Author: UllalaVani

Kannada News From Coastal Karnataka

ಬೆಂಗಳೂರು: ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಸಮುದಾಯದಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಕೆಂಪೇಗೌಡ ವಿಮಾನದ ಟರ್ಮಿನಲ್ 2 ರಲ್ಲಿ ಸಾರ್ವಜನಿಕವಾಗಿ ಮುಸ್ಲಿಮರು ನಮಾಜ್ ಮಾಡಿದ್ದು, ಏರ್ಪೋಟ್ ಸಿಬ್ಬಂದಿ ಭದ್ರತಾ ಪಡೆ ಅಧಿಕಾರಿಗಳು ನೋಡಿಯೂ ಸುಮ್ಮನೆ ನಿಂತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಏರ್ಪೋರ್ಟ್ ಗೆ ಮೆಕ್ಕಾಗೆ ತೆರಳುತ್ತಿದ್ದವರನ್ನು ಬಿಳ್ಕೊಡಲು ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಅವರನ್ನು ಕಳುಹಿಸಿ ವಾಪಸ್ ಬರುವ ವೇಳೆ ಟರ್ಮಿನಲ್ 2 ರಲ್ಲಿ ಸಾರ್ವಜನಿಕವಾಗಿ ನಮಾಜ್ ಮಾಡಿದ್ದಾರೆ. ಏರ್ಪೋಟ್ ಒಳ ಭಾಗದಲ್ಲಿ ಪ್ರಯಾಣಿಕರಿಗೆ ಪ್ರಾರ್ಥನಾ ಕೊಠಡಿಯಿದ್ದರೂ ಕೂಡ ಸಾರ್ವಜನಿಕ ಸ್ಥಳದಲ್ಲಿ ನಮಾಜ್ ಮಾಡಿರುವುದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಇನ್ನು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಆರ್ ಎಸ್ ಎಸ್ ಮೆರವಣಿಗೆ ಅನುಮತಿ ನಿರಾಕರಿಸುತ್ತಿದ್ದ ಕಾಂಗ್ರೆಸ್ ಸರ್ಕಾರ.. ಈ ಬಗ್ಗೆ…

Read More

ಕುತ್ತಾರು,ನ.11: ಕುತ್ತಾರು ಪದವಿನಲ್ಲಿ ಸುಪ್ರೀಂ ಬಜಾಜ್‌ನ ವಿನೂತನ ಮಾರಾಟ ಕೇಂದ್ರವನ್ನು ಕರ್ನಾಟಕ ಸರಕಾರದ ಹೆಲ್ತ್ ಕೇರ್ ಕೌನ್ಸಿಲ್‌ನ ಚೇರ್ ಮೇನ್ ಯು ಟಿ ಇಪ್ತಿಕಾರ್ ಫರೀದ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಇವರು, ಎಲ್ಲಾ ಗ್ರಾಹಕರ ಸಹಕಾರದಿಂದಾಗಿ ಕೇಂದ್ರವು ಯಶಸ್ವಿಯಾಗಿ ಮುನ್ನಡೆಯಲಿ ಎನ್ನುತ್ತಾ ಶುಭಹಾರೈಸಿದರು. ಸುಪ್ರೀಂ ಬಜಾಜ್‌ನ ಸೇವಾ ಕೇಂದ್ರದ ಉದ್ಘಾಟನೆಯನ್ನು ಕಟ್ಟಡ ಮಾಲಕರಾದ ಮೊಹಮ್ಮದ್ ಇಸ್ಮಾಯಿಲ್ ಸಿದ್ಧಿ ಅಹ್ಮದ್‌ರವರು ಲೋಕಾರ್ಪಣೆಗೊಳಿಸಿದರು. ಇದೇ ವೇಳೆ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತ ಬೈಲ್ ಮಾತನಾಡಿ, ಗ್ರಾಹಕರಿಗೆ ಉತ್ತಮ ಗುಣಮಟ್ಟದಲ್ಲಿ ನಗು ಮೊಗದ ಸೇವೆಯ ಜೊತೆಗೆ ಯೋಗ್ಯ ದರದಲ್ಲಿ ವಾಹನಗಳನ್ನು ಗ್ರಾಹಕರಿಗೆ ಈ ಸಂಸ್ಥೆ ನೀಡಲಿ. ಆ ಮುಖೇನ ಜನರಿಗೆ ಸ್ನೇಹಪರ ಸೇವೆಗಳನ್ನು ನೀಡಿ ಈ ಭಾಗದಲ್ಲಿ ಉತ್ತಮ ಸಂಸ್ಥೆಯಾಗಿ ಬೆಳೆಯಲಿ ಎಂದು ಅಭಿಪ್ರಾಯಪಟ್ಟರು. ಸಂಸ್ಥೆಯ ಚೇರ್ಮನ್ ಆರೂರು ಕಿಶೋರ್ ರಾವ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 1967 ರಲ್ಲಿ ನನ್ನ ತಂದೆಯವರಾದ ದಿ.ಆರೂರು ಶ್ರೀಪತಿ ರಾವ್ ಅವರು ಕರ್ನಾಟಕದಲ್ಲಿ ಪ್ರಪಥಮವಾಗಿ ಮಂಗಳೂರಿನಲ್ಲಿ…

Read More

 ರಾಷ್ಟ್ರರಾಜಧಾನಿಯ ಹೃದಯಭಾಗ ಕೆಂಪು ಕೋಟೆ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಮಾಹಿತಿ ಪ್ರಕಾರ ದುರಂತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 11 ಜನರು ಗಾಯಗೊಂಡಿದ್ದಾರೆ. ಸ್ಫೋಟದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದು, ಘಟನೆ ಕಾರಣ ಏನೆಂದು  ತನಿಖೆ ನಡೆಯುತ್ತಿದೆ. ಸ್ಫೋಟದ ಪರಿಣಾಮವಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ ಆರು ವಾಹನಗಳು ಮತ್ತು ಹತ್ತಿರದಲ್ಲಿ ನಿಲ್ಲಿಸಿದ್ದ ಮೂರು ಆಟೋರಿಕ್ಷಾಗಳು ಸುಟ್ಟುಹೋಗಿವೆ. ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಬೆನ್ನಲ್ಲೇ ವಾಣಿಜ್ಯ ನಗರಿ ಮುಂಬೈ, ಉತ್ತರ ಪ್ರದೇಶ ಹಾಗೂ ಕರ್ನಾಟಕದ ಬೆಂಗಳೂರಿನಲ್ಲೂ ಹೈಅಲರ್ಟ್‌ ಘೋಷಣೆ ಮಾಡಲಾಗಿದೆ. ಅಧಿಕಾರಿಗಳು ರಾಜಧಾನಿಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ, ತನಿಖೆ ಮುಂದುವರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳು ಮತ್ತು ಪ್ರಮುಖ ಸಾರ್ವಜನಿಕ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.  ಕೂಡಲೇ ಠಾಣಾ ವ್ಯಾಪ್ತಿಯಲ್ಲಿ ಗಸ್ತು ತಿರುಗುವಂತೆ…

