Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಸವಾಲುಗಳನ್ನು ಧೈರ್ಯದಿಂದ ಮತ್ತು ಜವಾಬ್ದಾರಿಯಿಂದ ಎದುರಿಸುವ ಶಕ್ತಿ ಪ್ರತಿಯೊಬ್ಬನಲ್ಲಿಯೂ ಇರಬೇಕಾಗಿದೆ : ಅಬ್ದುಲ್ ರಶೀದ್ ಮದನಿ

UllalaVaniBy UllalaVaniMay 8, 2025Updated:May 8, 2025No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ: ಮಾನವನ ಬದುಕಿನಲ್ಲಿ ಅನೇಕ ಸವಾಲುಗಳು ಎದುರಾಗುತ್ತವೆ. ಇಂತಹ ಸವಾಲುಗಳನ್ನು ಧೈರ್ಯದಿಂದ ಮತ್ತು ಜವಾಬ್ದಾರಿಯಿಂದ ಎದುರಿಸುವ ಶಕ್ತಿ ಪ್ರತಿಯೊಬ್ಬನಲ್ಲಿಯೂ ಇರಬೇಕಾಗಿದೆ. ಈ ಶಕ್ತಿಯ ಮೂಲ ಧರ್ಮ, ಆರಾಧನೆ, ಕುಟುಂಬ ಮತ್ತು ಸ್ನೇಹ ಸಂಬಂಧಗಳ ಬಲವಾಗಿದೆ. ಮಾನವೀಯತೆಯ ಮೌಲ್ಯಗಳನ್ನು ಪ್ರಥಮ ಸ್ಥಾನಕ್ಕೆ ತರಬೇಕು ಎಂದು ಅಬ್ದುಲ್ ರಶೀದ್ ಮದನಿ ಹೇಳಿದರು.
ಅವರು ಉಳ್ಳಾಲ ದರ್ಗಾದ 22 ಪಂಚವಾರ್ಷಿಕ ಉರೂಸ್ ಪ್ರಯುಕ್ತ ಬುಧವಾರ ದರ್ಗಾ ವಠಾರದಲ್ಲಿ ನಡೆದ ಧಾರ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.
ಇಸ್ಲಾಮಿನ ತತ್ವಾದರ್ಶಗಳು—ನೀತಿ, ನ್ಯಾಯ, ಸಹಾನುಭೂತಿ ಮತ್ತು ಸಹಬಾಳ್ವೆ—ಜೀವನದ ದಿಕ್ಕು ನಿರ್ಧಾರ ಮಾಡುವ ಪ್ರಮುಖ ಅಂಶಗಳಾಗಿವೆ. ಇವುಗಳ ಪಾಲನೆಯ ಮೂಲಕ ನಾವು ಜೀವನವನ್ನು ಶ್ರೇಯಸ್ಕರಗೊಳಿಸಬಹುದು. ಪರಸ್ಪರ ದ್ವೇಷ, ವೈರ ಮತ್ತು ಅಸಹಿಷ್ಣುತೆ ಎಂಬುದನ್ನು ದೂರವಿಟ್ಟು ಸಹಜತೆ, ಶಾಂತಿ ಮತ್ತು ಸಹೋದರತ್ವದ ಬದುಕನ್ನು ಆಶ್ರಯಿಸಬೇಕಾಗಿದೆ.
ಜೀವನದ ಎಲ್ಲಾ ಹಂತಗಳಲ್ಲೂ ಇಸ್ಲಾಮಿನ ಚೌಕಟ್ಟನ್ನು ಮೀರದೆ, ಅದರ ಮೌಲ್ಯಾಧಾರಿತ ಮಾರ್ಗದರ್ಶನದಲ್ಲಿ ನಡೆಯುವುದು ಅತ್ಯಂತ ಅಗತ್ಯ. ಈ ಮೂಲಕ ನಾವೆಲ್ಲರೂ ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ನೈತಿಕತೆಯ ಉದಾತ್ತ ಮಾದರಿಯಾಗಿ ಬೆಳೆದುಬರಬಹುದು ಎಂದರು.
