ಅಸೈಗೋಳಿ; ಯಕ್ಷಮಿತ್ರರು ಅಸೈಗೋಳಿ ಸಾದರ ಪಡಿಸಿದ “ಗರುಡೋದ್ಭವ” ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷಸೇವೆಯ ರಜತಪರ್ವದಲ್ಲಿ ಮಿಂಚುತ್ತಿರುವ ಮೋಹನ್ ಬೆಳ್ಳಿಪಾಡಿ ಇವರನ್ನು ಬೆಳ್ಳಿಯ ಪದಕದೊಂದಿಗೆ ಮತ್ತು ರಮೇಶ್ ಪಟ್ರಮೆ ಹಾಗೂ ಪಾಕತಜ್ಞ ಹರೀಶ್ ಭಟ್ ಅಸೈಗೋಳಿ ಇವರನ್ನು ಆಯೋಜಕರ ವತಿಯಿಂದ ಗಣ್ಯರ ಉಪಸ್ಥಿತಿಯಲ್ಲಿ ಸಂಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗೌರವಿಸಲಾಯಿತು.
Author: UllalaVani
ಮಂಗಳೂರು, ಫೆ.18: ಮಂಜನಾಡಿಯ ಮೊಂಟೆಪದವು ಎಂಬಲ್ಲಿ 2025ರ ಮೇ 30ರಂದು ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಸಿಲುಕಿ ತನ್ನೆರಡೂ ಕಾಲುಗಳನ್ನು ಕಳೆದುಕೊಂಡ ಅಶ್ವಿನಿ ಎಂಬವರು ತನ್ನ ತಾಯಿ ಪುಷ್ಪಾವತಿ ಜತೆ ಮಾನವ ಹಕ್ಕುಗಳ ಆಯೋಗದೆದುರು ನ್ಯಾಯಕ್ಕಾಗಿ ಕಣ್ಣೀರಿಟ್ಟ ಘಟನೆ ಬುಧವಾರ ನಡೆಯಿತು. ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶ್ಯಾಂ ಭಟ್ ಮತ್ತು ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ಜಿ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆಯನ್ನು ಹಮ್ಮಿಕೊಂಡಿದ್ದರು. ಇದಕ್ಕಾಗಿ ತಾಯಿ ಜೊತೆ ಖಾಸಗಿ ಆಂಬುಲೆನ್ಸ್ ನಲ್ಲಿ ಆಗಮಿಸಿದ್ದ ಅಶ್ವಿನಿಯವರು ಆಂಬುಲೆನ್ಸ್ ನಿಂದ ವೀಲ್ ಚೇರ್ನಲ್ಲಿ ಕೂತು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಜಿ.ಪಂ. ಸಭಾಂಗಣ ಪ್ರವೇಶ ದ್ವಾರದಲ್ಲಿಯೇ ತಡೆದು ತಮ್ಮ ಅಳಲು ತೋಡಿಕೊಂಡರು. ಅಶ್ವಿನಿ ಪರವಾಗಿ ಪ್ರಕರಣದ ಕುರಿತಂತೆ ಸಾಮಾಜಿಕ ಕಾರ್ಯಕರ್ತ ರವಿ ಎಂಬವರು ಆಯೋಗದ ಪ್ರತಿನಿಧಿಗಳಿಗೆ ವಿವರ ನೀಡಿದರು. ‘ಮಂಜನಾಡಿ ಗ್ರಾಮದ ಮೊಂಟೆಪದವಿನ ಪಂಬದ ಹಿತ್ತಿಲು ಕೋಡಿ ಕೊಪ್ಪಳ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ…
ನಿಡ್ಡೋಡಿ ಯೋಜನಾ ಪ್ರದೇಶಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಉಡುಪಿ–ಕಾಸರಗೋಡು ಟ್ರಾನ್ಸ್ಮಿಷನ್ ಲಿಮಿಟೆಡ್ (UKTL) ಗಮನಿಸಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಅನ್ವಯವಾಗುವ ಕಾನೂನುಗಳು, ರಾಜ್ಯದ ನಿಯಮಾವಳಿಗಳು, ರಾಜ್ಯ ಸರ್ಕಾರದ ಅಧಿಸೂಚನೆಗಳ ನಿರ್ದೇಶನಗಳು ಹಾಗೂ ಜಿಲ್ಲಾಧಿಕಾರಿಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ನಮ್ಮ ಎಲ್ಲಾ ಚಟುವಟಿಕೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ. ಯೋಜನೆಯ ಪ್ರಕ್ರಿಯೆಗಳ ಸಮಗ್ರತೆ—ವಿಶೇಷವಾಗಿ ಮಾರ್ಗಾಧಿಕಾರ (Right of Way) ಮತ್ತು ಪರಿಹಾರ ವಿತರಣೆಗೆ ಸಂಬಂಧಿಸಿದ ವಿಷಯಗಳಿಗೆ ನಾವು ಹೆಚ್ಚಿನ ಆದ್ಯತೆ ನೀಡುತ್ತೇವೆ. ಈ ಎಲ್ಲಾ ಪ್ರಕ್ರಿಯೆಗಳನ್ನು ಸಂಪೂರ್ಣ ಪಾರದರ್ಶಕತೆಯಿಂದ ಮತ್ತು ಕಾನೂನುಬದ್ಧವಾಗಿ ನಿರ್ವಹಿಸಲಾಗುತ್ತಿದೆ ಎಂದು ನಾವು ಖಚಿತಪಡಿಸುತ್ತೇವೆ. ಪರಿಹಾರ ನೀಡಿಕೆಯಲ್ಲಿ ನಾವು ಸಂಪೂರ್ಣ ಪಾರದರ್ಶಕತೆಯ ನೀತಿಯನ್ನು ಹೊಂದಿದ್ದು, ಭೂಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಂದರ್ಭದಲ್ಲಿ, ಕಾಮಗಾರಿ ಆರಂಭಿಸುವ ಮೊದಲೇ ಶೇ. 100ರಷ್ಟು ಪರಿಹಾರದ ಮೊತ್ತವನ್ನು ಪಾವತಿಸುತ್ತೇವೆ.ನಾವು ಈ ನಿಯಮ ಮತ್ತು ಮಾನದಂಡಗಳಿಗೆ ಬದ್ಧರಾಗಿದ್ದರೂ, ಸ್ಥಳೀಯ ಸಮುದಾಯದೊಂದಿಗೆ ನಾವು ಹೊಂದಿರುವ ಸಂಬಂಧಕ್ಕೆ ಹೆಚ್ಚಿನ ಗೌರವ ನೀಡುತ್ತೇವೆ. ನಿಗದಿತ ಆಡಳಿತಾತ್ಮಕ ವ್ಯವಸ್ಥೆಗಳ ಮೂಲಕ ರಚನಾತ್ಮಕ ಹಾಗೂ ಶಾಂತಿಯುತ ಸಂವಾದ…
ಉಳ್ಳಾಲ : ತುರ್ತು ಟ್ರ್ಯಾಕ್ ನವೀಕರಣ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 19ರ ಸಂಜೆ 6.00 ಗಂಟೆಯಿಂದ ಫೆಬ್ರವರಿ 21ರ ಮಧ್ಯಾಹ್ನ 12.00 ಗಂಟೆಯವರೆಗೆ ಉಳ್ಳಾಲ ರೈಲ್ವೆ ನಿಲ್ದಾಣ ಸಮೀಪದ ಸಂಚಾರಕ್ಕೆ ಗೇಟ್ ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ದಕ್ಷಿಣ ರೈಲ್ವೆ ಮಂಗಳೂರು ವಿಭಾಗದ ಹಿರಿಯ ಸೆಕ್ಷನ್ ಇಂಜಿನಿಯರ್ (ಪರ್ಮನೆಂಟ್ ವೇ) ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಇಲಾಖೆ ಪ್ರಕಟಣೆಯಲ್ಲಿ , ಕಿ.ಮೀ. 877/200–300ರಲ್ಲಿ ಇರುವ ಎಲ್.ಸಿ. ನಂ.293 (ಸೋಮೇಶ್ವರ ರೈಲು ಗೇಟ್) ನಲ್ಲಿ ಟ್ರ್ಯಾಕ್ ನವೀಕರಣ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹಾಗಾಗಿ ಉಳ್ಳಾಲ–ಬೀರಿ ರೈಲು ನಿಲ್ದಾಣಗಳ ಮಧ್ಯೆ ಕಾಮಗಾರಿಯ ಅವಧಿಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ.ಸಾರ್ವಜನಿಕರು ಬೀರಿ –ಸಂಕೊಳಿಗೆ–ಉಚ್ಚಿಲ ಲೆವೆಲ್ ಕ್ರಾಸಿಂಗ್–ಬೀಚ್ ರಸ್ತೆ–ಸೋಮೇಶ್ವರ ಹಾಗೂ ಕೋಟೆಕಾರ್–ಕೊಲ್ಯ–ತೊಕ್ಕೊಟ್ಟು–ಒಳಪೇಟೆ ರಸ್ತೆ ಮೂಲಕ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ರೈಲ್ವೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮಂಗಳೂರು;ನೀರುಮಾರ್ಗ ಗ್ರಾಮದ ಪೆದಮಲೆಯಲ್ಲಿ ಐದು ಗ್ರಾಮಗೊಳಪಟ್ಟ ಧ್ವಜವೇರಿ ನಡೆಯುವ ಮಾಗಣೆ ದೈವಗಳಾದ ಶ್ರೀ ವಾಜಿಲ್ಲಾಯ – ಧೂಮಾವತಿ ದೈವಸ್ಥಾನದಲ್ಲಿ ಫೆ.19ರಿಂದ ಫೆ.21ರವರೆಗೆ ಪೆದಮಲೆ ವರ್ಷಾವಧಿ ಬಂಡಿ ನೇಮೋತ್ಸವ ನಡೆಯಲಿದೆ. ಈ ಹಿನ್ನಲೆ ಈಗಾಗಲೇ ಕ್ಷೇತ್ರದಲ್ಲಿ ಕೋಳಿಕುಂಟ ನಡೆದಿದೆ. ಈ ಸಂದರ್ಭ ಅಶ್ವಿನ್ ಶೆಟ್ಟಿ ಬೊಂಡAತಿಲ ಗುತ್ತು ಅವರು ಮಾತನಾಡಿ, ಪ್ರಶ್ನಾ ಚಿಂತನೆ ಪ್ರಕಾರ ತಿಳಿದು ಬಂದAತೆ ದೈವಗಳಿಗೆ ದೈವಸ್ಥಾನ ನಿರ್ಮಾಣಗೊಂಡು ಒಂದು ವರ್ಷ ಕಳೆದಿದೆ. ಇದೀಗ ಕಾಲಾವಧಿ ನೇಮೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ ಕೋಳಿಕುಂಟ ನಡೆದಿದೆ. ಫೆ.19ರಂದು ಬೆಳಗ್ಗೆ 9.00ರಿಂದ ದೈವಸ್ಥಾನದ ನಾಗಬನದಲ್ಲಿ ನಾಗತಂಬಿಲ, ಸಂಜೆ 5.00ರಿಂದ ನೀರುಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದಿAದ ದೈವಸ್ಥಾನಕ್ಕೆ ಹೊರೆಕಾಣಿಕೆ, ಸಂಜೆ 6.00ರಿಂದ ದೈವಸ್ಥಾನದ ಭಂಡಾರಮನೆಯಲ್ಲಿ ನವಕ ಕಲಶ ಶುದ್ಧ ಪೂಜೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಶ್ರೀ ವಾಜಿಲ್ಲಾಯ- ಧೂಮಾವತಿ ದೈವಸ್ಥಾನ ಟ್ರಸ್ಟ್ನ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ ಮಾತನಾಡಿ, ದೈವಸ್ಥಾನದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳ ಮಾರ್ಗದರ್ಶನದಲ್ಲಿ ದೈವಿಕ ವಿಧಿವಿಧಾನಗಳು…
ಮಂಗಳೂರು, ಫೆ.16: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸಕ್ತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿಕೊಂಡಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ನಮ್ಮ ಬ್ಯಾಂಕಿನ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳಿಗೆ ಅಧಿಕೃತ ಚಾಲನೆ ಕಾರ್ಯಕ್ರಮ ಫೆ.17ರಂದು ಮಧ್ಯಾಹ್ನ 12ಕ್ಕೆ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ ಎಂದವರು ತಿಳಿಸಿದ್ದಾರೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 2025ರ ಸೆ.16ರಿಂದ ಐಎಂಪಿಎಸ್ (IMPS – Immediate Payment Service) ಸೇವೆಯನ್ನು ಆರಂಭಿಸಿದೆ, ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ…