Read More

ಸುರತ್ಕಲ್: ರಂಗಚಾವಡಿ ಮಂಗಳೂರು ಸಾಂಸ್ಕೃತಿಕ ಸಾಂಸ್ಕೃತಿಕ ಸಂಘಟನೆ ಮತ್ತು ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ನಡೆದ ರಂಗಚಾವಡಿ ರಜತ ಸಂಭ್ರಮ ಮತ್ತು ರಂಗುರಂಗಿನ ರಂಗೋತ್ಸವ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಮಂಬೈ ವಿ ಕೆ ಸಮೂಹ ಸಂಸ್ಥೆಯ ಚೆಯರ್ ಮ್ಮಾನ್ ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಕೆ ಅಜಿತ್ ಕುಮಾರ್ ರೈ ಮಾಲಾಡಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಉದ್ಘಾಟಿಸಿದರು. ಅಜಿತ್ ಕುಮಾರ್ ರೈ ಮಾಲಾಡಿ ಮಾತನಾಡಿ ರಂಗಚಾವಡಿ ಸಂಸ್ಥೆ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿರುವ ಸಂಸ್ಥೆ. ಅನೇಕ ಕಲಾವಿದರನ್ನು ಗುರುತಿಸಿ ನಾಡಿಗೆ ಪರಿಚಯಿಸಿದ ಕೀರ್ತಿ ರಂಗಚಾವಡಿ ಸಂಸ್ಥೆಗೆ ಸಲ್ಲುತ್ತದೆ. ಮುಂದಿನ ದಿನಗಳಲ್ಲಿ ರಂಗಚಾವಡಿ ಅಕಾಡೆಮಿಯನ್ನಾಗಿ ರಚಿಸಿ ಒಳ್ಳೆಯ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಮಧ್ಯಗುತ್ತು ಕರುಣಾಕರ ಎಂ ಶೆಟ್ಟಿ ಮಾತನಾಡಿ ರಂಗಚಾವಡಿ ಸಂಸ್ಥೆ ರಜತ ಸಂಭ್ರಮವನ್ನು…

Read More

ದೇರಳಕಟ್ಟೆ : ಡ್ರಗ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು ಉಳ್ಳಾಲ ಪೊಲೀಸರು ಕೋಟೆಕಾರು ಗ್ರಾಮದ ಬಗಂಬಿಲ ಗ್ರೌಂಡ್ ಮತ್ತು ಪೆರ್ಮನ್ನೂರು ಗ್ರಾಮದ ಗಂಡಿ ಎಂಬಲ್ಲಿ0ದ ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು ರೂ.59,300 ಬೆಲೆಬಾಳುವ ನಿಷೇಧಿತ 1 ಕೆ.ಜಿ 511 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ 2 ತೂಕ ಮಾಪನ, 2 ಮೊಬೈಲ್, 1 ಸ್ಕೂಟರ್ ಹಾಗೂ ಇತರೆ ವಸ್ತುಗಳನ್ನು ಪಡೆದುಕೊಂಡಿದ್ದಾರೆ.ಖಾಸಗಿ ಆಯುರ್ವೇದ ಕಾಲೇಜಿನಲ್ಲಿ ಬಿಎಎಂಎಸ್ ವಿದ್ಯಾರ್ಥಿ ಆಗಿರುವ ಮಹಾರಾಷ್ಟç ದುಲೆ ನಿವಾಸಿ ಮೊಹಮ್ಮದ್ ನಿಗಾರೀಸ್(22) ವಿಲಾಸಿ ಜೀವನಕ್ಕಾಗಿ ತನ್ನ ಊರಿನಿಂದ ಗಾಂಜಾ ತಂದು ಹಣಕ್ಕಾಗಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದನು. ನ.9 ರಂದು ಪೊಲೀಸರು ದಾಳಿ ನಡೆಸಿ ಬಗಂಬಿಲ ಗ್ರೌಂಡಿನಿAದ ಬಂಧಿಸಿದ್ದಾರೆ. ಈತನ ವಿರುದ್ಧ ಕಲಂ 8(ಸಿ), 20(ಬ) ಎನ್ ಡಿಪಿಎಸ್ ಆಕ್ಟ್ 1985 ರೀತಿಯಡಿ ಪ್ರಕರಣ ದಾಖಲಿಸಲಾಗಿದೆ. ಇನ್ನೊಂದು ಪ್ರಕರಣದಲ್ಲಿ ನಾಟೆಕಲ್ ಉರುಮಣೆ ನಿವಾಸಿ ಅಬ್ದುಲ್ ಶಕೀಬ್ ಯಾನೆ ಶಾಕಿ (22) ಮತ್ತು ಪೆರ್ಮನ್ನೂರು ಗಂಡಿ…

Read More

‘ಅಮೃತವರ್ಷಿಣಿ’ ಧಾರಾವಾಹಿಯ ರಜಿನಿ ಕಿರುತೆರೆ ವೀಕ್ಷಕರಿಗೆ ಚಿರಪರಿಚಿತರು. ಅವರು ಈಗ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಅರುಣ್ ಅವರ ಜೊತೆ ವಿವಾಹ ಆಗಿದ್ದಾರೆ. ಆಪ್ತರು ಬಂದು ಅವರಿಗೆ ಹಾರೈಸಿದ್ದಾರೆ. ಅರುಣ್ ಹಾಗೂ ರಜಿನಿ ಮಧ್ಯೆ ತುಂಬಾನೇ ಹಳೆಯ ಪರಿಚಯ ಇದೆ. ಇವರು ಕಳೆದ ಎರಡು ವರ್ಷಗಳಿಂದ ಒಟ್ಟಾಗಿ ರೀಲ್ಸ್ ಮಾಡುತ್ತಿದ್ದರು. ಅವರ ರೀಲ್ಸ್​ಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದ್ದವು. ಈ ಮೊದಲು ‘ನಿಮ್ಮಿಬ್ಬರ ಮಧ್ಯೆ ಪ್ರೀತಿ ಇದೆಯೇ’ ಎಂದು ಕೇಳಿದಾಗ ರಜಿನಿ ಅವರು ಅಡ್ಡಗೋಡೆಯ ಮೇಲೆ ದೀಪ ಇಟ್ಟಿದ್ದರು. ‘ನಾವಿಬ್ಬರೂ ಫ್ರೆಂಡ್ಸ್ ಅಷ್ಟೇ. ಗೆಳೆಯರನ್ನೇ ಮದುವೆ ಆದರೂ ಬೆಸ್ಟ್. ಅವರಿಗೆ ನಮ್ಮ ಕಷ್ಟ ಸುಖ ಗೊತ್ತಿರುತ್ತದೆ’ ಎಂದು ರಜಿನಿ ಹೇಳಿದ್ದರು.ಇಂದು ನಡೆದ ಮದುವೆಯಲ್ಲಿ ಆಪ್ತರು, ಗೆಳೆಯರು, ಕುಟುಂಬದವರು ಹಾಜರಿ ಹಾಕಿದ್ದರು. ಅರುಣ್ ಹಾಗೂ ರಜಿನಿ ವಿವಾಹದ ಫೋಟೋಗಳನ್ನು ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಫೋಟೋಗಳು ಗಮನ ಸೆಳೆಯುವ ರೀತಿಯಲ್ಲಿ ಇದೆ.ರಜಿನಿ ಹಾಗೂ ಅರುಣ್ ಅವರದ್ದು ಪ್ರೇಮ ವಿವಾಹ. ಮನೆಯವರ ಒಪ್ಪಿಗೆ ಪಡೆದ…

