Author: UllalaVani

Kannada News From Coastal Karnataka

ಕಾಸರಗೋಡು: ಭಾರೀ ಪ್ರತಿಭಟನೆ ಹಾಗೂ ಕಾನೂನು ಹೋರಾಟಗಳ ಮಧ್ಯೆಯೂ ನಾಳೆಯಿಂದ ಕುಂಬಳೆಯಲ್ಲಿ ನೂತನವಾಗಿ ನಿರ್ಮಿಸಲಾದ ಟೋಲ್ ಗೇಟ್ ನಲ್ಲಿ ಟೋಲ್ ಸಂಗ್ರಹ ಆರಂಭವಾಗಲಿದೆ. ಅರಿಕ್ಕಾಡಿ (ಕುಂಬಳೆ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಟೋಲ್‌ಗೇಟ್‌ನಲ್ಲಿ ವಾಹನ ಸವಾರರಿಂದ ಬಳಕೆದಾರ ಶುಲ್ಕ (ಟೋಲ್‌ ಫೀ) ಸಂಗ್ರಹಣೆ ನವೆಂಬರ್ 12, 2025ರಂದು ಬೆಳಿಗ್ಗೆ 8 ಗಂಟೆಯಿಂದ ಆರಂಭಗೊಳ್ಳಲಿದೆ. ನ್ಯಾಯಾಲಯದ ಅಭಿಪ್ರಾಯಗಳು ಮತ್ತು ಸಾರ್ವಜನಿಕ ಪ್ರತಿಭಟನೆಗಳನ್ನು ಲೆಕ್ಕಿಸದೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ಶುಲ್ಕ ವಸೂಲಿ ಪ್ರಾರಂಭಿಸಲು ಸಜ್ಜಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕಾಸರಗೋಡು ಜಿಲ್ಲೆಯ ಸಾಮಾನ್ಯ ಪ್ರಯಾಣಿಕರ ಮೇಲೆ ಇದು ಭಾರೀ ಆರ್ಥಿಕ ಹೊರೆ ಉಂಟುಮಾಡುವ ಸಾಧ್ಯತೆ ವ್ಯಕ್ತವಾಗಿದೆ. ಅರಿಕ್ಕಾಡಿ ಟೋಲ್‌ಗೇಟ್ ನಿರ್ಮಾಣದ ಕುರಿತು “ಆಂಟಿ-ಟೋಲ್ ಆಕ್ಷನ್ ಸಮಿತಿ” ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಪ್ರಕರಣ ಇನ್ನೂ ವಿಚಾರಣೆಯಲ್ಲಿದೆ. ಈ ನಡುವೆ ನ್ಯಾಯಾಲಯವು ಆ ಪ್ರಕರಣವನ್ನು ಪರಿಗಣಿಸುತ್ತಿರುವ ವೇಳೆ ಟೋಲ್ ವಸೂಲಿ ಪ್ರಾರಂಭಿಸುವುದು ನ್ಯಾಯೋಚಿತವಲ್ಲ ಎಂಬ ಆಕ್ಷೇಪ ವ್ಯಕ್ತವಾಗಿದೆ.ಇದೇ ವೇಳೆ ತಲಪಾಡಿ ಟೋಲ್‌ಪ್ಲಾಜಾ ಮತ್ತು ಅರಿಕ್ಕಾಡಿ ಟೋಲ್‌ಪ್ಲಾಜಾಗಳ…

Read More

ಪುತ್ತೂರು; ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ ಪೆರ್ವೋಡಿ ಹಾಗೂ ನಿತೇಶ್ ಕಲ್ಲೇಗ, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಹಾಗೂ ಯುವ ಮೋರ್ಚಾ ಗ್ರಾಮಾಂತರ ಮಂಡಲದ ಪ್ರಭಾರಿಗಳಾದ ಕೃಷ್ಣ ಎಂ ಆರ್ ಕಡಬ, ಜಿಲ್ಲಾ ಕಾರ್ಯದರ್ಶಿಗಳಾದ ಮಚ್ಚಿಮಲೆ ವಿರುಪಾಕ್ಷ ಭಟ್, ಬಿಜೆಪಿ ಮುಖಂಡರಾದ ಮುರಳಿಕೃಷ್ಣ ಹಸಂತಡ್ಕ, ಯುವ ಮೋರ್ಚಾ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಆದೇಶ್ ಶೆಟ್ಟಿ ಹಾಗೂ ಎರಡು ಮಂಡಲದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Read More