ಕಾಪಿಕಾಡು; ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಉಳ್ಳಾಲ ನಗರದ ವತಿಯಿಂದ ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಪಿಕಾಡು ಇಲ್ಲಿ ಶಿವರಾತ್ರಿ ಜಾಗರಣೆ ಹಾಗೂ ಯೋಗ ಶಿವನಮಸ್ಕಾರದ ಕಾರ್ಯಕ್ರಮವನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಎ.ಜೆ ಶೇಖರ್ ಮತ್ತು ಅವರ ಧರ್ಮಪತ್ನಿ ಪೂರ್ಣಿಮಾ ಶೇಖರ್ ದೀಪ ಪ್ರಜ್ವಲನೆಗೈಯುವ ಮೂಲಕ ಚಾಲನೆ ನೀಡಿದರು. ಕ್ಷೇತ್ರದ ಪ್ರಧಾನ ಅರ್ಚಕರಾದ ಪರಮೇಶ್ವರ ಜೋಶಿ, ಮೊಕ್ತೇಸರರಾದ ಆರ್.ಕೆ.ಶೆಟ್ಟಿ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಲೆಕ್ಕಪತ್ರ ಪ್ರಮುಖರಾದ ಸುಬ್ರಹ್ಮಣ್ಯ ಭಟ್ ನಗರ ಸಂಚಾಲಕರಾದ ಸುಂದರ ಉಳ್ಳಾಲ ಜಿಲ್ಲಾ ಸಂಘಟನಾ ಪ್ರಮುಖರಾದ ಗೀತಾ ವಿಜಯ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿವರಾತ್ರಿ ಜಾಗರಣೆಯ ಸಂದರ್ಭದಲ್ಲಿ ಶಿವ ಭಜನೆ ಕುಣಿತ ಭಜನೆ ಮೃತ್ಯುಂಜಯ ಜಪ ಪಠಣೆ ಶಿವ ಅಷ್ಟೋತ್ತರ ಶತನಾಮಾನಿ ಪಠಣೆ 1008 ಪಂಚಾಕ್ಷರಿ ಜಪ ಪಠಣೆ ಯೋಗ ಬಂಧುಗಳಿAದ ನಡೆಯಿತು ಇವುಗಳ ಮಹತ್ವದ ಬಗ್ಗೆ ಬೌದ್ಧಿಕ ಅನ್ನು ನಗರದ ಶಿಕ್ಷಕರು ನೀಡಿದರು. ಮುಂಜಾನೆ 4:00ಯಿಂದ ಅಮೃತವಚನ, ಪಂಚಾoಗ ಪಠಣ, ಅಗ್ನಿ ಹೋತ್ರ, ಗಣಪತಿ…
ಕುಂಪಲ ಶ್ರೀ ದುರ್ಗಾ ಪರಮೇಶ್ವರ ಕ್ಷೇತ್ರದಲ್ಲಿ ವರ್ಷಾವದಿ ಶಿವರಾತ್ರಿ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಬೆಂಗಳೂರಿನ ಯುವ ಉದ್ಯಮಿ ಪ್ರಕಾಶ್ ಕುಂಪಲ ರವರು ನೆರವೇರಿಸಿ, ನಮ್ಮ ಹಿರಿಯರ ಕಾಲದಿಂದಲೂ ಕುಂಪಲಕ್ಕೆ ಹಬ್ಬ ಶಿವರಾತ್ರಿ, ಈ ಕ್ಷೇತ್ರದಲ್ಲಿ ಊರಿನ ಜನರನ್ನು ಒಟ್ಟಾಗಿಸುವ, ಧಾರ್ಮಿಕತೆಯನ್ನು ಬೆಳೆಸುವಲ್ಲಿ ಪರಿಣಾಮಕಾರಿಯಾಗಿದೆ. ಕುಂಪಲದ ಊರಿನಲ್ಲಿ ನಡೆಯುವ ಎಲ್ಲಾ ಒಳ್ಳೆಯ ಕಾರ್ಯಕ್ಕೆ ನನ್ನ ಪ್ರೋತ್ಸಾಹ ಯಾವಾಗಲೂ ಇದೆ ಎಂದರು. ವೇದಿಕೆಯಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷ ವೇಣುಗೋಪಾಲ್ ಕೊಲ್ಯ, ಕ್ಷೇತ್ರದ ಪ್ರಧಾನ ಅರ್ಚಕ ಭವಾನಿ ಶಂಕರ ಶಾಂತಿ, ಸೋಮೇಶ್ವರ ಪುರಸಭಾ ಸದಸ್ಯ ಮೋಹನ್ ಶೆಟ್ಟಿ ಕುಂಪಲ, ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಉಪಾಧ್ಯಕ್ಷ ಗಣೇಶ್ ಅಂಚನ್, ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಪ್ರಚಾರ ಸಮಿತಿ ಅಧ್ಯಕ್ಷ ಜಗದೀಶ್ ಆಚಾರ್ಯ, ಉಳ್ಳಾಲ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಪ್ರವೀಣ್ ಎಸ್ ಕುಂಪಲ, ನಿವೃತ್ತ ಎ.ಎಸ್ ಐ, ನಾರಾಯಣ ನಾಯರ್, ಮಡಿಲು ಸೇವಾ ತಂಡದ ಅಧ್ಯಕ್ಷ ಗಜೇಂದ್ರ ಪೂಜಾರಿ, ಬಾರ್ದೆ…
