
ಉಪ್ಪಿನಂಗಡಿ: ಕೊಯಿಲದ ನಿವಾಸಿ ಝಮೀರ್ ಕರ್ನಾಟಕ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದು 2 ದಿನಗಳ ಹಿಂದೆ ಆಂಧ್ರಪ್ರದೇಶದ ಮಚಲೀಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೀಚ್ ಕಬಡ್ಡಿಯಲ್ಲಿ ಆಟವಾಡಿ ಉತ್ತಮ ಪ್ರದರ್ಶನ ತೋರಿದ ಜುಮೀರ್ ಅವರು ಉಪರೆಯ ಎಸ್.ಡಿ.ಎಂ. ಕಾಲೇಜಿನ ದ್ವಿತೀಯ ವರ್ಷದ ಬಿ.ಎ. ತರಗತಿ ವಿದ್ಯಾರ್ಥಿಯಾಗಿದ್ದಾರೆ.


ಝಮೀರ್ ಪ್ರಾಥಮಿಕ ಶಿಕ್ಷಣವನ್ನು ಅತೂರು ಬದ್ರಿಯಾ ಸ್ಕೂಲ್, ಪ್ರೌಢ ಶಿಕ್ಷಣವನ್ನು ಕಡಬದ ಜೋಕಿಂ ಪ್ರೌಢ ಶಾಲೆಯಲ್ಲಿ ದ್ವಿತೀಯ ಪಿಯುಸಿಯನ್ನು ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಮಾಡಿದ್ದರು. ಝಮೀರ್ ಕೊಲ ನಿವಾಸಿ ಝಕರಿಯಾ ನೇರೆಂಕಿ ಮತ್ತು ತಾಹಿರಾ ಬಾನು ದಂಪತಿಯ ಪುತ್ರರಾಗಿದ್ದಾರೆ.