ಮಾತು ಜ್ಯೋತಿರ್ಲಿಂಗದ ಹಾಗೆ, ಮಾತೆಂದರೆ ಬೆಳಕಿನ ಹಾಗೆ, ಮಾತಿಗೆ ಪಾವಿತ್ರ್ಯತೆ, ಆಧ್ಯಾತ್ಮಿಕ ಪ್ರಭೆ ಇದೆ. ನಾವು ಸಮಾಜದಲ್ಲಿ ನೆಮ್ಮದಿ, ಶಾಂತಿಯಿಂದ ಬದುಕಬೇಕಾದರೆ ನಮ್ಮ ಹೃದಯದೊಳಗೆ ಸೌಹಾರ್ದದ ಹೂವು ಅರಳಬೇಕು, ಆ ಹೂವಿಗೆ ಸುಗಂದ ಇರಬೇಕು. ಎಂದು ಮಂಗಳೂರು ವಿಶ್ವವಿದ್ಯಾಲಯ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಧನಂಜಯ ಕುಂಬ್ಳೆ ಅಭಿಪ್ರಾಯಪಟ್ಟರು. ಕೊಲ್ಯ ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಬಿಲ್ಲವ ಸೇವಾ ಸಮಾಜ ಯುವವಾಹಿನಿ, ರೋಟರಿ ಸಮುದಾಯ ದಳ, ಉಳ್ಳಾಲ ಜಮಾಅತೆ ಇಸ್ಮಾಮಿ ಹಿಂದ್, ನವೋದಯ ಫ್ರೆಂಡ್ಸ್, ಪೊಸಕುರಲ್ ಬಳಗ, ಸದ್ಫಾವನಾ ವೇದಿಕೆ, ಕಿನ್ಯ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಯುವಕ ಮಂಡಲ, ಛೋಟಾ ಮಂಗಳೂರು ಲಯನ್ಸ್ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಕೊಲ್ಯ ಬಿಲ್ಲವ ಸಮಾಜದ ನಾರಾಯಣ ಗುರು ಕಲಾಂಗಣದಲ್ಲಿ ಗುರುವಾರ ನಡೆದ ಸೌಹಾರ್ದ ದೀಪಾವಳಿ ಸಂಗಮದಲ್ಲಿ ಮಾತನಾಡಿದರು. ತೊಕ್ಕೊಟ್ಟು ಮಸ್ಜಿದುಲ್ ಹುದಾ ಖತೀಬ್ ಮುಹಮ್ಮದ್ ಕುಂಞಿ ಮಾತನಾಡಿ, ಎಲ್ಲಾ ಧರ್ಮಗಳು ಜಗತ್ತಿಗೆ ಬೆಳಕನ್ನು ಕೊಟ್ಟಿದೆ. ಆದರೆ ನಾವಿಂದು ಅಕ್ರಮ, ಹಿಂಸೆ, ಸುಳ್ಳು, ಅನೈತಿಕ ಎಂಬ…

