ಮಂಗಳೂರು,ನ.6: ಕಡಲಿಗೆ ಹಾರಲು ಮುಂದಾಗಿ ಬಳಿಕ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಹಾಗೂ ಆತನ ಜೊತೆಗಿದ್ದ ಪುಟ್ಟ ಹೆಣ್ಣು ಮಗುವನ್ನು ಪೊಲೀಸರು ರಕ್ಷಿಸಿದ ಬಳಿಕ ಘಟನೆಗೆ ಸಂಬAಧಿಸಿದoತೆ ಮಹತ್ವದ ಬೆಳಕಿಗೆ ಕಂಡುಬoದಿದೆ. ಪುಟ್ಟ ಹೆಣ್ಣು ಮಗುವನ್ನು ತಂದೆಯ ತಂದೆ (ಅಜ್ಜ)ನೊಂದಿಗೆ ಪೊಲೀಸರು ಕಳುಹಿಸಿಕೊಟ್ಟಿದ್ದಾರೆ. ಗಂಡ-ಹೆoಡತಿ ನಡುವಿನ ವೈಮನಸ್ಸು-ಕಲಹದ ಪರಿಣಾಮ ಪತಿಯು ತನ್ನ ಮಗಳೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದನು. ಆದರೆ ಪೊಲೀಸರ ಕಾರ್ಯವೈಖರಿ, ಸಮಯಪ್ರಜ್ಞೆಯಿಂದ ಇಬ್ಬರನ್ನು ರಕ್ಷಿಸಿದ್ದಾರೆ. ಪೊಲೀಸರು ಗಂಡ-ಹೆoಡತಿಯ ರಾಜಿ ಸಂಧಾನಕ್ಕೆ ಪ್ರಯತ್ನಿಸಿದ್ರೂ ಹೆಂಡತಿ ರಾಜಿಯಾಗಲು ಒಪ್ಪಲಿಲ್ಲ. ವಿಚ್ಛೇದನಕ್ಕಾಗಿ ಪಟ್ಟು ಹಿಡಿದಿದ್ದಳು. ಈ ಹಿನ್ನಲೆ ಅವರುಗಳಿಗೆ ನ್ಯಾಯಾಲಯದ ಮೂಲಕವೇ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಸಲಹೆ ನೀಡಿದರು. ಇನ್ನು ಮಗುವನ್ನು ತಾಯಿಯ ಒಪ್ಪಿಗೆಯ ಮೇರೆಗೆ ತಂದೆಯ ತಂದೆ(ಅಜ್ಜ)ನೊoದಿಗೆ ಪೊಲೀಸರು ಕಳುಹಿಸಿಕೊಟ್ಟಿದ್ದಾರೆ. ಆ ಮೂಲಕ ಸದ್ಯಕ್ಕೆ ಈ ಪ್ರಕರಣ ಸುಖಾಂತ್ಯ ಕಂಡಿದೆ.
Author: UllalaVani
ಮುಲ್ಕಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಲ್ಕಿ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಮುಲ್ಕಿ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶೀನ ಪೂಜಾರಿ, ಎಚ್. ವಾಸು ಪೂಜಾರಿ,ಸರೋಜಿನಿ, ಕುಶಾಲ ಎಸ್. ಕುಕ್ಯಾನ್ ಹಾಗೂ ಪ್ರಕಾಶ್ ಸುವರ್ಣ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಸದಸ್ಯರಾದ ಶೀನ ಪೂಜಾರಿಯವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಮುಂದಾಳತ್ವದಲ್ಲಿ ನಿರಂತರವಾಗಿ ಲಾಭ ಗಳಿಸುತ್ತಾ ಬರುತ್ತಿದೆ. ಸತತವಾಗಿ ಸದಸ್ಯರಿಗೆ ಡಿವಿಡೆಂಟ್ ನೀಡುತ್ತಿದ್ದು, ಕಳೆದ ಆರ್ಥಿಕ ಸಾಲಿನಲ್ಲಿ ಗ್ರಾಹಕರಿಗೆ ಶೇ.15 ಡಿವಿಡೆಂಡ್ ನೀಡಿರುವುದು ಸಂಘದ ಆರ್ಥಿಕ ಪ್ರಗತಿಯ ಸಂಕೇತವಾಗಿದೆ. ಸಂಘವೂ ಇನ್ನೂ ಹೆಚ್ಚಿನ ಅಭಿವೃದ್ದಿಯನ್ನು ಹೊಂದಲಿ” ಎಂದು ಶುಭ ಹಾರೈಸಿದರು. ಸದಸ್ಯರಾದ ಹರಿಶ್ಚಂದ್ರ ಪಿ ಸಾಲ್ಯಾನ್ ಮಾತನಾಡಿ, “ಸಂಘವು ಪ್ರಾರಂಭಗೊAಡ ಅತೀ ಕಡಿಮೆ ಅವಧಿಯಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ…
ಕೋಟೆಕಾರು; ಉಳ್ಳಾಲ ತಾಲೂಕಿನ ಕೋಟೆಕಾರ್-ಸಂಕೋಳಿಗೆ ಮಾರ್ಗದ ಸರ್ವಿಸ್ ರಸ್ತೆಯ ವಿಭಜಕಗಳನ್ನು ವ್ಯಾಪಾರಸ್ಥರು ಅಕ್ರಮವಾಗಿ ತೆಗೆದು ಹಾಕಿದ್ದಾರೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಕೋಟೆಕಾರ್ ಪ್ರದೇಶದ ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಗಂಭೀರ ಸಮಸ್ಯೆಯ ಬಗ್ಗೆ ಉಲ್ಲೇಖಿಸಿದ್ದಾರೆ. ಪ್ರದೇಶದ ಜನರ ಸುರಕ್ಷತೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಸಂಬoಧಿಸಿದ0ತೆಉಳ್ಳಾಲ ತಾಲ್ಲೂಕು, ಕೋಟೆಕಾರ್ ಕೊರಗಜ್ಜ ಕಟ್ಟೆಯಿಂದ ಸಂಕೋಳಿಗೆವರೆಗೆ ಇರುವ ಎರಡೂ ಬದಿಯ ಸರ್ವಿಸ್ ರಸ್ತೆಗೆ ವಿಭಜಕಗಳನ್ನು ಆಳವಡಿಸಲಾಗಿತ್ತು. ಆದರೆ ಕೆಲ ವ್ಯಾಪಾರಸ್ಥರು ತಮ್ಮ ಸ್ವಾರ್ಥದ ನಿಮಿತ್ತ ಅವೈಜ್ಞಾನಿಕವಾಗಿ ವಿಭಜಕಗಳನ್ನು ತೆಗೆದು ಹಾಕಿರುವುದು ಬೆಳಕಿಗೆ ಬಂದಿದೆ. ಇದರ ಪರಿಣಾಮವಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪಾದಚಾರಿಗಳಿಗೆ ರಸ್ತೆ ದಾಟುವುದು ಕಷ್ಟವಾಗುತ್ತಿದೆ. ಇದರಿಂದ ಈಗಾಗಲೇ ಹಲವಾರು ಅಪಘಾತಗಳು ಸಂಭವಿಸಿದೆ. ಈ ಮಾರ್ಗದಲ್ಲಿ ಅಧಿಕಾರಿಗಳು ಪ್ರತಿದಿನ ಸಂಚರಿಸುತ್ತಿದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವುದು ದುರಾದೃಷ್ಟಕರ ಸಂಗತಿ. ಹಾಗಾಗಿ ಈ ಗಂಭೀರ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಂಡು, ವಿಭಜಕಗಳನ್ನು ಸರಿಪಡಿಸುವಂತೆ ಕೋಟೆಕಾರ್ ಪ್ರದೇಶದ ಸ್ಥಳೀಯ ನಿವಾಸಿಗಳು ಡಿಸಿಗೆ ಪತ್ರದ…
ಕೋಟೆಕಾರು,ನ.6:ಲಯನ್ಸ್ ಕ್ಲಬ್ ಆಫ್ ಮಂಗಳೂರು ಸೋಮೇಶ್ವರದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬವನ್ನು ಬೀರಿಯ ವಾಣಿ ಆಡಿಟೋರಿಯಂನಲ್ಲಿ ತುಂಬು ಸಡಗರದಿಂದ ಆಚರಿಸಲಾಯಿತು. ಲಯನ್ಸ್ ಡಿಸ್ಟ್ರಿಕ್ಟ್ 317D ಯ ಮುಖ್ಯ ಜಿಲ್ಲಾ LCIF ಸಂಯೋಜಕ ಲಯನ್ ಲೋಕೇಶ್ ಶೆಟ್ಟಿ PMJF ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಸಮುದಾಯ ಸೇವೆ ಮತ್ತು ಸಾಂಸ್ಕೃತಿಕ ಏಕತೆಯಲ್ಲಿ ಕ್ಲಬ್ ಮಾಡುತ್ತಿರುವ ಪ್ರಾಮಾಣಿಕ ಕಾರ್ಯವನ್ನು ಅವರು ಶ್ಲಾಘಿಸಿದರು. ಕ್ಲಬ್ ಅಧ್ಯಕ್ಷ ಲಯನ್ ಕೆ. ವಿಜಯನ್ ಅಧ್ಯಕ್ಷತೆ ವಹಿಸಿದ್ದರು, ಕಾರ್ಯದರ್ಶಿ ಲಯನ್ ಕೆ. ಗೋಪಿನಾಥ್ ವರದಿ ಮಂಡಿಸಿದರು, ಕ್ಲಬ್ ಉಪಾಧ್ಯಕ್ಷ ಲಯನ್ ಕಮಾಂಡರ್ ಕೆ. ವಿಜಯಕುಮಾರ್ ಸ್ವಾಗತಿಸಿದರು ಮತ್ತು ಖಜಾಂಚಿ ಲಯನ್ ನಿತೀಶ್ ಕೃಷ್ಣ ಧನ್ಯವಾದಗಳನ್ನು ಅರ್ಪಿಸಿದರು. ಈ ಸಮಾರಂಭದಲ್ಲಿ ಕ್ಲಬ್ ಸದಸ್ಯರು ಮತ್ತು ಅವರ ಕುಟುಂಬಗಳು ಉತ್ಸಾಹದಿಂದ ಭಾಗವಹಿಸಿದರು ಮತ್ತು ವಿವಿಧ ಸಾಂಸ್ಕೃತಿಕ ಪ್ರದರ್ಶನಗಳಿಂದ ಪ್ರೇಕ್ಷಕರನ್ನು ರಂಜಿಸಿದರು. ಕನ್ನಡದ ಹೆಮ್ಮೆಯಾದ ಕರ್ನಾಟಕ ರಾಜ್ಯೋತ್ಸವ ಮತ್ತು ಬೆಳಕಿನ ಹಬ್ಬವಾದ ದೀಪಾವಳಿಯ ಚೈತನ್ಯವನ್ನು ಪ್ರತಿಬಿಂಬಿಸುವ ಈ ಕಾರ್ಯಕ್ರಮವು ಏಕತೆ, ಸಮೃದ್ಧಿ ಮತ್ತು…