ಸಿ . ಮುಹಮ್ಮದ್ ಫೈಝಿ ಮಾತನಾಡಿ, ಮನುಷ್ಯ ತನ್ನ ಜೀವನದಲ್ಲಿ ಉತ್ತಮ ಕಾರ್ಯ ಆಯೋಜಿಸಬೇಕು. ಮಾನವ ಅಭಿವೃದ್ಧಿಗೆ ಪೂರಕವಾದ ಕಾರ್ಯ ಚಟುವಟಿಕೆ ನಾವು ಮಾಡಬೇಕು. ಅಭಿವೃದ್ಧಿ ನಮ್ಮ ಗುರಿ ಆಗಬೇಕು ಎಂದು ಕರೆ ನೀಡಿದರು. ಬಶೀರ್ ಮದನಿ ನೀಲಗಿರಿ ಧಾರ್ಮಿಕ ಪ್ರವಚನ ನೀಡಿದರು.
ಅಬ್ದುಲ್ ಮಜೀದ್ ಫೈಝಿ ಪೊಯ್ಯತ್ತ ಬೈಲ್ ದುಆ ನೆರವೇರಿಸಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಯ್ಯಿದ್ ಅಬ್ದುಲ್ ರಹ್ಮಾನ್ ಮಸ್‌ಊದ್ ತಂಙಳ್, ಕುಂಪಲ ಜುಮಾ ಮಸೀದಿ ಅಧ್ಯಕ್ಷ ಇಕ್ಬಾಲ್, ಖತೀಬ್ ಅಬ್ದುಲ್ ರಹ್ಮಾನ್ ಅಹ್ಸನಿ, ಚೊಂಬು ಗುಡ್ಡೆ ಜುಮಾ ಮಸೀದಿ ಅಧ್ಯಕ್ಷ ಪಿ.ಸಿ. ಇಮ್ತಿಯಾಝ್ ಖತೀಬ್ ಮುದ್ರಿಕ ಮದನಿ, ದರ್ಗಾ ಉಪಾಧ್ಯಕ್ಷ ಅಶ್ರಫ್ ರೈಟ್ ವೇ, ಕಾರ್ಯದರ್ಶಿ ಮುಸ್ತಫಾ ಮದನಿನಗರ, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಸದಸ್ಯ ಝೈನುದ್ದೀನ್ ಮೇಲಂಗಡಿ, ಅಬ್ದುಲ್ ಖಾದರ್ ಕೋಡಿ, ಇಮ್ತಿಯಾಝ್, ಮೊಯ್ದಿನ್ ಪಟ್ಲ, ಅಬೂಬಕ್ಕರ್ ಹೈದರಲಿ ನಗರ, ಅರೆಬಿಕ್ ಕಾಲೇಜು ಪ್ರೊಫೆಸರ್ ಇಬ್ರಾಹಿಂ ಅಹ್ಸನಿ, ಆಝಾದ್ ಇಸ್ಮಾಯಿಲ್ , ಹಝ್ರತ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ರಸೂಲ್ ಖಾನ್, ಪ್ರೌಢಶಾಲೆ ಮುಖ್ಯೋಪಾಧ್ಯಾಯ ಇಮ್ತಿಯಾಝ್ ಪಿ.ಬಿ.,ದೈಹಿಕ ಶಿಕ್ಷಕ ಖಾಲೀದ್, ಕೇಂದ್ರ ಜುಮ್ಮಾ ಮಸೀದಿ ಖತೀಬ್ ಹಾಫಿಳ್ ಅಬ್ದುಲ್ ಮಜೀದ್ ಫಾಳಿಲಿ ಕಾಮಿಲ್ ಸಖಾಫಿ ಮತ್ತಿತರರು ಉಪಸ್ಥಿತರಿದ್ದರು.
ದರ್ಗಾ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಪಟ್ಟತಮೊಗೇರು ಹೆಸರಿನ ಬದಲಾವಣೆಗೆ ಸ್ಥಳೀಯರ ವಿರೋಧ – ಚುನಾವಣಾ ಆಯೋಗಕ್ಕೆ ದೂರು