Read More

ಉಳ್ಳಾಲ: ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲ ಗುಡ್ಡೆ ಇಲ್ಲಿನ ವಿದ್ಯಾರ್ಥಿಗಳ ಕ್ರೀಡಾ ಸಂಗಮ 2025 ಕಾರ್ಯಕ್ರಮಕ್ಕೆ ಮಂಗಳವಾರ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಉದ್ಯಮಿ ರಹೀಮ್ ಉಚ್ಚಿಲ ಅವರು, ಈ ಶಾಲೆಯಲ್ಲಿ ಕಲಿಯುವ ಐವರು ವಿದ್ಯಾರ್ಥಿಗಳು ಮೈಸೂರಿನ ಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜೇತರಾದದ್ದು ಸಂತಸ ತಂದಿದೆ.ಪಾಠದೊಂದಿಗೆ ಆಟ ಬೇಕು .ಕಲಿಯಲು ಬೇಕಾಗಿ ಶಾಲೆಗೆ ಬರುವ ವಿದ್ಯಾರ್ಥಿಗಳು ಪಾಠದಲ್ಲಿ ಹಿಂದುಳಿಯಬಾರದು ಎಂದು ಕರೆ ನೀಡಿದರು.ಸಲಾಮ್ ಉಚ್ಚಿಲ ಮಾತನಾಡಿ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆಗಳ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.ಪತ್ರಕರ್ತ ಬಶೀರ್ ಕಲ್ಕಟ್ಟ ಮಾತನಾಡಿದರು.ಕೌನ್ಸಿಲರ್ ಇಸಾಕ್ ಅಜ್ಜಿನಡ್ಕ ಕ್ರೀಡಾ ಜ್ಯೋತಿ ಸ್ವೀಕರಿಸಿದರು. ಕ್ರೀಡಾ ಪ್ರತಿನಿಧಿ ಝಝ್ಮಾ ಪ್ರತಿಜ್ಞಾ ವಿಧಿ ಬೋಧಿಸಿದರು.ಈ ಕಾರ್ಯಕ್ರಮ ದಲ್ಲಿ ಎಸ್ ಡಿಎಂಸಿ ಉಪಾಧ್ಯಕ್ಷ ಬಶೀರ್,ಜಿ.ಐ. ಮೊಹಮ್ಮದ್ ಅಲಿ, ಸಲಾಮ್ ಉಚ್ಚಿಲ, ದೈಹಿಕ ಶಿಕ್ಷಕ ಮೋಹನ್ ಶಿರ್ಲಾಲ್, ಶಿಕ್ಷಕರಾದ ಚಂದ್ರ ಶೇಖರ್ ಸಿ.ಎಚ್., ಸಂಧ್ಯಾ ಕುಮಾರಿ, ಬಬಿತಾ, ಮಂಜುನಾಥ,ನಿರೀಕ್ಷಾ, ಅನುಷಾ , ಅಶ್ವಿನಿ, ಸವಿತಾ ಪ್ರಿಯಾ ವಿನುತಾ ಮತ್ತಿತರರು…

Read More

ಲಯನ್ಸ್ ಕ್ಲಬ್ ಸೋಮೇಶ್ವರದ ವತಿಯಿಂದ, ಸಂತ ಸೆಬಾಸ್ಟಿಯನ್ ಇಂಗ್ಲಿಷ್ ಮೀಡಿಯಂ ಶಾಲೆ,ಪೆರ್ಮನ್ನೂರ್ ತೊಕ್ಕೋಟಿನ ವಿದ್ಯಾರ್ಥಿನಿಯರಿಗಾಗಿ ಕ್ಯಾನ್ಸರ್ ಮತ್ತು ಸ್ತ್ರೀ ರೋಗ ಜಾಗ್ರತಿಯ ಕುರಿತು ಜಾಗ್ರತಿ ಉಪನ್ಯಾಸವನ್ನು ಆಯೋಜಿಸಲಾಯಿತು. ಕ್ಲಬ್ ಅಧ್ಯಕ್ಷರಾದ ಲಯನ್ ವಿಜಯನ್ ಕೆ ಅವರ ಅಧ್ಯಕ್ಷತೆಯಲ್ಲಿ ಲಯನ್ ಡಾ. ಪ್ರಿಯದರ್ಶಿನಿಯವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಲಯನ್ ಡಾ. ಅನುರೂಪ ಹೆಗ್ಡೆ ಹಾಗೂ ಲಯನ್ ನಿರ್ಮಿತಾ ಭಂಡಾರಿ ಅವರು ಉಪಸ್ಥಿತರಿದ್ದರು. ಶಾಲೆಯ ಪ್ರಿನ್ಸಿಪಾಲ್ ಸಿಸ್ಟರ್ ಜ್ಯೋತಿಕಾ ಸ್ವಾಗತ ಭಾಷಣ ಮಾಡಿದರು ಹಾಗೂ ಶಾಲಾ ನಾಯಕರು ಧನ್ಯವಾದ ಸಲ್ಲಿಸಿದರು. ಉಳ್ಳಾಲದ ಕೆ. ಪಾಂಡ್ಯರಾಜ್ ಬಲ್ಲಾಳ್ ಕಾಲೇಜ್ ಆಫ್ ನರ್ಸಿಂಗ್‌ನ ಸಹ ಪ್ರಾಧ್ಯಾಪಕಿ ಶ್ರೀಮತಿ ಮಂಜುಷರವರ ನೇತೃತ್ವದಲ್ಲಿ ಈ ಜಾಗ್ರತಿ ಉಪನ್ಯಾಸ ನೆರವೇರಿತು.