ಪಡುಬಿದ್ರಿ, ನ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರ್ರಿ ಇವರ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ನುರಿತ ವೈದ್ಯರ ತಂಡದವರಿAದ ಉಚಿತ ನೇತ್ರ ತಪಾಸಣಾ ಶಿಬಿರವು ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷರು ಹಾಗೂ ಅಡ್ವೆ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣರವರು ಉದ್ಘಾಟಿಸಿ, “ಉಭಯ ಜಿಲ್ಲೆಗಳಲ್ಲಿ 33ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ, ಸಂಸ್ಥೆಯ ಲಾಭಾಂಶದ ಒಂದು ಪಾಲನ್ನು ಸಮಾಜದ ಅಶಕ್ತ ಬಡ ವರ್ಗದ ಜನರ ಏಳಿಗೆಗಾಗಿ ವಿನಿಯೋಗಿಸಿಕೊಂಡು ಬರುತ್ತಿದ್ದು, ಸಂಸ್ಥೆಯು ಸದಾ ಅಭಿವೃದ್ದಿ…
ಮುಡಿಪು,ನ.5: ನವೆಂಬರ್ 3ರ ಸೋಮವಾರದಂದು ಮುಡಿಪು ಸೂರಜ್ ಸ್ಕೂಲ್ನಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳುವ ವೇಳೆ ಸಂಶಯಾಸ್ಪದ ರೀತಿಯಲ್ಲಿ ಕಾರು ನಿಂತು ಮಕ್ಕಳನ್ನು ಕರೆಯುವ ಘಟನೆ ನಡೆದಿದೆ ಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಡಿವೈಎಫ್ಐ ದೂರನ್ನು ನೀಡಿದೆ. ಅದೃಷ್ಟವಶಾತ್ ಆ ಸಮಯದಲ್ಲಿ ಬಸ್ ಬಂದ ಕಾರಣ ಮಕ್ಕಳು ಸುರಕ್ಷಿತವಾಗಿ ಬಸ್ ಹತ್ತಿದ್ದಾರೆ. ಆದರೆ ಮಕ್ಕಳು ಇಳಿದ ಸ್ಥಳದಲ್ಲಿಯೂ ಅದೇ ಕಾರು ಕಾಣಿಸಿಕೊಂಡಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಈ ಘಟನೆಯ ಹಿನ್ನೆಲೆಯಲ್ಲಿ, ಡಿವೈಎಫ್ಐ ಮುಡಿಪು ಘಟಕದ ವತಿಯಿಂದ ಸೂರಜ್ ಕಾಲೇಜಿನ ಪ್ರಿನ್ಸಿಪಾಲ್ ರವರನ್ನು ಭೇಟಿಯಾಗಿ ಈ ಕುರಿತು ಕಾಳಜಿ ವಹಿಸುವಂತೆ, ಭದ್ರತೆ ಹಾಗು ಮುಂಜಾಗರೂಕತೆ ವಹಿಸುವಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಿವೈಎಫ್ಐ ಮುಡಿಪು ಘಟಕದ ಅಧ್ಯಕ್ಷ ಉಸ್ಮಾನ್ ಅಲ್ತಾಫ್, ರಾಣಿ ಅಬ್ಬಕ್ಕ ಬಸ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ ನಾಯಕ್, ಮತ್ತು ಕಾರ್ಮಿಕ ಮುಖಂಡ ಇಬ್ರಾಹಿಂ ಮದಕ ಉಪಸ್ಥಿತರಿದ್ದರು. ಕಾಲೇಜಿನ ಪ್ರಿನ್ಸಿಪಾಲ್ ರಕ್ಷಿತ್ ಕುಲಾಲ್ ರವರು ಈ ವಿಷಯದಲ್ಲಿ…
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್ಗಳನ್ನು ಚಿಲ್ಲರೆಯಾಗಿ ಮಾರುವ ಅಂಗಡಿ ಹೋಟೆಲ್ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅವುಗಳನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ. ಸೂಚಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ಹಾಗೂ ಪಾನ್ ಮತ್ತಿತರ ತಂಬಾಕುಗಳನ್ನು ಮಾರುವಂತಿಲ್ಲ. ಸಿಗರೇಟ್ಗಳ ಇಡೀ ಪ್ಯಾಕ್ನಲ್ಲಿ ಮಾರಬೇಕೇ ಹೊರತು ಬಿಡಿಯಾಗಿ ಮಾರುವಂತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ಗಳು ಆಗಾಗ್ಗೆ ಅಂಗಡಿ, ಹೋಟೆಲ್ ತಪಾಸಣೆ ನಡೆಸಿ ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಅಂತಹ ಅಂಗಡಿಗಳನ್ನು ಮುಚ್ಚಿಸಿ ಜಪ್ತಿ ಮಾಡಬೇಕು ಎಂದರು. ಈ ಬಗ್ಗೆ ಮುಂದಿನ ಸಭೆಯೊಳಗೆ ಎಷ್ಟು ಅಂಗಡಿಗಳಿಗೆ ಭೇಟಿ ನೀಡಲಾಗಿದೆ. ಎಷ್ಟು ಉಲ್ಲಂಘನೆ ಕಂಡು ಬಂದಿದೆ? ದಂಡ ವಿಧಿಸಿರುವ ಹಾಗೂ ಅಂಗಡಿಗಳನ್ನು…
ಬಜ್ಪೆ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆದರಿಕೆ ಹಾಕಿ ಬಲವಂತದಿಂದ ಪಟಾಕಿ ಲೂಟಿ ಮಾಡಿದ ಮೂವರು ಆರೋಪಿಗಳ ವಿರುದ್ಧ ಬಜ್ಪೆ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತರನ್ನು ರೌಡಿ ಶೀಟರ್ ಪ್ರಶಾಂತ್ ಕಳವಾರು ಯಾನೆ ಪಚ್ಚು, ಗಣೇಶ್ ಮತ್ತು ಅಶ್ವಿತ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಸಂಘಪರಿವಾರದ ಕರ್ಯರ್ತನೂ ಆಗಿರುವ ಪ್ರಶಾಂತ್ ಕಳವಾರು ವಿರುದ್ಧ ಕೊಲೆ ಮತ್ತು ನಾಲ್ಕು ಕೊಲೆಯತ್ನ ಪ್ರಕರಣಗಳು ಸೇರಿದಂತೆ ತನಿಖೆ ಮತ್ತು ವಿಚಾರಣೆಯ ವಿವಿಧ ಹಂತದ 14 ಪ್ರಕರಣಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಣೇಶ್ ವಿರುದ್ಧ 4 ಪ್ರಕರಣಗಳಿವೆ, ಇದರಲ್ಲಿ ಎರಡು ಕೊಲೆಯತ್ನ ಪ್ರಕರಣಗಳು ತನಿಖೆ ಮತ್ತು ವಿಚಾರಣೆಯ ವಿವಿಧ ಹಂತದಲ್ಲಿವೆ. ಅಶ್ವಿತ್ ವಿರುದ್ಧ ಒಂದು ಪ್ರಕರಣವಿದ್ದು, ಅದನ್ನು ಖುಲಾಸೆಗೊಳಿಸಲಾಗಿದೆ. ಆದರೆ ಪಟಾಕಿ ದರೋಡೆ ನಡೆಸಿದ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳೊಂದಿಗೆ ಭಾಗಿಯಾಗಿ ಅವರ ಗ್ಯಾಂಗ್ ಸದಸ್ಯನಾಗಿರುವ ಕಾರಣ ಅಶ್ವಿತ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಂಗಳೂರು,ನ. 05; ಮಂಗಳೂರು ತಾಲೂಕಿನ ಮಂಜನಾಡಿ ಗ್ರಾಮದ ನಿವಾಸಿ ಶೇಖಬ್ಬ್ ಅವರ ಪತ್ನಿ ಜಮೀಲಾ ಎಂದು ಗುರುತಿಸಲಾದ ಮಹಿಳೆಯ ನಾಪತ್ತೆಯಾದ ಬಗ್ಗೆ ಮಾಹಿತಿ ನೀಡುವಂತೆ ನಗರ ಪೊಲೀಸರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಸುಮಾರು 35 ವರ್ಷ ವಯಸ್ಸಿನ ಜಮೀಲಾ, ಮೇ 25, 2018 ರಂದು ಸಂಜೆ 4 ಗಂಟೆ ಸುಮಾರಿಗೆ ಮಂಗಳೂರು ನಗರಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದರು, ಆದರೆ ನಂತರ ಮನೆಗೆ ಹಿಂತಿರುಗಲಿಲ್ಲ. ಉಳ್ಳಾಲ ತಾಲೂಕಿನ ದೇರಳಕಟ್ಟೆಯ ಬದ್ಯಾರು ನಿವಾಸಿ ಶೌಕತ್ ಅಲಿ ಅವರ ಸಹೋದರ ನೀಡಿದ ದೂರಿನ ಮೇರೆಗೆ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.ಜಮೀಲಾ 35 ವರ್ಷ ವಯಸ್ಸು, ಸುಮಾರು 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ ಮತ್ತು ಸಾಧಾರಣ ಮೈಕಟ್ಟು, ಕೋಲು ಮುಖ. ಅವರು 7 ನೇ ತರಗತಿಯವರೆಗೆ ಓದಿದ್ದಾರೆ ಮತ್ತು ಕೊನೆಯದಾಗಿ ಕಪ್ಪು ಬುರ್ಖಾ ಧರಿಸಿರುವುದು ಕಂಡುಬಂದಿದೆ. ಅವರು ತುಳು, ಕನ್ನಡ, ಮಲಯಾಳಂ, ಬ್ಯಾರಿ ಮತ್ತು ಹಿಂದಿ…
ಕುಂದಾಪುರ, ನ. 05; ಕುಂದಾಪುರ ಸಮೀಪದ ತಲ್ಲೂರಿನಲ್ಲಿ ಮಂಗಳವಾರ ಸಂಜೆ ದುಷ್ಕರ್ಮಿಗಳು ನಿಲ್ಲಿಸಿದ್ದ ಕಾರಿನ ಕಿಟಕಿ ಒಡೆದು 2 ಲಕ್ಷ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ. ಕೆಂಚನೂರಿನ ನಿವಾಸಿ ಹಾಗೂ ಗುತ್ತಿಗೆದಾರ ಗುಂಡು ಶೆಟ್ಟಿ ಎಂಬವರು ತಲ್ಲೂರಿನ ಬ್ಯಾಂಕಿನಿಂದ 2 ಲಕ್ಷ ರೂ. ಡ್ರಾ ಮಾಡಿ ತನ್ನ ಕಾರಿನೊಳಗೆ ಹಣವನ್ನು ಇಟ್ಟುಕೊಂಡಿದ್ದರು. ನಂತರ ತಲ್ಲೂರು ಪಟ್ಟಣದ ಬಳಿಯ ವಸತಿ ಸಂಕೀರ್ಣದ ಮುಂದೆ ವಾಹನವನ್ನು ನಿಲ್ಲಿಸಿ ತನ್ನ ಬಾಡಿಗೆ ಮನೆಗೆ ಹೋದರು. ಸುಮಾರು 10-15 ನಿಮಿಷಗಳ ನಂತರ ಹಿಂತಿರುಗಿದಾಗ, ಕಾರಿನ ಕಿಟಕಿ ಒಡೆದು ನಗದು ಕಾಣೆಯಾಗಿರುವುದು ಕಂಡುಬಂದಿದೆ. ವರದಿಗಳ ಪ್ರಕಾರ, ದುಷ್ಕರ್ಮಿಗಳು ಕಾರಿನ ಬಲಭಾಗದ ಕಿಟಕಿ ಒಡೆದು ಡ್ಯಾಶ್ಬೋರ್ಡ್ನಲ್ಲಿದ್ದ ಹಣವನ್ನು ಕದ್ದಿದ್ದಾರೆ. ತಲ್ಲೂರು ಜಂಕ್ಷನ್ ಬಳಿಯ ಜನನಿಬಿಡ ಪ್ರದೇಶದಲ್ಲಿ ಕಳ್ಳತನ ಸಂಭವಿಸಿದೆ, ಇದು ವಸತಿ ಅಪಾರ್ಟ್ಮೆಂಟ್ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಹತ್ತಿರದಲ್ಲಿ ಬಸ್ ಮತ್ತು ಆಟೋ ನಿಲ್ದಾಣವನ್ನು ಹೊಂದಿದೆ. ಹಾಡಹಗಲೇ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.ದುಷ್ಕರ್ಮಿಗಳು ಗುಂಡು ಶೆಟ್ಟಿಅವರು ಬ್ಯಾಂಕ್ನಿಂದ…