Read More

ಕೊಚ್ಚಿ, ನ. 10 :  ಸೋಮವಾರದಿಂದ ಕರ್ನಾಟಕ ಮತ್ತು ತಮಿಳುನಾಡಿಗೆ ತೆರಳುವ ಎಲ್ಲಾ ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಕೇರಳ ಐಷಾರಾಮಿ ಬಸ್ ಮಾಲೀಕರ ಸಂಘ ಪ್ರಕಟಿಸಿದೆ. ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಐಷಾರಾಮಿ ಬಸ್ ಮಾಲೀಕರ ಸಂಘ, ಕೇರಳ ರಾಜ್ಯ ಸಮಿತಿ ತಿಳಿಸಿದೆ.ಎರಡೂ ರಾಜ್ಯಗಳು ಕಾನೂನುಬಾಹಿರ ರಾಜ್ಯದ ತೆರಿಗೆಗಳನ್ನು (Tax) ವಿಧಿಸುತ್ತಿದೆ. ಕೇರಳ ನಿರ್ವಾಹಕರಿಗೆ ಸೇರಿದ ಅಖಿಲ ಭಾರತ ಪ್ರವಾಸಿ ಪರವಾನಗಿ (AITP) ಬಸ್‌ಗಳನ್ನು ವಶಪಡಿಸಿಕೊಳ್ಳಲು ಪ್ರಾರಂಭಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಅಧ್ಯಕ್ಷ ಎಜೆ ರಿಜಾಸ್ ಮಾಹಿತಿ ನೀಡಿದ್ದಾರೆ.ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯ್ದೆಯಡಿ ನೀಡಲಾದ ಮಾನ್ಯ AITP ಗಳನ್ನು ಹೊಂದಿದ್ದರೂ, ಕೇರಳದ ಪ್ರವಾಸಿ ವಾಹನಗಳನ್ನು ತಮಿಳುನಾಡು ಮತ್ತು ಕರ್ನಾಟಕದಲ್ಲಿ ನಿಲ್ಲಿಸಿ ದಂಡ ವಿಧಿಸಲಾಗುತ್ತಿದೆ ಮತ್ತು ವಶಕ್ಕೆ ಪಡೆಯಲಾಗುತ್ತಿದೆ ಎಂದು ಸಂಘ ಹೇಳಿದೆ.ಒಂದು ವರ್ಷಕ್ಕೂ ಹೆಚ್ಚು ಕಾಲ, ತಮಿಳುನಾಡು ಅಧಿಕಾರಿಗಳು ಕೇರಳ-ನೋಂದಾಯಿತ ವಾಹನಗಳಿಂದ ಅಕ್ರಮವಾಗಿ ತೆರಿಗೆ ಸಂಗ್ರಹಿಸುತ್ತಿದ್ದಾರೆ. ಇದರಿಂದ…

Read More

ವಿಟ್ಲ, ನ. 10; ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಾಲೇಜಿಗೆ ಹೋಗುವ ಅಡ್ಡರಸ್ತೆಯಲ್ಲಿ ನಡೆದಿದೆ. ವಿಟ್ಲ ಕಸಬಾ ಗ್ರಾಮದ ಕಾಶಿಮಠ ನಿವಾಸಿ ಮಂಜುನಾಥ ಮೃತಪಟ್ಟ ವ್ಯಕ್ತಿ.ಇನ್ನು ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Read More

ಮಂಗಳೂರು, ನ.9;ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ಸಾಲಿನ ಅಧ್ಯಕ್ಷರಾಗಿ ಪುಷ್ಪರಾಜ್ ಬಿ.ಎನ್ ಆಯ್ಕೆ ಯಾಗಿದ್ದಾರೆ ಹಾಗೂ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಮತ್ತು ಕೋಶಾಧಿಕಾರಿಯಾಗಿ ವಿಜಯ ಕೋಟ್ಯಾನ್ ಪಡು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಸಭಾಂಗ ಣದಲ್ಲಿ ಭಾನುವಾರ ನಡೆದ ಚುನಾವ ಣೆಯಲ್ಲಿ ಒಟ್ಟು 352 ,ಮಂದಿ ಮತದಾರರಲ್ಲಿ 331 ಮಂದಿ ಮತಚಲಾಯಿಸಿದ್ದರು.ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಪ್ರತಿಸ್ಪರ್ಧಿ ಶ್ರವಣ ಕುಮಾರ್ ಪರಾಭವ ಗೊಂಡಿದ್ದಾರೆ. ಉಪಾಧ್ಯಕ್ಷ ರಾಗಿ ಮುಹಮ್ಮದ್ ಆರಿಫ್ ಪಡುಬಿದ್ರೆ, ವಿಲ್ಫೆಡ್ ಡಿ’ಸೋಜ,ರಾಜೇಶ್ ಶೆಟ್ಟಿ ಚುನಾವಣೆಯಲ್ಲಿ ಆಯ್ಕೆಯಾ ಗಿದ್ದಾರೆ.ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಐ.ಬಿ.ಸಂದೀಪ್ ಕುಮಾರ್, ಗಂಗಾಧರ ಕಲ್ಲಪಳ್ಳಿ ಪರಾಭವಗೊಂಡಿದ್ದಾರೆ. ಕಾರ್ಯದರ್ಶಿ ಯಾಗಿ ಸಿದ್ದಿಕ್ ನೀರಾಜೆ, ಸುರೇಶ್ ಡಿ ಪಳ್ಳಿ,ಸತೀಶ್ ಇರಾ ಆಯ್ಕೆ ಯಾಗಿದ್ದಾರೆ.ರಾಜೇಶ್ ದಡ್ಡಂಗಡಿ ಪರಾಭವ ಗೊಂಡಿದ್ದಾರೆ.ಕಾರ್ಯಕಾರಿ ಸಮಿತಿ ಸದಸ್ಯರಿಗಾಗಿ ನಡೆದ ಚುನಾವಣೆಯಲ್ಲಿ ಅಶೋಕ್ ಶೆಟ್ಟಿ ಬಿ.ಎನ್,ಸಂದೇಶ್ ಜಾರ,ಸಂದೀಪ್ ಕುಮಾರ್, ಲಕ್ಷ್ಮೀ ನಾರಾಯಣ, ಹರೀಶ್ ಮೋಟುಕಾನ,ದಿವಾಕರ ಪದ್ಮುಂಜ,ಕಿರಣ್ ಸಿರ್ಸಿಕರ,ಅಭಿಷೇಕ್…