Read More

ಲಯನ್ಸ್ ಕ್ಲಬ್ ಆಫ್ ಮಂಗಳೂರು ಸೋಮೇಶ್ವರದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬವನ್ನು ಬೀರಿಯ ವಾಣಿ ಆಡಿಟೋರಿಯಂನಲ್ಲಿ ತುಂಬು ಸಡಗರದಿಂದ ಆಚರಿಸಲಾಯಿತು. ಲಯನ್ಸ್ ಡಿಸ್ಟ್ರಿಕ್ಟ್ 317D ಯ ಮುಖ್ಯ ಜಿಲ್ಲಾ LCIF ಸಂಯೋಜಕ ಲಯನ್ ಲೋಕೇಶ್ ಶೆಟ್ಟಿ PMJF ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಸಮುದಾಯ ಸೇವೆ ಮತ್ತು ಸಾಂಸ್ಕೃತಿಕ ಏಕತೆಯಲ್ಲಿ ಕ್ಲಬ್ ಮಾಡುತ್ತಿರುವ ಪ್ರಾಮಾಣಿಕ ಕಾರ್ಯವನ್ನು ಅವರು ಶ್ಲಾಘಿಸಿದರು. ಕ್ಲಬ್ ಅಧ್ಯಕ್ಷ ಲಯನ್ ಕೆ. ವಿಜಯನ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯದರ್ಶಿ ಲಯನ್ ಕೆ. ಗೋಪಿನಾಥ್ ವರದಿ ಮಂಡಿಸಿದರು, ಕ್ಲಬ್ ಉಪಾಧ್ಯಕ್ಷ ಲಯನ್ ಕಮಾಂಡರ್ ಕೆ. ವಿಜಯಕುಮಾರ್ ಸ್ವಾಗತಿಸಿದರು ಮತ್ತು ಖಜಾಂಚಿ ಲಯನ್ ನಿತೀಶ್ ಕೃಷ್ಣ ಧನ್ಯವಾದಗಳನ್ನು ಅರ್ಪಿಸಿದರು. ಈ ಸಮಾರಂಭದಲ್ಲಿ ಕ್ಲಬ್ ಸದಸ್ಯರು ಮತ್ತು ಅವರ ಕುಟುಂಬಗಳು ಉತ್ಸಾಹದಿಂದ ಭಾಗವಹಿಸಿದರು ಮತ್ತು ವಿವಿಧ ಸಾಂಸ್ಕೃತಿಕ ಪ್ರದರ್ಶನಗಳಿಂದ ಪ್ರೇಕ್ಷಕರನ್ನು ರಂಜಿಸಿದರು. ಕನ್ನಡದ ಹೆಮ್ಮೆಯಾದ ಕರ್ನಾಟಕ ರಾಜ್ಯೋತ್ಸವ ಮತ್ತು ಬೆಳಕಿನ ಹಬ್ಬವಾದ ದೀಪಾವಳಿಯ ಚೈತನ್ಯವನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮವು ಏಕತೆ, ಸಮೃದ್ಧಿ ಮತ್ತು…

Read More

ಉಳ್ಳಾಲ,ನ.11: ಶ್ರೀ ದುರ್ಗಾ ಫ್ರೆಂಡ್ಸ್ (ರಿ) ಉಳ್ಳಾಲ ಇದರ ಸ್ಥಾಪಕ ಸದಸ್ಯರಾದ ಹರೀಶ್ ನಿಧನ ಹೊಂದಿದ್ದಾರೆ. ಸದಾ ಎಲ್ಲರೊಡನೆ ಪ್ರೀತಿ ವಿಶ್ವಾಸದಿಂದ ಬೆರೆಯುತ್ತಿದ್ದ ಹರೀಶ್ ಇನ್ನಿಲ್ಲ ಎಂಬ ಸುದ್ದಿ ಅವರ ಆತ್ಮೀಯರಿಗೆ ಅಘಾತವುಂಟು ಮಾಡಿದೆ. ಹರೀಶ್ ಅವರು ಬಜಾಜ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದರು. ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಹಾಗೂ ಅನೇಕ ಬಂಧು ಮಿತ್ರರನ್ನು ಅಗಲಿದ್ದಾರೆ.