ಬಂಟ್ವಾಳ: ರೈತರು ನೀಡಿದ ಅಕ್ರಮ ಸಕ್ರಮ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸಿದೆ. ರೈತ ಸಂಘದ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ಮಾಡಿದ ಎಲ್ಲಾ ರಾಜಕೀಯ ಪಕ್ಷಗಳ ಸರಕಾರಗಳು ಚುನಾವಣಾ ಸಂದರ್ಭದಲ್ಲಿ ರೈತರ ಅಕ್ರಮ ಸಕ್ರಮ ಅರ್ಜಿಯನ್ನು ಇತ್ಯರ್ಥ ಪಡಿಸುವ ಬಗ್ಗೆ ಭರವಸೆಗಳನ್ನು ನೀಡಿ ಚುನಾವಣೆಯ ಬಳಿಕ ಮರೆತು ಬಿಡುತ್ತಾರೆ. ಪ್ರಸ್ತುತ ಸಾವಿರಗಟ್ಟಲೆ ಅರ್ಜಿಗಳು ಧೂಳು ಹಿಡಿದಿದ್ದು ತಕ್ಷಣವೇ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಪಡಿಸುವಂತೆ ಅವರು ಒತ್ತಾಯಿಸಿದರು. ರೈತರ ಸ್ವಾಧೀನದಲ್ಲಿರುವ ಕುಮ್ಕೀ ಜಮೀನುಗಳ ಮೇಲೆ ಸರಕಾರ ದಾಳಿ ಆರಂಭಿಸಿದೆ. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೈತರ ಕುಮ್ಕಿ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದ್ದು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೈತರ ಸ್ವಾಧೀನದಲ್ಲಿರುವ ಕುಮ್ಕಿ ಜಮೀನನ್ನು ಸರಕಾರ ಮುಟ್ಟಬಾರದು ಎಂದು ಎಚ್ಚರಿಸಿದರು. ಸರಕಾರದ ಅಭಿವೃದ್ದಿ ಕಾರ್ಯಗಳಿಗೆ ನಮ್ಮ ಆಕ್ಷೇಪವಿಲ್ಲ, ಆದರೆ ತಲೆ ತಲಾಂತರಗಳಿಂದ ಬಂದ…
ಮಂಗಳೂರು : ಫೆಬ್ರವರಿ 14ರಂದು ಶಾಲೆಯಲ್ಲಿ ಆಯೋಜಿಸಲಾಗಿದ್ದ “ಸ್ಮಾರ್ಟ್ ಕಿಡ್ ಶೋ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಿರಿಲ್ ರೋಸಾರಿಯೋ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆವ್. ಫ್ರಾ. ವ್ಯಾಲೆರಿಯನ್ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಮೇವಿಸ್ ಸೆರ್ರಾವ್ ಅವರು ಅತಿಥಿಗಳಿಗೆ ಹಾಗೂ ಸಭಿಕರಿಗೆ ಆತ್ಮೀಯ ಸ್ವಾಗತ ಕೋರಿದರು.ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ರಮ್ಯಾ ಅವರು ಸಮರ್ಥವಾಗಿ ನಿರ್ವಹಿಸಿ, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು. ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಮನಮೋಹಕವಾಗಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಪಡೆದರು. ಮುಖ್ಯ ಅತಿಥಿಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಶ್ಲಾಘಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ಶಿಕ್ಷಕಿ ಜ್ಯೋತಿ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮವು ಸಂಭ್ರಮ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು.