Read More

ಉಳ್ಳಾಲ: ಕೃಷಿ ಉತ್ಸವ – ಆಹಾರ ಮೇಳ ರೈತರಿಗೆ ಶಕ್ತಿ ತುಂಬುವ ವೇದಿಕೆಯಾಗಿದೆ. “ಕೃಷಿ ಉತ್ಸವ ಮತ್ತು ಆಹಾರ ಮೇಳವು ಅತ್ಯುತ್ತಮ ಸಂದರ್ಭ. ಇಂತಹ ಕಾರ್ಯಕ್ರಮಗಳು ರೈತರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ. ಈ ಬಾರಿ ಉಳ್ಳಾಲದ ಕೃಷಿ ಮೇಳಕ್ಕೆ ಜನಸಾಗರವೇ ಹರಿದುಬರಲಿದೆ ಎಂದು ವಿಧಾನಪರಿಷತ್‌ ಸದಸ್ಯ ಕಿಶೋರ್‌ ಕುಮಾರ್‌ ಬೊಟ್ಯಾಡಿ ಅಭಿಪ್ರಾಯಪಟ್ಟರು. ಅವರು ರೈತಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ ಕರ್ನಾಟಕ ಗೇರು ಅಭಿವೃದ್ದಿ ನಿಗಮ ಮಂಗಳೂರು, ಕೃಷಿ ಇಲಾಖೆ ಮಂಗಳೂರು, ಪೊಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘ ಹಾಗೂ ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಆಯೋಜನೆಗೊಂಡ ಉಳ್ಳಾಲ ಕೃಷಿ ಉತ್ಸವ-ಆಹಾರ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು. ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ, ಪರಿಸರ ಮಾಲಿನ್ಯ ಮತ್ತು ಅತಿಯಾದ ಫರ್ಟಿಲೈಜರ್‌ ಬಳಕೆಯಿಂದ ಭೂಮಿ ಬಂಜರುಗೊಳ್ಳುವ ಪರಿಸ್ಥಿತಿ ಬಂದಿದೆ. ಮನುಷ್ಯನ ಸಹಜ ಸ್ವಾರ್ಥವೇ ಇದಕ್ಕೆ ಕಾರಣ. ಆದರೆ ಸ್ವದೇಶಿ ದನಗಳ ಸಾಕಾಣಿಕೆಯನ್ನು ಉತ್ತೇಜಿಸುವ ಮೂಲಕ ಈ ಪರಿಸ್ಥಿತಿಯನ್ನು ಸುಧಾರಿಸಬಹುದು. “ಭಾರತೀಯ ದೇಸಿ ದನದ 60…

Read More