Read More

ಕುತ್ತಾರು,ನ.11: ಪ್ರಕೃತಿ ಸಂರಕ್ಷಣೆಯ ಜಾಗೃತಿ ಮೂಡಿಸುವ ಉದ್ದೇಶದಿಂದ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಕುತ್ತಾರು ಬಾಲಸಂರಕ್ಷಣಾ ಕೇಂದ್ರದಲ್ಲಿ ವೃಕ್ಷಾಂಕುರ ರಕ್ಷಾ ಕಾರ್ಯಕ್ರಮ ನಡೆಯಿತು. ಕಳೆದ 8 ವರುಷಗಳಿಂದ ವೃಕ್ಷಾಂಕುರ ರಕ್ಷಾ ಕಾರ್ಯಕ್ರಮ ದಡಿಯಲ್ಲಿ ಸದಸ್ಯರ ಮನೆಯಲ್ಲಿ ಗಿಡ, ಮನೆಗೊಂದು ಗಿಡ, ವೃಕ್ಷತೋರಣ, ಗಿಡವೊಂದು ಧಾರ್ಮಿಕತೆಗೆ ಈ ರೀತಿಯ ವಿವಿಧ ಕಾರ್ಯಕ್ರಮಗಳನ್ನು ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ನಡೆಸಿಕೊಂಡು ಬರುತ್ತಿದೆ. ಈ ಬಗ್ಗೆ ಪ್ರತಿಷ್ಠಾನದ ಅಧ್ಯಕ್ಷರಾದ ಜೀವನ್ ಕುಮಾರ್ ತೊಕ್ಕೊಟು ಮಾತನಾಡಿ, ಕುತ್ತಾರಿನ ಬಾಲಸಂರಕ್ಷಣಾ ಕೇಂದ್ರದಲ್ಲಿ ಮಕ್ಕಳ ಜತೆಯಲ್ಲಿ ನೂರು ಮನಸ್ಸು ಗಿಡವೊಂದು ಕಾರ್ಯಕ್ರಮ ನಡೆಸಲು ಸಂತೋಷ ಪಡುತ್ತಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು. ಪ್ರತಿಷ್ಠಾನದ ಉಪಾಧ್ಯಕ್ಷರು, ಪರಿಸರ ಪ್ರೇಮಿ ಮಾಧವ ಉಳ್ಳಾಲ ರವರ ಮಾರ್ಗದರ್ಶನದಲ್ಲಿ, ವೃಕ್ಷಾಂಕುರ ರಕ್ಷಾ ಸಂಚಾಲಕರು ಪ್ರಸಾದ್ ಕೊಂಡಾಣ ರವರ ಮುತುವರ್ಜಿಯಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದÀರ್ಭದಲ್ಲಿ ಪ್ರತಿಷ್ಠಾನದ ಗೌರವಧ್ಯಕ್ಷರಾದ ರಾಕೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಪ್ರಮುಖರಾದ ಮೋಹನ್ ಸಾಲ್ಯಾನ್, ರಾಜೇಂದ್ರ ಸೇವಂತಿಗುಡ್ಡೆ, ದಾಮೋದರ ನಡಾರ್,…

