ಭಾರತ ಪಾಕ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ಆಯೋಜಿಲಾಗಿದ್ದ ಗ್ಯಾರಂಟಿ ಉತ್ಸವ ಮುಂದೂಡಿಕೆ – ರಮೇಶ್ ಶೆಟ್ಟಿ ಬೋಳಿಯಾರ್.
ಮಂಗಳೂರು : ಉಳ್ಳಾಲ ಸಯ್ಯದ್ ಮದನಿ ದರ್ಗಾ ಊರೂಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಸನ್ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೇ 16 ರಂದು ಆಗಮಿಸಲಿದ್ದಾರೆ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್ ಹೇಳಿದ್ದಾರೆ.
ಅದೇ ದಿನ ಕ್ಷೇತ್ರದಲ್ಲಿ ಗ್ಯಾರಂಟಿ ಉತ್ಸವ ಕಾರ್ಯಕ್ರಮ ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ, ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವೆ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ನಾವು ನಮ್ಮ ಸೈನಿಕರಿಗೆ ನೈತಿಕ ಬೆಂಬಲ ನೀಡುತ್ತಾ ಇಂತಹ ಸಂದರ್ಭದಲ್ಲಿ ಗ್ಯಾರಂಟಿ ಉತ್ಸವ ಬೇಡ ಎಂದು ಕ್ಷೇತ್ರದ ಶಾಸಕರೂ, ವಿಧಾನ ಸಭಾ ಸ್ಪೀಕರ್ ಯು. ಟಿ ಖಾದರ್ ಅವರ ಸೂಚನೆಯ ಹಿನ್ನಲೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರ ಉಪಸ್ಥಿತಿಯಲ್ಲಿ ಮೇ 16 ರಂದು ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಉತ್ಸವ ಸಹಿತ ವಿವಿಧ ಶಂಕುಸ್ಥಾಪನೆ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ ಎಂದು ರಮೇಶ್ ಶೆಟ್ಟಿ ಬೋಳಿಯಾರ್ ಹೇಳಿದ್ದಾರೆ.