Author: UllalaVani

Kannada News From Coastal Karnataka

ಉಳ್ಳಾಲ, ನ.5: ಬಡಬಗ್ಗರು, ನಿರ್ಗತಿಕರು, ಮನೆಯಿಲ್ಲದೇ ಕಂಗಾಲಾಗಿರುವವರನ್ನು ಗುರುತಿಸಿ ಅವರಿಗೆ `ನಮೋ ಕುಟೀರ’ಎಂಬ ಹೆಸರಿನ ಮೂಲಕ ಬಿಜೆಪಿ ಮುಖಂಡರಾಗಿರುವ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರು ಮನೆಯನ್ನು ಕಟ್ಟಿಕೊಡುವ ಮೂಲಕ ಒಂದು ಸೂರನ್ನು ನಿರ್ಮಿಸಿಕೊಡುತ್ತಿದ್ದಾರೆ. ಈ ಸಾರ್ಥಕ ಕಾಯಕದಿಂದ ಸಮಾಜಕ್ಕೆ ಮಾದರಿಯಾಗಿದ್ದು, ಇವರ ನಿಸ್ವಾರ್ಥ ಸೇವೆಯಿಂದ ಈಗಾಗಲೇ 5 ಮನೆಗಳನ್ನು ಕಟ್ಟಿ ಫಲಾನುಭವಿಗಳಿಗೆ ಹಸ್ತಾಂತರಿಸಿದ್ದಾರೆ. ಸಂತೋಷ್ ಕುಮಾರ್ ರೈ ಅವರು ಈ ಹಿಂದೆ ಬರಡು ಭೂಮಿಯಲ್ಲಿ ಬಂಗಾರದ ಬೆಳೆ ಬೆಳೆದು ಸುದ್ದಿಯಾಗಿದ್ರು. ಇದೀಗ ಒಲಿತು ಮಾಡು ಮನುಷ್ಯ ಎನ್ನುತ್ತಾ ಅಸಹಾಯಕರ ಕಂಬನಿ ಒರೆಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇವರ ನಮೋ ಕುಟೀರ ಯೋಜನೆಯ 6 ನೇ ಮನೆಯ ಶಿಲಾನ್ಯಾಸ ಇಂದು ನೆರವೇರಿದೆ. ಹೌದು, ಮಕ್ಕಳಿಲ್ಲದೇ ಜೀವನ ನಡೆಸುತ್ತಿದ್ದ ಹಿರಿಯಜೀವಗಳಾದ ರುಕ್ಮಯ ಮೂಲ್ಯ ಮತ್ತು ವಿಜಯ ದಂಪತಿಗೆ ಇರುವ ಒಂದು ಸೂರನ್ನು ಕಳೆದುಕೊಳ್ಳುವ ಸನ್ನಿವೇಶ ಎದುರಾದಾಗ ಗ್ರಾಮಸ್ಥರು, ನೆರೆ-ಹೊರೆಯವರು ಬಡವರ ಕಣ್ಮಣಿ, ಸಮಾಜ ಸೇವಕರಾದ ಸಂತೋಷ್ ರೈ ಬೋಳಿಯಾರ್ ಅವರ ಬಳಿ ಈ ಸಂಗತಿ…

Read More

ಉಳ್ಖಾಲ,ನ.05: ಇದೇ ನ.8,9 ಮತ್ತು 10 ರಂದು ಗಟ್ಟಿ ಸಮಾಜ ಭವನದ ಆವರಣದಲ್ಲಿ ಉಳ್ಳಾಲ ಕೃಷಿ ಉತ್ಸವ ದೇಸಿ ಆಹಾರ ಮೇಳ ಆದ್ದೂರಿಯಾಗಿ ಮೇಳೈಸಲಿದೆ. ರೈತ ಕುಡ್ಲ ಪ್ರತಿಷ್ಠಾನ ನೇತೃತ್ವದಲ್ಲಿ ಕರ್ನಾಟಕ ಗೇರು ಅಭಿವೃದ್ದಿ ನಿಗಮ ಮಂಗಳೂರು ಹಾಗೂ ಕೃಷಿ ಇಲಾಖೆ ಮಂಗಳೂರು ಮತ್ತು ಪೊಲದವರ ಯಾನೆ ಗಟ್ಟಿಯವರ ಸಮಾಜ ಸೇವಾ ಸಂಘ (ರಿ.) ಹಾಗೂ ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಸಹಯೋಗದೊಂದಿಗೆ ವಿನೂತನ ಕಾರ್ಯಕ್ರಮ ಆಯೋಜನೆಗೊಂಡಿದೆ. ಕೆಲವರಿಗೆ ಚೈನಿಸ್, ಜಂಕ್ ಫುಡ್ ತಿಂದು ತಿಂದು ನಾಲಗೆಯ ರುಚಿ ಕೆಟ್ಟಿರತ್ತೆ. ಹಾಗಾಗಿ ಖಂಡಿತವಾಗಲೂ ದೇಸಿ ಆಹಾರ ತಿನ್ನುಬೇಕು ಅನ್ಸತ್ತಾ ಸೊ ನೀವು ಖಂಡಿತವಾಗಲೂ ಈ ದೇಸಿ ಆಹಾರ ಮೇಳಕ್ಕೆ ಬಂದು ಶುಚಿ ರುಚಿಯಾದ ಆಹಾರವನ್ನು ಸವಿಯಬಹುದು. ಇನ್ನು ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆಯ ಜೊತೆಗೆ ನಿಮಗೆ ಉಪಯೋಕ್ತವಾಗುವ ನಿಟ್ಟಿನಲ್ಲಿ ಕೃಷಿಗೆ ಸಂಬoಧಿಸಿದ ಮಾಹಿತಿಗಳು ಕೂಡ ಇಲ್ಲಿ ಲಭ್ಯವಿದೆ. ಇಲಾಖಾ ಮಾಹಿತಿ ಮಳಿಗೆಗಳು, ತರಕಾರಿ ಬೀಜ, ಸಸ್ಯಗಳ ಮಾರಾಟ, ಪ್ರಾತ್ಯಕ್ಷಿಕೆ, ವೈವಿಧ್ಯಮಯ ಪಕ್ಷಿಗಳ…

Read More

ಪುತ್ತೂರು, ನ. 04: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ನಾಲ್ಕು ತಿಂಗಳ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ ಒಂದು ತಿಂಗಳೊಳಗೆ ಗಾಯಾಳು ತಂದೆಯೂ ನ.3ರಂದು ಸಾವನ್ನಪ್ಪಿದ್ದಾರೆ. ಮೇ 27 ರಂದು ಖಾಸಗಿ ಬಸ್ ಮತ್ತು ಕಾರಿನ ನಡುವೆ ಈ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಅಂಡೆಪುಣಿ ಈಶ್ವರ ಭಟ್ ಅವರ ಮಗಳು ಅಪೂರ್ವಾ (35) ಗಂಭೀರವಾಗಿ ಗಾಯಗೊಂಡಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅಕ್ಟೋಬರ್ 7 ರಂದು ನಿಧನರಾಗಿದ್ದರು. ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಅವರ ತಂದೆ, ಈಶ್ವರ ಭಟ್ (75), ಅವರು ಕೂಡ ನವೆಂಬರ್ 3 ರಂದು ಪುತ್ತೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸಿದ ದಿನ, ಈಶ್ವರ ಭಟ್ ಮತ್ತು ಅವರ ಮಗಳು ಅಪೂರ್ವ ಅವರು ಪುತ್ತೂರು ಪಟ್ಟಣದಿಂದ ತಮ್ಮ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಈ ವೇಳೆ, ಪುತ್ತೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮುರ ಸಮೀಪ ಅವರ ಕಾರಿಗೆ…

Read More

ಬೆಂಗಳೂರು,ನ.04: : ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೇಟಿ ಅವರು ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ.

