
ಮುಡಿಪು: 2024-25 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲಲಿತ ಅಭ್ಯರ್ಥಿಗಳು ಆರಕ್ಕೆ 6 ಸ್ಥಾನದಲ್ಲಿ ಗೆಲ್ಲುವ ಮೂಲಕ ಸತತ 11ನೇ ಬಾರಿಗೆ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿ ಮದನ್, ಉಪಾಧ್ಯಕ್ಷರಾಗಿ ಪಾವನ, ಕಾರ್ಯದರ್ಶಿಯಾಗಿ ಕಾರ್ತಿಕ್, ಸಹಕಾರ್ಯದರ್ಶಿಯಾಗಿ ಮಹೇಶ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಮ್ ಪ್ರಸಾದ್ ಹಾಗೂ ಸಹ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೀರಾಜ್ ಚುನಾಯಿತರಾಗಿದ್ದಾರೆ.