July 29, 2025

ಅಶ್ಲೀಲ ಸಂದೇಶ ಪ್ರಕರಣ : ನಟಿ ರಮ್ಯಾ ದೂರು ಹಿನ್ನೆಲೆ 30ಕ್ಕೂ ಹೆಚ್ಚು ಇನ್‌ಸ್ಟಾಗ್ರಾಂ ಖಾತೆಗಳಿಗೆ ಎಫ್‌ಐಆರ್

July 29, 2025

ಪುತ್ತೂರು : ವಿವಾಹಿತ ಯುವಕ ಆತ್ಮಹತ್ಯೆ

July 29, 2025

Comments are closed.

ಸಂಪರ್ಕಿಸಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಎಲ್ಯಾರ್‌ಪದವು : ಉಚಿತ ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರ

July 11, 2025

ರಾಷ್ಟ್ರೀಯ ಹೆದ್ದಾರಿ-75ನಲ್ಲಿ ʻನಿಮ್ಮೊಂದಿಗೆ ನಾವು, ನಮ್ಮೊಂದಿಗೆ ನೀವುʼ ಸ್ವಚ್ಛತಾ ಅಭಿಯಾನ

June 30, 2025

ಮಳೆಗಾಲದ ಸೋಂಕುಗಳು ಉಲ್ಬಣ : ಕರಾವಳಿ ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ

June 30, 2025

ಅಸೈಗೋಳಿಯ ಕ್ಸೇವಿಯರ್ ಐಟಿಐಯಲ್ಲಿ 2025-26 ಸಾಲಿನ ಪ್ರವೇಶ ಆರಂಭ

June 14, 2025
All News

ಪಟ್ಟತಮೊಗೇರು ಹೆಸರಿನ ಬದಲಾವಣೆಗೆ ಸ್ಥಳೀಯರ ವಿರೋಧ – ಚುನಾವಣಾ ಆಯೋಗಕ್ಕೆ ದೂರು

By UllalaVaniJuly 29, 20250

ಮಂಜೇಶ್ವರ : ಮೀಂಜ ಪಂಚಾಯತಿನ ವಾರ್ಡ್ ವಿಭಜನೆ ಸಂದರ್ಭದಲ್ಲಿ ಚಾರಿತ್ರಿಕ ಪಟ್ಟತಮೊಗೇರು ಎಂಬ ಸ್ಥಳನಾಮವನ್ನು ಏಕಾಎಕಿ ಪಟ್ಟತ್ತೂರು ಎಂದು ಬದಲಾಯಿಸಲಾಗಿದೆ.…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಅಶ್ಲೀಲ ಸಂದೇಶ ಪ್ರಕರಣ : ನಟಿ ರಮ್ಯಾ ದೂರು ಹಿನ್ನೆಲೆ 30ಕ್ಕೂ ಹೆಚ್ಚು ಇನ್‌ಸ್ಟಾಗ್ರಾಂ ಖಾತೆಗಳಿಗೆ ಎಫ್‌ಐಆರ್

July 29, 2025

ಪುತ್ತೂರು : ವಿವಾಹಿತ ಯುವಕ ಆತ್ಮಹತ್ಯೆ

July 29, 2025

ಕಾಸ್ಕ್ ಸೆಂಟಿನರಿ ಟ್ರಸ್ಟ್ ಆಶ್ರಯದಲ್ಲಿ 307 ಅರ್ಹ ವಿದ್ಯಾರ್ಥಿಗಳಿಗೆ ರೂ. 30 ಲಕ್ಷ ಅಧಿಕ ಮೊತ್ತದ ಸ್ಕಾಲರ್ ಶಿಪ್ ವಿತರಣೆ

July 28, 2025
1 2 3 … 1,542 Next
Automatic YouTube Gallery

ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ

ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
#ullalavani #Konaje #SanthoshkumarRaiBoliyar
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
Now Playing
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ...
ಅಸೈಗೋಳಿ ಅಭಯಾಶ್ರಮದಲ್ಲಿ ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ಹುಟ್ಟುಹಬ್ಬದ ಆಚರಣೆ
#ullalavani #Konaje #SanthoshkumarRaiBoliyar
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
Now Playing
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು
ತೊಕ್ಕೊಟ್ಟು: ಹಿರಿಯ ಬಿಜೆಪಿ ಮುಖಂಡೆ ಅಂಗಡಿಯಿಂದ ಕಳವು #ullalavani #news ...
ತೊಕ್ಕೊಟ್ಟು: ಹಿರಿಯ ಬಿಜೆಪಿ
ಮುಖಂಡೆ ಅಂಗಡಿಯಿಂದ ಕಳವು
#ullalavani #news #ullala #kannadanews #mangalore #breakingnews #thokkottu
Follow us on Facebook
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ullalavani.com. Designed by wpwebsmartz.com.

Type above and press Enter to search. Press Esc to cancel.

%d

    Notifications