Read More

ಕಾಪು,ನ.04: ಸಮಾಜದಲ್ಲಿ ಉನ್ನತ ವಿದ್ಯಾಭ್ಯಾಸ ನೀಡುವ ವಿದ್ಯಾ ಕೇಂದರೆಗಳು ಬೆಳೆದು ಬರಬೇಕು. ಎಲ್ಲಾ ತರಹದ ವಿದ್ಯಾರ್ಥಿಗಳು ಅಲ್ಲಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗಬೇಕು. ಉನ್ನತ ವಿದ್ಯಾಭ್ಯಾಸದಿಂದ ಮಾತ್ರ ಸಮಾಜದ ಉದ್ಧಾರ ಸಾಧ್ಯ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಜಿ ಝಕರಿಯಾ ಜೋಕಟ್ಟೆಯವರು ಅಭಿಪ್ರಾಯಪಟ್ಟಿದ್ದಾರೆ. ಡಿಕೆಎಸ್ಸಿ ಅಧೀನದಲ್ಲಿ ಅಲ್ ಇಹ್ಸಾನ್ ವಿದ್ಯಾ ಸಮುಚ್ಚಯ ನೀಡಿದ ಭವ್ಯ ಸ್ವಾಗತ ಹಾಗೂ ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತ ಅಧ್ಯಕ್ಷರಾಗಿ ಆಯ್ಕೆಯಾದ ಜನಾಬ್ ಎಂ.ಎ.ಗಫೂರ್ ಮೂಳೂರು ಮತ್ತು ಕರ್ನಾಟಕ ಮುಸ್ಲಿಂ ಜಮಾಅತ್ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಹು ಅಬೂಬಕ್ಕರ್ ಹಾಜಿ ನೇಜಾರ್ ಅವರನ್ನು ಡಿಕೆಎಸ್ಸಿ ವತಿಯಿಂದ ಗೌರವಿಸಿ ಅಭಿನಂದನೆ ಸಲ್ಲಿಸಲಾಯಿತು. ಸಭೆಯನ್ನು ಉದ್ದೇಶಿಸಿ ಡಿಕೆಎಸ್ಸಿ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಕೆ.ಎಚ್.ರಫೀಕ್ ಸೂರಿಂಜೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ.ಗಫೂರ್ ಮೂಳೂರು, ಸಂಸ್ಥೆಯ ಜನರಲ್ ಮ್ಯಾನೇಜರ್ ಯು.ಕೆ. ಮುಸ್ತಫಾ ಸಅದಿ, ಆಡಳಿತಾಧಿಕಾರಿ ಪ್ರೊ.ಯೂಸುಫ್ ಸುಳ್ಯ ಮಾತಾನಾಡಿದರು.…

Read More

ಮಂಗಳೂರು,ನ.04: ಆನ್ ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭಾಂಶ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಸೆ.9ರಂದು ಫೇಸ್ ಬುಕ್ ನೋಡುತ್ತಿರುವ ಸಂದರ್ಭದಲ್ಲಿ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ ರಿಕ್ವೆಸ್ಟ್ ಬಂದಿದೆ. ಅದನ್ನು ಎಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದ ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Read More

ಗದಗ, ನ.04; ರಾಜ್ಯದಲ್ಲಿ ಮೊದಲ ಬಾರಿಗೆ ಯುವತಿಯರು ಮತ್ತು ಮಹಿಳೆಯರಿಗಾಗಿ ನಗರದ ತ್ರೀಕೂಟೇಶ್ವರ ದೇವಸ್ಥಾನ ಆವರಣದಲ್ಲಿ ಲಾಠಿ ಶೌರ್ಯ ತರಬೇತಿ ಆಯೋಜಿಸಲಾಗಿತ್ತು. ಕ್ರಾಂತಿ ಸೇನಾ, ಹಿಂದೂ ಜನ ಜಾಗೃತಿ, ರಾಜರಾಜೇಶ್ವರಿ ಮಹಿಳಾ ಮಂಡಳದಿAದ ಆಯೋಜಿಸಿದ್ದ ಈ ತರಬೇತಿಯಲ್ಲಿ ನೂರಾರು ಯುವತಿಯರು, ಮಹಿಳೆಯರು ಭಾಗಿಯಾಗಿದ್ದಾರೆ.

