಧವಗಟ್ಟಿ ಕೆಳಗಿನ ಮನೆ, ಟ್ರಸ್ಟಿನ ಅಧ್ಯಕ್ಷರಾದ ವಸಂತ್ ಕೆ ಎನ್ ಕುಂಪಲ, ಪ್ರಮುಖರಾದ ಚಂದ್ರಶೇಖರ ಗಟ್ಟಿ ಅಂದಾಡಿ, ಕೇಶವ ಗಟ್ಟಿ ಪಿಲಾರ್, ವಾಸುದೇವ ಕೊಣಾಜೆ, ಪ್ರವೀಣ್ ಗಟ್ಟಿ…
ಮಂಗಳೂರು,ನ.12: ಮಂಗಳೂರು ನಗರದ , ಶಿವಬಾಗ್ ಮುಖ್ಯರಸ್ತೆಯಲ್ಲಿ ನೂತನ ಹಾಗು ಅತ್ಯಾಧುನಿಕ ಉಪಕರಣಯುಕ್ತ, ಸ್ವಸ್ಥ್ಯ ಫಿಸಿಯೋಥೆರಪಿ ಆಂಡ್ ರಿಹ್ಯಾಬಿಲಿಟೇಶನ್ ಕ್ಲಿನಿಕ್ ಆರಂಭಗೊAಡಿದೆ.ನಿಟ್ಟೆ ವಿಶ್ವವಿದ್ಯಾಲದ ಕುಲಾಧಿಪತಿ ಎನ್ ವಿನಯ ಹೆಗ್ಡೆ ಮತ್ತು ಲಕ್ಷ್ಮಿ ಮೆಮೋರಿಯಲ್ ಸಂಸ್ಥೆಯ ಅಧ್ಯಕ್ಷ ಎ ಜೆ ಶೆಟ್ಟಿ ಯವರು, ನೂತನ ಕ್ಲಿನಿಕ್ನ್ನು ಉದ್ಘಾಟಿಸಿದರು. ರಾಮಕೃಷ್ಣ ಆಶ್ರಮದ ಅಧ್ಯಕ್ಷ ಪೂಜ್ಯ ಜೀತಕಾಮನಂದ್ ಮಹಾರಾಜ ಆಶೀರ್ವದಿಸಿದರು. ಸ್ವಾಸ್ಥ್ಯ ಘಟಕದ ವೆಸ್ಟಿಬುಲರ್ ರಿಹ್ಯಾಬಿಲಿಟೇಶನ್ ವಿಭಾಗವನ್ನು ನಿಟ್ಟೆ ವಿಶ್ವ ವಿದ್ಯಾಲಯದ ಸಹ ಕುಲಾಧಿಪತಿ ಡಾಕ್ಟರ್ ಶಾಂತಾರಾಮ್ ಶೆಟ್ಟಿ ಮತ್ತು ಶ್ರೀ ವಿಶಾಲ್ ಹೆಗ್ಡೆ ನೆರವೇರಿಸಿದರು. ಎಲೆಕ್ಟ್ರೋಥೆರಪಿ ಚಿಕಿತ್ಸಾ ವಿಭಾಗ ವನ್ನು ಡಾಕ್ಟರ್ ಹಂಸರಾಜ್ ಆಳ್ವ ಮತ್ತು ಡಾಕ್ಟ್ಪರ್ ಕಿಶೋರ್ ಶೆಟ್ಟಿ ನೆರವೇರಿಸಿದರು. ವ್ಯಾಯಾಮ ಚಿಕಿತ್ಸಾ ಘಟಕವನ್ನು ನಿಟ್ಟೆ ವಿಶ್ವವಿದ್ಯಾಲಯ ಕುಲಪತಿ ಡಾಕ್ಟ್ಪರ್ ಮೂಡಿತ್ತಾಯ ನೆರವೇರಿಸಿದರು. ಮಂಗಳೂರು ದಕ್ಷಿಣ ಶಾಸಕ ಶ್ರೀ ವೇದವ್ಯಾಸ್ ಕಾಮತ್ ಅವರು ಅತಿಥಿಗಳನ್ನು ಉದ್ದೇಶಿಸಿ ಮಾತಾಡಿದರು. ನಮ್ಮ ಜಿಲ್ಲೆಯಲ್ಲಿ ಮೊತ್ತ ಮೊದಲ ಬಾರಿಗೆ ವಿಶೇಷ ಹಾಗು ವಿಭಿನ್ನ ಸಲಕರಣೆ, ರೋಗಿಗಳ ಶಾರೀರಿಕ…