Read More

ಉಳ್ಳಾಲ,ನ.11: ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಜೀರ್ಣೋದ್ಧಾರದ ಪ್ರಮುಖ ಹಂತವಾದ ಬಾಲಾಲಯ ಪ್ರತಿಷ್ಠಾ ಕಾರ್ಯಕ್ರಮ ಜರುಗಿತು. ಉಳಿಯ ಉಳ್ಳಾಲ್ತಿ ಧರ್ಮಅರಸರ ಕ್ಷೇತ್ರದ ಧರ್ಮದರ್ಶಿಯಾದ ದೇವು ಮೂಲ್ಯಣ್ಣ ಇವರ ಮಾರ್ಗದರ್ಶನದಲ್ಲಿ ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆಯ ಜೀರ್ಣೋದ್ಧಾರದ ತಂತ್ರಿವರ್ಯಾರಾದ ಪ್ರಸಾದ್ ನಲ್ಲುರಾಯ ಇವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆದಿದೆ. ಈ ಸಂದರ್ಭದಲ್ಲಿ ಶ್ರೀ ಚೀರುಂಭ ಭಗವತೀ ಕ್ಷೇತ್ರ ಉಳ್ಳಾಲದ ಅರ್ಚಕರಾದ ಮಂಜಪ್ಪ ಕಾರ್ನವರ್ ( ಬಾಲು ಉಳ್ಳಾಲ ಬೈಲ್), ಅಪ್ಪು ಆತಾರ್ (ಕಮಾಲಾಕ್ಷ ಉಳ್ಳಾಲ್), ಶ್ರೀ ಉಳಿಯ ಉಳ್ಳಾಲ್ತಿ ಧರ್ಮಅರಸರ ಕ್ಷೇತ್ರದ ಗುರಿಕರಾದ ಅಂತ ಗುರಿಕಾರ (ರಾಜೇಶ್ ನಾಯ್ಕ್) ಉಪಸ್ಥಿತರಿದ್ದರು. ಶ್ರೀ ವೀರಾಂಜನೇಯ ಸೇವಾ ಟ್ರಸ್ಟ್ (ರಿ) ಇದರ ಮ್ಯಾನೇಜಿಂಗ್ ಟ್ರಸ್ಟಿ ರಾಜೇಶ್ ಅಡ್ಕ, ಹಾಗೂ ಸದಸ್ಯರಾದ ಶರತ್ ಪೂಜಾರಿ, ಪಿ. ಬಾಲಕೃಷ್ಣ, ಧರ್ಮೇಂದ್ರ ಉಳ್ಳಾಲ, ರಿತಿನ್ ಮೊರ್ಲ ಮತ್ತು ಶಾಲೆಯ ಗುರುಗಳಾದ ವಿಜಯ್ ಅಮಿನ್ ಕಾರ್ಯಕಾರಿ ಸಮಿತಿಯ ಅಧ್ಯಕ್ಷರಾದ ನವನೀತ್ ಉಳ್ಳಾಲ ಕಾರ್ಯಕ್ರಮದ ಜವಾಬ್ದಾರಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ನವನೀತ ಶೆಟ್ಟಿ…

Read More

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ (89) ಅವರು ಚೇತರಿಸಿಕೊಳ್ಳುತ್ತಿದ್ದು, ವೈದ್ಯಕೀಯ ನಿಗಾದಲ್ಲಿದ್ದಾರೆ ಎಂದು ಅವರ ಪುತ್ರಿ ಇಶಾ ಡಿಯೋಲ್ ಮಂಗಳವಾರ ದೃಢಪಡಿಸಿದ್ದಾರೆ. ಈ ಮೂಲಕ ನಟನ ನಿಧನದ ಕುರಿತು ಹಬ್ಬಿದ್ದ ಸುಳ್ಳು ವದಂತಿಗಳಿಗೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಪುತ್ರಿ ಇಶಾ ಪೋಸ್ಟ್ ಹಂಚಿಕೊ0ಡಿದ್ದು, “ಮಾಧ್ಯಮಗಳು ಅತಿಯಾಗಿ ವರ್ತಿಸುತ್ತಿದ್ದು, ಸುಳ್ಳು ಸುದ್ದಿಗಳನ್ನು ಹರಡುತ್ತಿವೆ. ನಮ್ಮ ತಂದೆಯವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ಕುಟುಂಬಕ್ಕೆ ಖಾಸಗಿ ಸಮಯ ನೀಡಬೇಕೆಂದು ಎಲ್ಲರಲ್ಲಿ ವಿನಂತಿಸುತ್ತೇವೆ. ಪಪ್ಪಾ ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು” ಎಂದಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ಮೂಲಕ ಉಸಿರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಧರ್ಮೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಬಾಲಿವುಡ್‌ನ ಹೀ ಮ್ಯಾನ್, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಎಂದು ಜನಪ್ರಿಯರಾಗಿರುವ ಹಿರಿಯ ನಟ ಧರ್ಮೇಂದ್ರ ಅವರು, 1960ರಲ್ಲಿ ‘ದಿಲ್ ಭೀ ತೇರಾ…

Read More