Read More

ಬಾಗಲಕೋಟೆ, ನ.04; ಬಾಗಲಕೋಟೆಯಲ್ಲಿ ಆನ್ಲೈನ್ ಹೂಡಿಕೆ ವಂಚನೆ ಜಾಲಕ್ಕೆ ಸಿಲುಕಿದ ವ್ಯಾಪಾರಿಯೊಬ್ಬರು ಬರೋಬ್ಬರಿ 1.09 ಕೋಟಿ ರೂ. ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಆಸ್ತಾ ಟ್ರೇಡ್ 903 ಸ್ಟ್ರಾಟಜಿ ಹಬ್ ಎಂಬ ಹೆಸರಿನ ನಕಲಿ ಆನ್ಲೈನ್ ಗ್ರೂಪ್ ಮೂಲಕ ಅಂತಾರಾಜ್ಯ ಆನಲೈನ್ ಖದೀಮರು ವ್ಯಾಪಾರಿಯ ವಿಶ್ವಾಸ ಗಳಿಸಿದ್ದಾರೆ. ಆಮೇಲೆ, ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುತ್ತೇವೆ ಎಂಬ ಆಮಿಷವೊಡ್ಡಿ ಹೆಸರಿನಲ್ಲಿ ಹಣ ಎಗರಿಸಿದ್ದಾರೆ.ಆಗಸ್ಟ್ 12 ರಂದು ನಕಲಿ ಇನ್ವೆಸ್ಟ್ಮೆಂಟ್ ಮಾರ್ಕೆಟ್ ಮೂಲಕ ಬಾಗಲಕೋಟೆ ಮೂಲದ ವ್ಯಾಪಾರಿಗೆ ಗಾಳ ಹಾಕಿದ್ದ ಆನ್‌ಲೈನ್ ವಂಚಕರು, ಮೊದಲು ಗ್ರೂಪ್‌ಗೆ ಸೇರಿಸಿಕೊಂಡಿದ್ದರು. ಬಳಿಕ ಚಿಕ್ಕ ಮೊತ್ತದ ಹೂಡಿಕೆ ಮಾಡಲು ಪ್ರೇರೇಪಿಸಿದ್ದರು. ಆನಂತರ ಲಾಭ ತೋರಿಸಿ ಹಂತ ಹಂತವಾಗಿ ಕೋಟಿ ರೂಪಾಯಿಗೂ ಹೆಚ್ಚಿನ ಹೂಡಿಕೆ ಮಾಡಿಸಿಕೊಂಡು ದೋಖಾ ಮಾಡಿದ್ದಾರೆ. ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 27ರವರೆಗೆ ನಡೆದ ವಹಿವಾಟಿನಲ್ಲಿ ವ್ಯಾಪಾರಿಯಿಂದ 1,09,05,800 ರೂಪಾಯಿ ವಂಚಿಸಿರುವ ಆರೋಪ ಇದೆ. ಈ ಪೈಕಿ ಕೇವಲ 5 ಲಕ್ಷ ರೂ. ಮಾತ್ರ ಹಿಂದಿರುಗಿಸಿ,…

Read More

ಮೂಡುಬಿದಿರೆ,ನ.04: ಪ್ರೇರಣಾ ಸೇವಾ ಟ್ರಸ್ಟ್ ಮೂಡುಬಿದಿರೆ (ರಿ.) ಇದರ ನೂತನ ಪ್ರೇರಣಾ ಕಾರ್ಯಾಲಯದ ಭೂಮಿಪೂಜೆ ಮತ್ತು ಸಭಾಕಾರ್ಯಕ್ರಮದಲ್ಲಿ ಮುಲ್ಕಿ-ಮೂಡಬಿದಿರೆ ಶಾಸಕರಾದ ಉಮಾನಾಥ್ ಕೋಟ್ಯಾನ್ ಭಾಗವಹಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ – ಮಧ್ಯ ಕ್ಷೇತ್ರದ ಮಾನ್ಯ ಕ್ಷೇತ್ರಿಯ ಸಂಘಚಾಲಕರಾದ ಡಾ.ವಾಮನ್ ಶೆಣೈ ಅವರು ಕಾರ್ಯಾಲಯಕ್ಕೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಉದ್ಯಮಿಗಳಾದ ಶಶಿಧರ್ ಶೆಟ್ಟಿ ಬರೋಡ ಹಾಗೂ ಪ್ರೇರಣಾ ಸೇವಾ ಟ್ರಸ್ಟ್ ಇದರ ಅಧ್ಯಕ್ಷರಾದ ವಿವೇಕಾನಂದ ಕಾಮತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Read More

ಸುಳ್ಯ.ನ.4: ಸುಳ್ಯ ತಾಲೂಕು ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ರಫೀಕ್ ಸಿ.ಎಂ. ಐವತ್ತೊಕ್ಲು ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಪಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದ ಇವರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳ ಹಲವು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Read More